ಧರ್ಮ ಸಂಸದ್ ನಲ್ಲಿ ರಾಮಮಂದಿರ ಬಗ್ಗೆ ಚರ್ಚೆ ಆಗುತ್ತಾ: ತೊಗಾಡಿಯಾ ಹೇಳಿದ್ದು ಹೀಗೆ

Public TV
1 Min Read
Praveen Togadia

ಮಂಗಳೂರು: ನಗರದಲ್ಲಿ ನಡೆಯಲಿರುವ ಧರ್ಮ ಸಂಸತ್ ಕಾರ್ಯಕ್ರಮದಲ್ಲಿ ಆಯೋಧ್ಯೆ ರಾಮ ಮಂದಿರ ನಿರ್ಮಾಣ ಕುರಿತು ಚರ್ಚೆಯಾಗಲಿದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರವೀಣ್ ತೊಗಾಡಿಯಾ ಪ್ರತಿಕ್ರಿಯಿಸಿದ್ದಾರೆ.

ಮೂರು ದಿನಗಳ ಕಾಲ ನಡೆಯುವ ಉಡುಪಿ ಧರ್ಮಸಂಸತ್‍ನಲ್ಲಿ ಭಾಗವಹಿಸಲು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರವೀಣ್ ಭಾಯ್ ತೊಗಾಡಿಯಾ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಅಸ್ಪೃಶ್ಯತೆ, ಗೋ ರಕ್ಷಣೆ, ಗೋ ರಕ್ಷಣೆ ಕುರಿತ ಕಾನೂನು ಚರ್ಚೆಯಾಗಲಿದೆ. ಅಲ್ಲದೇ ರೈತರಿಗೆ ಪೂರಕ ಯೋಜನೆ ಕುರಿತ ವಿಷಯದ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ತಿಳಿಸಿದರು.

UDP DARMA SAMSATH 11 1

ಇದೇ ವೇಳೆ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಿರ್ಣಯ ಕೈಗೊಳ್ಳಲಾಗುತ್ತಾ ಎನ್ನುವ ಮಾಧ್ಯಮಗಳ ಪ್ರಶ್ನೆಗೆ, ಆಯೋಧ್ಯಾ ರಾಮ ಮಂದಿರ ನಿರ್ಮಾಣ ವಿಚಾರದ ಬಗ್ಗೆ ಚರ್ಚೆ ನಡೆಯಲಿದೆ. ಧರ್ಮ ಸಂಸತ್ ಕಾರ್ಯಕ್ರಮದಲ್ಲಿ ಈ ಬಗ್ಗೆ ತಿಳಿಸಲಾಗುವುದು ಎಂದು ಉತ್ತರಿಸಿದರು.

ಇದನ್ನೂ ಓದಿ: ಕೃಷ್ಣ ಮಠದ ಸಂಪ್ರದಾಯ ಉಲ್ಲಂಘನೆ ಮಾಡಿದ್ರಾ ಪೇಜಾವರ ಶ್ರೀ?

ಇದೇ ವೇಳೆ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ, ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರ ಬಿಡುಗಡೆಯನ್ನು ನಿಷೇಧಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: ಏನಿದು ಧರ್ಮ ಸಂಸದ್? ಈ ಬಾರಿ ಏನು ಚರ್ಚೆ ಆಗುತ್ತೆ? ಕರ್ನಾಟಕದ ಮೇಲೆ ಪರಿಣಾಮ ಬೀರುತ್ತಾ?

Praveen Togadia 1

Praveen Togadia 2

UDP DARMA SAMSATH 9

Share This Article
Leave a Comment

Leave a Reply

Your email address will not be published. Required fields are marked *