Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫೆ.11ರಂದು ‘ಇನ್ವೆಸ್ಟ್‌ ಕರ್ನಾಟಕ 2025’ಕ್ಕೆ ಚಾಲನೆ – ಹೂಡಿಕೆ ಉತ್ಸವಕ್ಕೆ ಮುನ್ನುಡಿ: ಎಂ.ಬಿ.ಪಾಟೀಲ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಫೆ.11ರಂದು ‘ಇನ್ವೆಸ್ಟ್‌ ಕರ್ನಾಟಕ 2025’ಕ್ಕೆ ಚಾಲನೆ – ಹೂಡಿಕೆ ಉತ್ಸವಕ್ಕೆ ಮುನ್ನುಡಿ: ಎಂ.ಬಿ.ಪಾಟೀಲ್‌

Latest

ಫೆ.11ರಂದು ‘ಇನ್ವೆಸ್ಟ್‌ ಕರ್ನಾಟಕ 2025’ಕ್ಕೆ ಚಾಲನೆ – ಹೂಡಿಕೆ ಉತ್ಸವಕ್ಕೆ ಮುನ್ನುಡಿ: ಎಂ.ಬಿ.ಪಾಟೀಲ್‌

Public TV
Last updated: February 9, 2025 11:09 pm
Public TV
Share
4 Min Read
m.b.patil
SHARE

ಬೆಂಗಳೂರು: ಇದೇ ಫೆ.11 ರಂದು ‘ಇನ್ವೆಸ್ಟ್‌ ಕರ್ನಾಟಕ 2025’ಕ್ಕೆ (Invest Karnataka 2025) ಚಾಲನೆ ಸಿಗಲಿದೆ. ಇದು ಹೂಡಿಕೆ ಉತ್ಸವಕ್ಕೆ ಮುನ್ನುಡಿ. ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್‌ ಕರ್ನಾಟಕ 2025ಕ್ಕೆ ಆತಿಥ್ಯ ವಹಿಸಲು ಕರ್ನಾಟಕ ರಾಜ್ಯ ಸರ್ಕಾರವು ಸಜ್ಜಾಗಿದೆ. ಮಂಗಳವಾರ ಮಧ್ಯಾಹ್ನ ಸಮಾರಂಭಕ್ಕೆ ಚಾಲನೆ ಸಿಗಲಿದೆ. ನಾಲ್ಕು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ.

ʼಈ ಹೂಡಿಕೆದಾರರ ಸಮಾವೇಶವು ಕರ್ನಾಟಕವನ್ನು ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ನೆರವಾಗಲಿದೆ. ನಾವೀನ್ಯತೆ, ಕೈಗಾರಿಕಾ ಪ್ರಗತಿ ಮತ್ತು ಜಾಗತಿಕ ಪಾಲುದಾರಿಕೆಗೆ ರಾಜ್ಯದಲ್ಲಿನ ಸೌಲಭ್ಯಗಳನ್ನು ಇಡೀ ವಿಶ್ವಕ್ಕೆ ಪರಿಚಯಿಸಲಿದೆ ಎಂದು ಸಚಿವರು ಹೇಳಿದ್ದಾರೆ.

ಉದ್ದಿಮೆ, ನೀತಿ ನಿರೂಪಣೆ ಹಾಗೂ ನಾವೀನ್ಯತೆ ಕ್ಷೇತ್ರದ ದಿಗ್ಗಜರ ಸಮಾಗಮಕ್ಕೆ, ಚಿಂತನ ಮಂಥನಕ್ಕೆ ಇದು ವೇದಿಕೆ ಒದಗಿಸಲಿದೆ. ವಿವಿಧ ಕ್ಷೇತ್ರಗಳ ದಿಗ್ಗಜರು ಕರ್ನಾಟಕದಲ್ಲಿನ ಬಂಡವಾಳ ಹೂಡಿಕೆ ಮತ್ತು ಕೈಗಾರಿಕಾ ಪ್ರಗತಿಯ ಭವಿಷ್ಯ ರೂಪಿಸಲು ತಮ್ಮ ಒಳನೋಟಗಳನ್ನು ನೀಡಲಿದ್ದಾರೆ. ಸಮಾವೇಶದ ವಿವಿಧ ಕಾರ್ಯಕ್ರಮಗಳ ವಿವರ ಹೀಗಿದೆ:

ಮೊದಲ ದಿನ, ಫೆ.12
ಬೆಳಗ್ಗೆ 10:35 – 11:05 | ಸಭಾಂಗಣ ಎ | ಸಂವಾದ ಕಾರ್ಯಕ್ರಮ – ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಮತ್ತು ಸರ್ಕಾರ: ಅನಿಶ್ಚಿತ ಜಗತ್ತಿನಲ್ಲಿ ಡಿಜಿಟಲ್ ಕ್ಷಮತೆ ನಿರ್ಮಾಣ (AI, Cybersecurity, and Government: Building Digital Resilience in an Uncertain World). ಭಾಷಣಕಾರರು: ಸೈಮನ್ ಲಾಂಗ್ (ದಿ ಎಕನಾಮಿಸ್ಟ್-ನ ಸಂಪಾದಕ). ಕಾರ್ಯಕ್ರಮ ನಿರೂಪಣೆ: ಆನ್ ಡಂಕಿನ್ (ಅಮೆರಿಕದ ಇಂಧನ ಇಲಾಖೆಯ ಮಾಜಿ ಸಿಐಒ)

ಮಧ್ಯಾಹ್ನ 12:00 ರಿಂದ 1:00 | ಸಭಾಂಗಣ ಎ | ಸಂವಾದ ಕಾರ್ಯಕ್ರಮ – ಕ್ಷಮತೆಯ ಮಾರ್ಗೋಪಾಯಗಳು: ಜಾಗತಿಕ ಸವಾಲುಗಳ ಮಧ್ಯೆ ಭಾರತದ ಆರ್ಥಿಕ ಬೆಳವಣಿಗೆ ಸಾಧಿಸುವುದು (Resilient Pathways: Charting India’s Economic Growth Amid Global Challenges). ಮುಖ್ಯ ಭಾಷಣ: ಮೊಂಟೆಕ್ ಸಿಂಗ್ ಅಹ್ಲುವಾಲಿಯಾ (ಭಾರತದ ಅರ್ಥಶಾಸ್ತ್ರಜ್ಞ, ಭಾರತದ ಯೋಜನಾ ಆಯೋಗದ ಮಾಜಿ ಉಪಾಧ್ಯಕ್ಷ). ಕಾರ್ಯಕ್ರಮ ನಿರ್ವಹಣೆ: ಸಲ್ಮಾನ್ ಸೋಜ್ (ಅರ್ಥಶಾಸ್ತ್ರಜ್ಞ ಮತ್ತು ಲೇಖಕ)

ಮಧ್ಯಾಹ್ನ 2:00 ರಿಂದ 3:00 | ಸಭಾಂಗಣ ಎ | ಸಂವಾದ ಕಾರ್ಯಕ್ರಮ: ಭವಿಷ್ಯಕ್ಕೆ ನಾವೀನ್ಯತೆ (Innovating the Future). ಮುಖ್ಯ ಭಾಷಣ: ಅಕಿಸ್ ಇವಾಂಜೆಲಿಡಿಸ್ (ನಥಿಂಗ್‌-ನ ಸಹ-ಸಂಸ್ಥಾಪಕ ಮತ್ತು ಮಾರಾಟ ಮುಖ್ಯಸ್ಥ). ಕಾರ್ಯಕ್ರಮ ನಿರೂಪಣೆ: ಶಿವ್ ಅರೂರ್ (ಭಾರತದ ಪತ್ರಕರ್ತ ಮತ್ತು ಬರಹಗಾರ)

ಮಧ್ಯಾಹ್ನ 4:30 ರಿಂದ 5:30 | ಸಭಾಂಗಣ ಎ | ತಜ್ಞರ ಸಮೂಹ ಚರ್ಚೆ – ಮುಂದಾಳತ್ವ: ಭಾರತದ ಭವಿಷ್ಯ ರೂಪಿಸುತ್ತಿರುವ ಯುವ ನಾವೀನ್ಯಕಾರರು (Leading the Charge: Young Innovators Shaping India’s Future). ಭಾಷಣಕಾರರು: ಪಾರ್ಥ್ ಜಿಂದಾಲ್ ( ಜೆಎಸ್‌ಡಬ್ಲ್ಯು ಸಿಮೆಂಟ್‌ನ ವ್ಯವಸ್ಥಾಪಕ ನಿರ್ದೇಶಕ), ಜಯ್‌ ಕೋಟಕ್ (ಕೋಟಕ್‌ 811-ನ ಸಹ-ಮುಖ್ಯಸ್ಥ), ಸುಜನ್ನಾಹ ಮುತ್ತೂಟ್ (ಮುತ್ತೂಟ್ ಹೌಸಿಂಗ್ ಫೈನಾನ್ಸ್ ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕಿ). ಕಾರ್ಯಕ್ರಮ ನಿರೂಪಣೆ: ನಿಖಿಲ್ ಕಾಮತ್ (ಜಿರೋಧಾ, ಟ್ರೂ ಬಿಯಕಾನ್, ಗೃಹಸ್-ನ ಸಹ-ಸಂಸ್ಥಾಪಕ)

ಎರಡನೇ ದಿನ, ಫೆ.13
ಬೆಳಗ್ಗೆ 11:05 ರಿಂದ 11:45 | ಸಭಾಂಗಣ ಎ | ಸಂವಾದ ಕಾರ್ಯಕ್ರಮ– ಕೃತಕ ಬುದ್ಧಿಮತ್ತೆ ಸೀಮಾರೇಖೆ: ದೈತ್ಯ ಜಿಗಿತದಿಂದ ನೈಜ-ಪ್ರಪಂಚದ ಪ್ರಭಾವಗಳವರೆಗೆ (Pioneering the AI Frontier: From Moonshots to Real-World Impact). ಭಾಷಣಕಾರರು: ಸೆಬಾಸ್ಟಿಯನ್ ಥ್ರನ್ (ಗೂಗಲ್‌ ಎಕ್ಸ್‌ನ ಸ್ಥಾಪಕ), ಪ್ರಶಾಂತ್ ಪ್ರಕಾಶ್ (ಆ್ಯಕ್ಸೆಲ್ ಪಾರ್ಟನರ್ಸ್‌ನ ಸ್ಥಾಪಕ ಪಾಲುದಾರ). ಕಾರ್ಯಕ್ರಮ ನಿರೂಪಣೆ: ಮಿಷೆಲ್ ಹೆನ್ನೆಸ್ಸಿ (ದಿ ಎಕನಾಮಿಸ್ಟ್‌ನ ಗ್ರಾಫಿಕ್ ಡಿಟೆಲ್‌ ಸಂಪಾದಕ)

ಮಧ್ಯಾಹ್ನ 4:30 – 5:30 | ಸಭಾಂಗಣ ಎ | ಗುಂಪು ಚರ್ಚೆ – ವೈವಿಧ್ಯಮಯ ಪಥಗಳಿಂದ ಸಾಮಾನ್ಯ ಗುರಿಯವರೆಗೆ (From Diverse Paths to a Common Goal). ಭಾಷಣಕಾರರು: ಕಿರಣ್ ರಾವ್ (ಚಲನಚಿತ್ರ ನಿರ್ದೇಶಕಿ, ನಿರ್ಮಾಪಕಿ ಮತ್ತು ಬರಹಗಾರ್ತಿ), ಐರಿನಾ ಘೋಸ್ (ಮೈಕ್ರೋಸಾಫ್ಟ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕಿ), ಸುಖಿ ಸಿಂಗ್ (ಸುಖೀಸ್ ಗೌರ್ಮೆಟ್ ಫುಡ್ಸ್ನ ಸಂಸ್ಥಾಪಕಿ). ಕಾರ್ಯಕ್ರಮ ನಿರೂಪಣೆ: ಲಕ್ಷ್ಮಿ ಪ್ರತುರಿ (ಇಂಕ್ಟಾಲ್ಕ್ಸ್ ಸಂಸ್ಥಾಪಕಿ ಮತ್ತು ಸಿಇಒ)

ಮೂರನೇ ದಿನ, ಫೆ.14
ಬೆಳಗ್ಗೆ 10:30 ರಿಂದ 11:30 | ಸಭಾಂಗಣ ಎ | ಸಂವಾದ ಕಾರ್ಯಕ್ರಮ- ಪ್ರಕ್ಷುಬ್ಧತೆಯಲ್ಲಿ ಅಭಿವೃದ್ಧಿ ಸಾಧಿಸುವುದು: ದೇಶಗಳು ಶಾಶ್ವತ ಕ್ಷಮತೆ ಹೇಗೆ ನಿರ್ಮಿಸಬಹುದು (Thriving in Turbulence: How Nations Can Build Lasting Resilience). ಭಾಷಣಕಾರರು: ಜಾರ್ಜ್ ಪಪಂಡ್ರಿಯೊ (ಗ್ರೀಸ್‌ನ ಮಾಜಿ ಪ್ರಧಾನಿ), ಶಶಿ ತರೂರ್ (ಲೋಕಸಭಾ ಸದಸ್ಯ). ಕಾರ್ಯಕ್ರಮ ನಿರೂಪಣೆ: ಲಕ್ಷ್ಮಿ ಪ್ರತುರಿ (ಇಂಕ್ಟಾಲ್ಕ್ಸ್ ಸಂಸ್ಥಾಪಕಿ ಮತ್ತು ಸಿಇಒ)‌

‘ಇನ್ವೆಸ್ಟ್ ಕರ್ನಾಟಕ 2025’ ಕೈಗಾರಿಕಾ ಬೆಳವಣಿಗೆ, ನಾವೀನ್ಯತೆ ಮತ್ತು ಜಾಗತಿಕ ಸಹಯೋಗ ಬೆಳೆಸುವ ರಾಜ್ಯದ ಬದ್ಧತೆಗೆ ನಿದರ್ಶನವಾಗಿದೆ. ವಿಶ್ವದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಜೊತೆಗಿನ ಒಪ್ಪಂದಗಳ ಮೂಲಕ ಶೈಕ್ಷಣಿಕ ಹಾಗೂ ಉದ್ಯಮದ ಪಾಲುದಾರಿಕೆಗಳನ್ನು ಬಲಪಡಿಸುವಂತಹ ಪ್ರಮುಖ ಉಪಕ್ರಮಗಳನ್ನು ಮುನ್ನಡೆಸುವಲ್ಲಿ ಸಚಿವ ಪಾಟೀಲ್ ಪ್ರಮುಖ ಪಾತ್ರ ವಹಿಸಿದ್ದಾರೆ.

ಕರ್ನಾಟಕವು ಅತ್ಯಾಧುನಿಕ ಕೈಗಾರಿಕೆಗಳಲ್ಲಿ ಜಾಗತಿಕವಾಗಿ ಮುಂಚೂಣಿ ಸ್ಥಾನದಲ್ಲಿ ಮುಂದುವರೆಯುವುದನ್ನು ಖಚಿತಪಡಿಸಿಕೊಳ್ಳಲು ಇವರು ಕ್ವಿನ್‌ ಸಿಟಿ ಉಪಕ್ರಮವನ್ನು ಮುನ್ನಡೆಸುವಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ಶೃಂಗಸಭೆಯು, ವಿವಿಧ ಕೈಗಾರಿಕಾ ವಲಯಗಳಲ್ಲಿ ಜಾಗತಿಕ ಪಾಲುದಾರಿಕೆ ಬೆಳೆಸುವುದರ ಜೊತೆಗೆ, ನಾವೀನ್ಯತೆ ಮತ್ತು ಹೂಡಿಕೆ ಕೇಂದ್ರವಾಗಿರುವ ಕರ್ನಾಟಕದ ಮಹತ್ವವನ್ನು ಇಡೀ ವಿಶ್ವಕ್ಕೆ ಪರಿಚಯಿಸಲಿದೆ.

TAGGED:bengaluruInvest Karnataka SummitM.B Patilಇನ್‍ವೆಸ್ಟ್ ಕರ್ನಾಟಕಎಂ.ಬಿ.ಪಾಟೀಲ್ಬೆಂಗಳೂರು
Share This Article
Facebook Whatsapp Whatsapp Telegram

Cinema news

KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood
Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories

You Might Also Like

ಸಾಂದರ್ಭಿಕ ಚಿತ್ರ
Bellary

ಕೊಲ್ಲಿ ಯುದ್ಧದಿಂದ ಸಂಕಷ್ಟಕ್ಕೆ ಸಿಲುಕಿದ ಬಳ್ಳಾರಿ ಜೀನ್ಸ್ ಉದ್ಯಮ – 20 ಲಕ್ಷ ಪ್ರಾಡಕ್ಟ್‌ಗಳ ರಫ್ತು ಸ್ಥಗಿತ

Public TV
By Public TV
10 minutes ago
krishna byre gowda
Bengaluru City

KPSC Row| ಒಂದೇ ಕೊಠಡಿಯಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಪಾಸ್‌ – ವಿವಾದಕ್ಕೆ ಉತ್ತರ ಕೊಟ್ಟ ಕೃಷ್ಣಬೈರೇಗೌಡ

Public TV
By Public TV
1 hour ago
Krishna Byregowda
Bengaluru City

ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವೆ – ಮಧ್ಯವರ್ತಿಗಳಿಲ್ಲದೆ ಆಟೋ ಮ್ಯುಟೇಶನ್: ಕೃಷ್ಣಭೈರೇಗೌಡ

Public TV
By Public TV
2 hours ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ದಿಢೀರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
2 hours ago
Raichuru crime 1
Crime

ಪತ್ನಿ ಜೊತೆ ಅನೈತಿಕ ಸಂಬಂಧ – ಕೊಡಲಿಯಿಂದ ಕೊಚ್ಚಿ ಪ್ರಿಯಕರನ ಹತ್ಯೆಗೈದಿದ್ದ ಇಬ್ಬರು ಅರೆಸ್ಟ್

Public TV
By Public TV
2 hours ago
Ugadi
Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?