Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಂತ್ರಗಾರಿಕೆ, ಅದೃಷ್ಟ ಪರೀಕ್ಷೆಯಲ್ಲಿ ಧೋನಿಯನ್ನು ಮಣಿಸಿದ ರೋಹಿತ್ ಶರ್ಮಾ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ತಂತ್ರಗಾರಿಕೆ, ಅದೃಷ್ಟ ಪರೀಕ್ಷೆಯಲ್ಲಿ ಧೋನಿಯನ್ನು ಮಣಿಸಿದ ರೋಹಿತ್ ಶರ್ಮಾ!

Cricket

ತಂತ್ರಗಾರಿಕೆ, ಅದೃಷ್ಟ ಪರೀಕ್ಷೆಯಲ್ಲಿ ಧೋನಿಯನ್ನು ಮಣಿಸಿದ ರೋಹಿತ್ ಶರ್ಮಾ!

Public TV
Last updated: May 13, 2019 4:47 pm
Public TV
Share
3 Min Read
ROHIT
SHARE

ಹೈದರಾಬಾದ್: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ನಾಯಕತ್ವದ ಬಗ್ಗೆ ಎಲ್ಲರಿಗೂ ಮೆಚ್ಚುಗೆ ಇದೆ. ಧೋನಿ ನಾಯಕತ್ವದಲ್ಲೇ ಟೀಂ ಇಂಡಿಯಾ ಹಲವು ಟ್ರೋಫಿಗಳನ್ನು ಜಯಿಸಿದೆ. ಇತ್ತ ಐಪಿಎಲ್ ನಲ್ಲೂ ಧೋನಿ ಚೆನ್ನೈ ತಂಡವನ್ನು ಫೈನಲ್ ವರೆಗೆ ತಂದಿದ್ದರು. ಆದರೆ ಫೈನಲ್ ಪಂದ್ಯದ ವೇಳೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ತಮ್ಮ ತಂತ್ರಗಾರಿಕೆಯಿಂದ ಚೆನ್ನೈ ತಂಡವನ್ನು ಸೋಲಿಸಿದ್ದಾರೆ.

2019ರ ಟೂರ್ನಿಯಲ್ಲಿ ಮುಂಬೈ ತಂಡ ಫೈನಲ್‍ಗೂ ಮುನ್ನ 3 ಬಾರಿ ಚೆನ್ನೈ ವಿರುದ್ಧ ಆಡಿತ್ತು. ರೋಹಿತ್ ಬಳಗ ಮೂರು ಪಂದ್ಯಗಳಲ್ಲಿ ಜಯಗಳಿಸಿತ್ತು. ಈ ಆತ್ಮವಿಶ್ವಾಸದಿಂದಲೇ ಫೈನಲ್ ಪಂದ್ಯದಲ್ಲೂ ರೋಹಿತ್, ಚೆನ್ನೈ ತಂಡದ ವಿರುದ್ಧ ತಂತ್ರ ರೂಪಿಸಿ ಯಶಸ್ವಿಯಾಗಿದ್ದಾರೆ.

dhoni 4

ಟಿ 20ಯಲ್ಲಿ 150 ರನ್ ಸವಾಲು ಅಲ್ಲವೇ ಅಲ್ಲ. ಆದರಲ್ಲೂ ಬಲಿಷ್ಠ ಬ್ಯಾಟಿಂಗ್ ಹೊಂದಿರುವ ಚೆನ್ನೈ ಸುಲಭವಾಗಿ ಗೆಲ್ಲಬಹುದು ಎನ್ನುವ ನಿರೀಕ್ಷೆ ಆರಂಭದಲ್ಲಿತ್ತು. ಆದರೆ ಈ ನಿರೀಕ್ಷೆಯನ್ನು ರೋಹಿತ್ ಶರ್ಮಾ ತಮ್ಮ ತಂತ್ರದ ಮೂಲಕ ತಲೆಕೆಳಗೆ ಮಾಡಿದ್ದರು.

ಲತಿಸ್ ಮಾಲಿಂಗ ಹಾಗೂ ಬುಮ್ರಾರ ಓವರಗಳನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ಪಂದ್ಯವನ್ನು ಆತ್ಮವಿಶ್ವಾಸದಿಂದ ಎದುರಿಸಿದ್ದರು. ಧೋನಿ ಬ್ಯಾಟಿಂಗ್ ವೇಳೆ ಬುಮ್ರಾ, ಹಾರ್ದಿಕ್ ಬೌಲಿಂಗ್ ಆಯ್ಕೆ ರೋಹಿತ್ ಮುಂದಿತ್ತು.

Bumrah

ಕೃನಾಲ್ ಪಾಂಡ್ಯ ಎಸೆದ 18ನೇ ಓವರ್ ನಲ್ಲಿ ವಾಟ್ಸನ್ 3 ಸಿಕ್ಸರ್ ಸಿಡಿಸಿದ್ದರು. ಕೊನೆಯ 12 ಎಸೆತಗಳಲ್ಲಿ 18 ರನ್ ಗಳಿಸಬೇಕಾದ ಒತ್ತಡದಲ್ಲಿದ್ದಾಗ ಬುಮ್ರಾ ಕೈಗೆ ಬಾಲ್ ಕೊಟ್ಟರು. ಉತ್ತಮವಾಗಿ ದಾಳಿ ಮಾಡಿದ ಬುಮ್ರಾ ಒಂದು ವಿಕೆಟ್ ಪಡೆಯುವುದರ ಜೊತೆ ಕೇವಲ 5 ರನ್ ನೀಡಿದ್ದರು. ಆದರೆ ಕೊನೆಯ ಎಸೆತವನ್ನು ಕೀಪರ್ ಕಾಕ್ ಹಿಡಿಯದ ಪರಿಣಾಮ ಬೈ ಮೂಲಕ 4 ಇತರೇ ರನ್ ಬಂದಿತು.

ಕೊನೆಯ 6 ಎಸೆತಗಳಲ್ಲಿ 9 ರನ್ ಬೇಕಿದ್ದಾಗ ಅನುಭವಿ ಬೌಲರ್, ಹಿರಿಯ ಆಟಗಾರ ಮಾಲಿಂಗ ಕೈಗೆ ರೋಹಿತ್ ಬಾಲ್ ನೀಡಿದರು. ಕೊನೆ ಓವರ್ ಮಾಲಿಂಗ ಕೈಗೆ ಕೊಟ್ಟಾಗ ಕ್ರಿಕೆಟ್ ಅಭಿಮಾನಿಗಳು ಒಮ್ಮೆ ಅಚ್ಚರಿ ವ್ಯಕ್ತಪಡಿಸಿದ್ದರು. ಯಾಕೆಂದರೆ ಇನ್ನಿಂಗ್ಸ್ ನ 16ನೇ ಓವರಿನಲ್ಲಿ ಮಾಲಿಂಗ 20 ರನ್ ನೀಡಿದ್ದರು. ಬ್ರಾವೋ ಒಂದು ಸಿಕ್ಸರ್ ಸಿಡಿಸಿದ್ದರೆ ವಾಟ್ಸನ್ ಹ್ಯಾಟ್ರಿಕ್ ಫೋರ್ ಚಚ್ಚಿದ್ದರು. ಹೀಗಾಗಿ ಕೊನೆಯ ಓವರಿನಲ್ಲಿ ಪಂದ್ಯ ಏನಾಗುತ್ತದೆ ಎನ್ನುವ ಕುತೂಹಲವಿತ್ತು. ಈ ಓವರಿನಲ್ಲಿ ಮಾಲಿಂಗ ಕೇವಲ 7 ರನ್ ನೀಡಿ ತಮ್ಮ ಮೇಲಿಟ್ಟಿದ್ದ ನಿರೀಕ್ಷೆಯನ್ನು ಉಳಿಸಿ ಪಂದ್ಯವನ್ನು ಗೆದ್ದುಕೊಟ್ಟರು.

rohit

ಫೈನಲ್ ಪಂದ್ಯದ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡಿದ್ದು ಜಸ್‍ಪ್ರೀತ್ ಬೂಮ್ರಾ. 4 ಓವರ್ ಎಸೆದ ಬುಮ್ರಾ ಕೇವಲ 14 ರನ್ ನೀಡಿ ಚೆನ್ನೈ ತಂಡದ ರನ್ನಿಗೆ ಕಡಿವಾಣ ಹಾಕಿದರು. ವಿಶೇಷ ಏನೆಂದರೆ ರೋಹಿತ್ ಶರ್ಮಾ ಮೆಕ್ಲಾಗನ್, ಕೃನಾಲ್ ಪಾಂಡ್ಯ, ಮಾಲಿಂಗ ಬಳಿಕ ನಾಲ್ಕನೇ ಬೌಲರ್ ಆಗಿ ಬುಮ್ರಾ ಅವರನ್ನು ಇಳಿಸಿದ್ದರು. ಇನ್ನಿಂಗ್ಸಿನ 5, 11, 17, 19ನೇ ಓವರ್ ಎಸೆದ ಬುಮ್ರಾ ರನ್ ನಿಯಂತ್ರಿಸುವಲ್ಲಿ ಯಶಸ್ವಿಯಾದರು.

ತಂಡದ ಆಯ್ಕೆಯೊಂದಿಗೆ ಸಮರ್ಥವಾಗಿ ಪಂದ್ಯದ ಸಂದರ್ಭವನ್ನು ಆರ್ಥೈಸಿಕೊಂಡು ಗೇಮ್ ಪ್ಲಾನ್ ಬದಲಾಯಿಸಿದ್ದ ರೋಹಿತ್ ನಡೆಗೆ ಸಚಿನ್ ಕೂಡ ಮೆಚ್ಚುಗೆ ನೀಡಿದ್ದಾರೆ. ಅಲ್ಲದೇ ಅಂತರ್ ರಾಷ್ಟ್ರಿಯ ಮಟ್ಟದಲ್ಲಿ ನಾಯಕತ್ವವನ್ನು ಸಮರ್ಥವಾಗಿ ನಿರ್ವಹಿಸಬಲ್ಲ ಆಟಗಾರ ಎಂದಿದ್ದಾರೆ. ಧೋನಿ ಕುರಿತು ಪ್ರಸ್ತಾಪ ಮಾಡಿರುವ ಸಚಿನ್, ಇಬ್ಬರು ಆಟಗಾರರು ಪಂದ್ಯ ಸಂದರ್ಭಗಳನ್ನು ಬಹುಬೇಗ ತಿಳಿಯುವ ಗುಣವನ್ನು ಹೊಂದಿದ್ದು, ವಿಶ್ವಕಪ್ ತಂಡದಲ್ಲಿ ಇದು ತಂಡದ ನೆರವಿಗೆ ಬರುತ್ತದೆ ಎಂದು ವಿಶ್ಲೇಷಿಸಿದ್ದಾರೆ.

dhoni csk 2

ಸಾಧಾರಣವಾಗಿ ಟಿ 20 ಪಂದ್ಯದಲ್ಲಿ ಟಾಸ್ ಗೆದ್ದವರು ಫೀಲ್ಡಿಂಗ್ ಆಯ್ಕೆ ಮಾಡುತ್ತಾರೆ. ಆದರೆ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆಯನ್ನು ಮಾಡಿಕೊಂಡಿದ್ದರು. ಮೊದಲು ಬ್ಯಾಟಿಂಗ್ ಆಯ್ಕೆಯ ಹಿಂದೆ ಮುಂಬೈ ಅದೃಷ್ಟ ಇದೆ. ಈ ಕಾರಣಕ್ಕೆ ಆಯ್ಕೆ ಮಾಡಿರಲೂಬಹುದು ಎನ್ನುವ ವಿಶ್ಲೇಷಣೆ ಈಗ ಕೇಳಿ ಬರುತ್ತಿದೆ. ಯಾಕೆಂದರೆ ಈ ಹಿಂದೆ 2013, 2015, 2017ರ ಫೈನಲಿನಲ್ಲೂ ಮುಂಬೈ ತಂಡ ಮೊದಲ ಬ್ಯಾಟಿಂಗ್ ಮಾಡಿ ಕಪ್ ಗೆದ್ದುಕೊಂಡಿತ್ತು. ಹೀಗಾಗಿ ಈ ಬಾರಿಯೂ ಅದೃಷ್ಟ ಪರೀಕ್ಷೆಯಲ್ಲಿ ರೋಹಿತ್ ಶರ್ಮಾ ಅವರ ಈ ತಂತ್ರಗಾರಿಕೆಯೂ ಪಾಸ್ ಆಗಿದೆ.

ಐಪಿಎಲ್ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ ಇದುವರೆಗೂ ಶೇ. 63.60 ರಷ್ಟು ಗೆಲುವು ಪಡೆದಿವೆ. ಇದರಂತೆ ಕಡಿಮೆ ಮೊತ್ತ ಗಳಿಸಿದರೂ ಚೆನ್ನೈ ತಂಡದ ಆಟಗಾರರನ್ನು ನಿಯಂತ್ರಿಸಬೇಕು ಎಂಬ ಆತ್ಮವಿಶ್ವಾಸ ನಮ್ಮಲ್ಲಿ ಇತ್ತು ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

mumbai

TAGGED:CaptaindhoniHyderabadIPL 2019Public TVRohit SharmaTeam indiaಐಪಿಎಲ್ 2019ಕ್ಯಾಪ್ಟನ್ಟೀಂ ಇಂಡಿಯಾಧೋನಿಪಬ್ಲಿಕ್ ಟಿವಿರೋಹಿತ್ ಶರ್ಮಾಹೈದರಾಬಾದ್
Share This Article
Facebook Whatsapp Whatsapp Telegram

Cinema news

MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post

You Might Also Like

CRIME
Crime

ತಿಂಡಿ ಆಸೆ ತೋರಿಸಿ 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ – ಕಾಮುಕ ಅರೆಸ್ಟ್

Public TV
By Public TV
7 minutes ago
CMS HASSAN
Crime

ಎಟಿಎಂಗೆ ಹಾಕಬೇಕಿದ್ದ ಕೋಟ್ಯಂತರ ರೂ. ಹಣ ಗುಳುಂ – ಸಿಬ್ಬಂದಿ ವಿರುದ್ಧ ಶಂಕೆ

Public TV
By Public TV
14 minutes ago
Zimbabwe Team
Cricket

ಜಿಂಬಾಬ್ವೆಯಿಂದ ಲಂಕಾದಹನ – ಕೊನೆಯ ಓವರ್‌ನಲ್ಲಿ ರೋಚಕ ಜಯ

Public TV
By Public TV
27 minutes ago
BY Vijayendra
Bengaluru City

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಹಗಲು-ರಾತ್ರಿ ಶ್ರಮ: ಸರ್ಕಾರದ ವಿರುದ್ಧ ಹೋರಾಟ ನಿರಂತರ – ಬಿವೈವಿ

Public TV
By Public TV
28 minutes ago
NAMMA METRO 1
Bengaluru City

ನಮ್ಮ ಮೆಟ್ರೋದಿಂದ ಮದ್ಯಪ್ರಿಯರಿಗೆ ಗುಡ್‌ನ್ಯೂಸ್?

Public TV
By Public TV
58 minutes ago
kalaburagi mahanagara palike logo row
Districts

ಕಮಲಕ್ಕೆ ಕೈ ಹಾಕಿದ ಕಾಂಗ್ರೆಸ್‌ – ಕಲಬುರಗಿ ಪಾಲಿಕೆಯಲ್ಲಿ ಈಗ ‘ಲೋಗೋ’ ಯುದ್ಧ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?