Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಸವ ತತ್ವ ಪರಿಪಾಲಕರಿಗೆ ಪ್ರತ್ಯೇಕ ಧರ್ಮ- ಕ್ಯಾಬಿನೆಟ್ ಸಭೆಯ ಇನ್‍ಸೈಡ್ ಸ್ಟೋರಿ ಇಲ್ಲಿದೆ

Public TV
Last updated: March 19, 2018 8:32 pm
Public TV
Share
4 Min Read
LINGAYATH VEERASHAIVA RELIGION
SHARE

ಬೆಂಗಳೂರು: ರಾಜ್ಯದಲ್ಲಿ ಇತಿಹಾಸದಲ್ಲೇ ಅತಿದೊಡ್ಡ, ಐತಿಹಾಸಿಕ ವಿದ್ಯಮಾನವೊಂದು ಜರುಗಿದೆ. ಶತ ಶತಮಾನಗಳಿಂದ ಹಿಂದೂ ಧರ್ಮದ ಭಾಗವಾಗಿ ಇದ್ದ ವೀರಶೈವ-ಲಿಂಗಾಯತರು ಇನ್ನು ಮುಂದೆ ಹಿಂದೂಗಳಲ್ಲ. ಅವರು ಅಲ್ಪಸಂಖ್ಯಾತರು. ಹೀಗೆಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರ್ಣಯ ತೆಗೆದುಕೊಂಡಿದೆ.

ರಾಜ್ಯ ಸರ್ಕಾರ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಅಡ್ಡಗೋಡೆ ಮೇಲೆ ದೀಪ ಇಟ್ಟಿದ್ದು,  ಧರ್ಮ ಇಬ್ಭಾಗದ ತಂತ್ರ ಅನುಕರಿಸಿದೆ. ನ್ಯಾಯಮೂರ್ತಿ ನಾಗಮೋಹನ್‍ದಾಸ್ 2ನೇ ಶಿಫಾರಸ್ಸಿನ ಅನ್ವಯ, ಪ್ರತ್ಯೇಕ ಲಿಂಗಾಯತ ಧರ್ಮದ ಬದಲಿಗೆ, ಲಿಂಗಾಯತ ಮತ್ತು ವೀರಶೈವ, ಬಸವತತ್ವದಡಿ ನಂಬಿಕೆ ಇರುವವರಿಗೆ ಪ್ರತ್ಯೇಕ ಧರ್ಮಕ್ಕೆ ರಾಜ್ಯಸರ್ಕಾರ ಶಿಫಾರಸು ಮಾಡಿದೆ. ನಾಗಮೋಹನ್‍ದಾಸ್ ವರದಿ ಪ್ರಕಾರ ಅಲ್ಪಸಂಖ್ಯಾತ ಕೋಟಾದಡಿ ಮುಸ್ಲಿಮರಿಗೆ ಸಿಗುತ್ತಿರುವ ಸೌಲಭ್ಯಗಳು ಲಿಂಗಾಯತ-ವೀರಶೈವ ಧರ್ಮಕ್ಕೆ ಸಿಗುವುದಿಲ್ಲ.

lingayat religion 10

ಸಿಎಂ ನಿವಾಸ ಕಾವೇರಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾರೀ ನಾಟಕೀಯ ಬೆಳವಣಿಗೆಗಳು ನಡೆದಿತ್ತು. ಮಧ್ಯಾಹ್ನ 12 ಗಂಟೆಗೆ ಆರಂಭವಾದ ಈ ಸಭೆಯಲ್ಲಿ ಭಾರೀ ಚರ್ಚೆಗಳು ನಡೆದು ಸಂಜೆ 3.30ರ ವೇಳೆಗೆ ಅಂತಿಮ ನಿರ್ಧಾರಕ್ಕೆ ಬರಲಾಯಿತು. ಹೀಗಾಗಿ ಸಭೆಯಲ್ಲಿ ಏನು ಚರ್ಚೆ ನಡೆಯಿತು, ಯಾರು ಏನು ಹೇಳಿದರು ಎನ್ನುವ ಮಾಹಿತಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಸಿಕ್ಕಿದೆ.

ತೋಟಗಾರಿಕಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಇಬ್ಬರು ಸಚಿವರು ರಾಜೀನಾಮೆ ನೀಡಿದ್ರೆ ಏನಾಗುತ್ತೆ ಅಂತ ವಿನಯ್ ಕುಲಕರ್ಣಿ ಹೇಳಿದ್ದಾನೆ. ನಾವು ಏಕೆ ರಾಜೀನಾಮೆ ಕೊಡಬೇಕು. ಅವನೇ ರಾಜೀನಾಮೆ ಕೊಟ್ಟು ಹೋಗಲಿ ಎಂದು ಹೇಳಿದ್ದಾರೆ. ಇದಕ್ಕೆ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್, ನಮ್ಮ ಜೊತೆ ನೀವು ಬರುವುದಾದರೆ ಬನ್ನಿ. ಇಲ್ಲಾಂದ್ರೆ ಸುಮ್ಮನಿರಿ. ನಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಮರು ಉತ್ತರ ನೀಡಿದ್ದಾರೆ.

lingayat religion 9

ಈ ಉತ್ತರಕ್ಕೆ ಗರಂ ಆದ ಎಸ್.ಎಸ್. ಮಲ್ಲಿಕಾರ್ಜುನ್, ಅನಗತ್ಯವಾಗಿ ಸಮುದಾಯವನ್ನು ಹಾಳ್ ಮಾಡ್ತಾ ಇದ್ದೀರಿ. ನಿಮ್ ಇಬ್ರಿಂದಾನೆ (ಎಂ.ಬಿ. ಪಾಟೀಲ್, ಕುಲಕರ್ಣಿ) ಏನೋ ಮಾಡೋಕೆ ಹೋಗಿ ಏನೋ ಆಗಿದೆ. ವೀರಶೈವ ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಮಹಾಸಭಾ ಮನವಿ ಕೊಟ್ಟಿದ್ದು. ಆದ್ರೀಗ, ಲಿಂಗಾಯತ ಸ್ವತಂತ್ರ ಧರ್ಮ ಅಂತ ಗುಲ್ಲೆಬ್ಬಿಸಿ ಹಾಳ್ ಮಾಡಕ ಹತ್ತೀರಿ ಎಂದಿದ್ದಾರೆ.

ಮಲ್ಲಿಕಾರ್ಜುನ್ ಆರೋಪಕ್ಕೆ ವಿನಯ ಕುಲಕರ್ಣಿ, ಹಾಳ್ ಮಾಡ್ತಿರೋದು ನಾವಲ್ಲ, ನೀವು. ನಮ್ಮ ಬಸವಣ್ಣ ಸ್ಥಾಪನೆ ಮಾಡಿದ್ದೇ ನಿಜವಾದ ಧರ್ಮ. ಬಸವ ಧರ್ಮ. ಲಿಂಗಾಯತ ಸ್ವತಂತ್ರ ಧರ್ಮ ಆಗಬೇಕು ಅಂತ ಸ್ವಾಮೀಜಿಗಳೇ ಸಿಎಂ ಹತ್ರ ಬಂದು ಒತ್ತಾಯ ಮಾಡ್ತಿದ್ದಾರೆ. ನೀವು ಅದನ್ನ ದಿಕ್ಕು ತಪ್ಪಿಸ್ತಾ ಇದ್ದೀರಿ ಎಂದು ಸಿಟ್ಟಿನಿಂದ ಹೇಳಿದರು.  ಇದಾದ ಬಳಿಕ ಸಂಪುಟ ಸಭೆಯಿಂದ ಸಚಿವ ವಿನಯ ಕುಲಕರ್ಣಿ ಸಿಟ್ಟಿನಿಂದ ಹೊರಬಂದು 10 ನಿಮಿಷಗಳ ಬಳಿಕ ಮತ್ತೆ ವಾಪಸ್ ಹಾಜರಾದರು.

lingayat religion 2

ಈ ವೇಳೆ ಆರೋಗ್ಯ ಸಚಿವ ರಮೇಶ್ ಕುಮಾರ್ ಮಾತನಾಡಿ, ಎಲ್ಲರೂ ನಿಮ್ಮ ಅಭಿಪ್ರಾಯಗಳನ್ನಷ್ಟೇ ತಿಳಿಸಿ. ಮುಖ್ಯಮಂತ್ರಿಗಳು ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ. ಸುಮ್ಮನೆ ಕೂಗಾಟ-ಕಿತ್ತಾಟ ಸರಿಯಲ್ಲ ಎಂದು ಸಲಹೆ ನೀಡಿದರು.

ಈ ಚರ್ಚೆ ವೇಳೆ ಮಧ್ಯಪ್ರವೇಶಿಸಿ ಸಿಎಂ ಸಿದ್ದರಾಮಯ್ಯ, ಲಾಭ ನಷ್ಟದ ಲೆಕ್ಕಚಾರದ ಬಗ್ಗೆ ನನಗೆ ಹೇಳ್ತೀರಾ ನೀವು. ರಾಜಕೀಯ ಲಾಭ-ನಷ್ಟ ನನಗೂ ಗೊತ್ತಿದೆ. ಇದೇನ್ ಕ್ಯಾಬಿನೆಟ್ ಅಂತಾ ತಿಳ್ಕೊಂಡಿದ್ದೀರೋ? ಏನು? ಇಷ್ಟೊಂದು ವೈಯಕ್ತಿಕ ಮಟ್ಟಕ್ಕೆ ಇಳಿದು ಜಗಳ ಮಾಡಿದ್ರೆ ಏನು ಆಗಲ್ಲ. ಸುಮ್ಮನಿರಿ. ಈ ವಿಚಾರದ ಬಗ್ಗೆ ನಿಮ್ಮ ನಿಮ್ಮ ಅಭಿಪ್ರಾಯಗಳನ್ನಷ್ಟೇ ತಿಳಿಸಿ ಎಂದರು. ಈ ಸಂದರ್ಭದಲ್ಲಿ ಪ್ರತ್ಯೇಕ ಧರ್ಮದ ಸಾಧಕ-ಬಾಧಕ ಬಗ್ಗೆ ಅಡ್ವೋಕೇಟ್ ಜನರಲ್ ಮಧುಸೂದನ್ ನಾಯಕ್ ಅವರನ್ನು ಸಂಪುಟ ಸಭೆಗೆ ಕರೆಸಿ ಸಿದ್ದರಾಮಯ್ಯ ಮಾಹಿತಿ ಪಡೆದರು.

bdr lingayath 4

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಬಹುತೇಕ ಸಚಿವರು ಒಪ್ಪಿಗೆ ನೀಡಿದರು. ಆದರೆ ಸಚಿವ ಈಶ್ವರ ಖಂಡ್ರೆ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ್ ವಿರೋಧ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಈಶ್ವರ ಖಂಡ್ರೆ ಮಾತನಾಡಿ, ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸರ್ಕಾರ ಶಿಫಾರಸು ಮಾಡಿದರೆ ಕನಿಷ್ಠ 20 ಸ್ಥಾನಗಳನ್ನು ನಾವು ಕಳೆದುಕೊಳ್ಳಬೇಕಾಗುತ್ತದೆ ಎಂದಾಗ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ನನಗೂ ಕೂಡ ಹೀಗೆ ಅನಿಸುತ್ತಿದೆ. ಈಡಿಗರಿಗೂ ಪ್ರತ್ಯೇಕ ಧರ್ಮದ ಸ್ಥಾನ ನೀಡುತ್ತೀರಾ ಎಂದು ಪ್ರಶ್ನಿಸಿದರು.

ಶಿಕ್ಷಣ ಸಚಿವ ತನ್ವೀರ್ ಸೇಠ್ ಮಾತನಾಡಿ, ನೀವು ಅಲ್ಪಸಂಖ್ಯಾತರ ಸ್ಥಾನಮಾನ ನೀಡಿ. ಆದರೆ, ಅಲ್ಪಸಂಖ್ಯಾತರಿಗೆ ಯಾವುದೇ ದುಷ್ಪರಿಣಾಮ ಆಗದಂತೆ ಎಚ್ಚರಿಕೆ ವಹಿಸಿ ಎಂದು ಸಲಹೆ ನೀಡಿದರು. ಎಲ್ಲರ ಮಾತು ಕೇಳಿ ಕೊನೆಗೆ ಪ್ರತ್ಯೇಕ ಲಿಂಗಾಯತ ಧರ್ಮದ ಬದಲಿಗೆ ಲಿಂಗಾಯತ ಮತ್ತು ವೀರಶೈವ ಲಿಂಗಾಯತ, ಬಸವ ತತ್ವ ಪಾಲಕರಿಗೆ ಪ್ರತ್ಯೇಕ ಧರ್ಮ ಎನ್ನುವ ಸಾಲು ಸೇರಿಸಿ. ಮುಂದೆ ಏನಾಗುತ್ತೋ ಅಂತ ನೋಡೋಣ ಎಂದು ಹೇಳಿ ಸಭೆಯನ್ನು ಮುಕ್ತಾಯಗೊಳಿಸಿದರು ಎಂದು ಹೇಳಲಾಗುತ್ತಿದೆ.

bdr lingayath 7

ಸಚಿವ ಸಂಪುಟದ ನಿರ್ಣಯಗಳೇನು?
* ಬಸವ ತತ್ವ ಒಪ್ಪಿ ಬರುವವರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ
* ಲಿಂಗಾಯತ ಮತ್ತು ವೀರಶೈವ, ಬಸವತತ್ವದಡಿ ನಂಬಿಕೆ ಇರುವವರಿಗೆ ಅನ್ವಯ
* ಪ್ರತ್ಯೇಕ ಧರ್ಮಕ್ಕೆ ಒಳಗಾಗುವವರಿಗೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ
* ಕರ್ನಾಟಕ ಅಲ್ಪಸಂಖ್ಯಾತ ಕಾಯ್ದೆಯ ಸೆಕ್ಷನ್ 2ಡಿ ಅಡಿ ಶಿಫಾರಸು
* ಕೇಂದ್ರದ ಅಲ್ಪಸಂಖ್ಯಾತ ಆಯೋಗದ 2 (ಸಿ) ಕಾಯ್ದೆ ಅನ್ವಯ

ಅಲ್ಪಸಂಖ್ಯಾತರ ಸ್ಥಾನಮಾನ ಯಾರಿಗೆ?
* ರಾಜ್ಯ ಸರ್ಕಾರವೇನೋ ಶಿಫಾರಸು ಮಾಡಿದೆ ಆದ್ರೆ ಕೇಂದ್ರ ಸಂಪುಟ ಒಪ್ಪಿಗೆ ನೀಡಬೇಕು
* ಅಲ್ಪಸಂಖ್ಯಾತರ ಸ್ಥಾನಮಾನ ಬೇಕಾದರೆ ವೀರಶೈವರು ಕೂಡ ಬಸವ ತತ್ವ ಪಾಲನೆ ಮಾಡಬೇಕು
* ವೀರಶೈವರು ತಮ್ಮದೇ ಆದ ತತ್ವ ಸಿದ್ಧಾಂತ ಹೊಂದಿರುವುದರಿಂದ ಬಸವ ತತ್ವ ಅನುಕರಣೆ ಅಸಾಧ್ಯ
* ಅಲ್ಪಸಂಖ್ಯಾತರ ಸ್ಥಾನಮಾನ ಸಿಕ್ಕಿದ್ರೆ, ಲಿಂಗಾಯತರು ಮತ್ತು ವೀರಶೈವರು ಹಿಂದುಗಳಲ್ಲ!

Lingayath Mahasabha 4

TAGGED:bengaluruCentral GovernmentChief Minister SiddaramaiahPublic TVReligious Minority StatusState Governmentಕೇಂದ್ರ ಸರ್ಕಾರಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನಪಬ್ಲಿಕ್ ಟಿವಿಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯರಾಜ್ಯ ಸರ್ಕಾರ
Share This Article
Facebook Whatsapp Whatsapp Telegram

Cinema Updates

Kamal Haasan 2
ಕಮಲ್ ಹಾಸನ್ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
3 hours ago
Shivarajkumar Kamal Haasan
ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ
11 hours ago
darshan 1
ವಿದೇಶಕ್ಕೆ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ – ಮೇ 30ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
13 hours ago
RASHMIKA
ಸೀರೆಯಲ್ಲಿ ಮಿಂಚು ಬಳ್ಳಿಯಂತೆ ಕಂಗೊಳಿಸಿದ ರಶ್ಮಿಕಾ – ವಿಜಯ್‌ ಕ್ಲಿಕ್‌ ಮಾಡಿದ್ದು ಅಂದ್ರು ಫ್ಯಾನ್ಸ್‌!
14 hours ago

You Might Also Like

Naveen Kumar
Crime

ಬಿಷ್ಣೋಯ್ ಗ್ಯಾಂಗ್‌ನ ಶಾರ್ಪ್‌ಶೂಟರ್‌ ನವೀನ್ ಕುಮಾರ್ ಎನ್‌ಕೌಂಟರ್

Public TV
By Public TV
28 minutes ago
Omar Abdullah
Latest

ಇಬ್ಬರು ಕನ್ನಡಿಗರು ಸೇರಿ 26 ಮೃತ ಪ್ರವಾಸಿಗರ ನೆನಪಿಗೆ ಪಹಲ್ಗಾಮ್‌ನಲ್ಲಿ ಸ್ಮಾರಕ – ಒಮರ್ ಅಬ್ದುಲ್ಲಾ

Public TV
By Public TV
34 minutes ago
virat kohli shreyas iyer 2
Cricket

ಪಂಜಾಬ್‌ ಜೊತೆ ಫೈನಲ್‌ ಫೈಟ್‌ – ಆರ್‌ಸಿಬಿಗೆ ಗಾಯದ ಚಿಂತೆ

Public TV
By Public TV
54 minutes ago
Bhima River 1
Belgaum

ಭೀಮಾ ನದಿ ತೀರದಲ್ಲಿ ಪ್ರವಾಹದ ಆತಂಕ – ನದಿಗಿಳಿಯದಂತೆ ಜಿಲ್ಲಾಡಳಿತ ಸೂಚನೆ

Public TV
By Public TV
2 hours ago
Hemavati River
Districts

ಹಾಸನದಲ್ಲಿ ತಗ್ಗಿದ ಮಳೆ ಅಬ್ಬರ – ಹೇಮಾವತಿ ಒಳಹರಿವಿನಲ್ಲಿ ಇಳಿಕೆ

Public TV
By Public TV
2 hours ago
Snehamayi Krishna 2
Districts

MUDA Scam| ತನಿಖಾಧಿಕಾರಿ ಬದಲಾವಣೆಗೆ ನ್ಯಾಯಾಲಯಕ್ಕೆ ಅರ್ಜಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?