Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: IPL 2024: ಹೆಚ್ಚುವರಿ 20 ರನ್‌ ಕೊಟ್ಟಿದ್ದೇ ಆರ್‌ಸಿಬಿಗೆ ಮುಳುವಾಯ್ತಾ? – ಗ್ರೀನ್‌ ಬಾಯ್ಸ್‌ ಎಡವಿದ್ದೆಲ್ಲಿ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | IPL 2024: ಹೆಚ್ಚುವರಿ 20 ರನ್‌ ಕೊಟ್ಟಿದ್ದೇ ಆರ್‌ಸಿಬಿಗೆ ಮುಳುವಾಯ್ತಾ? – ಗ್ರೀನ್‌ ಬಾಯ್ಸ್‌ ಎಡವಿದ್ದೆಲ್ಲಿ?

Cricket

IPL 2024: ಹೆಚ್ಚುವರಿ 20 ರನ್‌ ಕೊಟ್ಟಿದ್ದೇ ಆರ್‌ಸಿಬಿಗೆ ಮುಳುವಾಯ್ತಾ? – ಗ್ರೀನ್‌ ಬಾಯ್ಸ್‌ ಎಡವಿದ್ದೆಲ್ಲಿ?

Public TV
Last updated: April 21, 2024 9:08 pm
Public TV
Share
3 Min Read
RCB 3 1
SHARE

– ಸೋಲಿನ ಬಳಿಕ ನಾಯಕ ಫಾಫ್‌ ಡು ಪ್ಲೆಸಿಸ್‌ ಹೇಳಿದ್ದೇನು?

ಕೋಲ್ಕತ್ತಾ: ಇಲ್ಲಿನ ಈಡನ್‌ ಗಾರ್ಡನ್‌ನಲ್ಲಿ ಕೆಕೆಆರ್‌ ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 1 ರನ್‌ ವಿರೋಚಿತ ಸೋಲಿಗೆ ತುತ್ತಾಯಿತು. ಆದ್ರೆ ಈ ಪಂದ್ಯದಲ್ಲಿ ಆರ್‌ಸಿಬಿ ತಂಡ 20 ರನ್‌ ಹೆಚ್ಚುವರಿಯಾಗಿ ಬಿಟ್ಟುಕೊಟ್ಟಿದ್ದೇ ಸೋಲಿಗೆ ಕಾರಣವಾಯ್ತಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ. ಅಲ್ಲದೇ ಇಂದಿನ ಸೋಲಿಗೆ ಕಾರಣಗಳೇನು ಎಂಬುದನ್ನು ಅಭಿಮಾನಿಗಳು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

Andre Russell

ಕೆಕೆಆರ್‌ಗೆ 20 ರನ್‌ ಎಕ್ಸ್‌ಟ್ರಾ ಲಾಭವಾಯ್ತಾ?
ಹೌದು. ಆರಂಭದಲ್ಲಿ ರನ್‌ ಚಚ್ಚಿಸಿಕೊಂಡರೂ ಬಳಿಕ ಬಿಗಿ ಹಿಡಿತ ಸಾಧಿಸಲು ಮುಂದಾಗಿದ್ದ ಆರ್‌ಸಿಬಿ ಬೌಲರ್‌ಗಳು ಬಳಿಕ ವೈಡ್‌, ನೋಬಾಲ್‌, ಲೆಗ್‌ ಬೈಸ್‌ಗಳ ಮೂಲಕ ರನ್‌ ಬಿಟ್ಟುಕೊಟ್ಟರು. ಬೈಸ್‌, ಲೆಗ್‌ಬೈಸ್‌, ನೋಬಾಲ್‌ ಹಾಗೂ ವೈಡ್‌ ಮೂಲಕ ಕ್ರಮವಾಗಿ 4,7,2,7 ರನ್‌ಗಳನ್ನು ಬಿಟ್ಟುಕೊಟ್ಟರು. ಪರಿಣಾಮ ಕೆಕೆಆರ್‌ 220 ರನ್‌ಗಳ ಗಡಿ ದಾಟಲು ಸಾಧ್ಯವಾಯಿತು. ಇದನ್ನೂ ಓದಿ: ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮಕ್ಕೆ ರೋಹಿತ್‌ ವಿರೋಧ; ಬಿಸಿಸಿಐ ಹೇಳಿದ್ದೇನು? – ಏನಿದು ಇಂಪ್ಯಾಕ್ಟ್‌ ಪ್ಲೇಯರ್‌ ರೂಲ್ಸ್‌?

RCB Lost

2 ಓವರ್‌ನಲ್ಲಿ 38 ರನ್‌ ಕೊಟ್ಟ ಯಶ್‌ ದಯಾಳ್‌:
200 ರನ್‌ಗಳ ಒಳಗೆ ಕೆಕೆಆರ್‌ ತಂಡವನ್ನು ಕಟ್ಟಿಹಾಕುವ ಪ್ರಯತ್ನದಲ್ಲಿದ್ದ ಆರ್‌ಸಿಬಿಗೆ ಯಶ್‌ ದಯಾಳ್‌ ದುಬಾರಿಯಾದರು. 16 ಓವರ್‌ ಮುಕ್ತಾಯಕ್ಕೆ ಕೆಕೆಆರ್‌‌ 5 ವಿಕೆಟ್‌ಗೆ 155 ರನ್‌ ಗಳಿಸಿತ್ತು. ಆದ್ರೆ 17ನೇ ಓವರ್‌ನಲ್ಲೇ ಯಶ್‌ ದಯಾಳ್‌, 2 ವೈಡ್‌, ನೋಬಾಲ್‌, ಬೈಸ್‌ ಮಾತ್ರವಲ್ಲದೇ ಸಿಕ್ಸರ್-ಬೌಂಡರಿ ಚಚ್ಚಿಸಿಕೊಂಡು 22 ರನ್‌ ಬಿಟ್ಟುಕೊಟ್ಟರು. ಅಲ್ಲದೇ 19ನೇ ಓವರ್‌ನಲ್ಲಿ ಮೊಹಮ್ಮದ್‌ ಸಿರಾಜ್‌ ಸಿಕ್ಸರ್‌-ಬೌಂಡರಿ, ವೈಡ್‌ ಮೂಲಕ 20 ರನ್‌ ಬಿಟ್ಟುಕೊಟ್ಟರು. ಬಳಿಕ ಕೊನೇ ಓವರ್‌ನಲ್ಲೇ ಯಶ್‌ ದಯಾಳ್‌ ಮತ್ತೆ 16 ರನ್‌ ಚಚ್ಚಿಸಿಕೊಂಡರು. ಇದು ಆರ್‌ಸಿಬಿ ತಂಡಕ್ಕೆ ದುಬಾರಿಯಾಯಿತು. ಇದನ್ನೂ ಓದಿ: ಟಿ20 ವಿಶ್ವಕಪ್‌: ಐರ್ಲೆಂಡ್‌, ಸ್ಕಾಟ್ಲೆಂಡ್‌ ತಂಡಗಳಿಗೆ ಕರ್ನಾಟಕದ ‘ನಂದಿನಿ’ ಪ್ರಯೋಜಕತ್ವ

Dinesh Karthik

2023ರ ಐಪಿಎಲ್‌ನಲ್ಲಿ ಗುಜರಾತ್‌ ಟೈಟಾನ್ಸ್‌ ತಂಡದಲ್ಲಿದ್ದ ಯಶ್‌ ದಯಾಳ್‌ ಇದೇ ರೀತಿ ತಂಡದ ಸೋಲಿಗೆ ಕಾರಣವಾಗಿದ್ದರು. ಕೊನೇ ಓವರ್‌ನಲ್ಲಿ 29 ರನ್‌ ಬೇಕಿದ್ದಾಗ ರಿಂಕು ಸಿಂಗ್‌ ಅವರಿಂದ ಸತತ 5 ಸಿಕ್ಸರ್‌ ಚಚ್ಚಿಸಿಕೊಂಡಿದ್ದರು. ಇದನ್ನೂ ಓದಿ: ಕೊನೇ ಓವರ್‌ನಲ್ಲಿ 6,6,6; ಹೋರಾಡಿ ಸೋತ ಆರ್‌ಸಿಬಿ – ಕೆಕೆಆರ್‌ಗೆ 1 ರನ್‌ ರೋಚಕ ಜಯ

ಅಬ್ಬರಿಸದ ಡಿಕೆ, ಕೈಕೊಟ್ಟ ಗ್ರೀನ್:‌
ಹಿಂದಿನ ಪಂದ್ಯದಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ 35 ಎಸೆತಗಳಲ್ಲಿ ಸ್ಫೋಟಕ 85 ರನ್‌ ಚಚ್ಚಿದ್ದ ದಿನೇಶ್‌ ಕಾರ್ತಿಕ್‌ ಕೆಕೆಆರ್‌ ಪರ ಅಬ್ಬರಿಸುವಲ್ಲಿ ವಿಫಲರಾದರು. 18 ಎಸೆತಗಳಲ್ಲಿ 25 ರನ್‌ ಗಳಿಸಿ ಔಟಾದರು. ಅಲ್ಲದೇ ದುಬಾರಿ ಬೆಲೆಗೆ ಆರ್‌ಸಿಬಿ ತಂಡಕ್ಕೆ ಬಿಕರಿಯಾದ ಕ್ಯಾಮರೂನ್‌ ಗ್ರೀನ್‌ ಕೇವಲ 6 ರನ್‌ ಗಳಿಸಿ ಪೆವಿಲಿಯನ್‌ಗೆ ಮರಳಿದರು. ಇದು ತಂಡದ ಸೋಲಿಗೆ ಕಾರಣವಾಯಿತು.

RCB 2 2

ಪಂದ್ಯದ ಸೋಲಿನ ಬಳಿಕ ಪೋಸ್ಟ್‌ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿದ ನಾಯಕ ಫಾಫ್ ಡು ಪ್ಲೆಸಿಸ್, ನಾವು ಗೆಲುವಿನ ಹಾದಿಗೆ ಮರಳಲು ಹತಾಶರಾಗಿದ್ದೇವೆ. ನಮಗೆ ನಂಬಲಸಾಧ್ಯವಾದ ಅಭಿಮಾನಿ ಬಳಗವಿದೆ. ಪ್ರತಿ ಪಂದ್ಯದಲ್ಲೂ ಗೆದ್ದರೂ ಸೋತರೂ ‌ʻಆರ್‌ಸಿಬಿ, ಆರ್‌ಸಿಬಿ ಘೋಷಣೆ ಮೊಳಗುತ್ತಲೇ ಇರುತ್ತದೆ. ಆದರೀಗ ನಮ್ಮ ಅಭಿಮಾನಿಗಳು ಹೆಮ್ಮೆಪಡುವಂತೆ ಮಾಡುದರಲ್ಲೂ ನಾವು ವಿಫಲರಾಗಿದ್ದೇವೆ ಎಂದು ಬೇಸರ ಹೊರಹಾಕಿದ್ದಾರೆ.

ಟಾಸ್ ಸೋತು ಮೊದಲು ಫೀಲ್ಡಿಂಗ್‌ಗೆ ಇಳಿದ ಆರ್‌ಸಿಬಿ ಬ್ಯಾಟಿಂಗ್ ಮಾಡುವ ಅವಕಾಶವನ್ನು ಕೋಲ್ಕತ್ತಾ ನೈಟ್‌ರೈಡರ್ಸ್‌ಗೆ ಬಿಟ್ಟುಕೊಟ್ಟಿತು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಬರೋಬ್ಬರಿ 222 ರನ್ ಬಾರಿಸಿತ್ತು. 223 ರನ್‌ಗಳ ಬೃಹತ್ ಮೊತ್ತದ ಗುರಿ ಬೆನ್ನತ್ತಿದ ಆರ್‌ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 221 ರನ್‌ ಗಳಿಸಿ ವಿರೋಚಿತ ಸೋಲನುಭವಿಸಿತು.

ಕೊನೇ ಓವರ್‌ ಥ್ರಿಲ್ಲರ್‌:
223 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಆರ್‌ಸಿಬಿ ಗೆಲುವಿಗೆ ಕೊನೇ ಓವರ್‌ನಲ್ಲಿ 21 ರನ್‌ ಅಗತ್ಯವಿತ್ತು. ಮಿಚೆಲ್‌ ಸ್ಟಾರ್ಕ್‌ ಬೌಲಿಂಗ್‌ನಲ್ಲಿದ್ದರು. ಈ ವೇಳೆ ಕ್ರೀಸ್‌ನಲ್ಲಿದ್ದ ಕರ್ಣ್‌ ಶರ್ಮಾ (Karn Sharma) ಮೊದಲ ಎಸೆತದಲ್ಲೇ ಸಿಕ್ಸರ್‌ ಬಾರಿಸಿದ್ರು. 2ನೇ ಎಸೆತದಲ್ಲಿ ರನ್‌ ಗಳಿಸುವಲ್ಲಿ ವಿಫಲರಾದರೂ 3-4ನೇ ಎಸೆತಗಳನ್ನು ಸತತವಾಗಿ ಸಿಕ್ಸರ್‌ಗೆ ಅಟ್ಟಿದರು. ಈ ವೇಳೆ ಪಂದ್ಯ ರೋಚಕ ಹಂತಕ್ಕೆ ತಿರುಗಿತ್ತು. ಡಗೌಟ್‌ನಲ್ಲಿದ್ದ ಆಟಗಾರರು ಮಾತ್ರವಲ್ಲದೇ ಅಭಿಮಾನಿಗಳಲ್ಲೂ ಹೃದಯ ಬಡಿತ ಹೆಚ್ಚಾಗಿತ್ತು. ಮೈ ರೋಮಾಂಚನಗೊಳಿಸುವಂತಿತ್ತು. ಆದ್ರೆ ಕೊನೇ 2 ಎಸೆತಗಳಲ್ಲಿ ಮೂರು ರನ್‌ಗಳ ಬೇಕಿದ್ದಾಗಲೇ ಕರ್ಣ್‌ ಶರ್ಮಾ 1 ರನ್‌ ಕದಿಯಲು ಯತ್ನಿಸಿ ಸ್ಟಾರ್ಕ್‌ಗೆ (Mitchell Starc) ಕ್ಯಾಚ್‌ ನೀಡಿ ಔಟಾದರು. ಕೊನೇ ಎಸೆತದಲ್ಲಿ ಸ್ಟ್ರೈಕ್‌ ಮಾಡಿದ ಲಾಕಿ ಫರ್ಗೂಸನ್‌ 2 ರನ್‌ ಕದಿಯಲು ಯತ್ನಿಸಿ ರನೌಟ್‌ಗೆ ತುತ್ತಾದರು. ಇದರಿಂದ ಆರ್‌ಸಿಬಿ 1 ರನ್‌ನಿಂದ ವಿರೋಚಿತ ಸೋಲಿಗೆ ತುತ್ತಾಯಿತು.

TAGGED:Dinesh KarthikFaf du PlessisKKRPhil SaltRajat patidarrcbRCB vs KKRShreyas IyerWill Jacksಆರ್‍ಸಿಬಿಕೆಕೆಆರ್ದಿನೇಶ್ ಕಾರ್ತಿಕ್ಫಾಫ್ ಡು ಪ್ಲೆಸಿಸ್ರಜತ್ ಪಾಟಿದಾರ್ವಿಲ್‌ ಜಾಕ್ಸ್‌ಶ್ರೇಯಸ್ ಅಯ್ಯರ್
Share This Article
Facebook Whatsapp Whatsapp Telegram

Cinema news

Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories

You Might Also Like

Eshwar Khandre
Bidar

ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ 1500 ಕೋಟಿ : ಈಶ್ವರ್‌ ಖಂಡ್ರೆ ಸ್ವಾಗತ

Public TV
By Public TV
6 hours ago
Raichuru fire Accident
Districts

ಕಸದ ರಾಶಿಗೆ ಹಚ್ಚಿದ್ದ ಕಿಡಿ ತಗುಲಿ ಸುಟ್ಟ ಗೋದಾಮು – ಲಕ್ಷಾಂತರ ಮೌಲ್ಯದ ಭತ್ತ, ಗೊಬ್ಬರ ಭಸ್ಮ

Public TV
By Public TV
7 hours ago
Budget 2026 Karnataka bans social media for children under 16 Siddaramaiah
Bengaluru City

ಕರ್ನಾಟಕ ಬಜೆಟ್‌| ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ ಸಾಧ್ಯವೇ?

Public TV
By Public TV
8 hours ago
liquor alcohol
Bengaluru City

ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಪರೋಕ್ಷ ಟ್ಯಾಕ್ಸ್ ಶಾಕ್

Public TV
By Public TV
9 hours ago
Bagalkote
Bagalkot

ಸತ್ತಿದ್ದ ವ್ಯಕ್ತಿ ಮತ್ತೆ ಜೀವಂತ – ಅಂತ್ಯಕ್ರಿಯೆಗೆ ಕರೆದೊಯ್ಯುವಾಗ ಮಾತಾಡಿದ್ದನ್ನು ಕಂಡು ಮನೆಯವರೇ ಶಾಕ್

Public TV
By Public TV
9 hours ago
shivamogga airport 1
Districts

ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ಫ್ಲೈಟ್ ಟ್ರೈನಿಂಗ್ ಸ್ಕೂಲ್, ಏರ್‌ಕ್ರಾಫ್ಟ್ ಅಸೆಂಬ್ಲಿ ಘಟಕ ಸ್ಥಾಪನೆಗೆ ಕ್ರಮ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?