ಜನರಿಗೆ ಮಾಸ್ಕ್ ಹಾಕಿ ಅನ್ನೋ ಬದಲು ಒಂದಷ್ಟು ಎಚ್ಚರಿಕೆ ಕ್ರಮ ಕೈಗೊಳ್ಳಲಿ: ಖಾದರ್ ಆಗ್ರಹ

Public TV
1 Min Read
UT KHADER 1

ಬೆಂಗಳೂರು: ಜನರಿಗೆ ಮಾಸ್ಕ್ (Mask) ಹಾಕಿ ಎನ್ನುವ ಬದಲು ಒಂದಷ್ಟು ಎಚ್ಚರಿಕೆ ಕ್ರಮ ಕೈಗೊಳ್ಳುವ ಕೆಲಸ ಮಾಡಲಿ. ಆಕ್ಸಿಜನ್ ಪ್ಲಾಂಟ್ ಕ್ವಾಲಿಟಿ ಚೆಕ್ ಮಾಡಿಕೊಳ್ಳಬೇಕು. ಅನುಷ್ಠಾನ ಮಾಡುವಾಗ ದೂರದೃಷ್ಟಿ ಆಲೋಚನೆ ಆಗಬೇಕು. ಗಡಿಬಿಡಿಯಲ್ಲಿ ಸರ್ಕಾರ ಕೆಲಸ ಮಾಡಬಾರದು ಎಂದು ಶಾಸಕ ಯು.ಟಿ.ಖಾದರ್ (U.T Khader) ಸರ್ಕಾರಕ್ಕೆ ಆಗ್ರಹಿಸಿದರು.

china corona covid virus

ಸುವರ್ಣಸೌಧ (SuvarnaSoudha) ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ವಿಚಾರದಲ್ಲಿ ಜನರ ಮಧ್ಯೆ ಗೊಂದಲ ಸೃಷ್ಟಿ ಮಾಡಬಾರದು. ಜನರಿಗೆ ಆತಂಕ ತರಿಸಬಾರದು. ಮಾಧ್ಯಮಗಳು, ಸೋಶಿಯಲ್ ಮೀಡಿಯಾದಲ್ಲಿ ಬಂದಿದ್ದೇ ನಿಜ ಎಂದು ತಿಳಿಯಬಾರದು. ಚೈನಾದಲ್ಲಿ ಪರಿಸ್ಥಿತಿ ಏನಾಗಿದೆ ಅಂತ ನೋಡ್ಬೇಕು. ಜನರಿಗೆ ಜಾಗೃತಿ ಮೂಡಿಸಬೇಕು ಎಂದರು.

UT Khader

ಭಯದ ವಾತಾವರಣದಲ್ಲಿ ಸಿಲುಕಿಸುವ ಕೆಲಸ ಆಗಬಾರದು. ಯಾವ ದೇಶದಲ್ಲಿ ದೊಡ್ಡ ಅನಾಹುತ ಆಗಿದೆ ಎಂದು ಮಾಹಿತಿ ಬಂದಿಲ್ಲ. ಈ ಸೋಂಕಿನ ತೀವ್ರತೆ, ಸಾವು ಎಷ್ಟು ಆಗುತ್ತೆ ಅನ್ನೋದನ್ನ ಮಾಹಿತಿ ತಿಳಿಸಬೇಕು. ಚಳಿಗಾಲದಲ್ಲಿ ಕೆಲ ಸೋಂಕು ಬಂದು ಹೋಗುತ್ತೆ ಎಂದು ಹೇಳಿದರು.

CORONA VIRUS

ಕೋವಿಡ್ (COVID 19) ಸಂಬಂಧಿಸಿದಂತೆ ಸರ್ಕಾರ ಜನರ ಮಧ್ಯೆ ಗೊಂದಲ ಸೃಷ್ಟಿಸಬಾರದು. ಚೀನಾದಲ್ಲಿ ಆಗಿರುವ ಕೋವಿಡ್ ಬಗ್ಗೆ ನಿಜಾಂಶ ತಿಳಿದುಕೊಳ್ಳಬೇಕು. ಬಿಎಫ್ 7 ಬಗ್ಗೆ ತಳಿಯಿಂದ ಹೇಗೆ ಜಾಗೃತಿ ಆಗಬೇಕು ಎಂದು ಸರ್ಕಾರ ತಿಳಿಸಲಿ. ಯಾವುದೇ ದೇಶದಲ್ಲಿ ದೊಡ್ಡ ಮಟ್ಟದ ಅನಾಹುತದ ಬಗ್ಗೆ ಮಾಹಿತಿ ಇಲ್ಲ. ವಿಶ್ವ ಆರೋಗ್ಯ ಸಂಸ್ಥೆ ಕೊಟ್ಟಿರುವ ಮಾಹಿತಿ ಬಗ್ಗೆ ಸರ್ಕಾರ ಸ್ಪಷ್ಟತೆ ಕೊಡಲಿ ಎಂದು ತಿಳಿಸಿದರು.

SUDHAKAR

ಹಿರಿಯರು ಕಾರ್ಯಕ್ರಮಗಳಿಂದ ದೂರ ಉಳಿಯಿರಿ ಎಂಬ ಸುಧಾಕರ್ (Sudhakar) ಸಲಹೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಬೇರೆ ಪಕ್ಷದ ಕಾರ್ಯಕ್ರಮ ಅಷ್ಟೇ ಅಲ್ಲ. ನಿಮ್ಮ ಪಕ್ಷದಲ್ಲಿ ಕಾರ್ಯಕ್ರಮ ಮಾಡಿದಾಗಲೂ ಹಿರಿಯರ ಬಗ್ಗೆ ನೋಡಿ. ನಮ್ಮ ಪಕ್ಷ ಅಷ್ಟೇ ಅಲ್ಲ ಬೇರೆ ಪಕ್ಷದ ಹಿರಿಯರ ಬಗ್ಗೆ ಸುಧಾಕರ್ ಆಲೋಚನೆ ಮಾಡಲಿ ಎಂದು ಯು.ಟಿ.ಖಾದರ್ ತಿರುಗೇಟು ನೀಡಿದರು.

Live Tv
[brid partner=56869869 player=32851 video=960834 autoplay=true]

Share This Article