Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ದೆಹಲಿ ತಂಡದ ಕ್ರಿಕೆಟ್ ಕಿಟ್ ಕಳವು – ಬೆಂಗಳೂರಿನಲ್ಲಿ ಇಬ್ಬರ ಬಂಧನ

Public TV
Last updated: April 22, 2023 12:40 pm
Public TV
Share
3 Min Read
DEVID WARNER
SHARE

ಬೆಂಗಳೂರು: ಹದಿನಾರನೇ ಆವೃತ್ತಿಯ ಐಪಿಎಲ್ (IPL) ಟೂರ್ನಿಯ ಐದು ಪಂದ್ಯಗಳನ್ನು ಸೋತು ಕಂಗಾಲಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್ (Delhi Capitals), ಕಿಟ್ ಕೂಡ ಕಳೆದುಕೊಂಡು ಆಘಾತಕ್ಕೀಡಾಗಿತ್ತು. ಅದರಲ್ಲೂ ತಂಡದ ಎಲ್ಲಾ ಆಟಗಾರರಿಗೆ ಹೊಸ ಕಿಟ್‍ನೊಂದಿಗೆ ಏ.20ರ ಪಂದ್ಯದಲ್ಲಿ ಕೋಲ್ಕತಾ ವಿರುದ್ಧ ತನ್ನ ಮೊದಲ ಗೆಲುವನ್ನು ಸಂಭ್ರಮಿಸಿತ್ತು. ಆದರೆ ಇದೀಗ ಡೆಲ್ಲಿ ತಂಡ ಸಂಭ್ರಮ ದುಪ್ಪಟ್ಟಾಗಿದೆ. ಕಳುವಾಗಿದ್ದ ಬ್ಯಾಟ್‍ಗಳು ಮತ್ತು ಕಿಟ್‍ಗಳನ್ನು ಪತ್ತೆ ಮಾಡುವಲ್ಲಿ ಕಬ್ಬನ್ ಪಾರ್ಕ್ ಪೊಲೀಸರು (Cubbon Park Police) ಯಶಸ್ವಿಯಾಗಿದ್ದು, ಇಬ್ಬರನ್ನು ಬಂಧಿಸಿದ್ದಾರೆ.

ಕಿಟ್ ಪತ್ತೆಯಾದ ಬಗ್ಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ (David Warner) ಅಧಿಕೃತ ಮಾಹಿತಿಯನ್ನು ತಮ್ಮ ಇನ್ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ಕಳ್ಳರನ್ನು ಪತ್ತೆ ಮಾಡಲಾಗಿದೆ, ಕೆಲ ವಸ್ತುಗಳು ಇನ್ನು ಲಭ್ಯವಾಗಿಲ್ಲ, ಪೊಲೀಸರಿಗೆ ಧನ್ಯವಾದಗಳು ಎಂದು ವಾರ್ನರ್ ತಮ್ಮ ಇನ್‍ಸ್ಟಾ ವಾಲ್ ಮೇಲೆ ಶುಕ್ರವಾರ ಪ್ರಕಟಿಸಿದ್ದರು. ಇದನ್ನೂ ಓದಿ: ಜಡೇಜಾ ಜಾದು, ಕಾನ್ವೆ ಕಿಕ್‌ – ತವರಿನಲ್ಲಿ ತಿಣುಕಾಡಿ ಗೆದ್ದ ಚೆನ್ನೈ; ಹೈದರಾಬಾದ್‌ ವಿರುದ್ಧ 7 ವಿಕೆಟ್‌ಗಳ ಜಯ

DEVID WARNER 1

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಏ.15 ರಂದು ನಡೆದ ಪಂದ್ಯದಲ್ಲಿ 23 ರನ್‍ಗಳ ಸೋಲುಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ಬಳಿಕ ಮನೆಯಂಗಣಕ್ಕೆ ಹಿಂದಿರುಗಿತ್ತು. ಈ ಸಂದರ್ಭದಲ್ಲಿ ಡೆಲ್ಲಿ ವಿಮಾನ ನಿಲ್ದಾಣದಲ್ಲಿ ಡೆಲ್ಲಿ ತಂಡದ 17 ಕಿಟ್‍ಗಳು ಇಲ್ಲದಿರುವುದು ಗಮನಕ್ಕೆ ಬಂದಿತ್ತು. ಪ್ರತಿ ಕಿಟ್ ಕನಿಷ್ಠ 1 ಲಕ್ಷ ರೂ. ಬೆಲೆ ಬಾಳುತ್ತವೆ ಎಂದು ಅಂದಾಜಿಸಲಾಗಿತ್ತು. ಅದರಲ್ಲೂ ವಿದೇಶಿ ಆಟಗಾರರು ಬಳಕೆ ಮಾಡುವ ಬ್ಯಾಟ್‍ಗಳು ಒಂದು ಕನಿಷ್ಠ 1 ಲಕ್ಷ ರೂ. ಮೌಲ್ಯದ್ದು ಎಂದು ಹೇಳಲಾಗಿತ್ತು.

ಇದೀಗ ಪೊಲೀಸರ ಚುರುಕು ಕಾರ್ಯಾಚರಣೆಯಿಂದಾಗಿ ಕಳುವಾಗಿದ್ದ ಕಿಟ್‍ಗಳು ಪತ್ತೆಯಾಗಿವೆ. ಒಟ್ಟಾರೆ 17 ಬ್ಯಾಟ್‍ಗಳು, ಜೊತೆಗೆ ಗ್ಲೌಸ್, ಹೆಲ್ಮೆಟ್ ಸೇರಿ ಹಲವು ವಸ್ತುಗಳು ಪತ್ತೆ ಮಾಡುವಲ್ಲಿಯೂ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನೂ ಕೆಲ ಸಾಮಗ್ರಿಗಳು ಕಾಣಿಸುತ್ತಿಲ್ಲ ಎಂದು ಡೇವಿಡ್ ವಾರ್ನರ್ ಬರೆದುಕೊಂಡಿದ್ದಾರೆ.

ಹಳೆಯ ಕಿಟ್ ಕಳುವಾಗಿ, ಹೊಸ ಕಿಟ್‍ನೊಂದಿಗೆ ಅಂಗಳಕ್ಕಿಳಿದಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೊನೆಯ ಓವರ್‍ವರೆಗೂ ಪ್ರಯತ್ನ ನಡೆಸಿ 4 ವಿಕೆಟ್‍ಗಳ ಜಯ ದಕ್ಕಿಸಿಕೊಂಡಿತ್ತು. ಡೆಲ್ಲಿ ಕ್ಯಾಪಿಟಲ್ಸ್ ತನ್ನ ಮುಂದಿನ ಪಂದ್ಯದಲ್ಲಿ ಸನ್‍ರೈಸರ್ಸ್ ಹೈದರಾಬಾದ್ ಎದುರು ಏ.24 ರಂದು ಪೈಪೋಟಿ ನಡೆಸಲಿದೆ.

ಕಿಟ್‍ಗಳು ಕಳುವಾಗಿರುವ ವಿಚಾರ ಒಂದು ದಿನದ ಬಳಿಕ ಗಮನಕ್ಕೆ ಬಂದಿದೆ. ನಾಯಕ ಡೇವಿಡ್ ವಾರ್ನರ್ ಮತ್ತು ಸ್ಟಾರ್ ಬ್ಯಾಟರ್ ಮಿಚೆಲ್ ಸ್ಟಾರ್ಕ್ ತಲಾ 2 ಬ್ಯಾಟ್ ಕಳೆದುಕೊಂಡರೆ ಇಂಗ್ಲೆಂಡ್ ಆಟಗಾರ ಫಿಲ್ ಸಾಲ್ಟ್ ಮೂರು ಬ್ಯಾಟ್ ಕಳೆದುಕೊಂಡಿದ್ದರು. ಯುವ ಬ್ಯಾಟ್ಸ್‍ಮನ್ ಯಶ್ ಧುಲ್ 5 ಬ್ಯಾಟ್‍ಗಳನ್ನು ಕಳೆದುಕೊಂಡಿದ್ದರು ಎಂದು ಈ ಮೊದಲು ವರದಿಯಾಗಿತ್ತು. ಆಟಗಾರರ ಸರಕು ಸಾಗಾಟದ ಒಪ್ಪಂದವನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಖಾಸಗಿ ಸಂಸ್ಥೆಯೊಂದಕ್ಕೆ ನೀಡಿತ್ತು. ಹೀಗಾಗಿ ಆಟಗಾರರು ಕಿಟ್‍ಗಳ ಬಗ್ಗೆ ವೈಯಕ್ತಿಕವಾಗಿ ಗಮನ ಕೊಡುವುದಿಲ್ಲ. ಸರಕು ನಿರ್ವಹಣೆಯ ಸಂಸ್ಥೆಯು ಒಂದು ದಿನ ತಡವಾಗಿ ಕಳ್ಳತನದ ಸಂಗತಿಯನ್ನು ಡೆಲ್ಲಿ ಫ್ರಾಂಚೈಸಿಗೆ ತಿಳಿಸಿತ್ತು.

ನಂತರ ಎಚ್ಚೆತ್ತುಕೊಂಡ ಡೆಲ್ಲಿ ಫ್ರಾಂಚೈಸಿ ಪೊಲೀಸರಿಗೆ ದೂರು ನೀಡಿತ್ತು. ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಕಿಟ್ ಕಳುವಾಗಿರುವ ವಿಚಾರ ಮುಟ್ಟಿಸಿದ್ದರು. ಅಲ್ಲದೆ ಬೆಂಗಳೂರಿನಲ್ಲಿ ಕಿಟ್ ಕಳುವಾದ ಶಂಕೆಯಿಂದ ಇಲ್ಲಿನ ಪೊಲೀಸರಿಗೆ ತಂಡ ಮಾಹಿತಿ ರವಾನಿಸಿತ್ತು. ಇದರ ಫಲವಾಗಿ ಬಹುತೇಕ ವಸ್ತುಗಳನ್ನು ಮರಳಿ ಪಡೆಯಲು ಸಾಧ್ಯವಾಗಿದೆ.

ಕೆಕೆಆರ್ (KKR) ವಿರುದ್ಧದ ಪಂದ್ಯದಲ್ಲಿ ಅನುಭವಿ ವೇಗಿ ಇಶಾಂತ್ ಶರ್ಮಾ 2 ವಿಕೆಟ್ ಕಿತ್ತು ಪಂದ್ಯಶ್ರೇಷ್ಠ ಗೌರವ ಪಡೆದಿದ್ದರು. 2021ರ ಬಳಿಕ ಐಪಿಎಲ್‍ಗೆ ಮರಳಿದ್ದ ಇಶಾಂತ್ ಮೊದಲ ಪಂದ್ಯದಲ್ಲೇ ತಮ್ಮ ಅನುಭವ ಪ್ರದರ್ಶಿಸಿ ತಂಡಕ್ಕೆ ಯಶಸ್ಸು ತಂದುಕೊಟ್ಟಿದ್ದಾರೆ. ಪಂದ್ಯದಲ್ಲಿ ನಾಯಕ ಡೇವಿಡ್ ವಾರ್ನರ್ ಕೂಡ ಮನಮೋಹಕ ಅರ್ಧಶತಕ ಸಿಡಿಸಿ ಗೆಲುವಿಗೆ ಸಹಕರಿಸಿದ್ದರು. ಇದನ್ನೂ ಓದಿ: AisaCup: ಕೊನೆಗೂ ಭಾರತದ ಎದುರು ಮಂಡಿಯೂರಿದ ಪಾಕ್‌ – ICCಗೆ ಕಳಿಸಿರೋ ಪ್ರಸ್ತಾವನೆಯಲ್ಲಿ ಏನಿದೆ?

TAGGED:chinnaswamy stadiumCubbon Park PoliceDavid WarnerDelhi CapitalsIPLrcbಐಪಿಎಲ್ಕೆಕೆಆರ್ಕ್ರಿಕೆಟ್ಚಿನ್ನಸ್ವಾಮಿ ಕ್ರೀಡಾಂಗಣಡೆಲ್ಲಿ ಕ್ಯಾಪಿಟಲ್ಸ್ದೆಹಲಿ
Share This Article
Facebook Whatsapp Whatsapp Telegram

Cinema News

priya marathe
ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕಿರುತೆರೆ ನಟಿ ಪ್ರಿಯಾ ಮರಾಠೆ ನಿಧನ; 38ನೇ ವಯಸ್ಸಿಗೆ ನಟಿ ದುರಂತ ಅಂತ್ಯ
Bollywood Cinema Latest Top Stories
Kiccha Sudeep
ಚಾಮುಂಡಿ ತಾಯಿ ದರ್ಶನ ಪಡೆದ ಕಿಚ್ಚ ಸುದೀಪ್
Cinema Districts Latest Mysuru Sandalwood Top Stories
Chiranjeevi Donates Late Mother in Law Allu Kanakaratnams Eyes 2
ಅತ್ತೆಯ ಕಣ್ಣುಗಳನ್ನು ದಾನ ಮಾಡಿದ ಮೆಗಾಸ್ಟಾರ್‌ ಚಿರಂಜೀವಿ
Cinema Latest South cinema Top Stories
Darshan Pavithra Gowda 1
ಗಟ್ಟಿಯಾದ ಬ್ಲಾಂಕೆಟ್‌, ದಿಂಬು, ನೈಟ್ ಡ್ರೆಸ್ ಬೇಕು – ಜೈಲಲ್ಲಿರೋ ದರ್ಶನ್ ಹೊಸ ಬೇಡಿಕೆ
Bengaluru City Cinema Latest Top Stories
Sudeep 1
ಅಮ್ಮನ ಹೆಸರಿನಲ್ಲಿ ಸುದೀಪ್ ಹಸಿರು ಕ್ರಾಂತಿ
Cinema Latest Sandalwood

You Might Also Like

Siddaramaiah 8
Districts

ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಆಯ್ಕೆಯನ್ನ ವಿರೋಧಿಸುತ್ತಾರೆ: ಸಿದ್ದರಾಮಯ್ಯ

Public TV
By Public TV
6 minutes ago
KGF SP Shivanshu Rajput
Kolar

ಪೊಲೀಸ್‌ ಅಧಿಕಾರಿಗಳನ್ನೂ ಬಿಡದ ಸೈಬರ್‌ ವಂಚಕರು – ಕೆಜಿಎಫ್‌ ಎಸ್ಪಿ ಫೇಸ್‌ಬುಕ್‌, ಇನ್‌ಸ್ಟಾ ಖಾತೆ ನಕಲು

Public TV
By Public TV
7 minutes ago
Odisha Police
Crime

22 ವರ್ಷದ ಯುವತಿ ಮೇಲೆ ಐವರಿಂದ ಸಾಮೂಹಿಕ ಅತ್ಯಾಚಾರ

Public TV
By Public TV
24 minutes ago
Jayanth T
Dakshina Kannada

ಚಿನ್ನಯ್ಯ ಈಗ ಡಬಲ್‌ ಗೇಮ್‌ ಆಡುತ್ತಿದ್ದಾನೆ: ಜಯಂತ್‌

Public TV
By Public TV
31 minutes ago
Nelamangala Toll 1
Bengaluru Rural

ನೆಲಮಂಗಲ ಹಾಸನ ಟೋಲ್‌ನಲ್ಲಿ ವಾಹನ ಸವಾರರಿಗೆ ಬರೆ – ಸೆ.1 ರಿಂದ ದರ ಏರಿಕೆ

Public TV
By Public TV
38 minutes ago
Maharashtra Man Kills Lover Throws Body In Ditch. She Was Angry He Was Marrying Another Woman
Crime

ಮಹಾರಾಷ್ಟ್ರ | ಮತ್ತೊಬ್ಬಳನ್ನು ಮದುವೆಯಾಗುವ ಆಸೆಗೆ ಪ್ರೇಯಸಿಯನ್ನೇ ಕೊಂದ ಪ್ರಿಯಕರ

Public TV
By Public TV
58 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?