Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಐಪಿಎಲ್ ರದ್ದಾದರೆ 3 ಭಾರತೀಯ ಆಟಗಾರ ಭವಿಷ್ಯ ಅತಂತ್ರ

Public TV
Last updated: March 19, 2020 1:12 pm
Public TV
Share
3 Min Read
MS Dhoni
SHARE

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಗೆ ಕೊರೊನಾ ವೈರಸ್ ಕರಿ ನೆರಳು ಬಿದ್ದು, ರದ್ದಾಗುವ ಹಂತಕ್ಕೆ ಬಂದು ನಿಂತಿದೆ. ಈ ಬಾರಿಯ ಐಪಿಎಲ್ ರದ್ದಾದರೆ ಫ್ರಾಂಚೈಸ್‍ಗಳಿಗೆ ನಷ್ಟವಾಗುವುದು ಅಷ್ಟೇ ಅಲ್ಲದೆ ಭಾರತದ ಮೂರು ಆಟಗಾರರ ಭವಿಷ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇದೆ.

ಕೊರೊನಾ ವೈರಸ್ ಏಕಾಏಕಿ ವಿಶ್ವದಾದ್ಯಂತದ ಪ್ರಮುಖ ಕ್ರೀಡಾಕೂಟಗಳನ್ನು ರದ್ದುಗೊಳಿಸುವಂತೆ ಮಾಡಿದೆ. ಮಾರಕ ವೈರಸ್‍ನಿಂದಾಗಿ ಐಪಿಎಲ್ 2020 ರದ್ದಾಗುವ ಸಾಧ್ಯತೆ ಹೆಚ್ಚಾಗಿದೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಐಪಿಎಲ್ ಟೂರ್ನಿ ನಡೆಸುವ ಆಶಯವನ್ನು ಹೊಂದಿದ್ದು, ಏಪ್ರಿಲ್ 15ರ ಬಳಿಕ ಇಲ್ಲವೇ ಜೂನ್-ಸೆಪ್ಟಂಬರ್ ನಡುವೆ ವೇಳಾಪಟ್ಟಿ ನಿಗದಿಪಡಿಸಲು ಸಜ್ಜಾಗಿದೆ.

collage bcci ipl

ಟೂರ್ನಿ ನಡೆಯದಿದ್ದರೆ ಬಿಸಿಸಿಐ ಮಾತ್ರವಲ್ಲದೆ ಆಟಗಾರರು ಸಹ ಹೆಚ್ಚಿನ ಪರಿಣಾಮ ಎದುರಿಸಲಿದ್ದಾರೆ. ಅವರಲ್ಲಿ ಕೆಲವರು ಬೃಹತ್ ಮೊತ್ತದ ಹಣ ಪಡೆಯುವುದನ್ನು ತಪ್ಪಿಸಿಕೊಳ್ಳುತ್ತಾರೆ. ಜೊತೆಗೆ ಮುಂದಿನ ಆವೃತ್ತಿ ಹಾಗೂ ಇತರ ವೇದಿಕೆಯನ್ನು ತಪ್ಪಿಸಿಕೊಳ್ಳುತ್ತಾರೆ. ಐಪಿಎಲ್‍ನಲ್ಲಿ ಆಟಗಾರರು ತೋರುವ ಫಾರ್ಮ್ ಟೀಂ ಇಂಡಿಯಾ ಆಯ್ಕೆಗೆ ವೇದಿಕೆ ಆಗಿರುತ್ತದೆ. ಈ ಸಾಲಿನಲ್ಲಿ ಮೂರು ಆಟಗಾರರಿದ್ದು, ಐಪಿಎಲ್ 2020 ರದ್ದಾದರೆ ಅವರು ಸಂಕಷ್ಟಕ್ಕೆ ಸಿಲುಕಬಹುದು ಎನ್ನಲಾಗುತ್ತಿದೆ.

ಎಂ.ಎಸ್.ಧೋನಿ:
ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಜುಲೈ 2019ರಿಂದ ಯಾವುದೇ ರೀತಿಯ ಕ್ರಿಕೆಟ್ ಆಡಿಲ್ಲ. ಹೀಗಾಗಿ ಟೀಂ ಇಂಡಿಯಾ ಆಯ್ಕೆ ಸಮಿತಿಯು ಅವರನ್ನು ನೇರವಾಗಿ ಆಯ್ಕೆ ಮಾಡಲು ಸಾಧ್ಯವಿಲ್ಲ. ಒಂದು ವೇಳೆ ನೇರ ಆಯ್ಕೆ ಕೊಟ್ಟರೆ ಈಗಾಗಲೇ ಅಭ್ಯಾಸ ನಡೆಸುತ್ತಿರುವ ಇತರ ಆಟಗಾರರಿಗೆ ಅನ್ಯಾಯವಾಗುತ್ತದೆ. ಎಂ.ಎಸ್.ಧೋನಿ ಅವರು ಕೆಲವು ಸ್ಪರ್ಧಾತ್ಮಕ ಕ್ರಿಕೆಟ್ ಆಡುವವರೆಗೂ ಆಯ್ಕೆಯಿಂದ ದೂರವಿರುತ್ತಾರೆ ಎನ್ನಲಾಗುತ್ತಿದೆ.

dhoni

ಈ ನಡುವೆ ಭಾರತದ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಅವರು, ಎಂ.ಎಸ್.ಧೋನಿ ಮತ್ತೆ ತಂಡಕ್ಕೆ ಮರಳುವ ಸಾಧ್ಯತೆಗಳೇ ಇಲ್ಲ ಎಂದು ಹೇಳಿದ್ದಾರೆ. ಎಂ.ಎಸ್.ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್‍ಗೆ ಕಮ್‍ಬ್ಯಾಕ್ ಮಾಡುತ್ತಾರೆ ಅಂತ ಅಭಿಮಾನಿ ನಿರೀಕ್ಷೆ ಹೊಂದಿದ್ದರು. ಐಪಿಎಲ್‍ನಲ್ಲಿ ಮಿಂಚಿದರೆ, ಉತ್ತಮ ಪ್ರದರ್ಶನ ನೀಡಿದರೆ ಐಸಿಸಿ ಟಿ20 ವಿಶ್ವಕಪ್‍ಗೆ ಧೋನಿ ಮರಳುತ್ತಾರೆ ಎನ್ನಲಾಗುತ್ತಿತ್ತು. ಆದರೆ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಐಪಿಎಲ್ ರದ್ದಾಗುವ ಸಾಧ್ಯತೆ ಹೆಚ್ಚಾಗುತ್ತಿದೆ.

ಎಂ.ಎಸ್.ಧೋನಿ ಐಪಿಎಲ್ 13ನೇ ಆವೃತ್ತಿ ಆರಂಭಕ್ಕಾಗಿ ಕಾಯುತ್ತಿದ್ದರು. ಈ ನಿಟ್ಟಿನಲ್ಲಿ ಚೆನ್ನೈನಲ್ಲಿ ಅಭ್ಯಾಸ ಕೂಡ ಆರಂಭಿಸಿದ್ದರು. ಆದರೆ ಟೂರ್ನಿಯನ್ನು ಏಪ್ರಿಲ್ 15ರವರೆಗೆ ರದ್ದುಗೊಳಿಸುತ್ತಿದ್ದಂತೆ ಧೋನಿ ತವರಿಗೆ ಮರಳಿದರು.

Prithvi Shaw 854x600

ಪೃಥ್ವಿ ಶಾ:
ಟೀಂ ಇಂಡಿಯಾ ಯುವ ಆಟಗಾರ ಪೃಥ್ವಿ ಶಾ ಅವರು ಈವರೆಗೂ ಅಂತರರಾಷ್ಟ್ರೀಯ ಟಿ20 ಪಂದ್ಯ ಆಡಿಲ್ಲ. ಈ ಅವಕಾಶ ಪಡೆದುಕೊಳ್ಳಲು ಅವರು ಐಪಿಎಲ್‍ನಲ್ಲಿ ಉತ್ತಮ ಪ್ರದರ್ಶನ ನೀಡುವುದ ಅಗತ್ಯವಾಗಿದೆ. ಆರಂಭಿಕ ಆಟಗಾರ ಶಿಖರ್ ಧವನ್ ಗಾಯಗೊಂಡಿದ್ದಾರೆ. ಹೀಗಾಗಿ ಆಯ್ಕೆ ಸಮಿತಿಯು ಟಿ20 ಪಂದ್ಯಗಳ ಓಪನರ್ ಆಟಗಾರರಿಗೆ ಹುಡುಕಾಟ ನಡೆಸಿದೆ.

ಪೃಥ್ವಿ ಶಾ ಈ ಬಾರಿಯ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದರೆ ತಮ್ಮ ಚೊಚ್ಚಲ ಅಂತರರಾಷ್ಟ್ರೀಯ ಟಿ20 ಪಂದ್ಯ ಆಡಬಹುದಾಗಿದೆ. ಆದರೆ ಆಯ್ಕೆ ಸಮಿತಿಯು ಧವನ್ ಅವರನ್ನು ಉಳಿಸಿಕೊಳ್ಳುವ ಸಾಧ್ಯತೆಗಳಿದೆ. ಹೀಗಾಗಿ ಶಾ ಅವಕಾಶ ತಪ್ಪಿಸಿಕೊಳ್ಳಬಹುದು. ಕೆ.ಎಲ್.ರಾಹುಲ್ ಮತ್ತು ರೋಹಿತ್ ಶರ್ಮಾ ಅವರನ್ನು ಆರಂಭಿಕರನ್ನಾಗಿ ಮೈದಾನಕ್ಕೆ ಇಳಿಸಲು ಸಾಧ್ಯತೆ ಹೆಚ್ಚಾಗಿದೆ. ಇದರಿಂದಾಗಿ ಧವನ್ ಅವರಿಗೆ ವಿಶ್ರಾಂತಿ ಕೊಡುವ ವಾತಾವರಣವೂ ಸೃಷ್ಟಿಯಾಗಬಹುದು.

SANJU SAMSON

ಸಂಜು ಸ್ಯಾಮ್ಸನ್:
ನ್ಯೂಜಿಲೆಂಡ್ ವಿರುದ್ಧ ನಡೆದ ಟಿ20 ಸರಣಿಯಲ್ಲಿ ಎರಡು ಪಂದ್ಯಗಳಿಗಾಗಿ ಆಡುವ ಇಲೆವೆನ್‍ನಲ್ಲಿ ಸಂಜು ಸ್ಯಾಮ್ಸನ್ ಅವರನ್ನು ಆಯ್ಕೆ ಮಾಡಲಾಗಿತ್ತು. ಈ ಮೂಲಕ ತಂಡದ ಆಡಳಿತವು ರಿಷಭ್ ಪಂತ್ ಅವರಿಗೆ ಸ್ಪಷ್ಟ ಎಚ್ಚರಿಕೆಯನ್ನು ರವಾನಿಸಿತ್ತು. ಭವಿಷ್ಯದಲ್ಲಿ ಸ್ಯಾಮ್ಸನ್ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಅವಕಾಶ ನೀಡಲಾಗಿತ್ತಾದರೂ ಅವರು ವಿಫಲರಾಗಿದ್ದರು.

ಐಪಿಎಲ್‍ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಸ್ಯಾಮ್ಸನ್ ಭವಿಷ್ಯದಲ್ಲಿ ಟೀಂ ಇಂಡಿಯಾ ಸೇರುವ ಸಾಧ್ಯತೆಗಳಿವೆ. ಆದರೆ ಐಪಿಎಲ್ ನಡೆಯದಿದ್ದರೆ ಅವರು ಆಯ್ಕೆಯಿಂದ ದೂರ ಉಳಿಯಲಿದ್ದಾರೆ.

TAGGED:Indian PlayersIPL 2020ms dhoniprithvi shawPublic TVSanju Samsonಎಂ ಎಸ್ ಧೋನಿಐಪಿಎಲ್ಪಬ್ಲಿಕ್ ಟಿವಿಪೃಥ್ವಿ ಶಾಸಂಜು ಸ್ಯಾಮ್ಸನ್
Share This Article
Facebook Whatsapp Whatsapp Telegram

You Might Also Like

mid day meals
Bengaluru City

ಬಿಸಿಯೂಟ ತಯಾರಕರಿಗೆ ಮಾಸಿಕ ಗೌರವ ಸಂಭಾವನೆ 1,000 ರೂ. ಹೆಚ್ಚಳ

Public TV
By Public TV
7 minutes ago
Gopi Chandh Padalkar
Latest

ಮತಾಂತರ ಮಾಡುವವರನ್ನು ಕೊಲ್ಲುವವರಿಗೆ 11 ಲಕ್ಷ ಬಹುಮಾನ – ಮಹಾರಾಷ್ಟ್ರ ಬಿಜೆಪಿ ಶಾಸಕನ ಪ್ರಚೋದನಕಾರಿ ಹೇಳಿಕೆ

Public TV
By Public TV
20 minutes ago
Ballary Suicide
Bellary

ಕೌಟುಂಬಿಕ ಕಲಹ ಶಂಕೆ – ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

Public TV
By Public TV
1 hour ago
safari EV bus
Bengaluru City

ದೇಶದಲ್ಲೇ ಮೊದಲು – ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಸಫಾರಿ ಇ.ವಿ ಬಸ್‌ಗೆ ಚಾಲನೆ

Public TV
By Public TV
2 hours ago
Turkey Air Ballon
Crime

ಟರ್ಕಿಯಲ್ಲಿ 2 ಏರ್ ಬಲೂನ್ ಅವಘಡ- ಪೈಲಟ್ ಸಾವು, 31 ಪ್ರವಾಸಿಗರಿಗೆ ಗಾಯ

Public TV
By Public TV
2 hours ago
Air India Flight 3
Latest

ಜ್ವಾಲಾಮುಖಿ ಸ್ಫೋಟ – ದೆಹಲಿಯಿಂದ ಬಾಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ವಾಪಸ್

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?