Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವರ್ಷಕ್ಕೆ 1 ಲಕ್ಷ ಮಂದಿಗೆ ತರಬೇತಿ, ವಿದೇಶದಲ್ಲಿ ಉದ್ಯೋಗಾವಕಾಶ: ಬಿಎಸ್‌ವಿಟಿ ಸಿಇಒ ಸಂತೋಷ್ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವರ್ಷಕ್ಕೆ 1 ಲಕ್ಷ ಮಂದಿಗೆ ತರಬೇತಿ, ವಿದೇಶದಲ್ಲಿ ಉದ್ಯೋಗಾವಕಾಶ: ಬಿಎಸ್‌ವಿಟಿ ಸಿಇಒ ಸಂತೋಷ್ ಕುಮಾರ್

Bengaluru City

ವರ್ಷಕ್ಕೆ 1 ಲಕ್ಷ ಮಂದಿಗೆ ತರಬೇತಿ, ವಿದೇಶದಲ್ಲಿ ಉದ್ಯೋಗಾವಕಾಶ: ಬಿಎಸ್‌ವಿಟಿ ಸಿಇಒ ಸಂತೋಷ್ ಕುಮಾರ್

Public TV
Last updated: July 11, 2024 11:36 am
Public TV
Share
3 Min Read
BSVT Vertical Transportation Bengaluru Santosh Lad 2
SHARE

– ಬೆಂಗಳೂರಿನಲ್ಲಿ BSVT ಶುಭಾರಂಭ

ಬೆಂಗಳೂರು: “ವರ್ಷಕ್ಕೆ ಕನಿಷ್ಠ ಒಂದು ಲಕ್ಷ ಮಂದಿಗೆ ತರಬೇತಿ ನೀಡಿ, ಅವರಿಗೆ ಉದ್ಯೋಗಾವಕಾಶ ಕಲ್ಪಿಸಿ ವಿದೇಶಕ್ಕೆ ಕಳುಹಿಸುವುದು ನಮ್ಮ ಪ್ರಮುಖ ಗುರಿಯಾಗಿದೆ” ಎಂದು ‘ಭಾರತ್ ಸ್ಕೂಲ್ ಆಫ್ ವರ್ಟಿಕಲ್ ಟ್ರಾನ್ಸ್ಪೋರ್ಟೇಷನ್’ (BSVT) ಸಿಇಒ ಸಂತೋಷ್ ಕುಮಾರ್ ಹೇಳಿದರು.

ಬುಧವಾರ(ಜುಲೈ 10) ರಂದು ಬೆಂಗಳೂರಿನ (Bengaluru) ಲಲಿತ್ ಅಶೋಕ್ ಹೋಟೆಲ್‌ನಲ್ಲಿ ನಡೆದ ಭಾರತದ ಮೊದಲ ಸಂಸ್ಥೆ ‘ಭಾರತ್ ಸ್ಕೂಲ್ ಆಫ್ ವರ್ಟಿಕಲ್ ಟ್ರಾನ್ಸ್ಪೋರ್ಟೇಷನ್’ನ ಬೆಂಗಳೂರಿನ ಮೊಟ್ಟಮೊದಲ ತರಬೇತಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಈ ವೇಳೆ “ಶಿಕ್ಷಣ ಮತ್ತು ತರಬೇತಿಯ ಮೂಲಕ ವರ್ಟಿಕಲ್ ಟ್ರಾನ್ಸ್ಪೋರ್ಟೇಷನ್ ಉದ್ಯಮದಲ್ಲಿ ಕ್ರಾಂತಿಯನ್ನುಂಟು ಮಾಡುವುದು BSVT ಸ್ಥಾಪನೆಯ ಮೂಲ ಉದ್ದೇಶ. ನಮ್ಮ ವಿದ್ಯಾರ್ಥಿಗಳಿಗೆ ಅತ್ಯುನ್ನತ ಗುಣಮಟ್ಟದ ಶಿಕ್ಷಣ ಮತ್ತು ಸಾಧ್ಯವಾದಷ್ಟು ಉತ್ತಮ ವೃತ್ತಿ ಅವಕಾಶಗಳನ್ನು ಒದಗಿಸಲು ನಾವು ಬದ್ಧರಾಗಿದ್ದೇವೆ. ನಮ್ಮ ವಿಶಿಷ್ಟ ಪಠ್ಯಕ್ರಮ ಮತ್ತು ಬಲವಾದ ಉದ್ಯಮ ಸಂಬಂಧಗಳೊಂದಿಗೆ, ವರ್ಟಿಕಲ್ ಟ್ರಾನ್ಪೋರ್ಟೇಷನ್ನಲ್ಲಿ ಮುಂದಿನ ಪೀಳಿಗೆಯ ನಾಯಕರು ಮತ್ತು ಪರಿಣತರನ್ನು ಸೃಷ್ಟಿಸುವುದು ನಮ್ಮ ಧ್ಯೇಯ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ರಸ್ತೆ ಬದಿಯ ಗಿಡಗಳಿಗೆ ಹಾಕಿದ್ದ ಟ್ರೀ ಗಾರ್ಡ್‌ ಕದ್ದ ಕಳ್ಳ

BSVT Vertical Transportation Bengaluru Santosh Lad 1

ವರ್ಟಿಕಲ್ ಟ್ರಾನ್ಸ್ಪೋರ್ಟೇಷನ್ (ಎಲಿವೇಟರ್‌ಗಳು) ಉದ್ಯಮದಲ್ಲಿ ಹೆಚ್ಚುತ್ತಿರುವ ಬೇಡಿಕೆಗಳನ್ನು ಪೂರೈಸಲು ವಿನ್ಯಾಸಗೊಳಿಸಲಾದ ವಿಶೇಷ ಕೋರ್ಸ್‌ಗಳನ್ನು ಈ ಕೇಂದ್ರದಲ್ಲಿ ನೀಡಲಾಗುತ್ತದೆ. ಇದರೊಂದಿಗೆ ಬಿಎಸ್ ವಿಟಿ ಈ ಕ್ಷೇತ್ರದಲ್ಲಿ ಹೊಸ ಮಾನದಂಡ ಸ್ಥಾಪಿಸುವ ಗುರಿ ಹೊಂದಿದೆ ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಅವರು, ವರ್ಟಿಕಲ್ ಟ್ರಾನ್ಸ್‌ಪೋರ್ಟೇಷನ್‌ನಲ್ಲಿ ಡಿಪ್ಲೋಮಾ ಕೋರ್ಸ್ ಒದಗಿಸುತ್ತಿರುವುದು ದೇಶದಲ್ಲಿ ಇದೇ ಮೊದಲು. ಈ ನಿಟ್ಟಿನಲ್ಲಿ ಬಿಎಸ್‌ವಿಟಿ ಪ್ರಮುಖ ಹೆಜ್ಜೆಯಿಟ್ಟಿರುವುದು ಸಂತೋಷದ ಸಂಗತಿ. ಈ ಉದ್ಯಮದೊಳಗಿನ ಕೌಶಲ್ಯದ ಕೊರತೆಯನ್ನು ನೀಗಿಸುವ ಕೆಲಸ ಆಗಬೇಕು. ರಾಜ್ಯದಲ್ಲಿ ಪ್ರತಿ ವರ್ಷ 10 ಲಕ್ಷ ಮಕ್ಕಳು ಎಸ್ಸೆಸ್ಸೆಲ್ಸಿ ಮುಗಿಸಿ ಹೊರಬರುತ್ತಾರೆ. ಈ ಪೈಕಿ 5 ಲಕ್ಷ ಮಂದಿ ಪಿಯುಸಿಗೆ ಹೋಗುತ್ತಾರೆ. ಅದರಲ್ಲಿ 3 ಲಕ್ಷ ಮಂದಿ ಮಾತ್ರ ಪದವಿ, ಸ್ನಾತಕೋತ್ತರದಂಥ ಉನ್ನತ ಶಿಕ್ಷಣದತ್ತ ಮುಖ ಮಾಡುತ್ತಾರೆ. ಎಸ್ಸೆಸ್ಸೆಲ್ಸಿ ಮುಗಿಸಿದ ಉಳಿದ 7 ಲಕ್ಷ ಮಂದಿಗೆ ಅತ್ಯುತ್ತಮ ತರಬೇತಿ ನೀಡಿ, ಅವರನ್ನು ಕೌಶಲ್ಯಯುತರನ್ನಾಗಿಸುವತ್ತ ಗಮನ ಹರಿಸುವ ಕೆಲಸ ಆಗಬೇಕಿದೆ. ಬಿಎಸ್‌ವಿಟಿಯಂಥ ಸಂಸ್ಥೆಗಳು ರಾಷ್ಟ್ರೀಯ, ಅಂತಾರಾಷ್ಟ್ರೀಯ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಇಂಥ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಲಭ್ಯವಾಗುವಂತೆ ಮಾಡಬೇಕು ಎಂದು ಹೇಳಿದರು. ಅಲ್ಲದೆ, ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೂ ಈ ಸಂಸ್ಥೆಯಲ್ಲಿ ಕೌಶಲ್ಯ ತರಬೇತಿ ನೀಡಿದರೆ, ಅಂಥ ವಿದ್ಯಾರ್ಥಿಗಳನ್ನು ಸರ್ಕಾರದ “ಆಶಾದೀಪ ಯೋಜನೆ”(ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ಯೋಜನೆ)ಯ ವ್ಯಾಪ್ತಿಗೆ ತಂದು, ಅವರಿಗೆ ಸರ್ಕಾರದ ವತಿಯಿಂದಲೇ ಸ್ಟೈಪಂಡ್ ಒದಗಿಸುತ್ತೇವೆ ಎಂಬ ಭರವಸೆಯನ್ನೂ ಅವರು ನೀಡಿದರು.

BSVT Vertical Transportation Bengaluru Santosh Lad

ಬಿಎಸ್ವಿಟಿ ನೀಡುವ ಕೋರ್ಸ್‌ಗಳು: ಬಿಎಸ್ವಿಟಿ ವರ್ಟಿಕಲ್ ಟ್ರಾನ್ಸ್ಪೋರ್ಟ್ ಉದ್ಯಮಕ್ಕೆ ಅನುಗುಣವಾಗಿ ಹಲವು ಬಗೆಯ ಕೋರ್ಸ್‌ಗಳನ್ನು ನೀಡುತ್ತಿದೆ. ಅವುಗಳೆಂದರೆ, ಡಿಪ್ಲೊಮಾ ಇನ್ ವರ್ಟಿಕಲ್ ಟ್ರಾನ್ಸ್‌ಪೋರ್ಟೇಶನ್ ಟೆಕ್ನಾಲಜಿ, ಅಪ್ಸ್ಕಿಲಿಂಗ್ ಪ್ರೋಗ್ರಾಂ ಇನ್ ವರ್ಟಿಕಲ್ ಟ್ರಾನ್ಸ್ಪೋರ್ಟೇಷನ್ – ಮೆಂಟೇನೆನ್ಸ್, ಅಪ್ಸ್ಕಿಲಿಂಗ್ ಪ್ರೋಗ್ರಾಂ ಇನ್ ವರ್ಟಿಕಲ್ ಟ್ರಾನ್ಸ್‌ಪೋರ್ಟೇಷನ್- ಟೆಸ್ಟಿಂಗ್ ಕಮಿಷನಿಂಗ್, ಅಡ್ವಾನ್ಸ್ಡ್ ಕೋರ್ಸ್ ಇನ್ ಲಿಫ್ಟ್ ಇನ್ಸ್ಟಾಲೇಷನ್, ವರ್ಟಿಕಲ್ ಟ್ರಾನ್ಸ್ಪೋರ್ಟೇಷನ್- ಮಾಡರ್ನನೈಸೇಷನ್ ಪ್ರೋಗ್ರಾಂ, ಸೇಫ್ಟಿ ಕಾಂಪ್ಲೈಯನ್ಸ್ ಇನ್ ವರ್ಟಿಕಲ್ ಟ್ರಾನ್ಸ್ಪೋರ್ಟೇಷನ್, ರೆಸ್ಕ್ಯೂ ಆಪರೇಷನ್ ಟ್ರೈನಿಂಗ್ ಪ್ರೋಗ್ರಾಂ.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಕಾರ್ಮಿಕ ಸಚಿವ ಸಂತೋಷ್ ಲಾಡ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಶಾಂತಿ ನಗರ ಶಾಸಕ ಎನ್.ಎ.ಹ್ಯಾರಿಸ್, ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಬೆಂಗಳೂರಿನ ಮಾಜಿ ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್, ಕರ್ನಾಟಕ ರಾಜ್ಯ, ಖಾತರಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಮೆಹ್ರೋಜ್ ಖಾನ್ ಉಪಸ್ಥಿತರಿದ್ದರು.

ಸಂಪರ್ಕ ಮಾಹಿತಿ: ಬಿಎಸ್ವಿಟಿ ಮತ್ತು ಅದರ ಕೋರ್ಸ್‌ಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು www.bharathsvt.com ಗೆ ಭೇಟಿ ನೀಡಿ ಅಥವಾ ಹೈಪರ್ ಲಿಂಕ್ “mailto:info@bharathsvt.com” ಅನ್ನು ಸಂಪರ್ಕಿಸಿ ಅಥವಾ ಸಂಪರ್ಕಿಸಿ ಅಥವಾ info@bharathsvt.com. ಮೂಲಕ ಮಾಹಿತಿ ಪಡೆಯಬಹುದಾಗಿದೆ. ಇದನ್ನೂ ಓದಿ: ಅಕ್ರಮ ಆಸ್ತಿಗಳಿಕೆ ಆರೋಪ – ಹಾರೋಹಳ್ಳಿ ತಹಶೀಲ್ದಾರ್ ಮನೆ ಮೇಲೆ ಲೋಕಾ ದಾಳಿ

TAGGED:bengaluruBSVTSantosh LadVertical Transportation
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

daily horoscope dina bhavishya
Astrology

ದಿನ ಭವಿಷ್ಯ: 27-02-2026

Public TV
By Public TV
34 seconds ago
meeting
Bengaluru City

ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ ಬೆಂಬಲಿಗ ಶಾಸಕರ ಸಭೆ

Public TV
By Public TV
8 hours ago
Cauvery Phase 6 water project
Bengaluru City

ಬೆಂಗಳೂರಿಗೆ ಗುಡ್‌ನ್ಯೂಸ್ – ಸಿಲಿಕಾನ್ ಸಿಟಿಗೆ ಬರಲಿದೆ 6ನೇ ಹಂತದ ಕಾವೇರಿ ನೀರು

Public TV
By Public TV
8 hours ago
Arshdeep Singh
Cricket

T20 World Cup: ಟೀಂ ಇಂಡಿಯಾ ಆಲ್‌ರೌಂಡ್‌ ಆಟಕ್ಕೆ ಮಣಿದ ಜಿಂಬಾಬ್ವೆ – 72 ರನ್‌ಗಳಿಂದ ಗೆದ್ದ ಭಾರತದ ಸೆಮಿ ಆಸೆ ಜೀವಂತ

Public TV
By Public TV
8 hours ago
Chitradurga Accident
Chitradurga

ಹಿರೆಹಳ್ಳಿ ಬಳಿ ಲಾರಿಗೆ ಕಾರು ಡಿಕ್ಕಿ – ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ, ಇಬ್ಬರು ಗಂಭೀರ

Public TV
By Public TV
9 hours ago
Cabinet Siddaramaiah
Bengaluru City

ನಿರುದ್ಯೋಗಿಗಳ ಉಗ್ರ ಹೋರಾಟಕ್ಕೆ ಮಣಿದ ಸರ್ಕಾರ – 56 ಸಾವಿರ ನೇಮಕಾತಿಗೆ ಗ್ರೀನ್ ಸಿಗ್ನಲ್

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?