ನಮ್ಮ ಕುಟುಂಬ ಚೆನ್ನಾಗಿ ಇರಬೇಕು ಅಂತಾ ಹೋರಾಟ ಮಾಡುತ್ತಿದ್ದೇವೆ: ರೂಪಾ

Public TV
2 Min Read
d roopa

ಬೆಂಗಳೂರು: ನಾನು, ನನ್ನ ಗಂಡ ಇನ್ನೂ ಒಟ್ಟಾಗಿದ್ದೇವೆ. ನಮ್ಮ ಕುಟುಂಬ ಚೆನ್ನಾಗಿ ಇರಬೇಕು ಅಂತಾ ಹೋರಾಟ ಮಾಡುತ್ತಿದ್ದೇವೆ ಎಂದು ಐಪಿಎಸ್ ಅಧಿಕಾರಿ ಡಿ. ರೂಪಾ ತಿಳಿಸಿದರು.

ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಆರ್‍ಟಿಐ ಕಾರ್ಯಕರ್ತ ಗಂಗರಾಜು ಜೊತೆಗಿನ ಆಡಿಯೋ ಸಂಭಾಷಣೆ ವಿಚಾರವಾಗಿ ಸ್ಪಷ್ಟನೆ ನೀಡಿದರು. ಒಬ್ಬ ಐಎಎಸ್ ಅಧಿಕಾರಿ ಕರ್ನಾಟಕದಲ್ಲಿ ಮೃತಪಟ್ಟಿದ್ದರು, ಐಪಿಎಸ್ ಅಧಿಕಾರಿಯೊಬ್ಬರು ತಮಿಳುನಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಬ್ಬ ಐಎಎಸ್ ದಂಪತಿ ಬೇರೆ ಆಗಿದ್ದಾರೆ ಎಂದರು.

ಸುಖ-ಸಂಸಾರಗಳಿಗೆ ಅಡ್ಡಿ ಆಗುತ್ತಿರುವವರನ್ನು ಪ್ರಶ್ನೆ ಮಾಡಿ. ಇಲ್ಲವಾದರೆ, ಹಲವು ಕುಟುಂಬಗಳು ನಾಶವಾಗುತ್ತವೆ. ನಾನು ಧೈರ್ಯವಾದ ಮಹಿಳೆ, ನಾನು ಹೋರಾಡುತ್ತೇನೆ. ಎಲ್ಲ ಮಹಿಳೆಯರಿಗೂ ಆ ಶಕ್ತಿ ಇರುವುದಿಲ್ಲ. ಅಂತಹ ಮಹಿಳೆಯರಿಗೆ ಧ್ವನಿಯಾಗೋಣ. ಕೌಟುಂಬಿಕ ಮೌಲ್ಯಗಳಿಗೆ ಭಾರತ ಹೆಸರುವಾಸಿಯಾಗಿದೆ ಅದನ್ನು ಮುಂದುವರಿಸೋಣ ಎಂದು ಹೇಳಿದರು. ಇದನ್ನೂ ಓದಿ: ಗಂಗರಾಜು ಜೊತೆ ರೂಪಾ ಮಾತಾಡಿರೋ ಆಡಿಯೋ ಲೀಕ್

rohini sindhuri roopa

ನಾನು ಯಾವತ್ತೂ ಭ್ರಷ್ಟಾಚಾರ ಪರವಾಗಿ ಕೆಲಸ ಮಾಡಿಲ್ಲ. ನಾನು ಯಾವತ್ತಿಗೂ ಭ್ರಷ್ಟಾಚಾರ ವಿರುದ್ಧ ಹೋರಾಟ ಮಾಡುತ್ತೇನೆ. ಅವತ್ತು, ಇವತ್ತಿಗೂ ನಾನು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡೋಳು. ಗಂಗರಾಜುಗೆ ಭ್ರಷ್ಟಾಚಾರ ವಿರುದ್ಧ ಹೋರಾಟ ನಿಲ್ಲಿಸಲು ನಾನು ಹೇಳಿಲ್ಲ. ನಿಲ್ಲಿಸಿ ಅಂತಾ ಹೇಳಿದ್ರೆ ಅದನ್ನು ಪ್ರೂವ್ ಮಾಡಲಿ. ಅನಾವಶ್ಯಕವಾಗಿ ಆಡಿಯೋ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ರೋಹಿಣಿ ಸಿಂಧೂರಿ ಭ್ರಷ್ಟಾಚಾರದ ಬಗ್ಗೆ ಮಾತ್ರ ಚರ್ಚೆ ಆಗಲಿ. ಇಲ್ಲಿ ಕೌಟುಂಬಿಕ ಮತ್ತು ವೈಯಕ್ತಿಕ ವಿಚಾರಗಳ ಚರ್ಚೆ ಬೇಡ ಎಂದರು.

ಗಂಗರಾಜು ಮೇಲೆ ಕೂಡ ಹಲವು ಕ್ರಿಮಿನಲ್ ಕೇಸ್‍ಗಳಿವೆ. ವೈಯಕ್ತಿಕ ವಿಚಾರಗಳ ಬಗ್ಗೆ ಚರ್ಚೆ ಮಾಡುವುದಾರೆ, ಯಾವ್ಯಾವ ಐಎಎಸ್ ದಂಪತಿ ಬೇರ್ಪಟ್ಟಿದ್ದಾರೆ. ತಮಿಳುನಾಡಿನ ಯಾವ ಐಪಿಎಸ್ ಅಧಿಕಾರಿ ಆತ್ಮಹತ್ಯೆ ಯಾಕೆ ಮಾಡಿಕೊಂಡರು. ಯಾರಿಂದ ಯಾರು, ಯಾಕೆ ಆತ್ಮಹತ್ಯೆ ಮಾಡಿಕೊಂಡರು, ಇದು ಚರ್ಚೆ ಆಗಲಿ ಎಂದು ಹೇಳಿದರು. ಇದನ್ನೂ ಓದಿ: ಡಿ.ರೂಪಾ ವಿರುದ್ಧ ದೂರು, ದಾಖಲಾಗದ ಎಫ್‍ಐಆರ್- ಕೋರ್ಟ್ ಮೋರೆ ಹೋಗಿ FIRಗೆ ಸಿದ್ಧತೆ?

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *