Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಸಹಾಯಕ ಸಿನಿಮಾ ಕಾರ್ಮಿಕರಿಗೆ ಇನ್ಫೋಸಿಸ್ ಫೌಂಡೇಷನ್ ಆಸರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಸಹಾಯಕ ಸಿನಿಮಾ ಕಾರ್ಮಿಕರಿಗೆ ಇನ್ಫೋಸಿಸ್ ಫೌಂಡೇಷನ್ ಆಸರೆ

Bengaluru City

ಅಸಹಾಯಕ ಸಿನಿಮಾ ಕಾರ್ಮಿಕರಿಗೆ ಇನ್ಫೋಸಿಸ್ ಫೌಂಡೇಷನ್ ಆಸರೆ

Public TV
Last updated: April 19, 2020 8:40 pm
Public TV
Share
2 Min Read
cinema Workers Infosys 4
SHARE

-ನಿರ್ಮಾಪಕ ರಮೇಶ್ ರೆಡ್ಡಿ ಸಮ್ಮುಖದಲ್ಲೊಂದು ಸಾರ್ಥಕ ಕಾರ್ಯ

ಬೆಂಗಳೂರು: ಕೊರೊನಾ ವೈರಸ್ ಅಟಾಟೋಪದಿಂದಾಗಿ ಹೆಚ್ಚೂ ಕಡಿಮೆ ಇಡೀ ವಿಶ್ವವೇ ಸ್ತಬ್ಧವಾಗಿದೆ. ಅದರಲ್ಲಿ ನಮ್ಮ ದೇಶ, ರಾಜ್ಯವೂ ಹೊರತಾಗಿಲ್ಲ. ಮೇಲ್ನೋಟಕ್ಕೆ ಲಾಕ್‍ಡೌನ್ ಈ ಕ್ಷಣದ ಅನಿವಾರ್ಯತೆಯಾಗಿ ಕಂಡರೂ ಕೂಡಾ ದಿನದ ತುತ್ತನ್ನು ಆ ದಿನವೇ ಸಂಪಾದಿಸಿಕೊಂಡು ಜೀವನ ಸಾಗಿಸುತ್ತಿದ್ದ ಕೋಟಿ ಕೋಟಿ ಜೀವಗಳು ತೀವ್ರತರನಾದ ಸಂಕಷ್ಟಕ್ಕೀಡಾಗಿವೆ. ಆ ಸಾಲಿನಲ್ಲಿ ಕನ್ನಡ ಚಿತ್ರರಂಗದ ಭಾಗವಾಗಿರುವ ಕಾರ್ಮಿಕರೂ ಕೂಡ ಸೇರಿಕೊಂಡಿದ್ದಾರೆ. ಅಂಥವರಿಗೆಲ್ಲ ನೆರವಾಗುವಂಥ ಸಾರ್ಥಕ ಕಾರ್ಯವನ್ನು ಸುಧಾ ಮೂರ್ತಿ ಸಾರಥ್ಯದ ಇನ್ಫೋಸಿಸ್ ಫೌಂಡೇಷನ್ ಕೈಗೊಂಡಿದೆ. ಅದು ಕನ್ನಡ ಚಿತ್ರರಂಗದಲ್ಲಿ ಯಶಸ್ವೀ ನಿರ್ಮಾಪಕರಾಗಿ ಗುರುತಿಸಿಕೊಂಡಿರುವ ರಮೇಶ್ ರೆಡ್ಡಿಯವರ ಇರುವಿಕೆಯಲ್ಲಿ ನಡೆಯುತ್ತಿದೆ.

cinema Workers Infosys 3

ಯಾವುದೇ ಸಂಕಷ್ಟದ ಕಾಲದಲ್ಲಿ ನೊಂದವರ ನೆರವಿಗೆ ನಿಲ್ಲುವಂಥಾ ತಾಯ್ತನವನ್ನು ಸುಧಾಮೂರ್ತಿ ಸದಾ ಕಾಲವೂ ಕಾಯ್ದುಕೊಳ್ಳುತ್ತಾರೆ. ಅವರ ನೆರಳಿನಲ್ಲಿಯೇ ಬೆಳೆದು ಬಂದಿರುವ ರಮೇಶ್ ರೆಡ್ಡಿಯವರು ಕೂಡಾ ಅಂಥಾದ್ದೇ ಮನಸ್ಥಿತಿಯನ್ನು ರೂಢಿಸಿಕೊಂಡಿದ್ದಾರೆ. ಅಷ್ಟಕ್ಕೂ ಅವರೂ ಕೂಡಾ ಕಾರ್ಮಿಕರ ಬದುಕಿನ ಅನಿವಾರ್ಯತೆಗಳನ್ನು, ಸಂಕಟಗಳನ್ನು ತಾವೇ ಕಂಡು ಬೆಳೆದು ಬಂದವರು. ಆದ್ದರಿಂದಲೇ ಬಹು ಬೇಗನೆ ಚಿತ್ರರಂಗದ ಕಾರ್ಮಿಕರ ಸಂಕಷ್ಟಗಳಿಗೆ ಕಣ್ಣಾಗಿದ್ದಾರೆ. ಇದರ ಭಾಗವಾಗಿಯೇ ಸುಧಾಮೂರ್ತಿಯವರ ನೆರವು ಕನ್ನಡ ಚಿತ್ರರಂಗದ ಕಾರ್ಮಿಕ ಸಂಘಟನೆಗಳ ಸಮ್ಮುಖದಲ್ಲಿ ಹಲವಾರು ಕಾರ್ಮಿಕರಿಗೆ ಜೀವನಾವಶ್ಯಕ ಸಾಮಾಗ್ರಿಗಳನ್ನು ತಲುಪಿಸಲಾಗಿದೆ.

cinema Workers Infosys 2

ನಿರ್ಮಾಪಕ ರಮೇಶ್ ರೆಡ್ಡಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಲ್ಯಾಣ ನಿಧಿ ಅಧ್ಯಕ್ಷರಾದ ಸಾ.ರಾ ಗೋವಿಂದು, ಕಾರ್ಮಿಕ ಸಂಘಟನೆಯ ಉಪಾಧ್ಯಕ್ಷರಾದ ರವಿಶಂಕರ್ ಮುಂತಾದ ಹಲವರ ಉಪಸ್ಥಿತಿಯಲ್ಲಿ ಇನ್ಫೋಸಿಸ್ ಫೌಂಡೇಷನ್ನಿನ ನೆರವನ್ನು ಕಾರ್ಮಿಕರಿಗೆ ತಲುಪಿಸುವ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಹೀಗೆ ಚಾಲನೆ ಪಡೆದುಕೊಂಡಿರುವ ಈ ನೆರವಿನ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳ ಮೂಲಕ ಮುಂದುವರೆಯಲಿದೆ. ಇದೇ ಸಂದರ್ಭದಲ್ಲಿ ಕಾರ್ಮಿಕರಿಗೆ ನೆರವಾಗಿರುವ ಸುಧಾಮೂರ್ತಿಯವರ ಕಾರ್ಯವನ್ನು ಮೆಚ್ಚಿಕೊಂಡು ಮಾತಾಡಿರುವ ರಮೇಶ್ ರೆಡ್ಡಿಯವರು `ಸುಧಾಮೂರ್ತಿಯವರ ಕಡೆಯಿಂದ ದೇಶ ಮತ್ತು ರಾಜ್ಯದಲ್ಲಿ ಅನೇಕ ಒಳ್ಳೆ ಕೆಲಸಗಳಾಗುತ್ತಿವೆ. ಈ ಕಷ್ಟ ಕಾಲದಲ್ಲಿ ಅವರು ಚಲನಚಿತ್ರ ಕಾರ್ಮಿಕರ ಬಗ್ಗೆ ಕಾಳಜಿ ತೋರಿಸಿರುವುದು ಸ್ವಾಗತಾರ್ಹ’ ಎಂದಿದ್ದಾರೆ.

cinema Workers Infosys 1

ಸುಧಾ ಮೂರ್ತಿಯವರ ಈ ಮಾನವೀಯ ನೆರವನ್ನು ಸಾ.ರಾ.ಗೋವಿಂದು ಕೂಡಾ ಮನದುಂಬಿ ಮೆಚ್ಚಿಕೊಂಡಿದ್ದಾರೆ. `ಈ ಕೊರೋನಾ ಕರ್ಫ್ಯೂನಿಂದಾಗಿ ಸಾವಿರಾರು ಚಲನಚಿತ್ರ ಕಾರ್ಮಿಕ ಕುಟುಂಬಗಳು ಸಂಕಷ್ಟಕ್ಕೀಡಾಗಿವೆ. ದಿನನಿತ್ಯದ ಜೀವನಕ್ಕೂ ಪರದಾಡುವ ಸ್ಥಿತಿ ತಲುಪಿಕೊಂಡಿರುವ ಅಂಥವರಿಗೆಲ್ಲ ಸುಧಾಮೂರ್ತಿಯವರ ನೆರವು ನೀಡುತ್ತಿರೋದು ಸಂತಸದ ವಿಷಯ’ ಎಂದಿದ್ದಾರೆ.

cinema Workers Infosys

ಒಟ್ಟಾರೆಯಾಗಿ ಇದೊಂದು ಸಾರ್ಥಕ ಕಾರ್ಯಕ್ರಮ. ಅದು ಇದೀಗ ಗಾಳಿಪಟ-2 ಚಿತ್ರದ ನಿರ್ಮಾಪಕರೂ ಆಗಿರುವ ರಮೇಶ್ ರೆಡ್ಡಿಯವರ ಸಮ್ಮುಖದಲ್ಲಿಯೇ ನಡೆದಿರೋದು ನಿಜಕ್ಕೂ ಖುಷಿಯ ಸಂಗತಿ. ಯಾಕೆಂದರೆ, ರಮೇಶ್ ರೆಡ್ಡಿಯವರೂ ಕೂಡಾ ನಾನಾ ಪಡಿಪಾಟಲುಗಳನ್ನು ಅನುಭವಿಸುತ್ತಾ, ಗಾರೆ ಕಾರ್ಮಿಕರಾಗಿಯೂ ದುಡಿದು ಅನುಭವ ಹೊಂದಿರುವವರು. ಆ ಕಷ್ಟದ ದಿನಗಳ ನೆನಪಿನ ಪಸೆಯನ್ನು ಇನ್ನೂ ಮನಸಲ್ಲಿಟ್ಟುಕೊಂಡಿರುವ ಅವರೀಗ ಇಂಥಾದ್ದೊಂದು ಮಾನವೀಯ ಕಾರ್ಯಕ್ರಮದ ಭಾಗವಾಗಿರೋದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

TAGGED:Cinema IndustryCorona LockdownInfosys FoundationPublic TVRamesh ReddySA GovindsandalwoodSudhamoorthyಇನ್ಫೋಸಿಸ್ ಫೌಂಡೇಶನ್ಕೊರೊನಾ ಲಾಕ್‍ಡೌನ್ಪಬ್ಲಿಕ್ ಟಿವಿರಮೇಶ್ ರೆಡ್ಡಿಸಾ.ರಾ.ಗೋವಿಂದುಸಿನಿಮಾ ಉದ್ಯಮಸುಧಾಮೂರ್ತಿಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories

You Might Also Like

Fire accident at Nelamangala godown
Bengaluru City

ನೆಲಮಂಗಲ | ಗೋಡೌನ್‍ನಲ್ಲಿ ಅಗ್ನಿ ಅವಘಡ – ಮುಗಿಲೆತ್ತರಕ್ಕೆ ಹಬ್ಬಿದ ಜ್ವಾಲೆ

Public TV
By Public TV
13 minutes ago
Elephant Woman Death
Chikkamagaluru

ಮದವೇರಿದ್ದ ಕಾಡಾನೆಗೆ ಮಹಿಳೆ ಬಲಿ – ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Public TV
By Public TV
33 minutes ago
Chandru Lamani
Gadag

ಚಂದ್ರು ಲಮಾಣಿ & ಗುತ್ತಿಗೆದಾರ ನಡುವಿನ ಆಡಿಯೋ ಸ್ಫೋಟ

Public TV
By Public TV
43 minutes ago
Tanushka Ludo Death
Crime

ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯಿನ್ ನುಂಗಿ ಬಾಲಕಿ ಸಾವು

Public TV
By Public TV
1 hour ago
Shikhar Dhawan Sophie Shine Marriage
Cricket

ಗರ್ಲ್‌ಫ್ರೆಂಡ್‌ ಸೋಫಿ ಶೈನ್‌ ಜೊತೆ ಶಿಖರ್‌ ಧವನ್‌ ವಿವಾಹ

Public TV
By Public TV
2 hours ago
Raichur Shivaji Jayanti
Districts

ರಾಯಚೂರಿನಲ್ಲಿಂದು ಶಿವಾಜಿ ಮಹಾರಾಜ್ ಪುತ್ಥಳಿ ಮೆರವಣಿಗೆ – ಜಿಲ್ಲಾ ಪೊಲೀಸ್ ಅಲರ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?