Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿಎಂ ಸಿದ್ದರಾಮಯ್ಯ ಆದಿಚುಂಚನಗಿರಿ ಶ್ರೀಗಳನ್ನು ಭೇಟಿ ಮಾಡಿದ್ದು ಯಾಕೆ: ಇನ್‍ಸೈಡ್ ಸ್ಟೋರಿ

Public TV
Last updated: March 24, 2017 2:13 pm
Public TV
Share
2 Min Read
CM SIDDARAMIAH AND ADICHUNCHANAGIRI SHREE
SHARE

ಬೆಂಗಳೂರು: ಕಾಂಗ್ರೆಸ್‍ಗೆ ಗುಡ್‍ಬೈ ಹೇಳಿ ಬಿಜೆಪಿಗೆ ಸೇರ್ಪಡೆಯಾದ ಮಾಜಿ ಮುಖ್ಯಮಂತ್ರಿ ಎಸ್‍ಎಂ ಕೃಷ್ಣಗೆ ಟಾಂಗ್ ನೀಡಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದು, ಈ ಕಾರಣಕ್ಕಾಗಿಯೇ ಗುರುವಾರ ರಾತ್ರಿ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಶ್ರೀಗಳ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಎಸ್‍ಎಂಕೆ ಒಕ್ಕಲಿಗರ ಪ್ರಭಾವಿ ನಾಯಕರಾಗಿರುವ ಹಿನ್ನೆಲೆಯಲ್ಲಿ ಆ ಸಮುದಾಯ ಮತಗಳು ಬಿಜೆಪಿಗೆ ಹೋಗದಿರಲು ಕಾಂಗ್ರೆಸ್ ನಾಯಕರು ಆ ಮತಗಳ ಮೇಲೆ ಕಣ್ಣಿಟ್ಟಿದ್ದಾರೆ. ಈ ಕಾರಣಕ್ಕಾಗಿ ರಾತ್ರಿ ಒಂದೂವರೆ ಗಂಟೆಗಳ ಪ್ರಸಕ್ತ ಒಕ್ಕಲಿಗ ಸಮುದಾಯ ಬೆಳವಣಿಗೆಯ ಬಗ್ಗೆ ಸಿಎಂ ಶ್ರೀಗಳ ಜೊತೆ ಮಾತನಾಡಿ, ಸಮುದಾಯ ಅಭಿವೃದ್ಧಿಗೆ ಸಂಬಂಧಿಸಿದ ವಿಚಾರಗಳನ್ನು ಚರ್ಚೆ ನಡೆಸಿದ್ದಾರೆ.

ಅಷ್ಟೇ ಅಲ್ಲದೇ ಉಪಚುನಾವಣೆಗಳ ಮತ್ತು ಕೆಂಪೇಗೌಡ ಪ್ರಾಧಿಕಾರದ ಬಗ್ಗೆಯೂ ಮಾತುಕತೆಯನ್ನು ಸಿಎಂ ನಡೆಸಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ. ನಂಜನಗೂಡು ಕ್ಷೇತ್ರದಲ್ಲಿ 8 ಸಾವಿರ ಒಕ್ಕಲಿಗ ಸಮುದಾಯದ ಮತಗಳು ನಿರ್ಣಾಯಕವಾಗಿರುವ ಹಿನ್ನೆಲೆಯಲ್ಲಿ ಸಮುದಾಯಕ್ಕೆ ಸಂದೇಶ ತಿಳಿಸಲು ಸಿಎಂ ಸಿದ್ದರಾಮಯ್ಯನವರು ಭೇಟಿ ಮಾಡಿದ್ದಾರೆ ಎಂದು ಹೇಳಲಾಗುತ್ತದೆ.

ನಂಜನಗೂಡು ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸಿಲ್ಲ. ಹೀಗಾಗಿ ಅಲ್ಲಿ ಒಕ್ಕಲಿಗ ಮತಗಳೇ ನಿರ್ಣಾಯವಾಗಿರುವುದರಿಂದ ಆ ಸಮುದಾಯದ ಮತಗಳನ್ನು ಸೆಳೆಯಲು ಸಿಎಂ ಗುರುವಾರ ರಾತ್ರಿ ಭೇಟಿ ಮಾಡಿದ್ದಾರೆ ಎನ್ನಲಾಗಿದೆ.

ಆದಿಚುಂಚನಗಿರಿ ಮಠಾಧೀಶರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕ್ಷಣ. pic.twitter.com/IIajtVZd0r

— CM of Karnataka (@CMofKarnataka) March 23, 2017

ರಾತ್ರಿ 9.30ಕ್ಕೆ ಮಠದ ಒಳಹೋದ ಸಿಎಂ 11 ಗಂಟೆಯವರೆಗೂ ಮಠದಲ್ಲಿದ್ದು ಮಾತುಕತೆ ನಡೆಸಿದ್ದು ವಿಶೇಷವಾಗಿತ್ತು. ಭೇಟಿ ಬಳಿಕ ಪ್ರತಿಕ್ರಿಯಿಸಿದ ಸಿಎಂ, ಸ್ವಾಮೀಜಿಗಳನ್ನು ಭೇಟಿ ಮಾಡಿ ಬಹಳ ದಿನವಾಗಿತ್ತು. ಈ ಕಾರಣಕ್ಕೆ ನಾನು ಬಂದಿದ್ದೆ ಎಂದು ತಿಳಿಸಿದ್ದರು. ಎಸ್‍ಎಂಕೆ ಬಿಜೆಪಿ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಭೇಟಿ ಮಾಡಿದ್ದೀರಾ ಎನ್ನುವ ಪ್ರಶ್ನೆಗೆ ‘ನೋ ಕಾಮೆಂಟ್ಸ್’ ಎಂದು ಪ್ರತಿಕ್ರಿಯಿಸಿದ್ದರು.

ಇಂದು ಬೆಂಗಳೂರಿಗೆ: ಬಿಜೆಪಿ ಸೇರ್ಪಡೆಯಾದ ನಂತರ ಮಾಜಿ ಸಿಎಂ ಎಸ್‍ಎಂ ಕೃಷ್ಣ ಮೊದಲ ಬಾರಿಗೆ ಇಂದು ಬೆಂಗಳೂರಿಗೆ ಬರಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ವಿಶೇಷ ವಿಮಾನದ ಮೂಲಕ ದೆಹಲಿಯಿಂದ ಹೊರಡುವ ಎಸ್‍ಎಂ ಕೃಷ್ಣ ಏಳು ಗಂಟೆಗೆ ಬೆಂಗಳೂರು ತಲುಪಲಿದ್ದಾರೆ.

ಬೆಂಗಳೂರಿನಲ್ಲಿ ಎಸ್‍ಎಂಕೆ ಅವರನ್ನು ಅದ್ದೂರಿಯಾಗಿ ಸ್ವಾಗತ ಕೋರಲು ಈಗಾಗಲೇ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಯೋಚಿಸಿದ್ದು ವಿಮಾನ ನಿಲ್ದಾಣದಿಂದ ಬೈಕ್ ಮೆರವಣಿಗೆ ಮೂಲಕ ಅಭೂತಪೂರ್ವ ಸ್ವಾಗತ ಕೋರಲು ಸಿದ್ದರಾಗಿದ್ದರು. ಆದರೆ ರಾಜ್ಯದಲ್ಲಿ ಬರ ಪರಿಸ್ಥಿತಿ ಮತ್ತು ಟ್ರಾಫಿಕ್ ಸಮಸ್ಯೆಯಿಂದಾಗಿ ನಗರದ ಜನರಿಗೆ ತೊಂದರೆ ನೀಡುವುದು ಬೇಡ ಎಂದು ನಯವಾಗಿ ತಿರಸ್ಕರಿಸಿದ್ದಾರೆ.

ಈ ಹಿಂದೆ ಕೂಡಾ ಮಹಾರಾಷ್ಟ್ರ ರಾಜ್ಯಪಾಲರಾದಾಗ ಕೃಷ್ಣ ಅವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅಂದು ಕಾರ್ಯಕರ್ತರು ಸಿದ್ದರಾಗಿದ್ದಾಗ ಬರದ ಹೆಸರನ್ನು ಹೇಳಿ ಸರಳವಾಗಿ ಆಚರಿಸಿಕೊಂಡಿದ್ದರು. ಕೃಷ್ಣಾ ಸೂಚನೆ ಹಿನ್ನಲೆಯಲ್ಲಿ ಸಂಜೆ ಏಳಕ್ಕೆ ಅವರನ್ನು ವಿಮಾನ ನಿಲ್ದಾಣದಿಂದ ಸರಳವಾಗಿ ಬರಮಾಡಿಕೊಂಡು ಬಿಜೆಪಿ ಕಾರ್ಯಕರ್ತರ ಉತ್ಸಾಹಕ್ಕೆ ಬೇಸರ ವ್ಯಕ್ತಪಡಿಸಬಾರದು ಎಂಬ ಉದ್ದೇಶದಿಂದ ಮಲ್ಲೇಶ್ವರಂ ಬಿಜೆಪಿ ಕಚೇರಿ ಬಳಿ ರಾತ್ರಿ ಎಂಟು ಗಂಟೆಗೆ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ಅದ್ದೂರಿ ಸ್ವಾಗತ ನೀಡಲು ಬಿಜೆಪಿ ಸಿದ್ಧತೆ ನಡೆಸಿದೆ.

vlcsnap 2017 03 24 13h59m58s736

smk bjp

TAGGED:bengalurubjpcongresskarnatakasiddaramaiahSM Krishnaಆದಿಚುಂಚನಗಿರಿಒಕ್ಕಲಿಗಕರ್ನಾಟಕಬಿಜೆಪಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
19 hours ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
23 hours ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
1 day ago
Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
2 days ago

You Might Also Like

RCB Team
Cricket

ಮಧ್ಯಾಹ್ನ ಬೆಂಗಳೂರಿಗೆ ಚಾಂಪಿಯನ್ಸ್ – ಸಂಜೆ ವಿಜಯೋತ್ಸವ ಮೆರವಣಿಗೆ | ಎಷ್ಟು ಗಂಟೆಗೆ ಏನು?

Public TV
By Public TV
43 minutes ago
special RCB victory parade in Bengaluru on Wednesday
Bengaluru City

ಇಂದು ಸಂಜೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿಕ್ಟರಿ ಪರೇಡ್

Public TV
By Public TV
45 minutes ago
research lab
Latest

ಕೃಷಿ ಬೆಳೆಯನ್ನೇ ಧ್ವಂಸ ಮಾಡೋ ಅಪಾಯಕಾರಿ ಶಿಲೀಂಧ್ರ ಕಳ್ಳ ಸಾಗಾಣೆ-ಅಮೆರಿಕದಲ್ಲಿ ಇಬ್ಬರು ಚೀನಿಯರು ಅರೆಸ್ಟ್‌

Public TV
By Public TV
46 minutes ago
Sunil Gavaskar Virat Kohli
Cricket

ಕೊಹ್ಲಿಗೆ ಎಚ್ಚರಿಕೆ ನೀಡದ ಅಂಪೈರ್‌ ವಿರುದ್ಧ ಗವಾಸ್ಕರ್ ಗರಂ

Public TV
By Public TV
2 hours ago
CRIME
Bengaluru City

Bengaluru | ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ಆರ್‌ಸಿಬಿ ಅಭಿಮಾನಿಗೆ ಚಾಕು ಇರಿತ

Public TV
By Public TV
3 hours ago
Josh Hazlewood
Cricket

IPL 2025 – ಫೈನಲ್ ಪಂದ್ಯದ ‘ಲಕ್ಕಿ ಕ್ರಿಕೆಟರ್’ ಹೇಜಲ್‌ವುಡ್

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?