ಸಿಎಂ ಎಚ್‍ಡಿಕೆಗೆ ಶುರುವಾಯ್ತೆ ಸಹೋದರನ ಕಿರಿಕಿರಿ – ಸಮ್ಮಿಶ್ರ ಸರ್ಕಾರದ ಮೂರನೇ ಹೈಕಮಾಂಡ್ ರೇವಣ್ಣ?

Public TV
1 Min Read
hdk revanna 1

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಸಹೋದರ ರೇವಣ್ಣ ಅವರೇ ತಲೆನೋವು ಆಗಿದ್ದಾರಾ ಹೀಗೊಂದು ಪ್ರಶ್ನೆ ಈಗ ಎದ್ದಿದೆ. ಶನಿವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳು ಅಧಿಕಾರಿಗಳ ಸಭೆಯಲ್ಲಿ ರೇವಣ್ಣ ವರ್ತನೆಯಿಂದ ಈ ಪ್ರಶ್ನೆ ಹುಟ್ಟಿಕೊಂಡಿದೆ.

ಹೆಚ್‍ಡಿಕೆ ಅಧಿಕಾರಿಗಳ ಸಭೆ ಕರೆದಿದ್ದರೆ ರೇವಣ್ಣ ಅವರು ಹೋಗಿ ಕುಳಿತುಬಿಟ್ಟಿದ್ದರು. ರೇವಣ್ಣ ಮೂಗು ತೋರಿಸಿದ್ದರಿಂದ ವಿಧಾನಸೌಧದಲ್ಲಿ ಇವತ್ತು ಹೆಚ್‍ಡಿಕೆ ಮುಜುಗರ ಅನುಭವಿಸುವಂತಾಯಿತು.

ಹಾಸನ ವೈದ್ಯಕೀಯ ಕಾಲೇಜಿಗೆ ಸಂಬಂಧಪಟ್ಟ ಸಭೆ ನೆಪದಲ್ಲಿ ರೇವಣ್ಣ ಮೂರು ಸಭೆಗಳಲ್ಲಿ ಹಾಜರಿದ್ದರು. ಅಷ್ಟೇ ಅಲ್ಲದೇ ಹೆಚ್‍ಡಿಕೆ ಸುದ್ದಿಗೋಷ್ಠಿ ಕರೆದಾಗಲೂ ರೇವಣ್ಣ ಮಾತಾಡೋದಕ್ಕೆ ಶುರು ಮಾಡಿ ಸಿಎಂಗೆ ಮುಜುಗರ ತಂದಿಟ್ಟರು.

ಹಾಲಿನ ದರ ವಿಚಾರಕ್ಕೆ ಏನು ಮಾಹಿತಿ ಅದು ಅಂತಾ ಹೆಚ್‍ಡಿಕೆ ರೇವಣ್ಣ ಅವರನ್ನ ಪ್ರಶ್ನಿಸಿದರು. ಆಗ ಪ್ರೆಸ್‍ಮೀಟ್ ನಲ್ಲಿ ತಾವೇ ಮಾತಾಡಲು ರೇವಣ್ಣ ಶುರು ಮಾಡಿದ್ರು. ಈ ವೇಳೆ ಮಧ್ಯಪ್ರವೇಶ ಮಾಡಿದ ಹೆಚ್‍ಡಿಕೆ, ನೀನು ಒಂದು ಪ್ರೆಸ್‍ಮೀಟ್ ಕರೆದು ಎಲ್ಲ ಹೇಳಿಬಿಡು ಎಂದು ಹೇಳಿ ಸುಮ್ಮನಾಗಿಸಿದ್ರು.

ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಎಚ್‍ಡಿ ದೇವೇಗೌಡ ಮತ್ತು ರಾಹುಲ್ ಗಾಂಧಿ ಹೈಕಮಾಂಡ್ ಆಗಿರುವ ಜೊತೆಗೆ ಈಗ ರೇವಣ್ಣನವರ ವರ್ತನೆಯಿಂದ ಅವರು ಮೂರನೇ ಹೈಕಮಾಂಡ್ ಆಗಿದ್ದಾರಾ ಎನ್ನುವ ಪ್ರಶ್ನೆ ಈಗ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *