ಮುಂಬೈ: ಮಹಾಮಾರಿ ಕೊರೊನಾ ವೈರಸ್ನಿಂದಾಗಿ ಜಾಗತಿಕ ಕಾಳಜಿಯ ಹಿನ್ನೆಲೆಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ನ 13ನೇ ಆವೃತ್ತಿಯನ್ನು ಏಪ್ರಿಲ್ 15ಕ್ಕೆ ಮುಂದೂಡಲಾಗಿದೆ.
ಚೆನ್ನೈನಲ್ಲಿ ಮಾರ್ಚ್ 29ರಂದು ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿಯನ್ನು ಮುಂದೂಡಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಕಾರ್ಯದರ್ಶಿ ಜೇ ಶಾ ಹಾಗೂ ಐಪಿಎಲ್ನ ಉನ್ನತ ಆಡಳಿತ ಮಂಡಳಿ ನಿರ್ಧಾರ ಪ್ರಕಟಿಸಿದೆ. ಇದನ್ನೂ ಓದಿ: 1 ವಾರ ಕರ್ನಾಟಕ ಲಾಕ್ ಡೌನ್- ಮಾಲ್, ಕಾಲೇಜುಗಳಿಗೆ ರಜೆ, ಜಾತ್ರೆ ರದ್ದು
????Announcement????: #VIVOIPL suspended till 15th April 2020 as a precautionary measure against the ongoing Novel Corona Virus (COVID-19) situation.
More details ➡️ https://t.co/hR0R2HTgGg pic.twitter.com/azpqMPYtoL
— IndianPremierLeague (@IPL) March 13, 2020
ಬಿಸಿಸಿಐ ಅಧಿಕಾರಿಗಳು ಐಪಿಎಲ್ನ ಎಲ್ಲಾ ಎಂಟು ಫ್ರಾಂಚೈಸಿಗಳೊಂದಿಗೆ ಇಂದು ಚರ್ಚೆ ನಡೆಸಿದ್ದಾರೆ. ಜೊತೆಗೆ ಎಲ್ಲಾ ತಂಡದ ಮಾಲೀಕರನ್ನು ಮುಂಬೈನಲ್ಲಿ ಶನಿವಾರ ಖುದ್ದಾಗಿ ಭೇಟಿಯಾಗಲಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಕೊರೊನಾ ಎಫೆಕ್ಟ್ – ರೈಲು ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಕೆ
ದೇಶದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 15ರವರೆಗೆ ರಾಜತಾಂತ್ರಿಕ, ಸರ್ಕಾರದ ಕೆಲ ವಿಭಾಗಗಳನ್ನು ಹೊರತುಪಡಿಸಿ ಅಸ್ತಿತ್ವದಲ್ಲಿರುವ ಎಲ್ಲಾ ವಿದೇಶಿ ವೀಸಾಗಳನ್ನು ರದ್ದುಗೊಳಿಸುವಂತೆ ಆದೇಶ ನೀಡಲಾಗಿದೆ. ಇದುವರೆಗೂ ನೀಡಲಾಗಿರುವ ವೀಸಾಗಳನ್ನ ರದ್ದುಗೊಳಿಸುವಂತೆ ಆದೇಶಿಸಲಾಗಿದೆ. ದಕ್ಷಿಣ ಕೊರಿಯಾ, ಇಟಲಿಗೆ ಏರ್ ಇಂಡಿಯಾ ವಿಮಾನ ಹಾರಾಟ ರದ್ದು ಮಾಡಲಾಗಿದ್ದು, ಅಮೆರಿಕಕ್ಕೆ ಯುರೋಪ್ (ಬ್ರಿಟನ್ ಹೊರತುಪಡಿಸಿ) ನಾಗರಿಕರು ಪ್ರವೇಶಕ್ಕೆ ಸರ್ಕಾರ ನಿರ್ಬಂಧ ಹೇರಿದೆ.
ಸರ್ಕಾರ ವಿದೇಶಿ ಪ್ರಯಾಣಿಕರ ವೀಸಾಗಳ ಮೇಲೆ ನಿರ್ಬಂಧ ವಿಧಿಸಿದ್ದರಿಂದ ಏಪ್ರಿಲ್ 15ರವರೆಗೂ ಐಪಿಎಲ್ಗೆ ಯಾವುದೇ ವಿದೇಶಿ ಆಟಗಾರರು ಲಭ್ಯವಾಗುತ್ತಿರಲಿಲ್ಲ. ಹೀಗಾಗಿ ತಂಡದಲ್ಲಿ ಆಟಗಾರರ ಕೊರತೆ ಕಾಡುತ್ತಿತ್ತು. ಅಷ್ಟೇ ಅಲ್ಲದೆ ಖಾಲಿ ಮೈದಾನದಲ್ಲಿ ಪಂದ್ಯಗಳನ್ನು ನಡೆಸಿದ್ದರೆ ಭಾರೀ ನಷ್ಟವಾಗುತ್ತಿತ್ತು. ಈ ಎಲ್ಲಾ ವಿಚಾರಗಳನ್ನು ಗಮನದಲ್ಲಿ ಇಟ್ಟುಕೊಂಡು ಬಿಸಿಸಿಐ ಟೂರ್ನಿಯನ್ನು ಮುಂದೂಡಿದೆ.
ಇದಕ್ಕೂ ಮುನ್ನ ದೆಹಲಿಯಲ್ಲಿ ಆಯೋಜನೆಗೊಂಡಿದ್ದ ಎಲ್ಲ ಐಪಿಎಲ್ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಮುಂಜಾಗೃತಾ ಕ್ರಮವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ತಿಳಿಸಿದ್ದರು.
ಕ್ರಿಕೆಟ್ ವೀಕ್ಷಿಸಲು ಸಾವಿರಾರು ಮಂದಿ ಕ್ರೀಡಾಂಗಣಕ್ಕೆ ಬರುತ್ತಾರೆ. ಯಾರು ಬರುತ್ತಾರೆ? ಅವರು ಎಲ್ಲಿಂದ ಬರುತ್ತಿದ್ದಾರೆ ಎನ್ನುವುದು ತಿಳಿಯುವುದು ಅಸಾಧ್ಯ. ಒಬ್ಬ ವ್ಯಕ್ತಿ ಬಂದರೂ ಹಲವು ಮಂದಿಗೆ ಕೊರೊನಾ ಹರಡುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಐಪಿಎಲ್ ಸೇರಿದಂತೆ ಎಲ್ಲ ಕ್ರೀಡಾ ಕಾರ್ಯಕ್ರಮವನ್ನು ರದ್ದುಪಡಿಸುತ್ತಿದ್ದೇವೆ ಎಂದು ಹೇಳಿದ್ದರು.
ಈಗಾಗಲೇ ದೆಹಲಿ ಸರ್ಕಾರ ಸಾರ್ವಜನಿಕವಾಗಿ 200ಕ್ಕೂ ಹೆಚ್ಚು ಜನ ಪಾಲ್ಗೊಳ್ಳುವ ಸಮಾರಂಭವನ್ನು ನಿಷೇಧಿಸಿದ್ದು, ಶಾಲಾ, ಕಾಲೇಜು, ಸಿನಿಮಾ ಮಂದಿರಗಳು ಮಾರ್ಚ್ 31ರವರೆಗೆ ಮುಚ್ಚುವಂತೆ ಆದೇಶಿಸಿದೆ.