Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಷ್ಣುವರ್ಧನ್ ಪರಭಾಷಾ ನಟರಾ?: ಫಿಲ್ಮ್ ಚೇಂಬರ್ ವಿರುದ್ಧ ವೀರಕಪುತ್ರ ಶ್ರೀನಿವಾಸ್ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ವಿಷ್ಣುವರ್ಧನ್ ಪರಭಾಷಾ ನಟರಾ?: ಫಿಲ್ಮ್ ಚೇಂಬರ್ ವಿರುದ್ಧ ವೀರಕಪುತ್ರ ಶ್ರೀನಿವಾಸ್ ಆಕ್ರೋಶ

Cinema

ವಿಷ್ಣುವರ್ಧನ್ ಪರಭಾಷಾ ನಟರಾ?: ಫಿಲ್ಮ್ ಚೇಂಬರ್ ವಿರುದ್ಧ ವೀರಕಪುತ್ರ ಶ್ರೀನಿವಾಸ್ ಆಕ್ರೋಶ

Public TV
Last updated: January 28, 2023 12:44 pm
Public TV
Share
2 Min Read
FotoJet 3 41
SHARE

ಹದಿಮೂರು ವರ್ಷಗಳ ಹೋರಾಟದ ಫಲವಾಗಿ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ಮೈಸೂರಿನಲ್ಲಿ ತಲೆಯೆತ್ತಿದೆ. ಈ ಸಂಭ್ರಮವನ್ನು ಎಲ್ಲರಿಗಿಂತ ಮೊದಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಅದರ ಇತರ ಅಂಗಸಂಸ್ಥೆಗಳು ಆಚರಿಸಬೇಕಿತ್ತು. ಆದರೆ, ತಮಗೆ ಸಂಬಂಧವೇ ಇಲ್ಲದಂತೆ ಅವುಗಳು ಮೌನವಹಿಸಿವೆ. ವಿಷ್ಣುವರ್ಧನ್ ಅವರೇನು ಪರಭಾಷಾ ನಟರಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಡಾ.ವಿಷ್ಣುಸೇನಾ ಸಮಿತಿಯ ಅಧ್ಯಕ್ಷರ ವೀರಕಪುತ್ರ ಶ್ರೀನಿವಾಸ್. ಚೇಂಬರ್ ಈ ನಡೆಯನ್ನು ಅವರು ಖಂಡಿಸಿದ್ದಾರೆ.

FotoJet 1 57

‘ವಿಷ್ಣುವರ್ಧನ್ ಅವರ ವಿಷಯದಲ್ಲಿ ಮೊದಲಿನಿಂದಲೂ ಇಂಥದ್ದೊಂದು ಧೋರಣೆ ನಡೆದುಕೊಂಡು ಬಂದಿದೆ. ಕನ್ನಡ ಸಿನಿಮಾ ರಂಗಕ್ಕೆ ಯಜಮಾನರು ಕೊಟ್ಟ ಕೊಡುಗೆಯನ್ನು ಇವರಿಗೆಲ್ಲ ಯಾವ ರೀತಿಯಲ್ಲಿ ಅರ್ಥ ಮಾಡಿಸಬೇಕು ಎಂದು ಗೊತ್ತಾಗುತ್ತಿಲ್ಲ. ಸ್ಮಾರಕ ಉದ್ಘಾಟನೆಯನ್ನು ಸ್ವತಃ ಚಿತ್ರೋದ್ಯಮವೇ ಸಡಗರದಿಂದ ಮಾಡಬೇಕಿತ್ತು. ವಾಣಿಜ್ಯ ಮಂಡಳಿಯು ಮುಂದೆ ನಿಂತುಕೊಂಡು ಎಲ್ಲರಿಗೂ ಆಹ್ವಾನಿಸಿ, ಮೈಸೂರಿನಲ್ಲಿ ಸೇರುವಂತೆ ಮಾಡಬೇಕಿತ್ತು. ಆದರೆ, ಅದು ಆಗುತ್ತಿಲ್ಲ ಎನ್ನುವುದೇ ಬೇಸರ’ ಎನ್ನುತ್ತಾರೆ ವೀರಕಪುತ್ರ ಶ್ರೀನಿವಾಸ್.

FotoJet 2 49

ಹಾಗಂತ ಅಭಿಮಾನಿಗಳು ಸುಮ್ಮನಿಲ್ಲ ಎನ್ನುವುದನ್ನೂ ಶ್ರೀನಿವಾಸ್ ಹೇಳುತ್ತಾರೆ. ಜನವರಿ 29ರಂದು ನಡೆಯಲಿರುವ ವಿಷ್ಣುವರ್ಧನ್ ಸ್ಮಾರ ಲೋಕಾರ್ಪಣೆಗೆ ಅಭಿಮಾನಿಗಳು ಸರ್ವರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದ್ದಾರೆ. ಸರಕಾರವು ಸ್ಮಾರಕ ಉದ್ಘಾಟನೆಯನ್ನು ಕೇವಲ ಸರಕಾರಿ ಕಾರ್ಯಕ್ರಮದಂತೆ ಹಮ್ಮಿಕೊಂಡಿದ್ದರೆ, ವಿಷ್ಣುಸೇನಾ ಸಮಿತಿಯ ಅಸಂಖ್ಯಾತ ಅಭಿಮಾನಿಗಳು ಜಾತ್ರೆಯ ರೀತಿಯಲ್ಲಿ ಆಚರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನುತ್ತಾರೆ. ಈಗಾಗಲೇ ಸರ್ವ ರೀತಿಯಲ್ಲೂ ಅಭಿಮಾನಿಗಳು ಸ್ಮಾರಕ ಲೋಕಾರ್ಪಣೆಗೆ ರೆಡಿಯಾಗಿದ್ದು, ಬೆಂಗಳೂರು ಮೈಸೂರು ರಸ್ತೆಯಲ್ಲಿ ವಿಷ್ಣುವರ್ಧನ್ ಅವರ ಕಟೌಟ್ ಗಳು ರಾರಾಜಿಸುತ್ತಿವೆ. ರಾಜ್ಯಾದ್ಯಂತ ಗೋಡೆಗಳ ಮೇಲೆ ವಿಷ್ಣುವರ್ಧನ್ ಸ್ಮಾರಕದ  ಪೋಸ್ಟರ್ ಅಂಟಿಸಲಾಗಿದೆ. ಇಷ್ಟೇ ಅಲ್ಲದೇ ಹತ್ತು ಹಲವು ಕಾರ್ಯಕ್ರಮಗಳನ್ನು ಜನವರಿ 29 ರ ಬೆಳಗ್ಗೆಯಿಂದ ವಿಷ್ಣುಸೇನಾ ಸಮಿತಿಯ ಸದಸ್ಯರು ಹಮ್ಮಿಕೊಂಡಿದ್ದಾರೆ. ಇದನ್ನೂ ಓದಿ: ನಂದಮೂರಿ ತಾರಕ ರತ್ನಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

FotoJet 3 40

ವಿಷ್ಣುವರ್ಧನ್ ಅವರ ಸ್ಮಾರಕ ಉದ್ಘಾಟನೆಗೆ ವಾಹನ ಜಾಥಾ, ಕುಂಭಮೇಳ, ದೀಪೋತ್ಸವ, ಜಾನಪದ ಮೇಳ, ಕಟೌಟ್ ಜಾತ್ರೆ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ವೀರಕಪುತ್ರ ಶ್ರೀನಿವಾಸ್ ತಿಳಿಸಿದ್ದಾರೆ. ಜನವರಿ 29ರ ಬೆಳಗ್ಗೆ 6 ಗಂಟೆಗೆ ಬೆಂಗಳೂರಿನ ಅಭಿಮಾನ್ ಸ್ಟುಡಿಯೋ ಬಳಿ ಅಭಿಮಾನಿಗಳು ಒಟ್ಟಾಗಿ ಸೇರಲಿದ್ದು, ಅಲ್ಲಿಂದ 6.30ಕ್ಕೆ ವಾಹನ ಜಾಥಾ ನಡೆಯಲಿದೆ. ಬೆಂಗಳೂರು ಮೈಸೂರು ಮಧ್ಯೆ ಇರುವಂತಹ ಅಭಿಮಾನಿಗಳು ತಮ್ಮ ಊರಿನ ಹತ್ತಿರದ ಹೈವೆಗಳಲ್ಲಿ ಬಂದು ಜೊತೆಯಾಗಲಿದ್ದಾರೆ ಎಂದಿದ್ದಾರೆ.

FotoJet 4 32

ಒಟ್ಟು ನೂರು ಕಟೌಟ್ ಗಳು ಸ್ಮಾರಕದ ಉದ್ಘಾಟನೆಗಾಗಿಯೇ ಸಿದ್ಧಗೊಂಡಿವೆ. ಅವುಗಳು ಬೆಂಗಳೂರಿನಿಂದ ಮೈಸೂರುವರೆಗೂ ಮತ್ತು ಸ್ಮಾರಕದ ಹತ್ತಿರವೂ ತಲೆಯೆತ್ತಿ ನಿಲ್ಲಲಿವೆ. ಈಗಾಗಲೇ ಹಲವು ಕಡೆ ದುಂಡನೆಯ ಕಟೌಟ್ ಗಳನ್ನು ನಿಲ್ಲಿಸಲಾಗಿದೆ. ಜನವರಿ 29ರಂದು ವಾಹನ ಇಲ್ಲದವರಿಗಾಗಿಯೇ ಒಟ್ಟು ಹತ್ತು ಬಸ್ ಗಳನ್ನು ಆಯೋಜನೆ ಮಾಡಲಾಗಿದೆ. ಐದು ಬಸ್ ಗಳಲ್ಲಿ ಕುಂಭ ಹೊರುವ ಮತ್ತು ದೀಪೋತ್ಸವದಲ್ಲಿ ಭಾಗಿ ಆಗುವ ಹೆಣ್ಣುಮಕ್ಕಳಿಗೆ ಮೀಸಲಿಡಲಾಗಿದೆ. ಇನ್ನೂ ಐದು ಬಸ್ ಗಳು ವಾಹನ ಇಲ್ಲದವರಿಗಾಗಿ ಕಾದಿರುತ್ತವೆ.

FotoJet 76

ಎಲ್ಲರೂ ಮೈಸೂರಿನಲ್ಲಿ ಒಟ್ಟಾಗಿ ಅಲ್ಲಿಂದ ಮೂರು ಕೀಲೋ ಮೀಟರ್ ಜಾಥಾ ಹಮ್ಮಿಕೊಂಡು ಸ್ಮಾರಕ ತಲುಪಲಾಗುತ್ತದೆ. ಈ ಜಾಥಾದಲ್ಲಿ ವಿಷ್ಣುವರ್ಧನ್ ಅವರ ಗೀತೆಗಳು, ಜಾನಪದ ನೃತ್ಯ, ಜಾನಪದ ಕಲೆಗಳನ್ನು ಬಿಂಬಿಸುವಂತಹ ಯೋಜನೆ ಸಿದ್ಧವಾಗಿದೆ. ಕುಂಭಮೇಳದೊಂದಿಗೆ ಮಹಿಳೆಯರು ಕೂಡ ಜಾಥಾದಲ್ಲಿ ಹೆಜ್ಜೆ ಹಾಕಲಿದ್ದಾರೆ. ಜನವರಿ 29ರಂದು ಮೈಸೂರಿನಲ್ಲಿ ವಿಷ್ಣು ಜಾತ್ರೆಯೇ ನಡೆಯಲಿದೆ ಎಂದು ವೀರಕಪುತ್ರ ಶ್ರೀನಿವಾಸ್ ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:MemorialmysoreVeerakaputra SrinivasVishnuvardhanಮೈಸೂರುವಾಣಿಜ್ಯ ಮಂಡಳಿವಿಷ್ಣುವರ್ಧನ್ವೀರಕಪುತ್ರ ಶ್ರೀನಿವಾಸ್ಸ್ಮಾರಕ
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

Hassan Son Kills Father
Crime

ಕೌಟುಂಬಿಕ ಕಲಹ – ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹತ್ಯೆಗೈದ ಪುತ್ರ

Public TV
By Public TV
7 minutes ago
Karwar
Crime

JDS ಮುಖಂಡೆ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ ಕೇಸ್‌ – ಆರೋಪಿ ಎಸ್ಕೇಪ್‌

Public TV
By Public TV
9 minutes ago
Saifullah Kasuri
Latest

ಭಾರತಕ್ಕೆ ನನ್ನನ್ನು ಕಂಡರೆ ಭಯ, ಪಾಕ್‌ ಸೇನೆಯಿಂದ ನನಗೆ ಆಹ್ವಾನ – ಪಹಲ್ಗಾಮ್ ಸಂಚುಕೋರನಿಂದ ಪುಂಗಿ

Public TV
By Public TV
27 minutes ago
Priyank Kharge 2
Districts

JDS ಪಾರ್ಟಿಯನ್ನೇ ಮಾರಾಟಕ್ಕಿಟ್ಟಿದ್ದಾರೆ – ಪ್ರಿಯಾಂಕ್‌ ಖರ್ಗೆ ಲೇವಡಿ

Public TV
By Public TV
32 minutes ago
gadag
Districts

ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ – ಗುಪ್ತ ʻನಿಧಿʼಯ ವಾರಸುದಾರರು ಯಾರು? ಪತ್ತೆ ಹಚ್ಚಿದವರಿಗೂ ಸಿಗಬೇಕಾ ಪಾಲು?

Public TV
By Public TV
49 minutes ago
Assistant Professor Annapoorna
Dharwad

ಅಂಡಮಾನ್‌ ಪ್ರವಾಸಕ್ಕೆ ತೆರಳಿದ್ದ ಧಾರವಾಡದ ಪ್ರೊಫೆಸರ್ ಹೃದಯಾಘಾತಕ್ಕೆ ಬಲಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?