ಚಿಕ್ಕಬಳ್ಳಾಪುರ: ಐತಿಹಾಸಿಕ ಪುರಾಣ ಪ್ರಸಿದ್ಧ ಹಾಗೂ ಕರ್ನಾಟಕದ ಜಲಿಯನ್ ವಾಲಾಬಾಗ್ ಖ್ಯಾತಿಯ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥ ಗ್ರಾಮಕ್ಕೆ ಇನ್ಫೋಸಿಸ್ ಸಂಸ್ಥೆ ವ್ಯವಸ್ಥಾಪಕಿ ಸುಧಾಮೂರ್ತಿ ಅವರು ಶುಕ್ರವಾರ ಭೇಟಿ ನೀಡಿದರು.
ಮೊದಲು ವಿದುರಾಶ್ವತ್ಥ ಗ್ರಾಮದ ಅಶ್ವತ್ಥನಾರಾಯಣನ ಸನ್ನಿಧಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ತದನಂತರ ದೇವಾಲಯ ಹಿಂಭಾಗದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಡಿದು ಹುತಾತ್ಮರಾದ ವೀರಸೇನಾನಿಗಳ ಸ್ತೂಪ ಸ್ಮಾರಕಕ್ಕೆ ನಮನ ಸಲ್ಲಿಸಿ ಪೂಜೆ ಸಲ್ಲಿಸಿದರು. ನಂತರ ಸ್ವಾತಂತ್ರ್ಯ ಸಂಗ್ರಾಮದ ನೆನಪಿನ ಚಿತ್ರ ಗ್ಯಾಲರಿಗೆ ಭೇಟಿ ನೀಡಿ ಪೋಟೋಗಳನ್ನು ವೀಕ್ಷಿಸಿದರು. ಇದನ್ನೂ ಓದಿ: ನೈಟ್ ಕರ್ಫ್ಯೂ ಆದೇಶ ಹಿಂಪಡೆದ ರಾಜ್ಯ ಸರ್ಕಾರ
ವಿದುರ ಮಹರ್ಷಿ ನೆಟ್ಟ ಅಶ್ವತ್ಥ ವೃಕ್ಷದ ಕೆಳಗೆ ಅಶ್ವತ್ಥನಾರಾಯಣ ನೆಲೆಸಿದ್ದು, ಈ ಜಾಗದಲ್ಲಿ ಸ್ವಾತಂತ್ರ್ಯ ಸಂಗ್ರಾಮದ ವೇಳೆ ಚಳುವಳಿ ನಡೆಸುತ್ತಿದ್ದ ಸಂದರ್ಭದಲ್ಲಿ ಬ್ರಿಟಿಷರು ಗುಂಡಿನ ದಾಳಿಗೆ ಹಲವರು ಬಲಿದನಗೈದಿದ್ದಾರೆ. ಅವರ ಸವಿನೆನಪಿಗಾಗಿ ಸ್ಮಾರಕ-ಸ್ತೂಪ, ಚಿತ್ರ ಗ್ಯಾಲರಿ ನಿರ್ಮಿಸಲಾಗಿದೆ. ಇದನ್ನೂ ಓದಿ: ಬಿಡದಿ ತೋಟದಲ್ಲಿ ಗೋಪೂಜೆ ನೆರವೇರಿಸಿದ ಹೆಚ್ಡಿಕೆ ದಂಪತಿ