ಟೆಹ್ರಾನ್: ಇರಾನ್ನ ಪರಮಾಣು ಶಸ್ತ್ರಾಸ್ತ್ರ ಕೇಂದ್ರ (Nuclear Plant) ಹಾಗೂ ಮಿಲಿಟರಿ ನೆಲೆಗಳ ಮೇಲೆ ಇಸ್ರೇಲ್ನ ಡಜನ್ಗಟ್ಟಲೆ ಜೆಟ್ಗಳು ಭೀಕರ ದಾಳಿ ನಡೆಸಿವೆ. ಈ ದಾಳಿಯಲ್ಲಿ ಇರಾನ್ನ ಪ್ಯಾರಾಮಿಲಿಟರಿ ರೆವಲ್ಯೂಷನರಿ ಗಾರ್ಡ್ ಮುಖ್ಯಸ್ಥ ಜನರಲ್ ಹೊಸೈನ್ ಸಲಾಮಿ (Hossein Salami) ಹತ್ಯೆಗೀಡಾಗಿದ್ದಾರೆ. ಇದರಿಂದಾಗಿ ಇಸ್ರೇಲ್ ಹಾಗೂ ಇರಾನ್ ನಡುವಣ ಸಂಘರ್ಷ ಮತ್ತಷ್ಟು ಉಲ್ಬಣಗೊಂಡಿದೆ.
ಆಪರೇಷನ್ ರೈಸಿಂಗ್ ಲಯನ್ (Rising Lion) ಕಾರ್ಯಾಚರಣೆಯಲ್ಲಿ ಇರಾನ್ನ ಅಣ್ವಸ್ತ್ರ ಹಾಗೂ ಪರಮಾಣು ಕೇಂದ್ರಗಳನ್ನು ಗುರಿಯಾಗಿಸಿ ಇಸ್ರೇಲ್ ವೈಮಾನಿಕ ದಾಳಿ (Israeli AirStrike) ನಡೆಸಿದ್ದು, ಟೆಹ್ರಾನ್ ಮೇಲಿನ ದಾಳಿಯನ್ನು ಇರಾನ್ ಖಚಿತಪಡಿಸಿದೆ. ದಾಳಿಯಲ್ಲಿ ಇರಾನ್ನ ಕ್ಷಿಪಣಿ ಕಾರ್ಖಾನೆಗಳು, ಯುರೇನಿಯಂ ಸಂಗ್ರಹಣಾ ಕೇಂದ್ರಕ್ಕೂ ಹಾನಿಯಾಗಿರುವುದು ತಿಳಿದುಬಂದಿದೆ. ಇದನ್ನೂ ಓದಿ: ಏನಿದು Unlucky Day – 13ನೇ ತಾರೀಖು, ಶುಕ್ರವಾರ ಒಟ್ಟಿಗೆ ಬಂದರೆ ಏನಾಗುತ್ತೆ?
Prime Minister Netanyahu:
“Moments ago, Israel launched Operation Rising Lion, a targeted military operation to roll back the Iranian threat to Israel’s very survival.
This operation will continue for as many days as it takes to remove this threat.” pic.twitter.com/3c8oF1GCYa
— Prime Minister of Israel (@IsraeliPM) June 13, 2025
ಇತ್ತ ಇಸ್ರೇಲ್ ಕೂಡ ಪರಮಾಣು ಶಸ್ತ್ರಾಸ್ತ್ರ ಅಭಿವೃದ್ಧಿಪಡಿಸುವುದನ್ನು ತಡೆಲು ಶುಕ್ರವಾರ ಇರಾನಿನ ಪರಮಾಣು ಕೇಂದ್ರಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ಹೇಳಿಕೊಂಡಿದೆ. ಅಲ್ಲದೇ ಇರಾನ್ 15 ಪರಮಾಣು ಬಾಂಬ್ಗಳನ್ನು ತಯಾರಿಸಲು ಸಾಕಷ್ಟು ಸಾಮಗ್ರಿಗಳನ್ನ ಸಂಗ್ರಹ ಮಾಡಿಕೊಂಡಿತ್ತು. ಇದನ್ನು ಗುರಿಯಾಗಿಸಿ ಇಸ್ರೇಲ್ ದಾಳಿ ನಡೆಸಿದೆ ಎಂದು ಇಸ್ರೇಲಿ ಮಿಲಿಟರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಸೇಡಿಗಾಗಿ ಠಾಗೂರ್ ಮನೆ ಮೇಲೆ ದಾಳಿ – 50ಕ್ಕೂ ಹೆಚ್ಚು ಜನರ ಮೇಲೆ ಕೇಸ್
𝐓𝐡𝐞 𝐈𝐃𝐅 𝐥𝐚𝐮𝐧𝐜𝐡𝐞𝐝 𝐚 𝐩𝐫𝐞𝐞𝐦𝐩𝐭𝐢𝐯𝐞, 𝐩𝐫𝐞𝐜𝐢𝐬𝐞, 𝐜𝐨𝐦𝐛𝐢𝐧𝐞𝐝 𝐨𝐟𝐟𝐞𝐧𝐬𝐢𝐯𝐞 𝐭𝐨 𝐬𝐭𝐫𝐢𝐤𝐞 𝐈𝐫𝐚𝐧’𝐬 𝐧𝐮𝐜𝐥𝐞𝐚𝐫 𝐩𝐫𝐨𝐠𝐫𝐚𝐦.
Dozens of IAF jets completed the first stage that included strikes on dozens of military targets, including… pic.twitter.com/vtx98P9564
— Israel Defense Forces (@IDF) June 13, 2025
ಪ್ಯಾರಾಮಿಲಿಟರಿ ಮುಖ್ಯಸ್ಥ, ಪರಮಾಣು ವಿಜ್ಞಾನಿಗಳು ಸಾವು
ಇನ್ನೂ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಇರಾನಿನ ಅರೆಸೇನಾ ಕ್ರಾಂತಿಕಾರಿ ಗಾರ್ಡ್ ಕಮಾಂಡರ್ ಹೊಸೇನ್ ಸಲಾಮಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಪರಮಾಣು ಯೋಜನೆಯ ಇಬ್ಬರು ವಿಜ್ಞಾನಿಗಳೂ ಹತರಾಗಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕ್ ಮಹಾನ್ ಪಾಲುದಾರ; ಪಾಕ್ ಹೊಗಳಿದ ಅಮೆರಿಕ
ಭಾರತೀಯರಿಗೆ ಎಚ್ಚರಿಕೆ…
ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಇರಾನ್ ಹಾಗೂ ಇರಾಕ್ನಲ್ಲಿ ಇರುವ ತನ್ನ ಪ್ರಜೆಗಳಿಗೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆಯನ್ನು ನೀಡಿದೆ. ಇರಾನ್ ಹಾಗೂ ಇರಾಕ್ನಲ್ಲಿನ ಭಾರತೀಯ ರಾಯಭಾರ ಕಚೇರಿಯು ಈ ಸಂಬಂಧ ಪ್ರತ್ಯೇಕ ಪ್ರಕಟಣೆ ಹೊರಡಿಸಿದ್ದು, ಭಾರತೀಯ ಪ್ರಜೆಗಳು ಜಾಗರೂಕರಾಗಿ ಇರಬೇಕು. ಅನಗತ್ಯವಾಗಿ ಹೊರಗಡೆ ಹೋಗಬಾರದು. ಸದಾ ನಮ್ಮೊಂದಿಗೆ ಸಂಪರ್ಕದಲ್ಲಿರುವಂತೆಯೂ ತಿಳಿಸಿದೆ. ಇದನ್ನೂ ಓದಿ: ಕೈಕೋಳ ಹಾಕಿ, ನೆಲಕ್ಕೆ ಕೆಡವಿ, ಹಿಂಸೆ ಕೊಟ್ಟು ಅಮೆರಿಕದಿಂದ ಭಾರತೀಯ ವಿದ್ಯಾರ್ಥಿ ಗಡೀಪಾರು