Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

IPL 2025 | ಐಪಿಎಲ್‌ ಅಖಾಡದಲ್ಲಿ ʻಇಂಪ್ಯಾಕ್ಟ್‌ʼ ವಾರ್‌, ಪರ-ವಿರೋಧ ಚರ್ಚೆ; ಏನಿದು ನಿಯಮ?

Public TV
Last updated: August 29, 2024 3:53 pm
Public TV
Share
3 Min Read
Impact Player
SHARE

ಮುಂಬೈ: ಐಪಿಎಲ್‌ ಟೂರ್ನಿಯಲ್ಲಿ ಬಳಕೆಯಾಗುತ್ತಿರುವ ಇಂಪ್ಯಾಕ್ಟ್‌ ಪ್ಲೇಯರ್‌ ನಿಮಯ (Impact Player Rule) ಮತ್ತೆ ಬಿಸಿಬಿಸಿ ಚರ್ಚೆಯಲ್ಲಿದೆ.

2024ರ ಐಪಿಎಲ್‌ ಟೂರ್ನಿ ಬಳಿಕ ರೋಹಿತ್‌ ಶರ್ಮಾ (Rohit Sharma) ಸೇರಿದಂತೆ ಅನೇಕರು ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮದ ಬಗ್ಗೆ ಆಕ್ಷೇಪ ಹೊರಹಾಕಿದ್ದರು. ಮುಂದಿನ ಐಪಿಎಲ್‌ನಲ್ಲಿ ಇಂಪ್ಯಾಕ್ಟ್‌ ನಿಯಮ ಕೈಬಿಡುವಂತೆ ಒತ್ತಾಯಗಳೂ ಕೇಳಿಬಂದಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅಧ್ಯಕ್ಷ ಅರುಣ್ ಧುಮಾಲ್, ರೋಹಿತ್‌ ಶರ್ಮಾ ಈ ಹಿಂದೆಯೂ ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮದ ನ್ಯೂನತೆ ತೋರಿಸಿದ್ದಾರೆ. ಪ್ರತಿಯೊಂದು ನಿಯಮಕ್ಕೂ ಅದರದ್ದೇ ಆದ ಸಾಧಕ ಬಾಧಕಗಳಿವೆ. ಪ್ರಸ್ತುತ ಐಪಿಎಲ್‌ ಸೀಸನ್‌ ಮುಗಿದ ಬಳಿಕ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಈ ನಿಯಮದ ಕುರಿತು ಪರಿಶೀಲಿಸಲಿದೆ ಎಂದು ಹೇಳಿದ್ದರು.

IPL 1

ಈ ನಡುವೆ ಟೀಂ ಇಂಡಿಯಾದ ಸ್ಪಿನ್‌ ಮಾಂತ್ರಿಕ ರವಿಚಂದ್ರನ್‌ ಅಶ್ವಿನ್‌ (Ravichandran Ashwin), ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮದ ಬಗ್ಗೆ ಬ್ಯಾಟ್‌ ಬೀಸಿದ್ದಾರೆ. ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮವು ತುಂಬಾ ಕೆಟ್ಟದ್ದಲ್ಲ ಅಂತ ನಾನು ಭಾವಿಸುತ್ತೇನೆ. ಈ ನಿಯಮದಿಂದ ಆಲ್‌ರೌಂಡರ್‌ಗಳನ್ನ ನಿರುತ್ಸಾಹಗೊಳಿಸುವುದಿಲ್ಲ. ಹೊಸ ತನಕ್ಕೆ ಅವಕಾಶ ನೀಡುವ ಜೊತೆಗೆ, ಆಟವನ್ನು ಇನ್ನಷ್ಟು ಉತ್ತಮಗೊಳಿಸುತ್ತದೆ ಅಂತ ಹೇಳಿದ್ದಾರೆ. ಅದಕ್ಕೆ ಉದಾಹರಣೆಯನ್ನೂ ನೀಡಿದ್ದಾರೆ.

IPL 3

2024ರ ಕ್ವಾಲಿಫೈಯರ್‌-2ರಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡ ರಾಜಸ್ಥಾನ್‌ ರಾಯಲ್ಸ್‌ (Rajasthan Royals) ತಂಡವನ್ನು ಎದುರಿಸಿತ್ತು. ಪ್ಯಾಟ್‌ ಕಮ್ಮಿನ್ಸ್‌ ನಾಯಕತ್ವದ ಸನ್‌ ರೈಸರ್ಸ್‌ (Sunrisers Hyderabad) ತಂಡವು 9 ವಿಕೆಟ್‌ಗೆ 175 ರನ್‌ ಗಳಿಸಿತ್ತು. ರಾಜಸ್ಥಾನ್‌ ತಂಡ 36 ರನ್‌ಗಳಿಂದ ಸೋಲು ಕಂಡಿತು. ಈ ಪಂದ್ಯದಲ್ಲಿ ಶಹಬಾಜ್‌ ಅಹ್ಮದ್‌ ಇಂಪ್ಯಾಕ್ಟ್‌ ಆಟಗಾರನಾಗಿ ಕಣಕ್ಕಿಳಿದಿದ್ದರು. ಬ್ಯಾಟಿಂಗ್‌ನಲ್ಲಿ 18 ರನ್‌ ಗಳಿಸಿ ಬೌಲಿಂಗ್‌ನಲ್ಲಿ 3 ಪ್ರಮುಖ ವಿಕೆಟ್‌ ಕಿತ್ತು, ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡಿದ್ದರು. ಈ ನಿಯಮ ಇರುವುದರಿಂದಲೇ ಬಹಳ ಆಟಗಾರರು ತಮ್ಮ ಪ್ರತಿಭೆ ತೋರಿಸಲು ಸಾಧ್ಯವಾಗಿದೆ. ಮುಖ್ಯವಾಗಿ ಇಂಪ್ಯಾಕ್ಟ್‌ ನಿಯಮ ಇಲ್ಲದೇ ಇದ್ದಿದ್ದರೇ, ಧ್ರುವ್‌ ಜುರೆಲ್‌, ಶಿವಂ ದುಬೆ, ಶಬಹಾಜ್‌ ಅಹ್ಮದ್‌ ಅಂತಹ ಆಟಗಾರರು ಎಂದಿಗೂ ಅವಕಾಶ ಪಡೆಯಲು ಸಾಧ್ಯವಾಗುತ್ತಿರಲಿಲ್ಲ ಎಂದು ಅಶ್ವಿನ್‌ ಹೇಳಿದ್ದಾರೆ.

ಅಲ್ಲದೇ ಡೆಲ್ಲಿ ಕ್ಯಾಪಿಟಲ್ಸ್‌ ತಂಡದಲ್ಲಿ 8ನೇ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಅಭಿಷೇಕ್‌ ಪೋರೆಲ್‌ ಇಂಪ್ಯಾಕ್ಟ್‌ ಆಟಗಾರನಾದಮೇಲೆ ಆರಂಭಿಕನಾಗಿ ಕಣಕ್ಕಿಳಿದು ಅಬ್ಬರಿಸಿದ್ದರು.

Rajasthan Royals Kolkata Knight Riders Ipl 2024 2

ಏನಿದು ಇಂಪ್ಯಾಕ್ಟ್ ಪ್ಲೇಯರ್ ನಿಯಮ?
ಇಂಪ್ಯಾಕ್ಟ್ ಪ್ಲೇಯರ್ ಎಂದರೆ ಪಂದ್ಯದ ಪರಿಸ್ಥಿತಿಗೆ ಅನುಗುಣವಾಗಿ ಉಭಯ ತಂಡಗಳು ತಮ್ಮ ತಂಡದಲ್ಲಿನ ಒಬ್ಬ ಆಟಗಾರನನ್ನು ಬದಲಿಸುವ ಅವಕಾಶ ಪಡೆಯುವುದಾಗಿದೆ. ನಿಯಮದ ಪ್ರಕಾರ ತಂಡಗಳು ತಾವು ಘೋಷಿಸಿರುವ ತಂಡದಲ್ಲಿ ಒಬ್ಬ ಬೌಲರ್ ಬದಲಿಗೆ ಒಬ್ಬ ಬ್ಯಾಟ್ಸ್‌ಮನ್ ಅಥವಾ ಒಬ್ಬ ಬ್ಯಾಟ್ಸ್​ಮನ್ ಬದಲಿಗೆ ಬೌಲರ್‌ಅನ್ನು ತಂಡಕ್ಕೆ ಸೇರಿಸಿಕೊಳ್ಳಬಹುದಾಗಿದೆ. ಇದರಿಂದ ಉಭಯ ತಂಡಗಳಿಗೆ ಒಬ್ಬ ಬ್ಯಾಟ್ಸ್‌ಮನ್‌ ಮತ್ತು ಬೌಲರ್‌ ಹೆಚ್ಚುವರಿ ಸಿಕ್ಕಂತೆ ಆಗುತ್ತದೆ. ಅಲ್ಲದೇ ಒಟ್ಟು ನಾಲ್ಕು ಜನ ಮೀಸಲು ಆಟಗಾರರು ಇರುವುದರಿಂದ ಪ್ಲೇಯಿಂಗ್‌-11 ನಲ್ಲಿರುವ ಆಟಗಾರರು ಗಾಯಕ್ಕೆ ತುತ್ತಾದಲ್ಲಿ ಮತ್ತೊಬ್ಬರನ್ನು ಫೀಲ್ಡಿಂಗ್‌ಗೆ ಬಳಸಿಕೊಳ್ಳುವ ಅವಕಾಶವೂ ಇದೆ.

IPL 2024

ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮ ಬಂದಿದ್ದು ಯಾವಾಗ?
ಆಸ್ಟ್ರೇಲಿಯಾದಲ್ಲಿ ಬಿಗ್‌ಬ್ಯಾಷ್‌ ಲೀಗ್‌ನಲ್ಲಿ ಮೊದಲು ಇಂಪ್ಯಾಕ್ಟ್ ಪ್ಲೇಯರ್‌ ನಿಯಮವನ್ನು ಪರಿಚಯಿಸಲಾಗಿತ್ತು. ಇದರಿಂದ ಸ್ಫೂರ್ತಿ ಪಡೆದ ಬಿಸಿಸಿಐ, ಐಪಿಎಲ್‌ ಟೂರ್ನಿಯಲ್ಲಿ ಅಳವಡಿಸಲು ನಿರ್ಧರಿಸಿತು. ಆದ್ರೆ ಐಪಿಎಲ್‌ಗೂ ಮುನ್ನ 2022-23ರ ಸೈಯದ್‌ ಮುಷ್ತಾಕ್ ಅಲಿ ಟಿ20 ಕ್ರಿಕೆಟ್‌ ಟೂರ್ನಿಯಲ್ಲಿ ಮೊದಲ ಬಾರಿ ಈ ನಿಯಮವನ್ನು ಅಳವಡಿಸಿಕೊಂಡು ಪ್ರಯೋಗ ನಡೆಸಿತ್ತು. ಅದು ಸಕ್ಸಸ್‌ ಆದ ನಂತರ ಕಳೆದ ಎರಡು ಆವೃತ್ತಿಗಳಿಂದ ಐಪಿಎಲ್‌ನಲ್ಲಿ ಅನುಷ್ಠಾನಕ್ಕೆ ತರಲಾಯಿತು.

BCCI

ಈ ಹಿಂದೆ ರೋಹಿತ್‌ ಶರ್ಮಾ ಹೇಳಿದ್ದೇನು?
ಇಂಪ್ಯಾಕ್ಟ್‌ ಪ್ಲೇಯರ್‌ ನಿಯಮಕ್ಕೆ ನಾನು ಅಭಿಮಾನಿಯಲ್ಲ. ಜನರಿಗೆ ಸ್ವಲ್ಪ ಮನರಂಜನೆ ನೀಡುವ ಸಲುವಾಗಿ ಪಂದ್ಯದ ದೊಡ್ಡ ಭಾಗವನ್ನು ನೀವು ತೆಗೆದುಕೊಳ್ಳುತ್ತಿದ್ದೀರಿ. ಆದರೆ, ನೀವು ಕ್ರಿಕೆಟ್‌ನ ನಿಜವಾದ ಅಂಶವನ್ನು ನೋಡುವುದಾದರೆ, ನಾನು ಕೆಲವೊಂದು ಉದಾಹರಣೆ ನೀಡುತ್ತೇನೆ. ಭಾರತ ತಂಡಕ್ಕೆ ವಾಷಿಂಗ್ಟನ್‌ ಸುಂದರ್‌, ಶಿವಂ ದುಬೆ ಅವರಂಥ ಆಟಗಾರರು ಬೌಲ್‌ ಮಾಡುವುದೇ ಇಲ್ಲ. ಹಾಗಾಗಿ ಇದು ಒಳ್ಳೆಯ ಸಂಗತಿಯಲ್ಲ. ಈ ನಿಯಮದಿಂದ ನೀವು ಏನು ಸಾಧಿಸುತ್ತೀರೋ ನನಗೆ ಗೊತ್ತಿಲ್ಲ ಎಂದು ರೋಹಿತ್‌ ಶರ್ಮಾ ತಿಳಿಸಿದ್ದರು.

TAGGED:bcciImpact Player RuleIPL 2024Ravichandran AshwinRohit SharmaTeam indiaಇಂಪ್ಯಾಕ್ಟ್‌ ಪ್ಲೇಯರ್‌ಐಪಿಎಲ್‌ 2025ಬಿಸಿಸಿಐರವಿಚಂದ್ರನ್ ಅಶ್ವಿನ್ರೋಹಿತ್ ಶರ್ಮಾ
Share This Article
Facebook Whatsapp Whatsapp Telegram

Cinema News

darshan 1
ದರ್ಶನ್ ಬಳ್ಳಾರಿ ಜರ್ನಿ – ಆ.30ರಂದು ಅರ್ಜಿ ವಿಚಾರಣೆ
Cinema Karnataka Latest Top Stories
Pushpa Deepika Das
ಯಶ್ ತಾಯಿ ಪುಷ್ಪಗೆ ದೀಪಿಕಾ ದಾಸ್ ತಿರುಗೇಟು: ಪುಷ್ಪಮ್ಮ ಹೇಳಿದ್ದೇನು?
Cinema Latest Sandalwood Top Stories
Complaint against Ramola of Bharjari Bachelors
ಭರ್ಜರಿ ಬ್ಯಾಚುಲರ‍್ಸ್ ರಮೋಲಾ ವಿರುದ್ಧ ದೂರು
Cinema Latest TV Shows
tamannaah bhatia 3
ರಾಗಿಣಿ ಎಂಎಂಎಸ್-3ಗೆ ಮಿಲ್ಕಿ ಬ್ಯೂಟಿ ನಾಯಕಿ..!?
Bollywood Cinema Latest Top Stories
Sunita Ahuja Govinda
ಬಾಲಿವುಡ್‌ ನಟ ಗೋವಿಂದ ಸಂಸಾರದಲ್ಲಿ ಬಿರುಕು; ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ
Bollywood Cinema Latest Main Post

You Might Also Like

Mask Man Chinnaiah R Ashok
Bengaluru City

ಮುಸುಕುಧಾರಿ ಮುಖ್ಯ ಅಲ್ಲ, ಇದರ ಹಿಂದೆ ಇರೋರು ಯಾರು ಅಂತ ತನಿಖೆ ಆಗ್ಬೇಕು: ಅಶೋಕ್

Public TV
By Public TV
19 minutes ago
Dharmasthala SIT 2
Dakshina Kannada

10 ದಿನಗಳ ಎಸ್‌ಐಟಿ ಕಸ್ಟಡಿಗೆ ಬುರುಡೆ ಚಿನ್ನಯ್ಯ

Public TV
By Public TV
20 minutes ago
V Narayanan 2
Latest

2035ರ ಹೊತ್ತಿಗೆ ಭಾರತ ಸ್ವಂತ ಬಾಹ್ಯಾಕಾಶ ನಿಲ್ದಾಣ ಸ್ಥಾಪಿಸಲು ಯೋಜಿಸಿದೆ: ಇಸ್ರೋ ಅಧ್ಯಕ್ಷ ವಿ. ನಾರಾಯಣನ್

Public TV
By Public TV
24 minutes ago
Dharmasthala Case brain mapping test Chinnayya SIT Dakshina Kannada SP Arun Kumar 1
Dakshina Kannada

ಚೆನ್ನಯ್ಯನಿಗೆ ಮಂಪರು ಪರೀಕ್ಷೆ ಮೊದಲೇ ನಡೆಸಿದ್ದರೆ ಗುಂಡಿ ತೋಡುವ ನಾಟಕವೇ ನಡೆಯುತ್ತಿರಲಿಲ್ಲ!

Public TV
By Public TV
35 minutes ago
g parameshwara 2
Dakshina Kannada

ಮುಸುಕುಧಾರಿ ಬಂಧನ ಆಗಿರೋದು ನಿಜ, ಇದರ ಹಿಂದಿರುವ ಜಾಲವನ್ನ ಪತ್ತೆ ಮಾಡಲಾಗುವುದು: ಪರಮೇಶ್ವರ್‌

Public TV
By Public TV
1 hour ago
Dharmasthala Mask Man
Bengaluru City

ತಮಿಳುನಾಡಿನಲ್ಲಿ ಹಣದ ಆಮಿಷವೊಡ್ಡಿ ಧರ್ಮಸ್ಥಳಕ್ಕೆ ಕರೆಸಿದ್ದರು: ಸತ್ಯ ಕಕ್ಕಿದ ಚಿನ್ನಯ್ಯ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?