ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ (MI vs PBKS) ನಡುವಿನ ಐಪಿಎಲ್ 2025 (IPL 2025) ಕ್ವಾಲಿಫೈಯರ್ 2 ಪಂದ್ಯವು ಮಳೆಯಿಂದಾಗಿ ವಿಳಂಬವಾಗಿದೆ.
18 ಕೋಟಿಗೆ ಸೇಲ್ ಆಗಿರುವ ಸ್ಪಿನ್ನರ್ ಯಜುವೇಂದ್ರ ಚಾಹಲ್ ತಂಡಕ್ಕೆ ಮರಳಿದ್ದಾರೆ. ಪಿಬಿಕೆಎಸ್ ನಾಯಕ ಶ್ರೇಯಸ್ ಅಯ್ಯರ್ (Shreyas Iyer) ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸಂಸದೆ ಜೊತೆ ಎಂಗೇಜ್ಮೆಂಟ್ ಆಗ್ತಿದ್ದಾರೆ ರಿಂಕು ಸಿಂಗ್ – ಕ್ರಿಕೆಟಿಗನ ಕೈ ಹಿಡಿಯೋ ಚೆಲುವೆ ಯಾರು?
ಕ್ವಾಲಿಫೈಯರ್ 1 ರಲ್ಲಿ ಪಿಬಿಕೆಎಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಲಿಸಿ ಫೈನಲ್ಗೆ ಲಗ್ಗೆಯಿಟ್ಟಿತು. ಶುಕ್ರವಾರ ನಡೆದ ರೋಮಾಂಚಕ ಎಲಿಮಿನೇಟರ್ನಲ್ಲಿ ಮುಂಬೈ ಇಂಡಿಯನ್ಸ್ ತಂಡವು ಗುಜರಾತ್ ಟೈಟಾನ್ಸ್ ಅನ್ನು ಮಣಿಸಿತು.
ಈಗ ಕ್ವಾಲಿಫೈಯರ್ 2ನಲ್ಲಿ ಪಂಜಾಬ್ ಮತ್ತು ಮುಂಬೈ ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಗೆದ್ದ ತಂಡವು ಫೈನಲ್ ಪ್ರವೇಶಿಸಿ, ಕಿರೀಟಕ್ಕೆ ಆರ್ಸಿಬಿ ವಿರುದ್ಧ ಸೆಣಸಲಿದೆ. ಭಾನುವಾರ 7:30ಕ್ಕೆ ಶುರುವಾಗಬೇಕಿದ್ದ ಪಂದ್ಯವು ಮಳೆಯಿಂದಾಗಿ ವಿಳಂಬವಾಗಿದೆ. ಇದನ್ನೂ ಓದಿ: ಇಂದು ಪಂಜಾಬ್-ಮುಂಬೈ ನಡ್ವೆ ಕ್ವಾಲಿಫೈಯರ್-2 ಕದನ – ಗೆದ್ದವರೊಂದಿಗೆ ಪ್ರಶಸ್ತಿಗಾಗಿ ಆರ್ಸಿಬಿ ಗುದ್ದಾಟ!
ಒಂದು ಗಂಟೆ ಮಳೆ ಮುಂದುವರಿದರೆ ಓವರ್ ಕಡಿತಗೊಳಿಸಲಾಗುತ್ತದೆ. 5 ಓವರ್ ಆಯ್ಕೆ ಕೂಡ ಇದೆ. ಮಳೆಯಿಂದ ಪಂದ್ಯ ರದ್ದಾದರೆ ಮುಂಬೈ ಮನೆಗೆ, ಪಂಜಾಬ್ ಫೈನಲ್ಗೆ ಹೋಗಲಿದೆ. ಮಳೆಯಿಂದ ಪಂದ್ಯ ರದ್ದಾದರೆ ಲೀಗ್ ಸುತ್ತಿನಲ್ಲಿ ಹೆಚ್ಚು ರನ್ರೇಟ್ ಹೊಂದಿರುವ ತಂಡ ಕ್ವಾಲಿಫೈ ಆಗಲಿದೆ. ಅಂಕ ಪಟ್ಟಿಯಲ್ಲಿ ಪಂಜಾಬ್ ಟಾಪ್ನಲ್ಲಿ ಇರುವುದರಿಂದ ಫೈನಲ್ ತಲುಪಲಿದೆ.