ನವದೆಹಲಿ: ಆಪಲ್ (Apple) ತನ್ನ ಲೇಟೆಸ್ಟ್ ಐಫೋನ್ 15 ಸೀರೀಸ್ ((iPhone 15 Series) ಮಾರಾಟವನ್ನು ಭಾರತದಲ್ಲಿ ಅಧಿಕೃತವಾಗಿ ಪ್ರಾರಂಭಿಸಿದೆ. ಐಫೋನ್ ಕೊಳ್ಳಲು ಗ್ರಾಹಕರ ದಂಡೇ ಸ್ಟೋರ್ಗಳ ಕಡೆ ಮುಖ ಮಾಡಿದೆ. ಐಫೋನ್ ವಿತರಣೆಗೆ ತಡ ಮಾಡಿದ್ದಕ್ಕೆ ಸಿಬ್ಬಂದಿ ಮೇಲೆಯೇ ಗ್ರಾಹಕರು ಹಲ್ಲೆ ನಡೆಸಿರುವ ಘಟನೆ ನವದೆಹಲಿಯಲ್ಲಿ (New Delhi) ನಡೆದಿದೆ.
ಉತ್ತರ ದೆಹಲಿಯ ಕಮಲಾ ನಗರ ಮಾರುಕಟ್ಟೆಯಲ್ಲಿ ಘಟನೆ ನಡೆದಿದ್ದು, ದೃಶ್ಯದ ವೀಡಿಯೋ ಇದೀಗ ವೈರಲ್ ಆಗಿದೆ. ಶುಕ್ರವಾರ ಇಬ್ಬರು ಗ್ರಾಹಕರು, ಎಲೆಕ್ಟ್ರಾನಿಕ್ಸ್ ಶೋರೂಮ್ನ ಇಬ್ಬರು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ನಡೆಸಿದವರನ್ನು ಜಸ್ಕಿರತ್ ಸಿಂಗ್ ಮತ್ತು ಮನದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಭಾರತದಲ್ಲಿ ಐಫೋನ್ 15 ಸೇಲ್ ಶುರು- ಖರೀದಿಗೆ ಮುಂಜಾನೆ 4 ಗಂಟೆಗೇ ಕ್ಯೂ ನಿಂತ ಗ್ರಾಹಕರು
ಐಫೋನ್ ನೀಡಲು ತಡ ಮಾಡಿದ್ದಕ್ಕೆ ಸಿಬ್ಬಂದಿ ಮೇಲೆ ಗ್ರಾಹಕರು ರೋಷಗೊಂಡು ಹಲ್ಲೆ ನಡೆಸಿದ್ದಾರೆ. 10 ಕ್ಕೂ ಹೆಚ್ಚು ಇತರೆ ಸಿಬ್ಬಂದಿ ಧಾವಿಸಿದರೂ ಹಲ್ಲೆ ತಪ್ಪಿಸುವುದನ್ನು ಸಾಧ್ಯವಾಗಿಲ್ಲ. ಸಿಬ್ಬಂದಿ ಟೀ-ಶರ್ಟ್ ಕೂಡ ಹರಿದು ಹಾಕಲಾಗಿದೆ.
ನಾನು ಗುರುವಾರ ಮಧ್ಯಾಹ್ನ 3 ಗಂಟೆಯಿಂದ ಇಲ್ಲಿದ್ದೇನೆ. ಭಾರತದ ಮೊದಲ ಆಪಲ್ ಸ್ಟೋರ್ನಲ್ಲಿ ಮೊದಲ ಐಫೋನ್ ಪಡೆಯಲು ನಾನು 17 ಗಂಟೆಗಳ ಕಾಲ ಸರದಿಯಲ್ಲಿ ಕಾಯುತ್ತಿದ್ದೇನೆ. ನಾನು ಅಹಮದಾಬಾದ್ನಿಂದ ಬಂದಿದ್ದೇನೆ ಎಂದು ಗ್ರಾಹಕರೊಬ್ಬರು ಸುದ್ದಿಸಂಸ್ಥೆಯೊಂದಕ್ಕೆ ಪ್ರತಿಕ್ರಿಯಿಸಿದ್ದರು. ಇದನ್ನೂ ಓದಿ: ಪ್ರಧಾನಿ ಮೋದಿಗೆ ‘ನಮೋ’ ಜೆರ್ಸಿ ಗಿಫ್ಟ್ ನೀಡಿದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]