Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಪಂತ್‌ ಔಟ್‌; ಡೆಲ್ಲಿ ತಂಡಕ್ಕೆ ಹೊಸ ನಾಯಕ – ಬೆಂಗಳೂರು ಬಾಯ್ಸ್‌ ಕೈಹಿಡಿಯುತ್ತಾ ಲಕ್‌?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಪಂತ್‌ ಔಟ್‌; ಡೆಲ್ಲಿ ತಂಡಕ್ಕೆ ಹೊಸ ನಾಯಕ – ಬೆಂಗಳೂರು ಬಾಯ್ಸ್‌ ಕೈಹಿಡಿಯುತ್ತಾ ಲಕ್‌?

Cricket

ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಪಂತ್‌ ಔಟ್‌; ಡೆಲ್ಲಿ ತಂಡಕ್ಕೆ ಹೊಸ ನಾಯಕ – ಬೆಂಗಳೂರು ಬಾಯ್ಸ್‌ ಕೈಹಿಡಿಯುತ್ತಾ ಲಕ್‌?

Public TV
Last updated: May 11, 2024 8:09 pm
Public TV
Share
2 Min Read
Rishabh Pant 2
SHARE

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಐಪಿಎಲ್‌ ಪಂದ್ಯಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ (Rishabh Pant) ಸೇವೆ ಅಲಭ್ಯವಾಗುವ ಹಿನ್ನೆಲೆಯಲ್ಲಿ ಬದಲಿ ನಾಯಕನನ್ನು ಫ್ರಾಂಚೈಸಿ ಘೋಷಿಸಿದೆ.

ಮೂರುಬಾರಿ ನಿಧಾನಗತಿಯ ಓವರ್ ರೇಟ್ ನಿಂದ ಐಪಿಎಲ್‌ ನಿಯಮ (Slow Over Rate) ಉಲ್ಲಂಘಿಸಿದ್ದಕ್ಕಾಗಿ ರಿಷಭ್‌ ಪಂತ್‌ಗೆ ಬಿಸಿಸಿಐ 30 ಲಕ್ಷ ರೂ. ದಂಡ ವಿಧಿಸಿದೆ. ಇದರೊಂದಿಗೆ ಒಂದು ಪಂದ್ಯದಿಂದ ಅಮಾನತುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಭಾನುವಾರದ ಪಂದ್ಯಕ್ಕೆ ಬದಲಿ ನಾಯಕನನ್ನು ಘೋಷಿಸಲಾಗಿದೆ.

Delhi Capitals

ಸೂಪರ್‌ ಸಂಡೇ (ಮೇ 12) ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಿಂದ ರಿಷಭ್ ಪಂತ್ ಹೊರಗುಳಿಯಲಿದ್ದಾರೆ. ಹಾಗಾಗಿ ಅಕ್ಷರ್ ಪಟೇಲ್ (Axar Patel) ಅವರಿಗೆ ತಂಡವನ್ನು ಮುನ್ನಡೆಸುವ ಜವಾಬ್ದಾರಿ ನೀಡಲಾಗುವುದು ಎಂದು ಕೋಚ್‌ ರಿಕಿ ಪಾಂಟಿಂಗ್ ಖಚಿತಪಡಿಸಿದ್ದಾರೆ. ಭಾನುವಾರ ಸಂಜೆ 7:30ರ ವೇಳೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇತ್ತಂಡಗಳು ಸೆಣಸಲಿವೆ.

ಬ್ಯಾಟಿಂಗ್‌ ಬಲದ ಚಿಂತೆ:
ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಅಗ್ರ ಕ್ರಮಾಂಕದಲ್ಲಿ ಫ್ರೆಸರ್‌ ಮೆಕ್‌ಗಾರ್ಕ್‌, ಪೃಥ್ವಿ ಶಾ, ಅಭಿಷೇಕ್‌ ಪೋರೆಲ್‌ ಬ್ಯಾಟಿಂಗ್‌ ಬಲ ನೀಡುತ್ತಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಶಾಯ್‌ ಹೋಪ್‌, ರಿಷಭ್‌ ಪಂತ್‌, ಅಕ್ಷರ್‌ ಪಟೇಲ್‌ ಫಾರ್ಮ್‌ನಲ್ಲಿದ್ದರು. ಆದ್ರೆ ರಿಷಭ್‌ ಪಂತ್‌ ಅವರ ಅಲಭ್ಯತೆಯು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಬಲದ ಚಿಂತೆ ತಂದೊಡ್ಡಿದೆ. ಅಲ್ಲದೇ ಪ್ಲೇ ಆಫ್‌ ರೇಸ್‌ನಲ್ಲಿರುವ ಡೆಲ್ಲಿ ತಂಡಕ್ಕೆ ಗೆಲುವು ಕೈ ಹಿಡಿಯುತ್ತಾ ಎಂಬುದನ್ನ ಕಾದು ನೋಡಬೇಕಿದೆ.

Delhi Capitals Rishab Pant

ದಂಡ ವಿಧಿಸಿದ್ದು ಏಕೆ?
ಮೇ 7 ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ (Arun Jaitley Stadium) ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ನಿಧಾನಗತಿಯ ಬೌಲಿಂಗ್‌ ನಡೆಸಿತ್ತು. ಇದಕ್ಕಾಗಿ ಪಂತ್‌ ಅವರಿಗೆ 30 ಲಕ್ಷ ರೂ. ದಂಡದೊಂದಿಗೆ ಒಂದು ಪಂದ್ಯದಿಂದ ಅಮಾನತುಗೊಳಿಸಲಾಗಿದೆ. ಇದರೊಂದಿಗೆ ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ ಉಳಿದ 11 ಸದಸ್ಯರಿಗೆ ತಲಾ 12 ಲಕ್ಷ ರೂ. ಅಥವಾ ಆಯಾ ಪಂದ್ಯ ಶುಲ್ಕದ 50 ಪ್ರತಿಶತದಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್‌ ಮಂಡಳಿ ತಿಳಿಸಿದೆ.

30 ಲಕ್ಷ ದಂಡ ಯಾಕೆ?
ಐಪಿಎಲ್‌ನಲ್ಲಿ ಮೊದಲ ಬಾರಿ ನಿಧಾನಗತಿ ಬೌಲಿಂಗ್ ಮಾಡಿದರೆ ನಾಯಕನಿಗೆ 12 ಲಕ್ಷ ರೂ. ದಂಡವನ್ನು ವಿಧಿಸಲಾಗುತ್ತದೆ. 2ನೇ ಬಾರಿ ಈ ತಪ್ಪನ್ನು ಮಾಡಿದರೆ ನಾಯಕನಿಗೆ 24 ಲಕ್ಷ ರೂ. ದಂಡದ ಜೊತೆ ಆಟಗಾರರಿಗೂ ದಂಡ ವಿಧಿಸಲಾಗುತ್ತದೆ. 3ನೇ ಬಾರಿಗೆ ದಂಡ ವಿಧಿಸಿದರೆ 30 ಲಕ್ಷ ದಂಡದೊಂದಿಗೆ ಒಂದು ಪಂದ್ಯದಿಂದ ನಾಯಕನನ್ನು ಅಮಾನತುಗೊಳಿಸಲಾಗುತ್ತದೆ.

IPL 2024 delhi capitals beat rajasthan royals by 20 runs

ಪಂದ್ಯಕ್ಕೆ ಮೀಸಲಾದ ಸಮಯ ಎಷ್ಟು?
ಐಪಿಎಲ್‌ ನಿಯಮದ ಪ್ರಕಾರ ಒಂದು ತಂಡ 20 ಓವರ್‌ಗಳನ್ನು 90 ನಿಮಿಷದ ಒಳಗಡೆ ಮುಗಿಸಬೇಕು. ಈ ಅವಧಿಯಲ್ಲಿ ಓವರ್‌ಗಳನ್ನು ಪೂರ್ಣ ಮಾಡದೇ ಇದ್ದರೂ 20ನೇ ಓವರ್‌ ಅನ್ನು 90ನೇ ನಿಮಿಷದಲ್ಲೇ ಆರಂಭಿಸಬೇಕು. ಈ ನಿಯಮವನ್ನು ಮೊದಲ ಬಾರಿ ಉಲ್ಲಂಘಿಸಿದರೆ 12 ಲಕ್ಷ ರೂ. ದಂಡವನ್ನು ವಿಧಿಸಲಾಗುತ್ತದೆ. ಪ್ರತಿ ಪಂದ್ಯದಲ್ಲಿ 2 ನಿಮಿಷ 30 ಸೆಕೆಂಡಿನ 4 ಸ್ಟ್ರಟೆಜಿಕ್‌ ಟೈಮ್‌ ಔಟ್‌ ಬ್ರೇಕ್‌ಗಳು ಇರುತ್ತದೆ. ಮೊದಲ ಇನ್ನಿಂಗ್ಸ್‌ನಲ್ಲಿ ಬೌಲಿಂಗ್‌ ತಂಡ 6-9 ಓವರ್‌ ಮಧ್ಯೆ ಯಾವಾಗ ಬೇಕಾದರೂ ಪಡೆದುಕೊಳ್ಳಬಹುದು. 2ನೇ ಸ್ಟ್ರಟೆಜಿಕ್‌ ಟೈಮ್‌ ಔಟ್‌ ಅನ್ನು ಬ್ಯಾಟಿಂಗ್ ತಂಡ 13-16 ಓವರ್‌ ಮಧ್ಯೆ ಯಾವಾಗ ಬೇಕಾದರೂ ಪಡೆದುಕೊಳ್ಳಬಹುದು.

TAGGED:Delhi CapitalsIPL 2024IPL FineRajasthan RoyalsRishabh PantSlow Over Rateಆರ್‍ಸಿಬಿಐಪಿಎಲ್‌ 2024ಐಪಿಎಲ್‌ ದಂಡಡೆಲ್ಲಿ ಕ್ಯಾಪಿಟಲ್ಸ್ರಿಷಭ್ ಪಂತ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Tehran Ceasefire Victory
Latest

ಕದನ ವಿರಾಮ ಘೋಷಣೆ – ಟೆಹ್ರಾನ್‌ನ ಪ್ರಮುಖ ಬೀದಿಗಳಲ್ಲಿ ರಾಷ್ಟ್ರಧ್ವಜ ಹಿಡಿದು ವಿಜಯೋತ್ಸವ ಆಚರಣೆ

Public TV
By Public TV
29 minutes ago
oil price fall
Latest

ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಕಚ್ಚಾ ತೈಲ ದರ ದಿಢೀರ್‌ ಭಾರೀ ಕುಸಿತ

Public TV
By Public TV
55 minutes ago
Lorry Accident Mysore Road Sattelite Bus Stand
Bengaluru City

ಸಿಗ್ನಲ್‌ನಲ್ಲಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದ ಮತ್ತೊಂದು ಲಾರಿ – ಚಾಲಕ ಸಾವು

Public TV
By Public TV
1 hour ago
Hormuz
Latest

ಕದನ ವಿರಾಮಕ್ಕೆ ಇರಾನ್‌ ವಿಧಿಸಿದ 10 ಷರತ್ತುಗಳು ಏನು?

Public TV
By Public TV
1 hour ago
WAR 1
Latest

ಇಸ್ರೇಲ್‌, ಇರಾನ್‌ ಯುದ್ಧ | ಯಾರಿಗೆ ಲಾಭ, ಯಾರಿಗೆ ನಷ್ಟ? – ವಿಶ್ವಬ್ಯಾಂಕ್‌ ಎಚ್ಚರಿಕೆ ಏನು?

Public TV
By Public TV
2 hours ago
Bab al Mandab Strait India
Latest

ಹಾರ್ಮುಜ್ ಬಳಿಕ ಬಾಬ್ ಅಲ್-ಮಂಡೇಬ್ ಜಲಸಂಧಿ ಬಂದ್‌ ಭೀತಿ – ಭಾರತಕ್ಕೇನು ಪರಿಣಾಮ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?