ಹಾಸನ: ಇನ್ಫೋಸಿಸ್ ಸುಧಾಮೂರ್ತಿಯವರು (Infosys Sudhamurthy) ಸಕಲೇಶಪುರದ ಸಕಲೇಶಪುರಸ್ವಾಮಿ (Sakleshpuraswamy Temple) ಹಾಗೂ ಆಂಜನೇಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಬೆಂಗಳೂರಿನಿಂದ ಕುಟುಂಬಸ್ಥರೊಂದಿಗೆ ಧರ್ಮಸ್ಥಳಕ್ಕೆ (Dharmasthala) ತೆರಳುವ ಮಾರ್ಗ ಮಧ್ಯೆ ದೇವಾಲಯಗಳಿಗೆ ಭೇಟಿ ನೀಡಿದ್ದರು. ನೆಲದ ಮೇಲೆ ಕುಳಿತು ಸಂಕಲ್ಪ, ಅರ್ಚನೆ ಮಾಡಿಸಿದರು. ಸುಧಾಮೂರ್ತಿ ಅವರಿಗೆ ಮಹಿಳೆಯರು ಬಾಗಿನ ನೀಡಿದರು. ಪೂಜೆ ಬಳಿಕ ಧರ್ಮಸ್ಥಳಕ್ಕೆ ತೆರಳಿದರು. ಇದನ್ನೂ ಓದಿ: ಮದುವೆಯಲ್ಲಿ ಸಖತ್ ಸ್ಟೆಪ್ ಹಾಕಿದ ಸುಧಾಮೂರ್ತಿ, ಕಿರಣ್ ಮಜುಂದಾರ್ ಷಾ – ವಿಡಿಯೋ ವೈರಲ್
ಇದೇ ವೇಳೆ ಸುಧಾಮೂರ್ತಿಯವರಿಗೆ ಶಾಸಕ ಸಿಮೆಂಟ್ಮಂಜು ಅವರು ಭಗವದ್ಗೀತೆ ನೀಡಿ ಗೌರವಿಸಿದರು. ಬಳಿಕ ಸಿಎಸ್ಆರ್ ಫಂಡ್ ಅಥವಾ ರಾಜ್ಯಸಭಾ ಸದಸ್ಯರ ಅನುದಾನದಲ್ಲಿ ಸಕಲೇಶಪುರ ಒಳಾಂಗಣ ಕ್ರೀಡಾಂಗಣಕ್ಕೆ ಅನುದಾನ ನೀಡುವಂತೆ ಮನವಿ ಮಾಡಿದರು. ಇದನ್ನೂ ಓದಿ: ಸ್ವಚ್ಛ, ಸುರಕ್ಷಿತ, ದೈವಿಕ, ಭವ್ಯ: ಮಹಾ ಕುಂಭಮೇಳ ಬಣ್ಣಿಸಿದ ಸಂಸದೆ ಸುಧಾಮೂರ್ತಿ

