ನಿವೃತ್ತ ಐಪಿಎಸ್ ಅಧಿಕಾರಿ ಮನೆಯಲ್ಲೇ ಚಿನ್ನಾಭರಣ ದೋಚಿದ ಖರ್ತನಾಕ್ ಕಳ್ಳರು

Public TV
0 Min Read
Home Theft

ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಎಂ ವಿ ಮೂರ್ತಿಯವರ ಮನೆಯಲ್ಲಿ ಕಳ್ಳತನ ನಡೆದಿರುವ ಘಟನೆ ನಡೆದಿದೆ.

ಹೆಚ್ ಎಸ್ ಆರ್ ಲೇಔಟ್ ನ 4 ನೇ ಸೆಕ್ಟರ್ ನಲ್ಲಿರುವ ಮೂರ್ತಿಯವರ ನಿವಾಸಸಲ್ಲಿ ಜೂನ್ 11ರ ರಾತ್ರಿ ಘಟನೆ ನಡೆದಿದ್ದು ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ.

ಕುಟುಂಬ ಸಮೇತ ಊರಿಗೆ ಹೋಗಿದ್ದಾಗ ಘಟನೆ ನಡೆದಿದ್ದು ಮನೆಯ ಕಿಟಕಿ ಸರಳುಗಳನ್ನ ಮುರಿದು ಕಳ್ಳತನ ಮಾಡಿದ್ದಾರೆ. ಸೋಫಾ ಸೆಟ್ ಜೊತೆಗೆ ಮನೆಯಲ್ಲಿದ್ದ ಚಿನ್ನಾಭರಣಗಳನ್ನ ಕಳ್ಳರು ದೋಚಿದ್ದಾರೆ.

ಹೆಚ್‍ಎಸ್‍ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *