Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಡಿಕಾಕ್‌, ಹೂಡಾ ಉತ್ತಮ ಬ್ಯಾಟಿಂಗ್‌ – ಲಕ್ನೋಗೆ 20 ರನ್‌ಗಳ ಜಯ

Public TV
Last updated: April 29, 2022 11:44 pm
Public TV
Share
3 Min Read
IPL 2022 LUC VS KP 4
SHARE

ಮುಂಬೈ: 15ನೇ ಆವೃತ್ತಿಯ ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ 42ನೇ ಪಂದ್ಯದಲ್ಲಿ ಲಕ್ನೋ ತಂಡವು 20 ರನ್‌ಗಳ ಗೆಲುವು ದಾಖಲಿಸಿತು.

154 ರನ್‌ಗಳ ಗುರಿಯನ್ನು ಪಡೆದ ಪಂಜಾಬ್‌ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 133 ರನ್‌ಗಳಿಸಿ ಸೋಲನ್ನು ಒಪ್ಪಿಕೊಂಡಿತು.

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್‌ಗೆದ್ದು ಫೀಲ್ಡಿಂಗಿಳಿದ ಕಿಂಗ್ಸ್ ಪಂಜಾಬ್ ತಂಡವು ಎದುರಾಳಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ 20 ಓವರ್‌ಗಳಲ್ಲಿ 8 ವಿಕೆಟ್‌ಗಳನ್ನು ಕಳೆದುಕೊಂಡು 153 ರನ್ ಕಲೆಹಾಕಿ, ಎದುರಾಳಿ ಪಂಜಾಬ್ ತಂಡಕ್ಕೆ 154 ರನ್‌ಗಳ ಗುರಿ ನೀಡಿತ್ತು. ಇದನ್ನೂ ಓದಿ: ಸ್ಟಾರ್ ಆಲ್‍ರೌಂಡರ್ ಬೆನ್ ಸ್ಟೋಕ್ಸ್‌ಗೆ ನಾಯಕನ ಪಟ್ಟ ಕಟ್ಟಿದ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್

IPL 2022 LUC VS KP 2

ಪಂಜಾಬ್‌ ತಂಡವು ಮೊದಲ 3 ಓವರ್‌ಗಳಲ್ಲಿ ಉತ್ತಮ ಪ್ರದರ್ಶನವನ್ನೇ ನೀಡಿತು. ಪಂಜಾಬ್ ಟೀಂ ಕ್ಯಾಪ್ಟನ್ ಮಯಾಂಕ್ ಅಗರ್ವಾಲ್ 17 ಎಸೆತಗಳಲ್ಲಿ 25 ರನ್‌ಗಳಿಸಿ, 4ನೇ ಓವರ್‌ನಲ್ಲಿ ತಮ್ಮ ವಿಕೆಟ್ ಒಪ್ಪಿಸಿದರು. ಇನ್ನೂ ಕಳೆದ ಪಂದ್ಯದಲ್ಲಿ ಐಪಿಎಲ್‌ನಲ್ಲಿ ಅತಿಹೆಚ್ಚು ರನ್‌ಗಳಿಸಿ 2ನೇ ಸ್ಥಾನ ಗಳಿಸಿಕೊಂಡ ಶಿಖರ್ ಧವನ್ ನಿರೀಕ್ಷಿತ ಆಟವಾಡುವಲ್ಲಿ ವಿಫಲರಾದರು. 15 ಎಸೆತಗಳಲ್ಲಿ ಕೇವಲ 5 ರನ್ ಗಳಿಸಿ ಔಟಾದರು.

IPL 2022 LUC VS KP 2

3ನೇ ಕ್ರಮಾಂಕದಲ್ಲಿ ಬಂದ  ಜಾನಿ ಬೈರ್‌ಸ್ಟೋವ್ 28 ಎಸೆತಗಳಲ್ಲಿ 32 ರನ್‌ಗಳಿಸಿ ಉತ್ತಮ ಆಟ ಪ್ರದರ್ಶಿಸಿದರು. ಇದರಿಂದ ತಂಡದಲ್ಲಿ ಗೆಲುವಿನ ಭರವಸೆ ಚಿಗುರಿತ್ತು. 15 ಓವರ್‌ಗೆ ಪಂಜಾಬ್ ತಂಡವು 103 ರನ್‌ಗಳನ್ನು ಕಲೆಹಾಕಿತ್ತು. ಇನ್ನು 5 ಓವರ್‌ಗಳಲ್ಲಿ 51 ರನ್‌ಗಳ ಅಗತ್ಯವಿದ್ದಾಗಲೇ ಜಾನಿ ಬೈರ್‌ಸ್ಟೋವ್ ತಮ್ಮ ವಿಕೆಟ್ ಒಪ್ಪಿಸಿದರು. ಇದರಿಂದ ಪಂಜಾಬ್ ಗೆಲುವಿನ ಭರವಸೆ ಕಳೆದುಕೊಂಡಿತು. ಇದನ್ನೂ ಓದಿ: ಸಿಕ್ಸ್ ಸಿಡಿಸಿದಕ್ಕೆ ಕೋಪ – ಕ್ರೀಡಾ ಸ್ಫೂರ್ತಿ ಮರೆತ ಹರ್ಷಲ್ ಪಟೇಲ್

ನಂತರ ಬಂದ ಜೀತೇಶ್ ಶರ್ಮಾ 2 ರನ್, ಲಿಯಾಮ್ ಲಿವಿಂಗ್‌ಸ್ಟೋನ್ 18 ರನ್, ಕಗಿಸೋ ರಬಾಡ 2 ರನ್, ರಾಹುಲ್ ಚಹಾರ್ 4 ರನ್ ಗಳಿಸಿದ್ದರು. ಪ್ರಮುಖ ಬ್ಯಾಟರ್‌ಗಳನ್ನು ಕಳೆದುಕೊಂಡಿದ್ದ ಪಂಜಾಬ್ ತಂಡ 18 ಓವರ್ ಮುಗಿಯುವ ವೇಳೆಗೆ ತನ್ನ ಗೆಲುವಿನ ಸಂಪೂರ್ಣ ಭರವಸೆ ಕಳೆದುಕೊಂಡಿತು. ಕೊನೆಯ ಓವರ್‌ ವರೆಗೂ ಹೋರಾಡಿದ ರಿಷಿ ಧವನ್‌ 22 ಎಸೆತಗಳಲ್ಲಿ 21 ರನ್‌ಗಳನ್ನು ಸಿಡಿಸಿದರು.

IPL 2022 LUC VS KP 2

ರಬಾಡಾ ಬೌಲಿಂಗ್ ಕಮಾಲ್: ಆರಂಭದಿಂದಲೇ ಲಕ್ನೋ ತಂಡವನ್ನು ಮಂಕಾಗಿಸುವಲ್ಲಿ ಪಂಜಾಬ್ ತಂಡ ಯಶಸ್ವಿಯಾಯಿತು. ನಾಯಕನ ನಿರೀಕ್ಷೆಗೆ ತಕ್ಕಂತೆ ಪ್ರಮುಖ ಬ್ಯಾಟರ್‌ಗಳನ್ನು ಕಡಿಮೆ ರನ್‌ಗಳಲ್ಲೇ ಔಟಾಗಿಸಿದರು. ದಕ್ಷಿಣ ಆಫ್ರಿಕಾದ ವೇಗಿಯ ಬೌಲರ್ ಕಗಿಸೋ ರಬಾಡ 4 ಓವರ್‌ಗಳಲ್ಲಿ 38 ರನ್ ನೀಡಿದರೂ ನಾಲ್ಕು ವಿಕೆಟ್‌ಗಳನ್ನು ಕಬಳಿಸಿದರು. ಉಳಿದಂತೆ ರಾಹುಲ್ ಚಹರ್ 2 ವಿಕೆಟ್ ಮತ್ತು ಸಂದೀಪ್ ಶರ್ಮಾ ಒಂದು ವಿಕೆಟ್‌ ಪಡೆದರು. ಬೌಲಿಂಗ್‌ನಲ್ಲಿ ಲಕ್ನೋ ಬ್ಯಾಟರ್‌ಗಳನ್ನು ಉರುಳಿಸಿದ ತಂಡ ಬ್ಯಾಟಿಂಗ್‌ ವೈಫಲ್ಯದಿಂದ ಸೋಲು ಕಂಡಿತು. ಇದನ್ನೂ ಓದಿ: 6 ಸಾವಿರ ರನ್‌ಗಳ ಗಡಿ ದಾಟಿ ಐಪಿಎಲ್ `ಶಿಖರ’ವೇರಿದ ಧವನ್

IPL 2022 LUC VS KP 2

ಟಾಸ್ ಸೋತು ಮೊದಲು ಬ್ಯಾಟಿಂಗ್‌ಗಿಳಿದ ಲಕ್ನೋ ಸೂಪರ್ ಜೈಂಟ್ಸ್ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಕನ್ನಡಿಗ ಕೆ.ಎಲ್.ರಾಹುಲ್ 11 ಎಸೆತಗಳಲ್ಲಿ 6 ರನ್ ಕಲೆಹಾಕಿ ಔಟಾದರು. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡ 13 ರನ್‌ಗಳಿಗೆ ತನ್ನ ಮೊದಲ ವಿಕೆಟ್ ಕಳೆದುಕೊಂಡು ಆರಂಭದಲ್ಲೇ ಹಿನ್ನಡೆ ಅನುಭವಿಸಿತು.

IPL 2022 LUC VS KP 4

ಈ ವೇಳೆ ದಕ್ಷಿಣ ಆಫ್ರಿಕಾದ ಮತ್ತೋರ್ವ ಆಟಗಾರ ಕ್ವಿಂಟನ್ ಡಿಕಾಕ್ ಹಾಗೂ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೀಪಕ್ ಹೂಡಾ ಅವರ 85 ರನ್‌ಗಳ ಜೊತೆಯಾಟವು ತಂಡ 150 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ಕ್ವಿಂಟನ್ ಡಿ ಕಾಕ್ ತಮ್ಮ ಜವಾಬ್ದಾರಿಯುತ ಆಟದಿಂದ 46 ರನ್  (37 ಎಸೆತ, 4 ಫೋರ್‌, 2 ಸಿಕ್ಸರ್) ಗಳಿಸಿದರೆ, ದೀಪಕ್ ಹೂಡಾ 34 ರನ್  ( 28 ಎಸೆತ, 1 ಫೋರ್‌, 2 ಸಿಕ್ಸರ್) ಗಳಿಸಿ ನಿರ್ಗಮಿಸಿದರು. ಉಳಿದಂತೆ ಕೃನಾಲ್ ಪಾಂಡ್ಯ 7 ರನ್, ಮಾರ್ಕಸ್ ಸ್ಟೊಯಿನಿಸ್ 1 ರನ್, ಆಯುಷ್ ಬದೋನಿ 4 ರನ್, ಜೇಸನ್ ಹೋಲ್ಡರ್ 11 ರನ್, ದುಷ್ಮಂತ ಚಮೀರ 17 ರನ್ ಕಲೆಹಾಕಿದರೆ, ಮೊಹ್ಸಿನ್ ಖಾನ್ ಅಜೇಯ 13 ರನ್ ಹಾಗೂ ಅವೇಶ್ ಖಾನ್ ಅಜೇಯ 2 ರನ್ ದಾಖಲಿಸಿದರು.

TAGGED:cricketIPLK.L rahulkings Panjabಐಪಿಎಲ್ಕಿಂಗ್ಸ್ ಪಂಜಾಬ್ಕೆ.ಎಲ್.ರಾಹುಲ್ಕ್ರಿಕೆಟ್ಮಯಾಂಕ್‌ ಅಗರರ್ವಾಲ್‌ಲಕ್ನೋ ಸೂಪರ್ ಜೈಂಟ್ಸ್
Share This Article
Facebook Whatsapp Whatsapp Telegram

Cinema Updates

Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
3 hours ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
1 day ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
1 day ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
2 days ago

You Might Also Like

bengaluru stambede rcb
Bengaluru City

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ, 11 ಮಂದಿ ಸಾವು – ಮೃತರು ಯಾರು? ಇಲ್ಲಿದೆ ವಿವರ

Public TV
By Public TV
14 minutes ago
droupadi murmu rahul gandhi
Latest

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತ – ರಾಷ್ಟ್ರಪತಿ, ರಾಹುಲ್‌ ಗಾಂಧಿ ಸೇರಿ ಗಣ್ಯರ ಸಂತಾಪ

Public TV
By Public TV
60 minutes ago
Vijaya Mallya 1
Bengaluru City

ಆರ್‌ಸಿಬಿ ಅಭಿಮಾನಿಗಳ ಸಾವಿಗೆ ಸಂತಾಪ ಸೂಚಿಸಿದ ವಿಜಯ್‌ ಮಲ್ಯ

Public TV
By Public TV
1 hour ago
siddaramaiah
Bengaluru City

ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ: ಸಿಎಂ ಘೋಷಣೆ

Public TV
By Public TV
2 hours ago
d.k.shivakumar KPCC
Bengaluru City

ಅನ್ ಕಂಟ್ರೋಲ್ಡ್ ಕ್ರೌಡ್ ಆಯ್ತು: ಕಾಲ್ತುಳಿತದ ಬಗ್ಗೆ ಡಿಕೆಶಿ ರಿಯಾಕ್ಷನ್

Public TV
By Public TV
2 hours ago
Narendra Modi 1
Bengaluru City

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ | ಇದು ಹೃದಯ ವಿದ್ರಾವಕ ಘಟನೆ – ಮೃತರಿಗೆ ಮೋದಿ ಸಂತಾಪ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?