Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂದ್ರಾಣಿಯ ಆ ಒಂದು ಹೇಳಿಕೆಯಿಂದ ಚಿದಂಬರಂ ಅರೆಸ್ಟ್ – ಕಂಪ್ಯೂಟರ್‌ನಿಂದ ಸೆರೆಯಾದ ಕಾರ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇಂದ್ರಾಣಿಯ ಆ ಒಂದು ಹೇಳಿಕೆಯಿಂದ ಚಿದಂಬರಂ ಅರೆಸ್ಟ್ – ಕಂಪ್ಯೂಟರ್‌ನಿಂದ ಸೆರೆಯಾದ ಕಾರ್ತಿ

Latest

ಇಂದ್ರಾಣಿಯ ಆ ಒಂದು ಹೇಳಿಕೆಯಿಂದ ಚಿದಂಬರಂ ಅರೆಸ್ಟ್ – ಕಂಪ್ಯೂಟರ್‌ನಿಂದ ಸೆರೆಯಾದ ಕಾರ್ತಿ

Public TV
Last updated: August 22, 2019 7:14 pm
Public TV
Share
3 Min Read
Indrani Mukherjea Chidambaram INX
SHARE

ನವದೆಹಲಿ: ಐಎನ್‍ಎಕ್ಸ್ ಕಂಪನಿಯ ಮಾಲಕಿ, ಪುತ್ರಿ ಶೀನಾ ಬೋರಾ ಹತ್ಯೆ ಪ್ರಕರಣದ ಆರೋಪಿ ಮುಂಬೈ ಜೈಲಿನಲ್ಲಿರುವ ಇಂದ್ರಾಣಿ ಮುಖರ್ಜಿ ನೀಡಿದ ಒಂದು ಹೇಳಿಕೆಯಿಂದ ಮಾಜಿ ಗೃಹ ಸಚಿವ ಚಿದಂಬರಂ ಈಗ ಅರೆಸ್ಟ್ ಆಗಿದ್ದಾರೆ.

ಐಎನ್‍ಎಕ್ಸ್ ಪ್ರಕರಣದ ತನಿಖೆ ಸಂಬಂಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ಇದ್ರಾಣಿ ಮುಖರ್ಜಿ 2006 ರಲ್ಲಿ ನಾರ್ಥ್ ಬ್ಲಾಕ್ ಕಚೇರಿಯಲ್ಲಿ ಚಿದಂಬರಂ ಅವರನ್ನು ಭೇಟಿಯಾಗಿದ್ದ ವೇಳೆ ನಡೆದ ಮಾತುಕತೆ ವಿಚಾರವನ್ನು ತಿಳಿಸಿದ್ದರು. ಈ ಹೇಳಿಕೆಯನ್ನು ಪ್ರಕರಣದ ಮುಖ್ಯ ಸಾಕ್ಷಿಯನ್ನಾಗಿ ಪರಿಗಣಿಸಿ ಸಿಬಿಐ ಈಗ ಚಿದಂಬರಂ ಅವರನ್ನು ಬಂಧಿಸಿದೆ.

2018ರ ಫೆಬ್ರವರಿ 17ರ ವಿಚಾರಣೆ ಸಮಯದಲ್ಲಿ ದೆಹಲಿಯ ಹಯಾತ್ ಹೋಟೆಲಿನಲ್ಲಿ ಚಿದಂಬರಂ ಪುತ್ರ ಕಾರ್ತಿಯನ್ನು ಭೇಟಿಯಾಗಿದ್ದೆ. ಈ ಸಂದರ್ಭದಲ್ಲಿ ನಮ್ಮ ವ್ಯವಹಾರಕ್ಕಾಗಿ ಕಾರ್ತಿ 1 ದಶಲಕ್ಷ ಡಾಲರ್(7.17 ಕೋಟಿ ರೂ.) ಬೇಡಿಕೆ ಇಟ್ಟಿದ್ದರು ಎನ್ನುವ ಮತ್ತೊಂದು ವಿಚಾರವನ್ನು ಇಂದ್ರಾಣಿ ಮುಖರ್ಜಿ ತಿಳಿಸಿದ್ದರು.

indrani mukerjea e1566471152578

ಸಿಬಿಐ ಆರೋಪ ಏನು?
ಇಂದ್ರಾಣಿ ಮುಖರ್ಜಿ ಮತ್ತು ಪೀಟರ್ ಮುಖರ್ಜಿ ಒಡೆತನದ ಐಎನ್‍ಎಕ್ಸ್ ಮೀಡಿಯಾಗೆ 2007ರ ಮಾರ್ಚ್ ತಿಂಗಳಿನಲ್ಲಿ ಮೂರು ಮಾರಿಷಸ್ ಕಂಪೆನಿಗಳಿಂದ ಸುಮಾರು 4.62 ಕೋಟಿ ರೂಪಾಯಿ ವಿದೇಶಿ ನೇರ ಬಂಡವಾಳ ಹರಿದುಬರಲು ಅಂದಿನ ಸರ್ಕಾರ ಅನುಮತಿ ನೀಡಿತ್ತು. ಸರ್ಕಾರ 4.62 ಕೋಟಿ ರೂ.ಗೆ ಅನುಮತಿ ನೀಡಿದ್ದರೆ 305 ಕೋಟಿ ರೂಪಾಯಿಗಳನ್ನು ಹೂಡಿಕೆಯಾಗಿ ವಿದೇಶದಿಂದ ತರಲಾಯಿತು. ಈ ಸಂದರ್ಭದಲ್ಲಿ ಡೌನ್ ಸ್ಟ್ರೀಮ್ ಇನ್ವೆಸ್ಟ್ ಮೆಂಟ್(ಭಾರತೀಯ ಕಂಪೆನಿ ಮತ್ತೊಂದು ಕಂಪೆನಿಯ ಮೇಲೆ ವಿದೇಶಿ ಹೂಡಿಕೆಯನ್ನು ಮಾಡುವುದು) ಪ್ರಸ್ತಾಪವನ್ನು ಸರ್ಕಾರ ತಿರಸ್ಕರಿಸಿತ್ತು.

ಇಂದ್ರಾಣಿ ಮುಖರ್ಜಿಯ ಕಂಪನಿಗೆ ಈ ಸಂದರ್ಭದಲ್ಲಿ ಕಾರ್ತಿ ಮಾಲೀಕತ್ವದ ಅಡ್ವಾನ್ಸ್ಡ್ ಸ್ಟ್ರಟಜಿಕ್ ಕನಸ್ಟಲಿಂಗ್ ಪ್ರೈವೆಟ್ ಲಿಮಿಟೆಡ್(ಎಎಸ್‍ಸಿಪಿಎಲ್) ಕಂಪನಿಯಿಂದ ಹೂಡಿಕೆಯಾಗಿತ್ತು. ಕಾರ್ತಿ ಮತ್ತು ಇಂದ್ರಾಣಿ ಮಾತುಕತೆಯ ಫಲವಾಗಿ ಎಎಸ್‍ಸಿಪಿಎಲ್ ಮತ್ತು ಇದರ ಸಹಭಾಗಿತ್ವದಲ್ಲಿರುವ ಕಂಪನಿಗಳು ಸುಮಾರು 7 ಲಕ್ಷ ಡಾಲರ್(ಆಗಿನ ಮೌಲ್ಯ 3.10 ಕೋಟಿ ರೂ.) ಹೂಡಿಕೆಯಾಗಿತ್ತು. ನಂತರ ಈ ಹಣ ಮರುಪಾವತಿಯಾಗಿತ್ತು. ಇದಾದ ನಂತರ ವಿದೇಶಿ ಬಂಡವಾಳ ಉತ್ತೇಜನ ಮಂಡಳಿ(ಎಫ್‍ಐಪಿಬಿ) ಕೆಲ ಬದಲಾವಣೆ ಮಾಡಿ ಇಂದ್ರಾಣಿ ಕಂಪನಿಗೆ ಅನುಮತಿ ನೀಡಿತ್ತು ಎನ್ನುವುದು ಸಿಬಿಐ ಆರೋಪ.

chidambaram a

ಸಿಬಿಐ ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ನೀಡಿದ ಮಾಹಿತಿ ಪ್ರಕಾರ, ಎಫ್‍ಐಪಿಬಿ 4.62 ಕೋಟಿ ರೂ. ವಿದೇಶಿ ಹೂಡಿಕೆಗೆ ಅನುಮತಿ ನೀಡಿತ್ತು. ಆದರೆ ಚಿದಂಬರಂ ಮೂಲಕ ಕಾರ್ತಿಗೆ ಲಂಚ ನೀಡಿದ ಪರಿಣಾಮ 305 ಕೋಟಿ ರೂ. ವಿದೇಶಿ ಹಣ ಬಂದಿತ್ತು. ಅಷ್ಟೇ ಅಲ್ಲದೇ ಐಎನ್‍ಎಕ್ಸ್ ನ್ಯೂಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಶೇ.26 ರಷ್ಟು ಡೌನ್‍ಸ್ಟ್ರೀಮ್ ಇನ್ವೆಸ್ಟ್ ಮೆಂಟ್ ಮಾಡಲಾಯಿತು ಎಂದು ತಿಳಿಸಿದ್ದರು.

ಐಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಲಂಚವಾಗಿ ಪಡೆದ ಹಣದಲ್ಲಿ ಕಾರ್ತಿ ಚಿದಂಬರಂ ಸ್ಪೇನ್ ದೇಶದಲ್ಲಿ ಟೆನ್ನಿಸ್ ಕ್ಲಬ್, ಇಂಗ್ಲೆಂಡಿನಲ್ಲಿ ಕಾಟೇಜ್, ಭಾರತ ಮತ್ತು ವಿದೇಶಗಳಲ್ಲಿ ಸುಮಾರು 54 ಕೋಟಿ ರೂಪಾಯಿ ವೆಚ್ಚದಲ್ಲಿ ಹಲವು ಆಸ್ತಿಗಳನ್ನು ಖರೀದಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

chidambaram karti e1566471253179

ಬೆಳಕಿಗೆ ಬಂದಿದ್ದು ಹೇಗೆ?
2008 ರಲ್ಲಿ ಕೇಂದ್ರ ಹಣಕಾಸು ಇಲಾಖೆಯ ಹಣಕಾಸು ಗುಪ್ತಚರ ವಿಭಾಗಕ್ಕೆ ಐಎನ್‍ಎಕ್ಸ್ ಕಂಪನಿಯಲ್ಲಿ ಹೂಡಿದ ವಿದೇಶಿ ಹೂಡಿಕೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಅನುಮಾನ ಬಂದಿದೆ. ಈ ಸಂದರ್ಭದಲ್ಲಿ ಮುಂಬೈ ಆದಾಯ ತೆರಿಗೆ ವಿಭಾಗ ಈ ಪ್ರಕರಣವನ್ನು ಜಾರಿ ನಿರ್ದೇಶನಾಲಯಕ್ಕೆ(ಇಡಿ) ವರ್ಗಾಯಿಸಿತ್ತು. 2010ರಲ್ಲಿ ಐಎನ್‍ಎಕ್ಸ್ ಮೀಡಿಯಾ ವಿರುದ್ಧ ಜಾರಿ ನಿರ್ದೇಶನಾಲಯ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪದ ಅಡಿ ಪ್ರಕರಣ ದಾಖಲಿಸಿತ್ತು.

ಈ ಪ್ರಕರಣ ತನಿಖೆ ನಡೆಸುತ್ತಿದ್ದಾಗ ಐಎನ್‍ಎಕ್ಸ್ ಮೀಡಿಯಾದ ಕಂಪ್ಯೂಟರ್ ನಲ್ಲಿ ಲೆಕ್ಕ ಪರಿಶೋಧಕ ಭಾಸ್ಕರ್ ರಾಮನ್ ಹೆಸರಿನಲ್ಲಿದ್ದ ದಾಖಲೆಗಳು ಸಿಕ್ಕಿದೆ. ಈ ಭಾಸ್ಕರ್ ರಾಮನ್ ಯಾರು ಎನ್ನುವುದನ್ನು ಪತ್ತೆ ಹಚ್ಚಿದಾಗ ಈ ವ್ಯಕ್ತಿ ಕಾರ್ತಿ ಚಿದಂಬರಂ ಅವರ ಲೆಕ್ಕಪರಿಶೋಧಕ ಎನ್ನುವುದು ಇಡಿಗೆ ತಿಳಿಯಿತು. ಸಿಕ್ಕಿದ ಸಾಫ್ಟ್ ಕಾಪಿ ದಾಖಲೆಯಲ್ಲಿ ಐಎನ್‍ಎಕ್ಸ್ ಕಂಪನಿ ಮತ್ತು ಕಾರ್ತಿ ನಡುವಿನ ವ್ಯವಹಾರದ ಮಾಹಿತಿ, ವಿದೇಶಿ ಬಂಡವಾಳ ಉತ್ತೇಜನ ಮಂಡಳಿ ನೀಡಿದ ಅನುಮತಿ ವಿವರಗಳು ಲಭ್ಯವಾಗಿತ್ತು. ಇಡಿಗೆ ಸಿಕ್ಕಿದ ಈ ದಾಖಲೆಯನ್ನು ಆಧಾರವಾಗಿಟ್ಟುಕೊಂಡು ಸಿಬಿಐ ಭ್ರಷ್ಟಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಕಾರ್ತಿ ವಿರುದ್ಧ 2017ರಲ್ಲಿ ಎಫ್‍ಐಆರ್ ದಾಖಲಿಸಿತ್ತು.

ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಅಧಿಕಾರಿಗಳು ಕಾರ್ತಿ ಅವರನ್ನು ಕಳೆದ ಫೆಬ್ರವರಿಯಲ್ಲಿ ಬಂಧಿಸಿದ್ದರು. ನಂತರ ಕಾರ್ತಿ ಜಾಮೀನು ಪಡೆದು ಬಿಡುಗಡೆಯಾಗಿದ್ದರು.

#WATCH Delhi: A Central Bureau of Investigation (CBI) official jumps the gate of P Chidambaram's residence to get inside. CBI has issued a Look-Out Notice against him. pic.twitter.com/WonEnoAgR4

— ANI (@ANI) August 21, 2019

TAGGED:cbichidambaramEDIndrani MukherjeINXಇಂದ್ರಾಣಿ ಮುಖರ್ಜಿಐಎನ್‍ಎಕ್ಸ್ ಹಗರಣಕಾರ್ತಿ ಚಿದಂಬರಂಚಿದಂಬರಂ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
25 minutes ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
34 minutes ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
1 hour ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
1 hour ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
1 hour ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?