Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನ್ವೇಷಣೆಯ ಹಾದಿಯಲ್ಲಿ ಸೋಲಿಗೆ ಹೆದರಬೇಡಿ: ಯುವ ವಿಜ್ಞಾನಿ ಗೀತಾಂಜಲಿ ರಾವ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಅನ್ವೇಷಣೆಯ ಹಾದಿಯಲ್ಲಿ ಸೋಲಿಗೆ ಹೆದರಬೇಡಿ: ಯುವ ವಿಜ್ಞಾನಿ ಗೀತಾಂಜಲಿ ರಾವ್

Public TV
Last updated: February 14, 2022 9:23 am
Public TV
Share
3 Min Read
nternational Day for Women and Girls in Science
SHARE

ಚೆನ್ನೈ: ಗಮನಿಸುವಿಕೆ, ಚರ್ಚೆ, ಸಂಶೋಧನೆ, ನಿರ್ಮಾಣ ಮತ್ತು ಸಂವಹನ ಈ ಐದು ಅಂಶಗಳು ಯಾವುದೇ ಅನ್ವೇಷಣೆಯಲ್ಲಿ ಪ್ರಮುಖ ಹೆಜ್ಜೆಗಳಾಗಿದ್ದು, ಸಂಶೋಧನೆಯಲ್ಲಿ ತೊಡಗಿಕೊಂಡಿರುವ ವಿದ್ಯಾರ್ಥಿಗಳು, ಯುವ ವಿಜ್ಞಾನಿಗಳು ಯಶಸ್ಸಿಗಾಗಿ ಈ ಮಾರ್ಗ ಅನುಸರಿಸಬೇಕು ಎಂದು ಭಾರತೀಯ ಮೂಲದ ಅಮೆರಿಕ ಯುವ ವಿಜ್ಞಾನಿ ಗೀತಾಂಜಲಿ ರಾವ್ ಪ್ರತಿಪಾದಿಸಿದರು.

ಚೆನ್ನೈಯ ಅಮೆರಿಕ ದೂತಾವಾಸ ಹೈದರಾಬಾದ್, ಕೋಲ್ಕತ್ತಾ ಮತ್ತು ಮುಂಬೈನ ಅಮೆರಿಕ ದೂತವಾಸಗಳ ಜೊತೆ ಶುಕ್ರವಾರ ಆಯೋಜಿಸಿದ್ದ ವಿಜ್ಞಾನ ವಲಯದಲ್ಲಿನ ಮಹಿಳೆ ಮತ್ತು ಬಾಲಕಿಯರ ಅಂತಾರಾಷ್ಟ್ರೀಯ ದಿನಾಚರಣೆ ಕಾರ್ಯಕ್ರಮದಲ್ಲಿ ಗೀತಾಂಜಲಿ ರಾವ್ ಮಾತನಾಡಿದರು.

ವಾಟರ್ ಗರ್ಲ್ ಆಫ್ ಇಂಡಿಯಾ ಖ್ಯಾತಿಯ ಗರ್ವಿತಾ ಗುಲಾಟಿ ಅವರೊಂದಿಗಿನ ಸಂವಾದದಲ್ಲಿ ಭಾಗವಹಿಸಿದ್ದ ಗೀತಾಂಜಲಿ ರಾವ್ ಶೈಕ್ಷಣಿಕ ಸಾಧನೆ ಮತ್ತು ಅಂಕಗಳ ಮೇಲಷ್ಟೇ ಗಮನ ಕೇಂದ್ರೀಕರಿಸುವುದರ ಬದಲು ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ ಇತ್ಯಾದಿಗಳ ಬಗ್ಗೆ ಗಮನಹರಿಸಬೇಕು. ಇವು ಭವಿಷ್ಯದ ಮಾರ್ಗಗಳಾಗಿವೆ ಎಂದರು. ಇದನ್ನೂ ಓದಿ: ವಿಜ್ಞಾನ ವಲಯದಲ್ಲಿ ನಾಳೆ ಮಹಿಳೆ, ಬಾಲಕಿಯರ ಅಂತಾರಾಷ್ಟ್ರೀಯ ದಿನಾಚರಣೆ – ಭಾರತ ಮೂಲದ ಅಮೆರಿಕನ್ ಬಾಲ ಸಂಶೋಧಕಿ ಭಾಗಿ

ಯಾವುದೇ ಅನ್ವೇಷಣೆಯಾಗಲಿ ಸೋಲು ಹಾಗೂ ವೈಫಲ್ಯಗಳ ಬಗ್ಗೆ ಗಮನ ನೀಡಬಾರದು. ಸೋಲಿನಿಂದ ನಿಮಗೆ ಅನುಭವ ದೊರಕುತ್ತದೆ ಮತ್ತು ಅದೇ ಮುಂದೆ ಯಶಸ್ವಿಗೆ ಕಾರಣವಾಗುತ್ತದೆ. ಸಣ್ಣದೇ ಆಗಲಿ, ದೊಡ್ಡದೇ ಆಗಲಿ ಬದಲಾವಣೆಗೆ ಕಾರಣರಾಗಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸಂವಾದಕ್ಕೂ ಮುನ್ನ ಎಲ್ಲರನ್ನೂ ವೆಬಿನಾರ್‌ಗೆ ಸ್ವಾಗತಿಸಿದ ಚೆನ್ನೈನ ಅಮೆರಿಕ ಕಾನ್ಸಲೇಟ್ ಕಚೇರಿಯ ಕಾನ್ಸಲ್ ಜನರಲ್ ಜ್ಯುಡಿತ್ ರೆವಿನ್, ಭಾರತೀಯ ಮೂಲದ ೪.೮ ದಶಲಕ್ಷ ಜನರು ಪ್ರಸ್ತುತ ಅಮೆರಿಕದಲ್ಲಿ ನೆಲೆಸಿದ್ದು, ವಿಜ್ಞಾನ, ಮನರಂಜನೆ, ಬಾಹ್ಯಾಕಾಶ, ಕಲೆ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಅಮೂಲ್ಯ ಕೊಡುಗೆ ನೀಡುತ್ತಿದ್ದಾರೆ. ೧೭೯೦ರಲ್ಲಿ ಚೆನ್ನೈನಿಂದ ಭಾರತೀಯ ವ್ಯಕ್ತಿಯೊಬ್ಬ ಬ್ರಿಟಿಷ್ ಹಡಗಿನ ಮೂಲಕ ಅಮೆರಿಕದ ನೆಲಕ್ಕೆ ಕಾಲಿಟ್ಟಿದ್ದು, ಈ ಸಂಬಂಧಕ್ಕೆ ಮುನ್ನುಡಿ ಬರೆಯಿತು ಎಂದರು. ಅಮೆರಿಕದ ಮೊದಲ ಮಹಿಳಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹಾಗೂ ಕರ್ನಾಟಕ ಮೂಲದ ಸರ್ಜನ್ ಜನರಲ್ ವಿವೇಕ ಮೂರ್ತಿ ಅವರ ಕೊಡುಗೆಯನ್ನು ಸಹ ಈ ಸಂದರ್ಭದಲ್ಲಿ ಸ್ಮರಿಸಿದರು.

೨ ಲಕ್ಷ ಭಾರತೀಯ ವಿದ್ಯಾರ್ಥಿಗಳು ಪ್ರಸ್ತುತ ಅಮೆರಿಕದಲ್ಲಿ ಕಲಿಯುತ್ತಿದ್ದಾರೆ. ಅವರಲ್ಲಿ ವಿಜ್ಞಾನ, ತಂತ್ರಜ್ಞಾನ, ಎಂಜನಿಯರಿಂಗ್ ಮತ್ತು ಗಣಿತ (ಸ್ಟೆಮ್) ಕ್ಷೇತ್ರಗಳನ್ನು ಆಯ್ದುಕೊಂಡವರೇ ಹೆಚ್ಚು. ಈ ವಿದ್ಯಾಥಿಗಳು ತಮ್ಮ ವಿಶಿಷ್ಟ ಸಂಶೋಧನೆ ಹಾಗೂ ಅನ್ವೇಷಣೆಗಳ ಮೂಲಕ ಅಮೆರಿಕದಲ್ಲಿ ಉನ್ನತ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಕಾರಣರಾಗಿದ್ದಾರೆ ಎಂದೂ ಜ್ಯುಡಿತ್ ರೆವಿನ್ ಮೆಚ್ಚುಗೆ ವ್ಯಕ್ತಪಡಿಸಿದರು.

ಚೆನ್ನೈ ದೂತಾವಾಸದ ಸಾರ್ವಜನಿಕ ವ್ಯವಹಾರಗಳ ಅಧಿಕಾರಿ ಆನ್ ಲೀ ಶೇಷಾದ್ರಿ ವಂದನಾರ್ಪಣೆ ಮಾಡಿದರು.

ಅಮೆರಿಕದ ಯಶಸ್ಸಿನಲ್ಲಿ ಭಾರತೀಯ ಅಮೆರಿನ್ನರ ಕೊಡುಗೆ ಮಹತ್ತರವಾಗಿದ್ದು, ಭಾರತದಲ್ಲಿನ ಅಮೆರಿಕ ರಾಯಭಾರ ಕಚೇರಿ ಡಯಸ್ಪೊರಾ ಡಿಪ್ಲೊಮಸಿ ಸರಣಿಯ ಮೂಲಕ ವಿಜ್ಞಾನ, ತಂತ್ರಜ್ಞಾನ, ಕಲೆ, ರಾಜಕೀಯ, ವ್ಯವಹಾರ, ಬಾಹ್ಯಾಕಾಶ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಕೊಡುಗೆ ನೀಡುತ್ತಿರುವ ಭಾರತೀಯ ಮೂಲದ ಅಮೆರಿಕ ಸಾಧಕರ ಜೊತೆ ಮಾತುಕತೆ, ಸಂದರ್ಶನ ಇತ್ಯಾದಿಗಳನ್ನು ಕಾಲಕಾಲಕ್ಕೆ ಏರ್ಪಡಿಸಲಿದೆ. ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಪ್ರಜಾಪ್ರಭುತ್ವದ ಹಬ್ಬ ಮಾಡಿ: ಮೋದಿ

ಭಾರತ ಮೂಲದ ಗೀತಾಂಜಲಿ ರಾವ್ ಕೊಲರೆಡೊದಲ್ಲಿ ಯುವ ವಿಜ್ಞಾನಿಯಾಗಿದ್ದು, ಬರಹಗಾತಿ, ಭಾಷಣಗಾರ್ತಿ ಹಾಗೂ ಜಗತ್ತಿನಾದ್ಯಂತ ಸ್ಟೆಮ್ (ಸೈನ್ಸ್, ಟೆಕ್ನಾಲಜಿ, ಎಂಜನೀಯರಿಂಗ್, ಮ್ಯಾಥ್ಸ್) ಶಿಕ್ಷಣ ವ್ಯವಸ್ಥೆಯ ಪ್ರತಿಪಾದಕಿಯಾಗಿದ್ದಾರೆ. ಅಲ್ಲದೇ ನೀರಿನಲ್ಲಿ ಸೀಸದ ಮಾಲಿನ್ಯ ಕಂಡುಹಿಡಿಯಲು ಅಭಿವೃದ್ಧಿಪಡಿಸಿದ ಸಾಧನಕ್ಕಾಗಿ ಅಮೆರಿಕದ ಪರಿಸರ ಸಂರಕ್ಷಣಾ ಸಂಸ್ಥೆಯ ಪ್ರತಿಷ್ಠಿತ ಯುವ ವಿಜ್ಞಾನಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕೃತಕ ಬುದ್ಧಿಮತ್ತೆ ಮತ್ತು ಭಾಷಾ ಸಂಸ್ಕರಣೆಯ ನೆರವಿನಿಂದ ಸೈಬರ್ ಪೀಡನೆಯನ್ನು ತಡೆಯಲು ಅವರು ಸಿದ್ಧಪಡಿಸಿದ ಹೊಸ ಮಾದರಿಯ ಸೇವೆ ಸಹ ಪ್ರಶಂಸೆಗೆ ಪಾತ್ರವಾಗಿದೆ. ಗೀತಾಂಜಲಿ ಬರೆದಿರುವ ಯಂಗ್ ಇನೊವೇಟರ್ಸ್ ಗೈಡ್ ಟು ಸ್ಟೆಮ್ ಪುಸ್ತಕ ಸಂಶೋಧನಾ ಪ್ರಕ್ರಿಯೆಯಲ್ಲಿ ವಿದ್ಯಾಥಿಗಳು ಮತ್ತು ಶಿಕ್ಷಕರಿಗೆ ನೆರವಾಗುತ್ತಿದೆ.

ಗರ್ವಿತಾ ಗುಲಾಟಿ ವೈ ವೇಸ್ಟ್ ಎಂಬ ಸರ್ಕಾರೇತರ ಸಂಸ್ಥೆಯ ಸಂಸ್ಥಾಪಕಿಯಾಗಿದ್ದು ವಾಟರ್ ಗರ್ಲ್ ಆಫ್ ಇಂಡಿಯಾ ಎಂಬ ಖ್ಯಾತಿ ಗಳಿಸಿದ್ದಾರೆ. ಗರ್ವಿತಾ ಮತ್ತು ಅವರ ಜಲ ಉದ್ಯಮಿಗಳ ತಂಡ ಗ್ಲಾಸ್ ಹಾಫ್ ಫುಲ್ ಎಂಬ ಅಭಿಯಾನದ ಮೂಲಕ ಭಾರತದ ಹೋಟೆಲ್‌ಗಳಲ್ಲಿ ವ್ಯರ್ಥವಾಗುತ್ತಿದ್ದ ಸುಮಾರು ೧೦ ದಶಲಕ್ಷ ಲೀಟರ್ ನೀರನ್ನು ಉಳಿಸಿದ್ದಾರೆ.

Share This Article
Facebook Whatsapp Whatsapp Telegram
Previous Article dkshi house protest ಕರ್ನಾಟಕಕ್ಕೆ ಮಹದಾಯಿ ನೀರು ಬಿಡಲ್ಲ ಎಂದ ಗೋವಾ ಕಾಂಗ್ರೆಸ್ – ಕೈ ನಾಯಕರ ಮನೆಗೆ ಮುತ್ತಿಗೆ
Next Article Pineapple Halwa ಪ್ರೇಮಿಗಳ ದಿನದ ಸೆಲೆಬ್ರೆಷನ್‍ಗೆ ಅನಾನಸ್ ಹಲ್ವಾ ಮಾಡಿ ನಿಮ್ಮ ಪ್ರಿಯಕರನಿಗೆ ನೀಡಿ

Latest Cinema News

shiva rajkumar shree marikamba temple
ಶಿರಸಿಯ ಶ್ರೀ ಮಾರಿಕಾಂಬಾ ಕ್ಷೇತ್ರಕ್ಕೆ ನಟ ಶಿವಣ್ಣ ದಂಪತಿ ಭೇಟಿ
Cinema Latest Sandalwood Uttara Kannada
kantara chapter 1 J.NTR
ಕಾಂತಾರ ಚಾಪ್ಟರ್-1 ಹೈದರಾಬಾದ್ ಪ್ರೀ-ರಿಲೀಸ್ ಇವೆಂಟ್‌ಗೆ Jr.NTR ಸಾಥ್
Cinema Latest Sandalwood Top Stories
jockey movie
‘ಮಡ್ಡಿ’ ಸಿನಿಮಾ ನಿರ್ದೇಶಕರ ಹೊಸ ಸಾಹಸ – ಟಗರು ಕಾಳಗ ಹಿನ್ನೆಲೆ ಮೋಷನ್ ಪೋಸ್ಟರ್
Cinema Latest Sandalwood Top Stories
Sri Murali
ಐತಿಹಾಸಿಕ ಚಿತ್ರದಲ್ಲಿ ನಟ ಶ್ರೀಮುರಳಿ
Cinema Latest Sandalwood
Anjali Sudhakar 3
ʻಲಕ್ಷ್ಮಿ ನಿವಾಸʼದಿಂದ ಹೊರನಡೆದ ಅಂಜಲಿ – ಕಾರಣವೇನು?
Cinema Latest TV Shows

You Might Also Like

Abhishek Sharma
Cricket

ಸಿಕ್ಸ್‌ ಆಯ್ತು ಈಗ ಏಷ್ಯಾಕಪ್‌ನಲ್ಲಿ ಮತ್ತೊಂದು ದಾಖಲೆ ಬರೆದ ಅಭಿಷೇಕ್‌ ಶರ್ಮಾ

29 minutes ago
Kailash Vijayvargiya Rahul and Priyanka Gandhi
Latest

ರಾಹುಲ್, ಪ್ರಿಯಾಂಕಾ ಬಾಂಧವ್ಯದ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ಕೈಲಾಶ್

33 minutes ago
POWER CUT
Bengaluru City

ಬೆಂಗಳೂರಿನ ಹಲವೆಡೆ ಭಾನುವಾರ ವಿದ್ಯುತ್ ವ್ಯತ್ಯಯ – ಎಲ್ಲೆಲ್ಲಿ ಕರೆಂಟ್‌ ಇರಲ್ಲ?

2 hours ago
Mysuru Dasara Cauvery Aarti begins DK Shivakumar KRS Dam
Districts

ಕಾವೇರಿ ಆರತಿಗೆ ಚಾಲನೆ – ಪುಷ್ಪಾರ್ಚನೆ ಮಾಡಿ ಡಿಕೆಶಿ ಚಾಲನೆ

2 hours ago
Karnataka Caste census
Bengaluru City

ಜಾತಿ ಗಣತಿಗೆ ನೂರೆಂಟು ವಿಘ್ನ – ಡೆಡ್‌ಲೈನಲ್ಲಿ ಸಮೀಕ್ಷೆ ಮುಗಿಯೋದು ಡೌಟ್

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?