Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸಲು ಹೈದರಾಬಾದ್‍ನಲ್ಲಿ ಕೈಗಾರಿಕೋದ್ಯಮಿಗಳ ಜೊತೆ ಸರಣಿ ಸಭೆ, ರೋಡ್ ಶೋ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಜ್ಯದಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸಲು ಹೈದರಾಬಾದ್‍ನಲ್ಲಿ ಕೈಗಾರಿಕೋದ್ಯಮಿಗಳ ಜೊತೆ ಸರಣಿ ಸಭೆ, ರೋಡ್ ಶೋ

Latest

ರಾಜ್ಯದಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸಲು ಹೈದರಾಬಾದ್‍ನಲ್ಲಿ ಕೈಗಾರಿಕೋದ್ಯಮಿಗಳ ಜೊತೆ ಸರಣಿ ಸಭೆ, ರೋಡ್ ಶೋ

Public TV
Last updated: January 29, 2020 8:20 pm
Public TV
Share
4 Min Read
Invest Karnataka Pralhad Joshi Jagadish Shettar 1 main
SHARE

– ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ನೇತೃತ್ವ
– 15ಕ್ಕೂ ಹೆಚ್ಚು ಕಂಪನಿಗಳ ಜೊತೆ ಮಾತುಕತೆ

ಹೈದರಾಬಾದ್: ಉತ್ತರ ಕರ್ನಾಟಕ ಹಾಗೂ ರಾಜ್ಯದ ಎರಡನೇ ಹಂತದ ನಗರಗಳಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸಲು ಇಂದು ಕೇಂದ್ರ ಸಂಸದೀಯ ಹಾಗೂ ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಹೈದರಾಬಾದ್‍ನಲ್ಲಿ ರೋಡ್ ಶೋ ಹಾಗೂ ಪ್ರಮುಖ ಕೈಗಾರಿಕೋದ್ಯಮಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸಲಾಯಿತು.

ಇದೇ ಫೆಬ್ರವರಿ 14 ರಂದು ಹುಬ್ಬಳ್ಳಿಯಲ್ಲಿ ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶ-2020 ನಡೆಯಲಿದ್ದು, ಈ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆಯೂ ಸಹ ಇದೇ ವೇಳೆ ಆಹ್ವಾನಿಸಲಾಯಿತು.

ಇಂದು ಬೆಳಿಗ್ಗೆ ಡಾ ರೆಡ್ಡಿ ಲ್ಯಾಬ್ ಗೆ ಭೇಟಿ ನೀಡಿದ ಸಚಿವರು, ಕಂಪನಿಯ ಉಪಾಧ್ಯಕ್ಷರಾದ ಜಿ ವಿ ಪ್ರಸಾದ್ ಅವರೊಂದಿಗೆ ಉತ್ತರ ಕರ್ನಾಟಕದಲ್ಲಿ ಹೂಡಿಕೆಗೆ ಇರುವ ಅವಕಾಶಗಳ ಬಗ್ಗೆ ಚರ್ಚೆ ನಡೆಸಿದರು. ನಂತರ ಆಲ್ಫಾ ಪ್ಯಾಕೇಜಿಂಗ್ ಗೆ ಭೇಟಿ ನೀಡಿದ ಸಚಿವರನ್ನೊಳಗೊಂಡ ನಿಯೋಗ ಕಂಪನಿಯ ಭಾರತ ದೇಶದ ವ್ಯವಹಾರಗಳ ಮುಖ್ಯಸ್ಥರಾದ ವಾಗೀಶ್ ದೀಕ್ಷಿತ್ ಅವರೊಂದಿಗೆ ಮಾತುಕತೆ ನಡೆಸಿದರು. ಈ ಭೇಟಿಯ ವೇಳೆ ಕೆಲವು ಬೇರೆ ಬೇರೆ ಕಂಪನಿಗಳ ಪ್ರತಿನಿಧಿಗಳು ಕೂಡಾ ಉಪಸ್ಥಿತರಿದ್ದರು.

Invest Karnataka Pralhad Joshi Jagadish Shettar 5

15 ಕ್ಕೂ ಹೆಚ್ಚು ಕಂಪನಿಗಳೊಂದಿಗೆ ಸಭೆ:
ಪ್ರಮುಖವಾಗಿ ಜಿವಿಕೆ ಗ್ರೂಪ್, ಆರ್‍ಎ ಇನ್‍ಫ್ರಾಸ್ಟ್ರಕ್ಚರ್ ಪ್ರೈವೆಟ್ ಲಿಮಿಟೆಡ್‍ನ ಮುಖಂಡರನ್ನು ಭೇಟಿ ಮಾಡಿದರು. ಕೆ.ಎನ್. ಗ್ರೂಪ್ ಆಫ್ ಕಂಪನಿ, ಕೋಮಲ್ ಆಗ್ರೋಟೆಕ್ ಪ್ರೈವೆಟ್ ಲಿಮಿಟೆಡ್, ಭಾರತ್ ಬಯೋಟೆಕ್ ಸೇರಿದಂತೆ 15 ಕ್ಕೂ ಹೆಚ್ಚು ಕಂಪನಿ ಮುಖ್ಯಸ್ಥರನ್ನು ಸಚಿವರು ಭೇಟಿ ಮಾಡಿ ಚರ್ಚೆ ನಡೆಸಿದರು.

ರೋಡ್ ಶೋ:
ರೋಡ್ ಶೋ ಉದ್ದೇಶಿಸಿ ಮಾತನಾಡಿದ ಪ್ರಹ್ಲಾದ ಜೋಶಿ, ಹುಬ್ಬಳ್ಳಿ ಸಮಾವೇಶದ ಭಾಗವಾಗಿ ಇಂದು ಹೈದರಾಬಾದ್‍ನಲ್ಲಿ ಎರಡನೇ ರೋಡ್ ಶೋ ನಡೆಸುವ ಮೂಲಕ ಸಾಕಷ್ಟು ಕೈಗಾರಿಕೋದ್ಯಮಿಗಳು ಆಸಕ್ತಿ ವ್ಯಕ್ತಪಡಿಸಿರುವುದು ಸಂತೋಷ ತಂದಿದೆ ಎಂದರು. ದಿನವಿಡೀ ಹಲವು ಉದ್ದಿಮೆದಾರರನ್ನು ಭೇಟಿ ಮಾಡಿ ಸಭೆ ನಡೆಸಿದೆವು. ಬಹುತೇಕ ಉದ್ಯಮಿದಾರರು ಧನಾತ್ಮಕವಾದ ಒಲವು ತೋರಿಸಿದ್ದಾರೆ ಎಂದು ತಿಳಿಸಿದರು.

Invest Karnataka Pralhad Joshi Jagadish Shettar 2

ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಕರ್ನಾಟಕದ ಪಾಲು ಹೆಚ್ಚಿದೆ. ಕರ್ನಾಟಕವು ಬೆಳವಣಿಗೆ ಮತ್ತು ಅಭಿವೃದ್ಧಿಯ ಶಕ್ತಿಶಾಲಿಯಾಗಿದೆ. 2020 ರ ನವೆಂಬರ್ 3 ರಿಂದ 5 ರವರೆಗೆ ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರವು ‘ಇನ್ವೆಸ್ಟ್ ಕರ್ನಾಟಕ 2020’ ಜಾಗತಿಕ ಹೂಡಿಕೆದಾರರ ಸಭೆಯನ್ನು ಆಯೋಜಿಸುತ್ತಿದ್ದು, ವಿಚಾರ ಹಂಚಿಕೊಳ್ಳಲು ಸಂತೋಷವೆನಿಸುತ್ತದೆ. ಈ ರೋಡ್ ಶೋನಲ್ಲಿ ದೇಶೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳ ಪ್ರಮುಖ ಕೈಗಾರಿಕೋದ್ಯಮಿಗಳು / ಸಿಇಒಗಳೊಂದಿಗ ಸಭೆ ನಡೆಸಿದ್ದೇವೆ. ಉತ್ತರ ಕರ್ನಾಟಕ ಭಾಗದಲ್ಲಿ ಇರುವ ಅವಕಾಶಗಳನ್ನು ಆಲಿಸಿರುವ ಅವರು ಹುಬ್ಬಳ್ಳಿ ಸಮಾವೇಶಕ್ಕೆ ಆಗಮಿಸುವ ಭರವಸೆ ನೀಡಿದ್ದಾರೆ ಎಂದರು.

ಕರ್ನಾಟಕದ 2- ಟಯರ್ ಹಾಗೂ 3- ಟಯರ್ ನಗರಗಳಲ್ಲಿ ಹೂಡಿಕೆಗೆ ಆಕರ್ಷಿಸುವ ಉದ್ದೇಶದಿಂದ ಹುಬ್ಬಳ್ಳಿ ಸಮಾವೇಶಕ್ಕೆ ಎಲ್ಲರನ್ನೂ ಆಹ್ವಾನಿಸಲಾಗುತ್ತಿದೆ. ಇದರಿಂದ ಈ ಭಾಗದಲ್ಲಿ ಉದ್ಯೋಗಾವಕಾಶ ಸುಧಾರಿಸುವ ನಿರೀಕ್ಷೆ ಹೊಂದಲಾಗಿದೆ. ಹುಬ್ಬಳ್ಳಿ- ಧಾರವಾಡ ಪ್ರದೇಶವು ಕರ್ನಾಟಕದ ಉನ್ನತ ಕೈಗಾರಿಕಾ ತಾಣವಾಗಲು ಸೂಕ್ತ ವಾತಾವರಣ ಹೊಂದಿದೆ. ಈ ಭಾಗದಲ್ಲಿ ಕೆಐಎಡಿಬಿ ಮತ್ತು ಕೈಗಾರಿಕಾ ಎಸ್ಟೇಟ್‍ಗಳು ಅಭಿವೃದ್ಧಿಪಡಿಸಿದ 9 ಕೈಗಾರಿಕಾ ಪ್ರದೇಶಗಳನ್ನು ಹೊಂದಿದೆ . ಜೊತೆಗೆ ಉತ್ತಮ ರೈಲು, ರಸ್ತೆ ಮತ್ತು ವಾಯು ಸಂಪರ್ಕ, ಲಾಜಿಸ್ಟಿಕ್ ಬೆಂಬಲ, ಮೂಲಸೌಕರ್ಯ, ಅತ್ಯುತ್ತಮ ಟೆಲಿ-ಸಂವಹನ ಜಾಲ ಮತ್ತು ಶಾಂತಿಯುತ ಕಾರ್ಮಿಕ ಶಕ್ತಿಯನ್ನು ಒಳಗೊಂಡಿದ್ದು, ಹುಬ್ಬಳ್ಳಿ ಧಾರವಾಡ ಪ್ರದೇಶವು ಹೂಡಿಕೆಗಳಿಗೆ ಆದ್ಯತೆಯ ತಾಣವಾಗಿದೆ ಎಂದರು.

Invest Karnataka Pralhad Joshi Jagadish Shettar 6

ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳು ರಾಜಧಾನಿ ಬೆಂಗಳೂರಿನ ನಂತರ ಕರ್ನಾಟಕ ರಾಜ್ಯದಲ್ಲಿ ಅತಿದೊಡ್ಡ ಮಹಾನಗರವಾಗಿದೆ. ಅಲ್ಲದೆ, ಹುಬ್ಬಳ್ಳಿ ಧಾರವಾಡ ಮುನ್ಸಿಪಲ್ರ್ ಕಾರ್ಪೊರೇಷನ್ (ಎಚ್‍ಡಿಎಂಸಿ) ಯನ್ನು ದೇಶದ 100 ಸ್ಮಾರ್ಟ್ ಸಿಟಿಗಳಲ್ಲಿ ಒಂದಾಗಿ ಆಯ್ಕೆ ಮಾಡಲಾಗಿದೆ. ಎಚ್‍ಡಿಎಂಸಿ ಈಗಾಗಲೇ ಅನೇಕ ಮಟ್ಟದ ಸಾರ್ವಜನಿಕ ಪಾರ್ಕಿಂಗ್ ನಿರ್ವಹಣಾ ವ್ಯವಸ್ಥೆ, ಇ-ಆಡಳಿತ ಮತ್ತು ಇಂಟೆಲಿಜೆಂಟ್ ಟ್ರಾನ್ಸ್‌ಪೋರ್ಟ್ ಮ್ಯಾನೇಜ್‍ಮೆಂಟ್ ಸಿಸ್ಟಮ್‍ನಂತಹ ಅನೇಕ ಸ್ಮಾರ್ಟ್ ವ್ಯವಸ್ಥೆಗಳನ್ನು ಹುಬ್ಬಳ್ಳಿ-ಧಾರವಾಡಿನ ಅವಳಿ ನಗರಗಳಲ್ಲಿ ಜಾರಿಗೆ ತಂದಿದೆ. ಇತ್ತೀಚೆಗೆ, ಗೌರವಾನ್ವಿತ ಮುಖ್ಯಮಂತ್ರಿ ಉತ್ತರ ಕರ್ನಾಟಕದ ಮೊದಲ ಟೆಂಡರ್ ಸ್ಯೂರ್ ರಸ್ತೆಯನ್ನು ಹುಬ್ಬಳ್ಳಿಯಲ್ಲಿ ಉದ್ಘಾಟಿಸಿದರು ಎಂದು ತಿಳಿಸಿದರು.

ಜಗದೀಶ್ ಶೆಟ್ಟರ್ ಮಾತನಾಡಿ, ಕರ್ನಾಟಕ ಹುಬ್ಬಳ್ಳಿ ಸಮ್ಮೇಳನದ ಭಾಗವಾಗಿ ಇಂದು ಹೈದರಾಬಾದ್‍ನಲ್ಲಿ ಬೃಹತ್ ರೋಡ್ ಶೋ ನಡೆಸು ಮೂಲಕ ನಮ್ಮ ರಾಜ್ಯದಲ್ಲಿ ಹೂಡಿಕೆಗೆ ಇರುವ ವಿಫುಲ ಅವಕಾಶಗಳನ್ನು ತೆರೆದಿಡುವ ಪ್ರಯತ್ನ ಮಾಡಿದ್ದೇವೆ. ಪ್ರತಿಷ್ಠಿತ ಕಂಪನಿ ನಾಯಕರು, ಹೂಡಿಕೆದಾರರೊಂದಿಗೆ ಸರಣಿ ಸಭೆ ನಡೆಸಿದ್ದು, ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಕರ್ನಾಟಕ ಉದ್ಯಮ ಮತ್ತು ಹೂಡಿಕೆದಾರರ ಸ್ನೇಹಿ ರಾಜ್ಯವಾಗಿದೆ. ಕೈಗಾರಿಕೆ ತೆರೆಯಲು ಬೇಕಾದ ಮೂಲಸೌಕರ್ಯ, ನೀತಿಗಳನ್ನು ನಮ್ಮ ಸರಕಾರ ಒದಗಿಸಿದೆ ಎಂದರು.

Invest Karnataka Pralhad Joshi Jagadish Shettar 3

ಇತ್ತೀಚೆಗೆ ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರ ನೇತೃತ್ವದಲ್ಲಿ ದಾವೋಸ್‍ಗೆ ತೆರಳಿ ಇನ್ವೆಸ್ಟ್ ಕರ್ನಾಟಕ, ಜಾಗತಿಕ ಹೂಡಿಕೆದಾರರ ಸಮಾವೇಶದ ಕರ್ಟನ್ ರೈಸರ್ ಕಾರ್ಯಕ್ರಮ ನೆರವೇರಿಸಿ, ಜಾಗತಿಕ ಹೂಡಿಕೆದಾರರನ್ನು ಆಹ್ವಾನಿಸಿದೆವು. ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಸಮಾವೇಶದಲ್ಲಿ ಕರ್ನಾಟಕಕ್ಕೆ ಉತ್ತಮ ಸ್ಪಂದನೆ ಸಿಕ್ಕಿತು ಎಂದು ವಿವರಿಸಿದರು.

ಕರ್ನಾಟಕದ 2 ಟಯರ್ ಹಾಗೂ 3 ಟಯರ್ ನಗರಗಳಲ್ಲಿ ಹೂಡಿಕೆಗೆ ಆಕರ್ಷಿಸುವ ಉದ್ದೇಶದಿಂದ ಹುಬ್ಬಳ್ಳಿಯಲ್ಲಿ ಸಮಾವೇಶ ನಡೆಸಲಾಗುತ್ತಿದೆ. ಕೈಗಾರಿಕಾ ಅಭಿವೃದ್ಧಿಗೆ ಅನುಕೂಲಕರ ವಾತಾವರಣ ಈ ಭಾಗದಲ್ಲಿದೆ. ಉತ್ತರ ಕರ್ನಾಟಕದಲ್ಲಿ ಸುಮಾರು 5400 ಎಕರೆ ವಿಸ್ತೀರ್ಣದ ‘ಲ್ಯಾಂಡ್ ಬ್ಯಾಂಕ್’ ರಚಿಸಲಾಗಿದೆ. ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಸುಮಾರು 3000 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ಸಾಗಿದೆ. ಜೊತೆಗೆ 5 ವಿಮಾನ ನಿಲ್ದಾಣಗಳನ್ನು ಹೊಂದುವ ಮೂಲಕ ದೇಶದ 20ಕ್ಕೂ ಹೆಚ್ಚು ಪ್ರಮುಖ ನಗರಗಳಿಗೆ ವಿಮಾನ ಸಂಪರ್ಕ ಹೊಂದಲಾಗಿದೆ ಎಂದರು.

Invest Karnataka Pralhad Joshi Jagadish Shettar 4

ಉತ್ತರ ಕರ್ನಾಟಕ ಭಾಗದಲ್ಲಿ ಏರೋಸ್ಪೇಸ್ ಮತ್ತು ಡಿಫೆನ್ಸ್, ಆಟೋ ಮತ್ತು ವಿದ್ಯುತ್ ವಾಹನಗಳು, ಐಟಿ, ಕೃಷಿ-ವ್ಯವಹಾರ ಹೀಗೆ ಹಲವು ಉದ್ಯಮ ತೆರೆಯಲು ಉತ್ತಮ ಅವಕಾಶವಿದೆ. ಈ ಮೂಲಕ ಉದ್ಯೋಗ ಸೃಷ್ಟಿಯಾಗಲಿದೆ ಎಂದು ವಿವರಣೆ ನೀಡಿದರು.

ರೋಡ್ ಶೋ ಕಾರ್ಯಕ್ರಮದಲ್ಲಿ ಪಶು ಸಂಗೋಪನಾ ಸಚಿವರಾದ ಪ್ರಭು ಚೌಹಾಣ್, ಸಂಸದರಾದ ಉಮೇಶ್ ಜಾಧವ್, ಭಗವಂತ್ ಖುಬಾ, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಇನ್‍ವೆಸ್ಟ್ ಕರ್ನಾಟಕ ಫೋರಂನ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸ್ವರೂಪ ಟಿ.ಕೆ, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ರೇವಣ್ಣಗೌಡ ಸೇರಿದಂತೆ ಹಲವು ಪ್ರಮುಖ ಅಧಿಕಾರಿಗಳು ಪಾಲ್ಗೊಂಡಿದ್ದರು.

TAGGED:hubballiHyderabad companyInvest in Karnataka EventJagadish ShettarPralhad JoshiPublic TVಕೈಗಾರಿಕೋದ್ಯಮಿಗಳುಜಗದೀಶ್ ಶೆಟ್ಟಪ್ರಹ್ಲಾದ್ ಜೋಶಿಹೈದರಾಬಾದ್
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
1 hour ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
2 hours ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
2 hours ago
01 6
Big Bulletin

ಬಿಗ್‌ ಬುಲೆಟಿನ್‌ 12 February 2026 ಭಾಗ-1

Public TV
By Public TV
2 hours ago
02 7
Big Bulletin

ಬಿಗ್‌ ಬುಲೆಟಿನ್‌ 12 February 2026 ಭಾಗ-2

Public TV
By Public TV
2 hours ago
03 6
Big Bulletin

ಬಿಗ್‌ ಬುಲೆಟಿನ್‌ 12 February 2026 ಭಾಗ-3

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?