Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಕಾರಣಿಗಳಿಗೆ ಸೀಟು ಬಿಡಲು ಇಷ್ಟವಿರಲ್ಲ, ನಾವು ಸಂಪ್ರದಾಯಬದ್ಧವಾಗಿ ಅಧಿಕಾರದಿಂದ ದೂರವಾಗ್ತಿದ್ದೀವಿ- ಪೇಜಾವರಶ್ರೀ ಮನದ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜಕಾರಣಿಗಳಿಗೆ ಸೀಟು ಬಿಡಲು ಇಷ್ಟವಿರಲ್ಲ, ನಾವು ಸಂಪ್ರದಾಯಬದ್ಧವಾಗಿ ಅಧಿಕಾರದಿಂದ ದೂರವಾಗ್ತಿದ್ದೀವಿ- ಪೇಜಾವರಶ್ರೀ ಮನದ ಮಾತು

Districts

ರಾಜಕಾರಣಿಗಳಿಗೆ ಸೀಟು ಬಿಡಲು ಇಷ್ಟವಿರಲ್ಲ, ನಾವು ಸಂಪ್ರದಾಯಬದ್ಧವಾಗಿ ಅಧಿಕಾರದಿಂದ ದೂರವಾಗ್ತಿದ್ದೀವಿ- ಪೇಜಾವರಶ್ರೀ ಮನದ ಮಾತು

Public TV
Last updated: January 17, 2018 12:06 pm
Public TV
Share
3 Min Read
UDUPI
SHARE

ಉಡುಪಿ: ಶ್ರೀಕೃಷ್ಣಮಠದ ಪೂಜಾಧಿಕಾರವನ್ನು ಪಲಿಮಾರು ಸ್ವಾಮೀಜಿಗಳಿಗೆ ಇಂದು ಪೇಜಾವರಶ್ರೀ ಬಿಟ್ಟುಕೊಡಲಿದ್ದಾರೆ. ಎರಡು ವರ್ಷದ ತಮ್ಮ ಪರ್ಯಾಯ ಅಧಿಕಾರಾವಧಿ ಬಗ್ಗೆ ಪಬ್ಲಿಕ್ ಟಿವಿ ಜತೆ ಮನಬಿಚ್ಚಿ ಮಾತನಾಡಿದ್ದಾರೆ.

ತಮ್ಮ ಅಧಿಕಾರಾವಧಿ ಮುಗಿಯುವಾಗ ರಾಜಕಾರಣಿಗಳು ಮನಸ್ಸಿಲ್ಲದೆ ತಮ್ಮ ಸೀಟು ಬಿಟ್ಟುಕೊಡುತ್ತಾರೆ. ಆದ್ರೆ ನಾವು ಸಂಪ್ರದಾಯಕ್ಕೆ ಬದ್ಧರು. ಮೊದಲೇ ನಿಶ್ಚಿತವಾದ ಅಧಿಕಾರ ಇದು. ರಾಜಕಾರಣಿಗಳಿಗಾದ್ರೆ ಬೇಸರವಾಗ್ತದೆ. ನಾವು ಯಾವುದೇ ಬೇಸರವಿಲ್ಲದೆ ಪೂಜಾಧಿಕಾರ ಬಿಟ್ಟುಕೊಡುತ್ತಿದ್ದೇವೆ. ರಾಜಕಾರಣಿಗಳಿಗೆ ಅಧಿಕಾರ ಬಿಡುವಾಗ ದುಃಖವಾಗುತ್ತದೆ. ನಾವು ಖುಷಿಯಿಂದ ಪೀಠಾಧಿಕಾರ ಬಿಟ್ಟು ಕೊಡುತ್ತಿದ್ದೇವೆ ಅಂತ ಹೇಳಿದ್ರು.

ಎರಡು ವರ್ಷದ ಪರ್ಯಾಯ ತೃಪ್ತಿಯಿದೆಯೇ?
ನಮಗೆ ಮಹಾತ್ವಾಕಾಂಕ್ಷೆ ಬಹಳ ಇತ್ತು. ಅದರಲ್ಲಿ ಕೆಲವು ಮಹತ್ವದ ಕೆಲಸಗಳು ಆಗಿದೆ. ಕನಸು ಬಹಳ ಇತ್ತು. ಮಠಕ್ಕೆ ಜಮೀನು ಖರೀದಿಸುವ ಆಸೆ ಇತ್ತು. ಆದ್ರೆ ಸಂತೃಪ್ತಿಯಿಲ್ಲ, ತೃಪ್ತಿ ಇದೆ. ಮುಂದಿನ ಸ್ವಾಮೀಜಿಗಳು ನನ್ನೆಲ್ಲಾ ಉಳಿದ ಆಕಾಂಕ್ಷೆಗಳನ್ನು, ಅವರ ಕನಸುಗಳನ್ನು ಈಡೆರಿಸುತ್ತಾರೆ ಎಂಬ ನಂಬಿಕೆಯಿದೆ ಅಂದ್ರು.

SRI 1583

ವಿಚಾರಗಳು ವಿವಾದವಾಯ್ತು- ಪ್ರಚಾರವಾಯ್ತು:
ನಮ್ಮ ಅಧಿಕಾರಾವಧಿಯಲ್ಲಿ ಕೆಲ ವಿಚಾರಗಳು ವಿವಾದವಾಗಿದೆ. ವಿವಾದವಾದಾಗಲೇ ವಿಚಾರಗಳು ಪ್ರಚಾರವಾಗಿ ಮಹತ್ವ ಪಡೆದುಕೊಳ್ಳುವುದು. ನಮ್ಮ ನಿಲುಮೆಗಳು ಇಂತಹ ಘಟನೆಗಳಾದಾಗ ಸಮಾಜಕ್ಕೆ ಅದು ಅರ್ಥವಾಗುತ್ತದೆ. ಸಮಾಜದ ಎಲ್ಲಾ ವರ್ಗದ ಮೇಲೆ ನಮಗೆ ಪ್ರೀತಿಯಿದೆ. ಯಾರ ಮೇಲೂ ದ್ವೇಷ ಇಲ್ಲ. ಸಂವಿಧಾನ ರಚನೆ ವಿಚಾರದಲ್ಲಿ ವಿರೋಧವಿಲ್ಲ. ಅಲ್ಪಸಂಖ್ಯಾತರು, ಬಹುಸಂಖ್ಯಾತರ ನಡುವೆ ದೇಶದಲ್ಲಿ ವ್ಯತ್ಯಾಸಗಳನ್ನು ಸರ್ಕಾರಗಳು ಮಾಡುತ್ತಿದೆ. ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗೆ ಸಾಕಷ್ಟು ಅನುದಾನ ಇದೆ. ದಲಿತರಿಗೆ ಸರಿಯಾಗಿ ಅನುದಾನ ಸಿಗ್ತಾಯಿಲ್ಲ. ದಲಿತರ ಶಿಕ್ಷಣಕ್ಕೆ ಸರ್ಕಾರಗಳು ಒತ್ತು ಕೊಡುತ್ತಿಲ್ಲ. ಇದನ್ನು ನಾನು ಹೇಳಲು ಹೊರಟಿದ್ದೇನೆ. ನನ್ನ ವಾದ ಇಲ್ಲಿಗೆ ನಿಲ್ಲಲ್ಲ. ಜಾತಿಯ ಆಧಾರದಲ್ಲಿ ಸರ್ಕಾರ ಪಕ್ಷಪಾತ ಮಾಡುವುದು ಸರಿಯಲ್ಲ ಅಂತ ಹೇಳಿದ್ರು. ಇದನ್ನೂ ಓದಿ: ದಾಖಲೆಯ ಪರ್ಯಾಯ ಮುಗಿಸುತ್ತಿರೋ ಪೇಜಾವರಶ್ರೀ- ಇಂದು ಕೃಷ್ಣನಿಗೆ ಕೊನೆಯ ಪೂಜೆ

ಮೋದಿ ಕಿವಿ ಹಿಂಡಿದ ಪೇಜಾವರಶ್ರೀ:
ರಾಮಮಂದಿರ ವಿಚಾರದಲ್ಲಿ ಪೇಜಾವರರು ಮೋದಿ ಕಿವಿ ಹಿಂಡಿದ್ದಾರೆ. ರಾಜಕಾರಣಿಗಳು ಎಡವಿದಾಗ ನೋಡಿಕೊಂಡು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ರಾಮಮಂದಿರ ವಿಚಾರದಲ್ಲಿ ಕೋರ್ಟ್ ಹೊರಗೆ ಚರ್ಚೆ ನಡೆಸಿ ಒಂದು ನಿರ್ಧಾರಕ್ಕೆ ಬರಬೇಕು. ಲೋಕಸಭೆ, ರಾಜ್ಯಸಭೆಯಲ್ಲಿ ವಿಧೇಯಕ ತರಬೇಕು. ಸರ್ಕಾರದ ಅಧಿಕಾರದ ಪರಿಮಿತಿಯಲ್ಲಿ ವಿಶೇಷ ಪ್ರಯತ್ನ ಮಾಡಬೇಕು. ಕೇಂದ್ರ ಪ್ರಯತ್ನ ಮಾಡುತ್ತಿಲ್ಲ ಅಂತ ಜನ ಹೇಳುತ್ತಾರೆ. ಕೇಂದ್ರ ಸರ್ಕಾರ ತನ್ನ ಅಧಿಕಾರದ ಅವಧಿಯಲ್ಲಿ ಒತ್ತಡ ತಂದು ಮಂದಿರ ನಿರ್ಮಾಣವಾಗಬೇಕು ಎಂದರು.

11

ಪೇಜಾವರಶ್ರೀಗಳಿಗೆ ರಾಜಕೀಯ ಯಾಕೆ ಇಷ್ಟ?
ರಾಜಕಾರಣಿಗಳು ಧರ್ಮದ ವಿಚಾರದಲ್ಲಿ ಯಾಕೆ ಮೂಗು ತೂರಿಸಬೇಕು? ಸ್ವಾಮೀಜಿಗಳು ಧರ್ಮದ ಕೆಲಸ ಮಾಡುತ್ತೇವೆ. ಅವರು ಧರ್ಮದ ವಿಚಾರದಲ್ಲಿ ಮೂಗು ತೂರಿಸಿದಾಗ ನಾವು ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡುತ್ತೇವೆ. ಧರ್ಮದ, ಮಠದ ಬಗ್ಗೆ ಮಾತನಾಡುವ ರಾಜಕಾರಣಿಗಳು ರಾಜಕೀಯದಲ್ಲಿ ತಪ್ಪು ಮಾಡಿದಾಗ ನಾವು ನಮ್ಮ ಅಭಿಪ್ರಾಯ ಹೇಳುತ್ತೇವೆ. ಪೀಠಾಧಿಪತಿಗಳು ಚುನಾವಣೆಗೆ ನಿಲ್ಲಲ್ಲ. ಹೀಗಾಗಿ ನಮಗೆ ಆಕಾಂಕ್ಷೆಗಳಿಲ್ಲ. ಆಳುವವರು ತಪ್ಪು ಮಾಡಿದಾಗ ನಾನು ಸುಮ್ಮನೆ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.

ವಯಸ್ಸಾಯ್ತು, ದೇಹದಲ್ಲಿ ಶಕ್ತಿಯಿಲ್ಲ:
ನನಗೆ ವಯಸ್ಸಾಯ್ತು, ಅದು ನನ್ನ ಗಮನಕ್ಕೆ ಬರುತ್ತಿದೆ. ಓಡಾಡಲು ಶಕ್ತಿ ಸಾಲದು ಎಂದು ಪೇಜಾವರಶ್ರೀ ಹೇಳಿದರು. ದೇಹದಲ್ಲಿ ದೋಷವಿದೆ, ನಡೆದಾಡಲು ಆಗುವುದಿಲ್ಲ. ಕಾರಿನಲ್ಲಿ ಓಡಾಟ ಮಾಡಿ ನನ್ನ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆ ಮುಂದುವರೆಸುತ್ತೇನೆ ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ರು.

09DK PALIMAR SHREE 3

ಪೇಜಾವರ ಶ್ರೀಗಳು ಜನವರಿ 18ರಂದು ಪರ್ಯಾಯ ಪೀಠಾವರೋಹಣ ಮಾಡಲಿದ್ದಾರೆ. ಎರಡು ವರ್ಷಗಳ ಕಾಲ ಕಡೆಗೋಲು ಶ್ರೀಕೃಷ್ಣನ ಪೂಜೆ ಮಾಡಿದ್ದ ಪೇಜಾವರಶ್ರೀಗಳ ಪೂಜಾಧಿಕಾರ ಇಂದಿಗೆ ಮುಗಿದಿದ್ದು, ಐತಿಹಾಸಿಕ ಐದು ಪರ್ಯಾಯಗಳನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಶ್ರೀಕೃಷ್ಣನ ಪೂಜಾಧಿಕಾರ ಪೇಜಾವರ ಮಠದಿಂದ ಪಲಿಮಾರು ಮಠಕ್ಕೆ ಹಸ್ತಾಂತರವಾಗಲಿದೆ.

UDP SHREE 2

UDP SHREE 4

UDP SHREE 1

8 1

10 2

Pejavar swami big

TAGGED:pejwarashreepublictvudupivishwesthateerthaಉಡುಪಿಪಬ್ಲಿಕ್ ಟಿವಿಪರ್ಯಾಯಪೇಜಾವರ ಶ್ರೀವಿಶ್ವೇಶತೀರ್ಥ ಸ್ವಾಮೀಜಿ
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

chitradurga accident
Chitradurga

ಚಿತ್ರದುರ್ಗ| ಕಾರು-ಕ್ಯಾಂಟರ್ ಲಾರಿ ಮುಖಾಮುಖಿ ಡಿಕ್ಕಿ; ನಾಲ್ವರು ದುರ್ಮರಣ

Public TV
By Public TV
4 hours ago
Harmanpreet Kaur Nat Sciver Brunt
Cricket

ಬ್ರಂಟ್‌-ಹರ್ಮನ್‌ಪ್ರೀತ್‌ ಸ್ಫೋಟಕ ಫಿಫ್ಟಿ ಆಟ; ಡೆಲ್ಲಿ ವಿರುದ್ಧ ಮುಂಬೈಗೆ 50 ರನ್‌ಗಳ ಭರ್ಜರಿ ಜಯ

Public TV
By Public TV
5 hours ago
Karwar Suicide
Crime

ಪ್ರೀತಿ ಹೆಸರಲ್ಲಿ JDS ಮುಖಂಡೆ ಪುತ್ರನಿಂದ ಕಿರುಕುಳ – ಯುವತಿ ಆತ್ಮಹತ್ಯೆ

Public TV
By Public TV
5 hours ago
01 8
Big Bulletin

ಬಿಗ್‌ ಬುಲೆಟಿನ್‌ 10 January 2026 ಭಾಗ-1

Public TV
By Public TV
5 hours ago
Mississippi shooting
Latest

ಅಮೆರಿಕದ ಮಿಸಿಸಿಪ್ಪಿಯಲ್ಲಿ ಸರಣಿ ಗುಂಡಿನ ದಾಳಿಗೆ 6 ಮಂದಿ ಬಲಿ

Public TV
By Public TV
5 hours ago
02 8
Big Bulletin

ಬಿಗ್‌ ಬುಲೆಟಿನ್‌ 10 January 2026 ಭಾಗ-2

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?