Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನಾರ್ದನ ರೆಡ್ಡಿ ಚಲನವಲನದ ಮೇಲೆ ಗುಪ್ತಚರ ಇಲಾಖೆ ಕಣ್ಣು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜನಾರ್ದನ ರೆಡ್ಡಿ ಚಲನವಲನದ ಮೇಲೆ ಗುಪ್ತಚರ ಇಲಾಖೆ ಕಣ್ಣು

Districts

ಜನಾರ್ದನ ರೆಡ್ಡಿ ಚಲನವಲನದ ಮೇಲೆ ಗುಪ್ತಚರ ಇಲಾಖೆ ಕಣ್ಣು

Public TV
Last updated: January 31, 2023 9:55 am
Public TV
Share
2 Min Read
janardhan reddy 1
SHARE

ಕೊಪ್ಪಳ: ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಆರ್‌ಪಿಪಿ ಪಕ್ಷದ್ದೇ ಹವಾ ಸೃಷ್ಟಿಯಾಗಿದ್ದು, ಪಕ್ಷದ ಸಂಸ್ಥಾಪಕರಾದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ (Janardhan Reddy) ನಿಂತರೂ ಸುದ್ದಿ, ಕುಳಿತರೂ ಸುದ್ದಿಯಾಗುತ್ತಿದ್ದಾರೆ. ಮತ್ತೊಂದು ಅಚ್ಚರಿ ಸಂಗತಿ ಎಂದರೆ ರೆಡ್ಡಿಯ ಚಲನವಲನದ ಮೇಲೆ ರಾಜ್ಯ ಗುಪ್ತಚರ ಇಲಾಖೆ ಹಾಗೂ ಸಿಬಿಐ ಕಣ್ಣಿಟ್ಟಿದೆ.

2008ರಲ್ಲಿ ಆಪರೇಷನ್ ಕಮಲ ಎನ್ನುವ ಖ್ಯಾತಿ ಪಡೆದುಕೊಂಡಿದ್ದ ರಾಜ್ಯ ಬಿಜೆಪಿ (BJP) ಪಕ್ಷವು ಅಧಿಕಾರ ಪಡೆದುಕೊಳ್ಳಲು ಜನಾರ್ದನ ರೆಡ್ಡಿಯವರು ಪ್ರಮುಖ ಪಾತ್ರ ವಹಿಸಿದ್ದರು. ಇದಾದ ಬಳಿಕ ರೆಡ್ಡಿ ಅಕ್ರಮ ಗಣಿಗಾರಿಕೆ, ಬೇಲ್ ಡೀಲ್ ಸೇರಿದಂತೆ ಹಲವು ಪ್ರಕರಣಗಳ ಅಡಿಯಲ್ಲಿ ಸುಮಾರು ವರ್ಷಗಳ ಕಾಲ ಜೈಲು ಸೇರಿದ್ದರು. ನಂತರ ಜನಾರ್ದನ ರೆಡ್ಡಿಯವರು ಸುಪ್ರೀಂ ಕೋರ್ಟ್‍ನ ಷರತ್ತು ಬದ್ಧ ಅನುಮತಿಯ ಮೇರೆಗೆ ಜಾಮೀನು ಪಡೆದುಕೊಂಡು ಹೊರಬಂದಿದ್ದಾರೆ.

Janardhana Reddy

ಸುಮಾರು ವರ್ಷಗಳಿಂದ ಸಕ್ರೀಯ ರಾಜಕೀಯದಿಂದ ದೂರವಾಗಿದ್ದ ಜನಾರ್ದನ ರೆಡ್ಡಿ ಗಂಗಾವತಿಯಿಂದ (Gangavati) ರಾಜಕೀಯದ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ. ಸ್ವಂತ ಪಕ್ಷವನ್ನು ಕಟ್ಟಿಕೊಂಡು ರಾಜ್ಯದಲ್ಲಿ ಸಂಚಲನವನ್ನು ಮೂಡಿಸಲು ರೆಡ್ಡಿ ಕಾಲಿಗೆ ಚಕ್ರ ಕಟ್ಟಿಕೊಂಡು ಕ್ಷೇತ್ರಗಳವಾರು ಓಡಾಟವನ್ನು ನಡೆಸುತ್ತಿದ್ದಾರೆ. ಅವರ ಮೇಲಿರುವ ಆರೋಪಗಳೂ ಇನ್ನೂ ಮುಕ್ತವಾಗದೇ ಇರುವ ಹಿನ್ನೆಲೆಯಲ್ಲಿ ಸಿಬಿಐ (CBI) ಹಾಗೂ ರಾಜ್ಯ ಗುಪ್ತದಳ ಇಲಾಖೆಯವರು ಜನಾರ್ದನ ರೆಡ್ಡಿ ಕಾಲಿಟ್ಟ ಕಡೆಯಲ್ಲ ಹದ್ದಿನ ಕಣ್ಣಿಟ್ಟಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ -ಅಂಕೋಲಾ ರೈಲ್ವೆ ಮಾರ್ಗಕ್ಕೆ ಸಿಗದ ಅನುಮತಿ

ಮುಂಚಿತವಾಗಿಯೇ ಮಾಹಿತಿ ಸಂಗ್ರಹ : ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರು ಸ್ವಂತ ಪಕ್ಷವನ್ನು ಕಟ್ಟಿದ ಮೇಲೆ ರಾಜ್ಯದ ನಾನಾ ಕಡೆಗಳಲ್ಲಿ ಹಗಲು – ಇರುಳು ಎನ್ನದೆ ತಿರುಗಾಟ ನಡೆಸಿದ್ದಾರೆ. ಪಕ್ಷವನ್ನು ಬಲಿಷ್ಠಗೊಳಿಸಬೇಕು. ಚುನಾವಣೆಯಲ್ಲಿ ಜಯ ಸಾಧಿಸಬೇಕು ಎನ್ನುವ ಛಲದೊಂದಿಗೆ ನಾನಾ ತಂತ್ರಗಳನ್ನು ರೂಪಿಸುತ್ತಿದ್ದಾರೆ. ಆದರೆ ಅವರ ಸಂಪೂರ್ಣ ಮಾಹಿತಿ ಕಲೆ ಹಾಕುವ ಉದ್ದೇಶದಿಂದ ಜನಾರ್ದನ್ ರೆಡ್ಡಿ ಎಲ್ಲಿ ವಾಸ್ತವ್ಯ ಹುಡುತ್ತಾರೆ? ಎಲ್ಲೆಲ್ಲಿ ಪ್ರಯಾಣ ಮಾಡುತ್ತಾರೆ? ಗಂಗಾವತಿಯಲ್ಲಿ ವಾಸ್ತವ್ಯ ಹುಡುವುದು, ಬೆಂಗಳೂರಿಗೆ (Bengaluru) ಹೋಗುವುದು, ನೆರೆಯ ಜಿಲ್ಲೆ, ಕ್ಷೇತ್ರ ಸಂಚಾರ ಸೇರಿದಂತೆ ನಾನಾ ವಿಷಯಗಳ ಬಗ್ಗೆ ಗುಪ್ತಚರ ಇಲಾಖೆ ಅಧಿಕಾರಿಗಳು ಮುಂಚಿತವಾಗಿಯೇ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ, ಬೆಂಗಳೂರು ಭಾಗದಲ್ಲಿ ರೆಡ್ಡಿ ರಾಜಕೀಯವಾಗಿ ಯಾರನ್ನೇ ಸಂಪರ್ಕ ಮಾಡಿದರೂ ಮಫ್ತಿ ಪೊಲೀಸರು ಅದರ ಆಳ ಅಗಲ ಕೆದಕುತ್ತಿದ್ದಾರೆ. ಸಾರ್ವಜನಿಕ ಸಭೆ, ಸಮಾರಂಭ, ಬಹಿರಂಗ ಸಮಾವೇಶ, ಜನಾರ್ದನ ರೆಡ್ಡಿ ನಡೆಸುವ ಗೌಪ್ಯ ಸಭೆಗಳಿಗೆ ಕುದ್ದು ಗುಪ್ತಚರ ಇಲಾಖೆಯ ಡಿವೈಎಸ್ಪಿ, ಪಿಎಸ್‍ಐ ಹಂತದ ಅಧಿಕಾರಿಗಳೇ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

Janardhana Reddy 2

ಅಭ್ಯರ್ಥಿಗಳಲ್ಲಿ ಆತಂಕದ ಛಾಯೆ: ಗಾಲಿ ಜನಾರ್ದನ ರೆಡ್ಡಿ ಗಂಗಾವತಿ ಕ್ಷೇತ್ರದಿಂದ ಸ್ಪರ್ಧೆಯನ್ನು ಮಾಡುವುದು ಬಹುತೇಕ ಖಚಿತವಾಗಿದೆ. ಅಷ್ಟೇ ಅಲ್ಲದೆ ರಾಜ್ಯದ ನಾನಾ ಕ್ಷೇತ್ರಗಳಿಂದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ವತಿಯಿಂದ ಸುಮಾರು 35 ರಿಂದ 40 ಅಭ್ಯರ್ಥಿಗಳನ್ನು ಸ್ಪರ್ಧಿಸಲಿದ್ದಾರೆ ಎಂದು ರೆಡ್ಡಿಯವರು ಘೋಷಣೆ ಮಾಡಿದ್ದಾರೆ. ಗುಪ್ತಚರ ಇಲಾಖೆಯವರು ಕೆಆರ್‌ಪಿಪಿ ಪಕ್ಷದ ಅಭ್ಯರ್ಥಿಗಳು ಯಾರಾಗಲಿದ್ದಾರೆ. ಅವರ ಹಿನ್ನೆಲೆ ಏನು, ಅವರ ಆದಾಯದ ಮೂಲ ಯಾವುದು ಎನ್ನುವುದನ್ನು ಗುಪ್ತವಾಗಿ ಮಾಹಿತಿ ಕಲೆ ನೀಡಲು ಮುಂದಾಗಿದೆ. ಇದನ್ನೂ ಓದಿ: ಗೋರಖನಾಥ ದೇವಸ್ಥಾನದ ಮೇಲೆ ದಾಳಿ : ಐಐಟಿಯಲ್ಲಿ ಓದಿದ ಉಗ್ರನಿಗೆ ಗಲ್ಲು ಶಿಕ್ಷೆ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Janardhan Reddykoppalaಕೊಪ್ಪಳಚುನಾವಣೆಜನಾರ್ದನ ರೆಡ್ಡಿಸಿಬಿಐ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

Karnataka Lokayukta
Bengaluru City

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ದಾಳಿ

Public TV
By Public TV
33 minutes ago
Accident 2
Crime

ರಾಯಚೂರು | ಖಾಸಗಿ ಬಸ್ – ಕಾರಿನ ನಡುವೆ ಮುಖಾಮುಖಿ ಡಿಕ್ಕಿ; ಚಾಲಕ ಗಂಭೀರ

Public TV
By Public TV
51 minutes ago
Harangi Dam
Districts

ಬೇಸಿಗೆ ಮುನ್ನವೇ ಹಾರಂಗಿ ಡ್ಯಾಂನಲ್ಲಿ ನೀರಿನ ಮಟ್ಟ ಇಳಿಕೆ – ಜನ ಸೇರಿ ಜಾನುವಾರುಗಳಿಗೂ ನೀರಿನ ಸಮಸ್ಯೆ

Public TV
By Public TV
53 minutes ago
Bangladesh Election 2
Latest

2024 ರ ದಂಗೆಯ ಬಳಿಕ ಬಾಂಗ್ಲಾದಲ್ಲಿಂದು ಮೊದಲ ಚುನಾವಣೆ – ಯಾರ ಹೆಗಲಿಗೆ ಪಟ್ಟ?

Public TV
By Public TV
1 hour ago
RCB Team
Bengaluru City

ಆರ್‌ಸಿಬಿ ಅಭಿಮಾನಿಗಳ ಪಾಲಿಗಿಂದು ಬಿಗ್‌ ಡೇ – ಚಿನ್ನಸ್ವಾಮಿಯಲ್ಲಿ IPL ಪಂದ್ಯಕ್ಕೆ ಗ್ರೀನ್ ಸಿಗ್ನಲ್ ಸಿಗುತ್ತಾ?

Public TV
By Public TV
2 hours ago
Bharat Bandh
Bengaluru City

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?