Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkaballapur

ಪಕ್ಷೇತರ ಅಭ್ಯರ್ಥಿಗಳಿಗೆ ಚುನಾವಣಾ ಆಯೋಗ ಬಿಗ್ ಶಾಕ್!

Public TV
Last updated: April 9, 2018 7:54 pm
Public TV
Share
2 Min Read
mc sudhakar chickballapur
SHARE

ಚಿಕ್ಕಬಳ್ಳಾಪುರ: ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಫರ್ಧೆ ಮಾಡಲಿರುವ ಅಭ್ಯರ್ಥಿಗಳಿಗೆ ಚುನಾವಣಾ ಆಯೋಗ ಬಿಗ್ ಶಾಕ್ ಕೊಟ್ಟಿದೆ. ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಫರ್ಧಿಸಲು ಇಚ್ಚಿಸಿರುವ ಅಭ್ಯರ್ಥಿಗಳು, ನಾಮಪತ್ರ ಸಲ್ಲಿಸುವವರೆಗೂ ಯಾವುದೇ ಸಭೆ-ಸಮಾರಂಭ ನಡೆಸಿ ಚುನಾವಣಾ ಪ್ರಚಾರ ನಡೆಸುವಂತಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ಡಾ ಎಂ ಸಿ ಸುಧಾಕರ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ತೀರ್ಮಾನಿಸಿದ್ದು, ಚುನಾವಣಾ ಪ್ರಚಾರ ನಡೆಸಲು ಅನುಮತಿ ಕೋರಿದ್ದಾರೆ. ಆದರೆ ಇದಕ್ಕೆ ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಮುಖ್ಯ ಚುನಾವಣಾಧಿಕಾರಿ, ಸ್ವತಂತ್ರ ಅಭ್ಯರ್ಥಿಗಳು ಚುನಾವಣೆಗೆ ನಾಮಪತ್ರ ಸಲ್ಲಿಸುವವರೆಗೂ ಚುನಾವಣಾ ಪ್ರಚಾರಕ್ಕೆ ಅನುಮತಿ ನೀಡಲು ಅವಕಾಶವಿಲ್ಲ ಅಂತ ಹಿಂಬರಹ ನೀಡಿದ್ದಾರೆ. ಹೀಗಾಗಿ ಸಹಜವಾಗಿ ಆಯೋಗದ ಇಬ್ಬಗೆಯ ನೀತಿ ವಿರುದ್ಧ ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆದರೆ ಪಕ್ಷದ ಆಭ್ಯರ್ಥಿಗಳು ತಮ್ಮ ಪಕ್ಷದ ಹೆಸರಲ್ಲಿ ಸಭೆ ಸಮಾರಂಭ ನಡೆಸಿ, ಪ್ರಚಾರ ನಡೆಸಬಹುದಾಗಿದೆ. ಹೀಗಾಗಿ ಪಕ್ಷದ ಅಭ್ಯರ್ಥಿಗಳಿಗೊಂದು ನೀತಿ, ಪಕ್ಷೇತರ ಸ್ವತಂತ್ರ ಅಭ್ಯರ್ಥಿಗಳಿಗೊಂದು ನೀತಿ ಎಂಬಂತೆ, ಒಂದು ಕಣ್ಣಿಗೆ ಸುಣ್ಣ, ಮತ್ತೊಂದು ಕಣ್ಣಿಗೆ ಬೆಣ್ಣೆ ಇಟ್ಟಂತಿದೆ ಚುನಾವಣಾ ಆಯೋಗದ ನೀತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಏನು ಹೇಳುತ್ತೆ ಆಯೋಗ?
ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಯಾರೊಬ್ಬರು ವ್ಯಕ್ತಿ ಪರವಾಗಿ ಚುನಾವಣಾ ಪ್ರಚಾರ ಸಂಬಂಧದ ಸಭೆ-ಸಮಾವೇಶ ನಡೆಸುವಂತಿಲ್ಲ. ನಾಮಪತ್ರ ಸಲ್ಲಿಕೆಯಾಗುವವರೆಗೂ ಅಭ್ಯರ್ಥಿಗಳ ಹೆಸರು ಅಂತಿಮ ಕೂಡ ಆಗುವುದಿಲ್ಲ ಎನ್ನುವುದು ಆಯೋಗದ ಸಮರ್ಥನೆ. ಹೀಗಾಗಿ ಯಾರೊಬ್ಬರು ತನಗೆ ಮತ ನೀಡಿ ಎಂದು ಮನವಿ ಮಾಡಿಕೊಳ್ಳುವಂತಿಲ್ಲ. ಆದರೆ, ಪಕ್ಷಗಳ ಹೆಸರಿನಲ್ಲಿ ಕಾರ್ಯಕ್ರಮ ನಡೆಸಿ, ಪಕ್ಷದ ಪರ ಮಾತ್ರವೇ ಪ್ರಚಾರ ನಡೆಸಬೇಕು. ನಾಮಪತ್ರ ಸಲ್ಲಿಕೆಯಾದ ಬಳಿಕ ಅಭ್ಯರ್ಥಿಗಳು ತಮ್ಮ ಪರವಾಗಿ ಸಭೆ ಸಮಾವೇಶಗಳನ್ನ ನಡೆಸಬಹುದಾಗಿದೆ ಎನ್ನುತ್ತಿದೆ ಚುನಾವಣಾ ಆಯೋಗ.

ಪಕ್ಷೇತರ ಅಭ್ಯರ್ಥಿಗಳ ವಾದ ಏನು?
ಪಕ್ಷಗಳಲ್ಲಿ ಗುರುತಿಸಿಕೊಂಡಿರುವ ಬಹುತೇಕರಿಗೆ ಈಗಾಗಲೇ ಅಧಿಕೃತವಾಗಿ ಟಿಕೆಟ್ ಘೋಷಣೆಯಾಗಿದೆ. ಹೀಗಾಗಿ ಪಕ್ಷಗಳ ಹೆಸರಿನಲ್ಲಿ ದೊಡ್ಡ ದೊಡ್ಡ ಸಭೆ ಸಮಾರಂಭ, ಸಮಾವೇಶಗಳನ್ನ ಮಾಡುವ ಮೂಲಕ ಪರೋಕ್ಷವಾಗಿ ಮತ ಯಾಚಿಸುತ್ತಿದ್ದಾರೆ. ಕೆಲವೊಮ್ಮೆ ಇಂತಹವರನ್ನೇ ಗೆಲ್ಲಿಸಿ, ಎಂದು ಬಹಿರಂಗವಾಗಿಯೇ ಹೇಳಿರುವ ನಿದರ್ಶನಗಳು ಕೂಡ ಇವೆ. ಇದೆಲ್ಲ ಚುನಾವಣಾ ಆಯೋಗಕ್ಕೆ ಕಾಣುತ್ತಿಲ್ಲವೇ? ಪಕ್ಷೇತರರಾದ ನಾವು ಚುನಾವಣೆಗೆ ಸ್ಫರ್ಧಿಸಲು ತೀರ್ಮಾನಿಸಿದ್ದರೂ, ನಮ್ಮ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಲು ಕಾರಣವೇನು? ಪಕ್ಷಗಳಿಗೊಂದು, ಪಕ್ಷೇತರರಿಗೊಂದು ನ್ಯಾಯ ಮಾಡುತ್ತಿರುವುದು ಸರಿಯಲ್ಲ. ಪಾರ್ಟಿ ಫಂಡ್ ಹೆಸರಿನಲ್ಲಿ ಕೃಷ್ಣನ ಲೆಕ್ಕ ತೋರಿಸಿ, ಪಕ್ಷದಡಿ ಸ್ಫರ್ಧಿಸಲು ಮುಂದಾಗಿರುವ ಸ್ವಯಂ ಘೋಷಿತ ಅಭ್ಯರ್ಥಿಗಳು ಸುಲಭವಾಗಿ ಆಯೋಗದ ಮುಷ್ಟಿಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂಬ ಅಸಮಾಧಾನದ ಮಾತುಗಳು ಪಕ್ಷೇತರರಿಂದ ಕೇಳಿಬರುತ್ತಿವೆ.

23 ದಿನಗಳಲ್ಲಿ ಪ್ರಚಾರ ಸಾಧ್ಯವೇ?
ನಾಮಪತ್ರ ಸಲ್ಲಿಕೆಗೆ ಏ.17ರಿಂದ 24ರವರೆಗೂ ಅವಕಾಶ ನೀಡಿದ್ದು. ಬಹಿರಂಗ ಪ್ರಚಾರ ಮೇ.10 ಕಡೆದಿನ. ಹೀಗಾಗಿ ನಾಮಪತ್ರ ಸಲ್ಲಿಕೆಯ ಮೊದಲ ದಿನವೇ ನಾಮಪತ್ರ ಸಲ್ಲಿಸಿದರೂ, ಬಹಿರಂಗ ಪ್ರಚಾರಕ್ಕೆ ಕೇವಲ 23 ದಿನಗಳು ಮಾತ್ರವೇ ಉಳಿದುಕೊಳ್ಳಲಿದೆ. ಹೀಗಾಗಿ ಇಷ್ಟು ಕಡಿಮೆ ದಿನಗಳ ಅಂತರದಲ್ಲಿ ಪಕ್ಷೇತರರ ಪ್ರಚಾರ ಸಾಧ್ಯವೇ ಇಲ್ಲ. ಜೊತೆಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ 28 ಲಕ್ಷದೊಳಗೆ ಖರ್ಚು ಮಾಡಬೇಕಿದೆ. ಇದಕ್ಕೂ ಮೊದಲೇ ಪಕ್ಷದಿಂದ ನಿಲ್ಲುವವರು ಪಕ್ಷದ ಹೆಸರಿನಲ್ಲಿ ಮಾಡಿರುವ ಖರ್ಚಿಗೆ ಲೆಕ್ಕ ಕೇಳುವಂತಿಲ್ಲ ಎಂಬ ಪ್ರಶ್ನೆಗಳು ಪಕ್ಷೇತರರಲ್ಲಿ ಕಾಡುತ್ತಿವೆ. ಇದೆಲ್ಲದರ ನಡುವೆ ಪಕ್ಷದಿಂದ ಸ್ಫರ್ಧಿಸುವ ಅಭ್ಯರ್ಥಿಗಳಿಗೆ ಚುನಾವಣಾ ಆಯೋಗದ ನೀತಿಗಳು ಅನುಕೂಲಕರವಾಗಿದ್ದು, ಪಕ್ಷೇತರರಾಗಿ ಅನಾನುಕೂಲಕರವಾಗಿವೆ ಅಂತ ಅಸಮಾಧಾನ ತೋಡಿಕೊಳ್ಳುತ್ತಿದ್ದಾರೆ ಪಕ್ಷೇತರರು.

TAGGED:election commissionIndependent candidateM.C.SudhakarPublic TVಚುನಾವಣಾ ಆಯೋಗಪಕ್ಷೇತರರುಪಬ್ಲಿಕ್ ಟಿವಿವಿಧಾನಸಭಾ ಚುನಾವಣೆಸುಧಾಕರ್
Share This Article
Facebook Whatsapp Whatsapp Telegram

Cinema Updates

Ramya 1 1
ತಮನ್ನಾ ರಾಯಭಾರಿ | ತೆರಿಗೆ ಪಾವತಿದಾರರ ಹಣವನ್ನು ವ್ಯರ್ಥ ಮಾಡಿದಂತೆ: ರಮ್ಯಾ ಬೇಸರ
3 hours ago
mrunal thakur
ಮೃಣಾಲ್ ಠಾಕೂರ್ ಫ್ಯಾನ್ಸ್‌ಗೆ ಡಬಲ್ ಧಮಾಕ!
17 hours ago
aishwarya rai 1 2
‘ಸಿಂಧೂರ’ ಆಯ್ತು, ಈಗ ಭಗವದ್ಗೀತೆ ಶ್ಲೋಕ- ಭಾರತೀಯ ಸಂಸ್ಕೃತಿ ಪ್ರದರ್ಶಿಸಿದ ಐಶ್ವರ್ಯಾ ರೈ!
20 hours ago
pranitha subhash
ಕಾನ್ ಚಿತ್ರೋತ್ಸವದಲ್ಲಿ ಪ್ರಣಿತಾ ಧರಿಸಿದ್ದ ವಾಚ್ ಬೆಲೆ ಕೇಳಿ ಫ್ಯಾನ್ಸ್ ಶಾಕ್!
21 hours ago

You Might Also Like

Mysuru HD Kote 3 Members Suicide
Crime

ಪ್ರೀತಿಸಿದವನೊಂದಿಗೆ ಮನೆಬಿಟ್ಟು ಹೋದ ಮಗಳು – ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಶಂಕೆ

Public TV
By Public TV
7 minutes ago
Madikeri Student
Districts

`ಯುವನಿಧಿ’ ಗ್ಯಾರಂಟಿ ಹಣದಿಂದ ಲ್ಯಾಪ್‌ಟಾಪ್‌ ಖರೀದಿಸಿದ ವಿದ್ಯಾರ್ಥಿನಿ ಇಶಾ ಆಸಿಫ್‌

Public TV
By Public TV
22 minutes ago
Delivery Boy Attack on customer in berngaluru
Bengaluru City

ಅಡ್ರೆಸ್ ತಪ್ಪಾಗಿದ್ದಕ್ಕೆ ಗಲಾಟೆ – ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಡೆಲಿವರಿ ಬಾಯ್!

Public TV
By Public TV
29 minutes ago
Vijayapura Youth Heart Attack
Districts

Vijayapura | ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತ – ಯುವಕ ಸಾವು

Public TV
By Public TV
31 minutes ago
gujarat BSF
Latest

ಗಡಿಯಲ್ಲಿ ಭಾರತಕ್ಕೆ ನುಸುಳಲು ಯತ್ನ – ಶಂಕಿತ ಪಾಕಿಸ್ತಾನಿ ಹೊಡೆದುರುಳಿಸಿದ ಬಿಎಸ್‌ಎಫ್‌

Public TV
By Public TV
40 minutes ago
Ramanagara E Swathu Software Hack Arrest
Crime

Ramanagara | ಸರ್ಕಾರದ ಇ ಸ್ವತ್ತು ಸಾಫ್ಟ್‌ವೇರ್ ಹ್ಯಾಕ್ ಮಾಡಿ ದಾಖಲೆಗಳ ತಿದ್ದುಪಡಿ – ಮೂವರ ಬಂಧನ

Public TV
By Public TV
49 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?