Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಸವ ತತ್ವ ಪರಿಪಾಲಕರಿಗೆ ಪ್ರತ್ಯೇಕ ಧರ್ಮ- ಕ್ಯಾಬಿನೆಟ್ ಸಭೆಯ ಇನ್‍ಸೈಡ್ ಸ್ಟೋರಿ ಇಲ್ಲಿದೆ

Public TV
Last updated: March 19, 2018 8:32 pm
Public TV
Share
4 Min Read
LINGAYATH VEERASHAIVA RELIGION
SHARE

ಬೆಂಗಳೂರು: ರಾಜ್ಯದಲ್ಲಿ ಇತಿಹಾಸದಲ್ಲೇ ಅತಿದೊಡ್ಡ, ಐತಿಹಾಸಿಕ ವಿದ್ಯಮಾನವೊಂದು ಜರುಗಿದೆ. ಶತ ಶತಮಾನಗಳಿಂದ ಹಿಂದೂ ಧರ್ಮದ ಭಾಗವಾಗಿ ಇದ್ದ ವೀರಶೈವ-ಲಿಂಗಾಯತರು ಇನ್ನು ಮುಂದೆ ಹಿಂದೂಗಳಲ್ಲ. ಅವರು ಅಲ್ಪಸಂಖ್ಯಾತರು. ಹೀಗೆಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರ್ಣಯ ತೆಗೆದುಕೊಂಡಿದೆ.

ರಾಜ್ಯ ಸರ್ಕಾರ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಅಡ್ಡಗೋಡೆ ಮೇಲೆ ದೀಪ ಇಟ್ಟಿದ್ದು,  ಧರ್ಮ ಇಬ್ಭಾಗದ ತಂತ್ರ ಅನುಕರಿಸಿದೆ. ನ್ಯಾಯಮೂರ್ತಿ ನಾಗಮೋಹನ್‍ದಾಸ್ 2ನೇ ಶಿಫಾರಸ್ಸಿನ ಅನ್ವಯ, ಪ್ರತ್ಯೇಕ ಲಿಂಗಾಯತ ಧರ್ಮದ ಬದಲಿಗೆ, ಲಿಂಗಾಯತ ಮತ್ತು ವೀರಶೈವ, ಬಸವತತ್ವದಡಿ ನಂಬಿಕೆ ಇರುವವರಿಗೆ ಪ್ರತ್ಯೇಕ ಧರ್ಮಕ್ಕೆ ರಾಜ್ಯಸರ್ಕಾರ ಶಿಫಾರಸು ಮಾಡಿದೆ. ನಾಗಮೋಹನ್‍ದಾಸ್ ವರದಿ ಪ್ರಕಾರ ಅಲ್ಪಸಂಖ್ಯಾತ ಕೋಟಾದಡಿ ಮುಸ್ಲಿಮರಿಗೆ ಸಿಗುತ್ತಿರುವ ಸೌಲಭ್ಯಗಳು ಲಿಂಗಾಯತ-ವೀರಶೈವ ಧರ್ಮಕ್ಕೆ ಸಿಗುವುದಿಲ್ಲ.

lingayat religion 10

ಸಿಎಂ ನಿವಾಸ ಕಾವೇರಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾರೀ ನಾಟಕೀಯ ಬೆಳವಣಿಗೆಗಳು ನಡೆದಿತ್ತು. ಮಧ್ಯಾಹ್ನ 12 ಗಂಟೆಗೆ ಆರಂಭವಾದ ಈ ಸಭೆಯಲ್ಲಿ ಭಾರೀ ಚರ್ಚೆಗಳು ನಡೆದು ಸಂಜೆ 3.30ರ ವೇಳೆಗೆ ಅಂತಿಮ ನಿರ್ಧಾರಕ್ಕೆ ಬರಲಾಯಿತು. ಹೀಗಾಗಿ ಸಭೆಯಲ್ಲಿ ಏನು ಚರ್ಚೆ ನಡೆಯಿತು, ಯಾರು ಏನು ಹೇಳಿದರು ಎನ್ನುವ ಮಾಹಿತಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಸಿಕ್ಕಿದೆ.

ತೋಟಗಾರಿಕಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಇಬ್ಬರು ಸಚಿವರು ರಾಜೀನಾಮೆ ನೀಡಿದ್ರೆ ಏನಾಗುತ್ತೆ ಅಂತ ವಿನಯ್ ಕುಲಕರ್ಣಿ ಹೇಳಿದ್ದಾನೆ. ನಾವು ಏಕೆ ರಾಜೀನಾಮೆ ಕೊಡಬೇಕು. ಅವನೇ ರಾಜೀನಾಮೆ ಕೊಟ್ಟು ಹೋಗಲಿ ಎಂದು ಹೇಳಿದ್ದಾರೆ. ಇದಕ್ಕೆ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್, ನಮ್ಮ ಜೊತೆ ನೀವು ಬರುವುದಾದರೆ ಬನ್ನಿ. ಇಲ್ಲಾಂದ್ರೆ ಸುಮ್ಮನಿರಿ. ನಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಮರು ಉತ್ತರ ನೀಡಿದ್ದಾರೆ.

lingayat religion 9

ಈ ಉತ್ತರಕ್ಕೆ ಗರಂ ಆದ ಎಸ್.ಎಸ್. ಮಲ್ಲಿಕಾರ್ಜುನ್, ಅನಗತ್ಯವಾಗಿ ಸಮುದಾಯವನ್ನು ಹಾಳ್ ಮಾಡ್ತಾ ಇದ್ದೀರಿ. ನಿಮ್ ಇಬ್ರಿಂದಾನೆ (ಎಂ.ಬಿ. ಪಾಟೀಲ್, ಕುಲಕರ್ಣಿ) ಏನೋ ಮಾಡೋಕೆ ಹೋಗಿ ಏನೋ ಆಗಿದೆ. ವೀರಶೈವ ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಮಹಾಸಭಾ ಮನವಿ ಕೊಟ್ಟಿದ್ದು. ಆದ್ರೀಗ, ಲಿಂಗಾಯತ ಸ್ವತಂತ್ರ ಧರ್ಮ ಅಂತ ಗುಲ್ಲೆಬ್ಬಿಸಿ ಹಾಳ್ ಮಾಡಕ ಹತ್ತೀರಿ ಎಂದಿದ್ದಾರೆ.

ಮಲ್ಲಿಕಾರ್ಜುನ್ ಆರೋಪಕ್ಕೆ ವಿನಯ ಕುಲಕರ್ಣಿ, ಹಾಳ್ ಮಾಡ್ತಿರೋದು ನಾವಲ್ಲ, ನೀವು. ನಮ್ಮ ಬಸವಣ್ಣ ಸ್ಥಾಪನೆ ಮಾಡಿದ್ದೇ ನಿಜವಾದ ಧರ್ಮ. ಬಸವ ಧರ್ಮ. ಲಿಂಗಾಯತ ಸ್ವತಂತ್ರ ಧರ್ಮ ಆಗಬೇಕು ಅಂತ ಸ್ವಾಮೀಜಿಗಳೇ ಸಿಎಂ ಹತ್ರ ಬಂದು ಒತ್ತಾಯ ಮಾಡ್ತಿದ್ದಾರೆ. ನೀವು ಅದನ್ನ ದಿಕ್ಕು ತಪ್ಪಿಸ್ತಾ ಇದ್ದೀರಿ ಎಂದು ಸಿಟ್ಟಿನಿಂದ ಹೇಳಿದರು.  ಇದಾದ ಬಳಿಕ ಸಂಪುಟ ಸಭೆಯಿಂದ ಸಚಿವ ವಿನಯ ಕುಲಕರ್ಣಿ ಸಿಟ್ಟಿನಿಂದ ಹೊರಬಂದು 10 ನಿಮಿಷಗಳ ಬಳಿಕ ಮತ್ತೆ ವಾಪಸ್ ಹಾಜರಾದರು.

lingayat religion 2

ಈ ವೇಳೆ ಆರೋಗ್ಯ ಸಚಿವ ರಮೇಶ್ ಕುಮಾರ್ ಮಾತನಾಡಿ, ಎಲ್ಲರೂ ನಿಮ್ಮ ಅಭಿಪ್ರಾಯಗಳನ್ನಷ್ಟೇ ತಿಳಿಸಿ. ಮುಖ್ಯಮಂತ್ರಿಗಳು ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ. ಸುಮ್ಮನೆ ಕೂಗಾಟ-ಕಿತ್ತಾಟ ಸರಿಯಲ್ಲ ಎಂದು ಸಲಹೆ ನೀಡಿದರು.

ಈ ಚರ್ಚೆ ವೇಳೆ ಮಧ್ಯಪ್ರವೇಶಿಸಿ ಸಿಎಂ ಸಿದ್ದರಾಮಯ್ಯ, ಲಾಭ ನಷ್ಟದ ಲೆಕ್ಕಚಾರದ ಬಗ್ಗೆ ನನಗೆ ಹೇಳ್ತೀರಾ ನೀವು. ರಾಜಕೀಯ ಲಾಭ-ನಷ್ಟ ನನಗೂ ಗೊತ್ತಿದೆ. ಇದೇನ್ ಕ್ಯಾಬಿನೆಟ್ ಅಂತಾ ತಿಳ್ಕೊಂಡಿದ್ದೀರೋ? ಏನು? ಇಷ್ಟೊಂದು ವೈಯಕ್ತಿಕ ಮಟ್ಟಕ್ಕೆ ಇಳಿದು ಜಗಳ ಮಾಡಿದ್ರೆ ಏನು ಆಗಲ್ಲ. ಸುಮ್ಮನಿರಿ. ಈ ವಿಚಾರದ ಬಗ್ಗೆ ನಿಮ್ಮ ನಿಮ್ಮ ಅಭಿಪ್ರಾಯಗಳನ್ನಷ್ಟೇ ತಿಳಿಸಿ ಎಂದರು. ಈ ಸಂದರ್ಭದಲ್ಲಿ ಪ್ರತ್ಯೇಕ ಧರ್ಮದ ಸಾಧಕ-ಬಾಧಕ ಬಗ್ಗೆ ಅಡ್ವೋಕೇಟ್ ಜನರಲ್ ಮಧುಸೂದನ್ ನಾಯಕ್ ಅವರನ್ನು ಸಂಪುಟ ಸಭೆಗೆ ಕರೆಸಿ ಸಿದ್ದರಾಮಯ್ಯ ಮಾಹಿತಿ ಪಡೆದರು.

bdr lingayath 4

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಬಹುತೇಕ ಸಚಿವರು ಒಪ್ಪಿಗೆ ನೀಡಿದರು. ಆದರೆ ಸಚಿವ ಈಶ್ವರ ಖಂಡ್ರೆ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ್ ವಿರೋಧ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಈಶ್ವರ ಖಂಡ್ರೆ ಮಾತನಾಡಿ, ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸರ್ಕಾರ ಶಿಫಾರಸು ಮಾಡಿದರೆ ಕನಿಷ್ಠ 20 ಸ್ಥಾನಗಳನ್ನು ನಾವು ಕಳೆದುಕೊಳ್ಳಬೇಕಾಗುತ್ತದೆ ಎಂದಾಗ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ನನಗೂ ಕೂಡ ಹೀಗೆ ಅನಿಸುತ್ತಿದೆ. ಈಡಿಗರಿಗೂ ಪ್ರತ್ಯೇಕ ಧರ್ಮದ ಸ್ಥಾನ ನೀಡುತ್ತೀರಾ ಎಂದು ಪ್ರಶ್ನಿಸಿದರು.

ಶಿಕ್ಷಣ ಸಚಿವ ತನ್ವೀರ್ ಸೇಠ್ ಮಾತನಾಡಿ, ನೀವು ಅಲ್ಪಸಂಖ್ಯಾತರ ಸ್ಥಾನಮಾನ ನೀಡಿ. ಆದರೆ, ಅಲ್ಪಸಂಖ್ಯಾತರಿಗೆ ಯಾವುದೇ ದುಷ್ಪರಿಣಾಮ ಆಗದಂತೆ ಎಚ್ಚರಿಕೆ ವಹಿಸಿ ಎಂದು ಸಲಹೆ ನೀಡಿದರು. ಎಲ್ಲರ ಮಾತು ಕೇಳಿ ಕೊನೆಗೆ ಪ್ರತ್ಯೇಕ ಲಿಂಗಾಯತ ಧರ್ಮದ ಬದಲಿಗೆ ಲಿಂಗಾಯತ ಮತ್ತು ವೀರಶೈವ ಲಿಂಗಾಯತ, ಬಸವ ತತ್ವ ಪಾಲಕರಿಗೆ ಪ್ರತ್ಯೇಕ ಧರ್ಮ ಎನ್ನುವ ಸಾಲು ಸೇರಿಸಿ. ಮುಂದೆ ಏನಾಗುತ್ತೋ ಅಂತ ನೋಡೋಣ ಎಂದು ಹೇಳಿ ಸಭೆಯನ್ನು ಮುಕ್ತಾಯಗೊಳಿಸಿದರು ಎಂದು ಹೇಳಲಾಗುತ್ತಿದೆ.

bdr lingayath 7

ಸಚಿವ ಸಂಪುಟದ ನಿರ್ಣಯಗಳೇನು?
* ಬಸವ ತತ್ವ ಒಪ್ಪಿ ಬರುವವರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ
* ಲಿಂಗಾಯತ ಮತ್ತು ವೀರಶೈವ, ಬಸವತತ್ವದಡಿ ನಂಬಿಕೆ ಇರುವವರಿಗೆ ಅನ್ವಯ
* ಪ್ರತ್ಯೇಕ ಧರ್ಮಕ್ಕೆ ಒಳಗಾಗುವವರಿಗೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ
* ಕರ್ನಾಟಕ ಅಲ್ಪಸಂಖ್ಯಾತ ಕಾಯ್ದೆಯ ಸೆಕ್ಷನ್ 2ಡಿ ಅಡಿ ಶಿಫಾರಸು
* ಕೇಂದ್ರದ ಅಲ್ಪಸಂಖ್ಯಾತ ಆಯೋಗದ 2 (ಸಿ) ಕಾಯ್ದೆ ಅನ್ವಯ

ಅಲ್ಪಸಂಖ್ಯಾತರ ಸ್ಥಾನಮಾನ ಯಾರಿಗೆ?
* ರಾಜ್ಯ ಸರ್ಕಾರವೇನೋ ಶಿಫಾರಸು ಮಾಡಿದೆ ಆದ್ರೆ ಕೇಂದ್ರ ಸಂಪುಟ ಒಪ್ಪಿಗೆ ನೀಡಬೇಕು
* ಅಲ್ಪಸಂಖ್ಯಾತರ ಸ್ಥಾನಮಾನ ಬೇಕಾದರೆ ವೀರಶೈವರು ಕೂಡ ಬಸವ ತತ್ವ ಪಾಲನೆ ಮಾಡಬೇಕು
* ವೀರಶೈವರು ತಮ್ಮದೇ ಆದ ತತ್ವ ಸಿದ್ಧಾಂತ ಹೊಂದಿರುವುದರಿಂದ ಬಸವ ತತ್ವ ಅನುಕರಣೆ ಅಸಾಧ್ಯ
* ಅಲ್ಪಸಂಖ್ಯಾತರ ಸ್ಥಾನಮಾನ ಸಿಕ್ಕಿದ್ರೆ, ಲಿಂಗಾಯತರು ಮತ್ತು ವೀರಶೈವರು ಹಿಂದುಗಳಲ್ಲ!

Lingayath Mahasabha 4

TAGGED:bengaluruCentral GovernmentChief Minister SiddaramaiahPublic TVReligious Minority StatusState Governmentಕೇಂದ್ರ ಸರ್ಕಾರಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನಪಬ್ಲಿಕ್ ಟಿವಿಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯರಾಜ್ಯ ಸರ್ಕಾರ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Jothe Neeniralu Serial
ತದ್ವಿರುದ್ಧ ಮನಸುಗಳ ಧಾರಾವಾಹಿ: ನೀ ಇರಲು ಜೊತೆಯಲ್ಲಿ
Cinema Latest Top Stories TV Shows
Karavali movie 1
‘ಮಾವೀರ’ನಾಗಿ ಎಂಟ್ರಿ ಕೊಟ್ಟ ಸು ಫ್ರಂ ಸೋ ಕರುಣಾಕರ ಗುರೂಜಿ
Cinema Latest Sandalwood Top Stories
Rajath Dharmasthala
ಯೂಟ್ಯೂಬರ್ಸ್ ಮೇಲೆ 50-60 ಜನ ಅಟ್ಯಾಕ್ ಮಾಡಿದ್ರು, ನನ್ನ ಬಳಿ ಸಾಕ್ಷಿ ಇದೆ: ರಜತ್
Cinema Dakshina Kannada Latest Main Post South cinema
Dhanush Mrunal Thakur
ಧನುಷ್-ಮೃಣಾಲ್ ವಯಸ್ಸಿನ ಅಂತರವೆಷ್ಟು ಗೊತ್ತಾ?
Cinema Latest Top Stories
Allu Arjun Sneha Reddy
ಶೂಟಿಂಗ್‌ಗಾಗಿ ಮುಂಬೈಗೆ ಹಾರಿದ ಐಕಾನ್ ಸ್ಟಾರ್
Cinema Latest Top Stories

You Might Also Like

Rahul Gandhi 1
Latest

ಮಹಾದೇವಪುರದಲ್ಲಿ ಮತಗಳ್ಳತನ – ದಾಖಲೆ ಸಮೇತ ಮಾಹಿತಿ ಬಹಿರಂಗಪಡಿಸಿದ ರಾಹುಲ್ ಗಾಂಧಿ

Public TV
By Public TV
13 minutes ago
Bengaluru Police Uniform weared Theft
Bengaluru City

ಕಳ್ಳನ ಜೊತೆಗೆ ಪೊಲೀಸಪ್ಪ ರೂಮ್ ಶೇರ್ – ಕರ್ತವ್ಯ ಲೋಪ; ಪೇದೆ ಸಸ್ಪೆಂಡ್

Public TV
By Public TV
48 minutes ago
Raichur Anganwadi Roof Collapse
Crime

Raichur| ಅಂಗನವಾಡಿ ಕೇಂದ್ರದ ಛಾವಣಿ ಮೇಲ್ಪದರ ಕುಸಿತ – ಶಿಕ್ಷಕಿಗೆ ಗಂಭೀರ ಗಾಯ

Public TV
By Public TV
53 minutes ago
Ashwini Vaishnaw
Davanagere

ಒಪ್ಪಂದದಿಂದ ಹಿಂದೆ ಸರಿದ ರಾಜ್ಯ ಸರ್ಕಾರ – ಶಿವಮೊಗ್ಗ To ಹರಿಹರ ರೈಲ್ವೆ ಯೋಜನೆ ಕೈಬಿಟ್ಟ ಕೇಂದ್ರ

Public TV
By Public TV
1 hour ago
driver babu dies by suicide names BJP MP K Sudhakar others in death note Chikkaballpura
Chikkaballapur

25 ಲಕ್ಷ ವಂಚನೆ, ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಸೂಸೈಡ್‌ – ಡೆತ್‌ನೋಟ್‌ನಲ್ಲಿ ಏನಿದೆ?

Public TV
By Public TV
1 hour ago
RAHUL GANDHI
Bengaluru City

ನಾಳೆ ಬೆಂಗ್ಳೂರಿಗೆ ರಾಹುಲ್ ಗಾಂಧಿ – ಹಲವೆಡೆ ಸಂಚಾರ ಬಂದ್, ಟ್ರಾಫಿಕ್ ತಪ್ಪಿಸೋಕೆ ಪರ್ಯಾಯ ವ್ಯವಸ್ಥೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?