Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಯಲ್ಲಿನ ಆಂತರಿಕ ಕಿತ್ತಾಟ ಲಕ್ಷಾಂತರ ಕಾರ್ಯಕರ್ತರಿಗೆ ದುಃಖ ಉಂಟು ಮಾಡಿದೆ: ಸಿ.ಟಿ.ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿಯಲ್ಲಿನ ಆಂತರಿಕ ಕಿತ್ತಾಟ ಲಕ್ಷಾಂತರ ಕಾರ್ಯಕರ್ತರಿಗೆ ದುಃಖ ಉಂಟು ಮಾಡಿದೆ: ಸಿ.ಟಿ.ರವಿ

Bengaluru City

ಬಿಜೆಪಿಯಲ್ಲಿನ ಆಂತರಿಕ ಕಿತ್ತಾಟ ಲಕ್ಷಾಂತರ ಕಾರ್ಯಕರ್ತರಿಗೆ ದುಃಖ ಉಂಟು ಮಾಡಿದೆ: ಸಿ.ಟಿ.ರವಿ

Public TV
Last updated: February 4, 2025 5:25 pm
Public TV
Share
2 Min Read
CT Ravi 1
SHARE

ಬೆಂಗಳೂರು : ಬಿಜೆಪಿಯಲ್ಲಿನ ಆಂತರಿಕ ಕಿತ್ತಾಟಕ್ಕೆ ಸ್ವಪಕ್ಷದವರೇ ಈಗ ತಿರುಗಿ ಬಿದ್ದಿದ್ದಾರೆ. ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಪರಿಷತ್‌ ಸದಸ್ಯ ಸಿಟಿ ರವಿ (CT Ravi) ಬಿಜೆಪಿಯಲ್ಲಿ (BJP) ಕಿತ್ತಾಟಕ್ಕೆ ಅಸಮಾಧಾನ ಹೊರ ಹಾಕಿದ್ದಾರೆ.

ಬಿಜೆಪಿ ರೆಬಲ್ಸ್ ಗಳಿಂದ ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿರುವ ವಿಚಾರಕ್ಕೆ ವಿಕಾಸಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ನಾನು ಚರ್ಚೆ ಮಾಡಲು ಇಷ್ಟ ಪಡುವುದಿಲ್ಲ. ಈಗ ನಡೆಯುತ್ತಿರುವ ಬೆಳವಣಿಗೆಗಳು ಲಕ್ಷಾಂತರ ಕಾರ್ಯಕರ್ತರಿಗೆ ನನ್ನನ್ನು ಸೇರಿ ದುಃಖ ತಂದಿದೆ. ಪಕ್ಷದ ಹಿತವನ್ನು ಗಮನದಲ್ಲಿಟ್ಟುಕೊಂಡು ಆಲೋಚನೆ ಮಾಡುವ ಅವಶ್ಯಕತೆ ಇದೆ. ಎಷ್ಟೋ ಜನ ತಮ್ಮ ಜೀವನವನ್ನು ಕೊಟ್ಟು, ಮನೆ ಮಠ ಹಾಳು ಮಾಡಿಕೊಂಡು ಪಕ್ಷದ ಬೆಳವಣಿಗೆಗೆ ಕೆಲಸ ಮಾಡಿದ್ದಾರೆ.ಅಧಿಕಾರ ಮರಿಚಿಕೆಯಾಗಿದ್ದ ಕಾಲದಲ್ಲಿ ದುಡಿದ್ದಾರೆ. ಕಾಂಗ್ರೆಸ್ ಇವತ್ತು ಜನ ವಿರೋಧಿಯಾಗಿ ಕೆಲಸ ಮಾಡುತ್ತಿದೆ. ನಿತ್ಯ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸಾವು ತಪ್ಪಿದ್ದಿಲ್ಲ. ಕಳಪೆ ಔಷಧಿ ಕಾರಣಕ್ಕೆ ಬಾಣಂತಿಯರು, ಮಕ್ಕಳು ಸಾಯ್ತಿದ್ದಾರೆ. ಅಭಿವೃದ್ಧಿ ನಿಂತ ಸ್ಥಿತಿಯಲ್ಲಿ ನಿಂತಿದೆ. ಆಡಳಿತ ಪಕ್ಷದವರಿಗೆ ಅಸಹನೆ ನಿರ್ಮಾಣ ಮಾಡಿದೆ. ನಾವು ಇಂತಹ ಸಮಯದಲ್ಲಿ ಜನರ ಪರವಾಗಿ ಹೋರಾಟ ಮಾಡಬೇಕು.ನಮ್ಮ ಕರ್ತವ್ಯ ಜನರ ಪರ ಹೋರಾಟ ಮಾಡೋದಾಗಿತ್ತು. ಆದರೆ ನಾವು ಮಾಡ್ತಿಲ್ಲ ಅಂತ ಆಕ್ರೋಶ ಹೊರ ಹಾಕಿದರು.

ನಮ್ಮ ಪಕ್ಷದ ಬೆಳವಣಿಗೆ ನನಗೆ ಸಮಾಧಾನ ತಂದಿಲ್ಲ. ಪಕ್ಷಕ್ಕೆ ಮಾಲೀಕರು ಪಕ್ಷದ ಸಾಮಾನ್ಯ ಕಾರ್ಯಕರ್ತರು. ಅವರಿಗೆ ನೋವಾಗುವಂತೆ,ಅವರಿಗೆ ದುಃಖ ತರುವಂತೆ ನಾವು ನಡೆದುಕೊಳ್ಳಬಾರದು. ಜನಹಿತ ಮರೆತು ರಾಜಕಾರಣ ಮಾಡಬಾರದು. ಜನಪರವಾದ ಹೋರಾಟ ಮಾಡದೇ ಹೋದರೆ ನಾವು ಕಳೆದು ಹೋಗುತ್ತೇವೆ. ಪಕ್ಷಕ್ಕೂ ನಷ್ಟ ಆಗುತ್ತದೆ ಅಂತ ಅಸಮಾಧಾನ ಹೊರ ಹಾಕಿದರು.  ಇದನ್ನೂ ಓದಿ: ಏರೋ ಇಂಡಿಯಾ 2025 – ನಾಳೆಯಿಂದ ಬೆಂಗಳೂರು ವಿಮಾನಯಾನದಲ್ಲಿ ವ್ಯತ್ಯಯ

ವಿಜಯೇಂದ್ರ ಬದಲಾವಣೆಗೆ ರೆಬಲ್ಸ್ ಗಳ ಪಟ್ಟು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು,ಪಕ್ಷದ ಆಂತರಿಕ ವಿಷಯಗಳ ಬಗ್ಗೆ ಹೊರಗೆ ಮಾತನಾಡುವುದಿಲ್ಲ. ನಮಗೆ ಹೇಳುವ ಜಾಗ ಇವೆ ಹೇಳಿದ್ದೇವೆ‌. ಹೇಳುವ ವ್ಯಕ್ತಿಗಳ ಹತ್ರ ಹೇಳಿದ್ದೇವೆ. ಪಕ್ಷದ ಬಗ್ಗೆ ಗೌರವ ಇದೆ. ನಮಗೆ ಎರಡನೇ ಆಯ್ಕೆ ಇಲ್ಲ. ಸೈದ್ಧಾಂತಿಕ ಕಾರಣಕ್ಕೆ ನಾವು ಬಿಜೆಪಿ ಆಯ್ಕೆ ಮಾಡಿಕೊಂಡಿದ್ದೇವೆ. 36 ವರ್ಷಗಳ ಹಿಂದೆ ಆಯ್ಕೆ ಮಾಡಿಕೊಂಡಿದ್ದು. ನಮಗೆ ಎರಡನೇ ಆಯ್ಕೆ ಇಲ್ಲ. ಸುಖ ದುಃಖದಲ್ಲೂ ಪಕ್ಷದ ಜೊತೆ ಇರುತ್ತೇವೆ. ಪಕ್ಷ ಸರಿ ಮಾಡಲು ಪ್ರಾಮಾಣಿಕ ಪ್ರಯತ್ನ ನಮ್ಮ ಕಡೆಯಿಂದ ಮಾಡುತ್ತೇವೆ. ಹೈಕಮಾಂಡ್ ಮನಸಿನಲ್ಲಿ ಏನಿದೆ ಅಂತ ನನಗೆ ಗೊತ್ತಿಲ್ಲ ಅಂತ ತಿಳಿಸಿದರು.

 

ವಿಜಯೇಂದ್ರ ಹಿರಿಯರನ್ನ ಕಡೆ ಕಣಿಸುತ್ತಿದ್ದಾರೆ ಎಂಬ ರಮೇಶ್ ಜಾರಕಿಹೋಳಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನು ಯಾವುದನ್ನೂ ಸಾರ್ವಜನಿಕವಾಗಿ ಕಾಮೆಂಟ್ ಮಾಡೋಕೆ ಬಯಸೊಲ್ಲ. ಸಾಮಾನ್ಯ ಕಾರ್ಯಕರ್ತ ಆಗಿದ್ದ ನನಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಕ್ಷ ಮಾಡಿದೆ. ಕೆಲವು ಕಾಲ ನಾವು ನೇಪಥ್ಯಕ್ಕೆ ಸರಿದಿದ್ದೇವೆ ಅಂದರೆ ಶಾಶ್ವತವಾಗಿ ನೇಪಥ್ಯಕ್ಕೆ ಸರಿದ್ದೇವೆ ಅಂತ ಅಲ್ಲ. ಸಂಕಷ್ಟವೂ ಕೂಡಾ ನಮ್ಮ ಸಾಮರ್ಥ್ಯ ಹೆಚ್ಚು ಮಾಡಲು ಬರುತ್ತದೆ. ನಮ್ಮ ಆತ್ಮ ವಿಶ್ವಾಸ ಪರೀಕ್ಷೆ ಮಾಡೋಕೆ ಸಂಕಷ್ಟ ಬರುತ್ತದೆ. ನನ್ನ ಜೀವನದಲ್ಲಿ ಬರುವ ಸಂಕಷ್ಟಗಳನ್ನ ನನ್ನ ಸಾಮರ್ಥ್ಯ ಹೆಚ್ಚಳಕ್ಕೆ ಬರುತ್ತದೆ ಅಂತ ನನ್ನ ಭಾವನೆ. ಸಂಕಷ್ಟ ಕಾಲದಲ್ಲಿ ಹಿಂದೆ ಹೆಜ್ಜೆ ಇಟ್ಟಿಲ್ಲ. ಸಂಕಷ್ಟ ಕಾಲ ಹೀಗೆ ಇರೊಲ್ಲ ಅಂತ ಭಗವದ್ಗೀತೆಯಲ್ಲಿ ಹೇಳಿದೆ. ಕಾಲ ಹೀಗೆ ಇರುವುದಿಲ್ಲ.. ಕಾಲ ಸರಿಬೇಕು ನೋಡೋಣ ಅಂತ ಮಾರ್ಮಿಕವಾಗಿ ಮಾತನಾಡಿದರು.

TAGGED:bjpcongressctravidelhipoliticsಕಾಂಗ್ರೆಸ್ದೆಹಲಿಬಿಜೆಪಿರಾಜಕೀಯಸಿಟಿ ರವಿ
Share This Article
Facebook Whatsapp Whatsapp Telegram

Cinema news

Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories

You Might Also Like

Private Plane Flying 30 Feet Above Ground Crashes Into Tree In Chhattisgarh
Latest

ಮರಕ್ಕೆ ಡಿಕ್ಕಿಯಾಗಿ ಖಾಸಗಿ ವಿಮಾನ ಪತನ

Public TV
By Public TV
10 minutes ago
bjp flag
Bengaluru City

ಭ್ರಷ್ಟಾಚಾರವೇ ಕಾಂಗ್ರೆಸ್‌ನ ಅಸಲಿ ಗ್ಯಾರಂಟಿ – ಇಡಿ ದಾಳಿಗೆ ಬಿಜೆಪಿ ಟೀಕೆ

Public TV
By Public TV
16 minutes ago
Sadhvi Satish Sail
Latest

ಮಗಳು ಬಿಸಿನೆಸ್ ಮಾಡಲಿ ಅಂತ ಸಿಎಂ, ಡಿಸಿಎಂ ಬಳಿ ಬುದ್ದಿ ಹೇಳಿಸಿದ್ದೆ: ‘ಫೆಮಿನಾ ಮಿಸ್‌ ಇಂಡಿಯಾ’ ಕಿರೀಟ ಗೆದ್ದ ಮಗಳ ಬಗ್ಗೆ ಸತೀಶ್‌ ಸೈಲ್‌ ಮಾತು

Public TV
By Public TV
41 minutes ago
Doctor Ramesh who was supposed to marry his wifes sister tomorrow murdered Sirsi KHB Colony
Crime

ಇಂದು ಮದುವೆ ಆಗ್ಬೇಕಿದ್ದ ವೈದ್ಯನ ಹತ್ಯೆ ಕೇಸ್‌ – ಚಿನ್ನದ ಆಸೆಗೆ ಸ್ನೇಹಿತನಿಂದಲೇ ಮರ್ಡರ್‌

Public TV
By Public TV
46 minutes ago
Mohammed Nalapad
Bengaluru City

ನಲಪಾಡ್ ಮನೆ ಮೇಲೆ ಇಡಿ ದಾಳಿಗೆ ಆ 10 ಲಕ್ಷ ಕಾರಣಾನಾ?

Public TV
By Public TV
1 hour ago
kea
Bengaluru City

ಕೃಷಿ ಇಲಾಖೆಯ 890 ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ಮೇ 10 ಕೊನೆಯ ದಿನ: KEA

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?