ಬಾಗಲಕೋಟೆ: ಐಪಿಎಲ್ ಬೆಟ್ಟಿಂಗ್ ನಿಂದ ಸಾಲ ಮಾಡಿಕೊಂಡು ನದಿಗೆ ಹಾರಿದ ಯುವಕ ಇಂದು ಶವವಾಗಿ ಪತ್ತೆಯಾಗಿದ್ದಾನೆ.
ಸೈಯದ್ ವಾಳೆ( 38) ಮೃತನಗಿದ್ದಾನೆ. ಹಣ್ಣಿನ ವ್ಯಾಪಾರಿಯಾಗಿರುವ ಈತ ಸಾಲ ಮಾಡಿಕೊಂಡು ನದಿಗೆ ಹಾರಿ ಪ್ರಾನ ಬಿಟ್ಟಿದ್ದಾನೆ. ಮೃತನು ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮದ ನಿವಾಸಿಯಾಗಿದ್ದನು. ಈತನ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಕಾತರಕಿ ಗ್ರಾಮದ ಬಳಿಯ ಘಟಪ್ರಭಾ ನದಿಗೆ ಹಾರಿ ಸಾವನ್ನಪಿದ್ದಾನೆ. ಇದನ್ನೂ ಓದಿ: ಸರಳ ದಸರಾ – ಅರಮನೆಗೆ ಬಂದ ಜಂಬೂಸವಾರಿ
ಈತನಿಗಾಗಿ ಅಗ್ನಿಶಾಮಕ ದಳ ಸಿಬ್ಬಂದಿ, ಮೀನುಗಾರರರು ಹುಡುಕಾಟ ನಡೆಸಿದ್ದರು. ಆದರೆ ಮೃತ ಸಯ್ಯದ್ ಪತ್ರೆಯಾಗಿರಲಿಲ್ಲ. ಇಂದು ಬೆಳಿಗ್ಗೆ ನದಿಯಲ್ಲಿ ಶವ ಪತ್ತೆಯಾಗಿದೆ. ಸೈಯದ್ ಐಪಿಎಲ್ನಲ್ಲಿ ಲಕ್ಷ ಲಕ್ಷ ಬೆಟ್ಟಿಂಗ್ ಆಡಿ ಸೋತಿದ್ದ. ಹೀಗಾಗಿ 20 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಸಚಿವ ಎಸ್.ಟಿ ಸೋಮಶೇಖರ್ರಿಂದ ಡೋಲು ಬಡಿತ, ವೀರಗಾಸೆ ಕುಣಿತ
ಈ ಹಿನ್ನೆಲೆ ಸಾಲ ಕೊಟ್ಟವರ ಕಿರಿಕಿರಿ ಬೆದರಿಕೆ ಹಾಗೂ ಪಡೆದ ಸಾಲ ತೀರಿಸಲಾಗದೆ ಮನನೊಂದು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಕಲಾದಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಜೈಲೂಟ ತಿನ್ನಲು ಆರ್ಯನ್ ಪರದಾಟ – ಕ್ಯಾಂಟೀನ್ ಊಟಕ್ಕೆ ಮನಿ ಆರ್ಡರ್ ಕಳುಹಿಸಿದ ಶಾರೂಖ್