Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಷ್ಣುವರ್ಧನ್ ಪರಭಾಷಾ ನಟರಾ?: ಫಿಲ್ಮ್ ಚೇಂಬರ್ ವಿರುದ್ಧ ವೀರಕಪುತ್ರ ಶ್ರೀನಿವಾಸ್ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ವಿಷ್ಣುವರ್ಧನ್ ಪರಭಾಷಾ ನಟರಾ?: ಫಿಲ್ಮ್ ಚೇಂಬರ್ ವಿರುದ್ಧ ವೀರಕಪುತ್ರ ಶ್ರೀನಿವಾಸ್ ಆಕ್ರೋಶ

Cinema

ವಿಷ್ಣುವರ್ಧನ್ ಪರಭಾಷಾ ನಟರಾ?: ಫಿಲ್ಮ್ ಚೇಂಬರ್ ವಿರುದ್ಧ ವೀರಕಪುತ್ರ ಶ್ರೀನಿವಾಸ್ ಆಕ್ರೋಶ

Public TV
Last updated: January 28, 2023 12:44 pm
Public TV
Share
2 Min Read
FotoJet 3 41
SHARE

ಹದಿಮೂರು ವರ್ಷಗಳ ಹೋರಾಟದ ಫಲವಾಗಿ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ಮೈಸೂರಿನಲ್ಲಿ ತಲೆಯೆತ್ತಿದೆ. ಈ ಸಂಭ್ರಮವನ್ನು ಎಲ್ಲರಿಗಿಂತ ಮೊದಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಅದರ ಇತರ ಅಂಗಸಂಸ್ಥೆಗಳು ಆಚರಿಸಬೇಕಿತ್ತು. ಆದರೆ, ತಮಗೆ ಸಂಬಂಧವೇ ಇಲ್ಲದಂತೆ ಅವುಗಳು ಮೌನವಹಿಸಿವೆ. ವಿಷ್ಣುವರ್ಧನ್ ಅವರೇನು ಪರಭಾಷಾ ನಟರಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಡಾ.ವಿಷ್ಣುಸೇನಾ ಸಮಿತಿಯ ಅಧ್ಯಕ್ಷರ ವೀರಕಪುತ್ರ ಶ್ರೀನಿವಾಸ್. ಚೇಂಬರ್ ಈ ನಡೆಯನ್ನು ಅವರು ಖಂಡಿಸಿದ್ದಾರೆ.

FotoJet 1 57

‘ವಿಷ್ಣುವರ್ಧನ್ ಅವರ ವಿಷಯದಲ್ಲಿ ಮೊದಲಿನಿಂದಲೂ ಇಂಥದ್ದೊಂದು ಧೋರಣೆ ನಡೆದುಕೊಂಡು ಬಂದಿದೆ. ಕನ್ನಡ ಸಿನಿಮಾ ರಂಗಕ್ಕೆ ಯಜಮಾನರು ಕೊಟ್ಟ ಕೊಡುಗೆಯನ್ನು ಇವರಿಗೆಲ್ಲ ಯಾವ ರೀತಿಯಲ್ಲಿ ಅರ್ಥ ಮಾಡಿಸಬೇಕು ಎಂದು ಗೊತ್ತಾಗುತ್ತಿಲ್ಲ. ಸ್ಮಾರಕ ಉದ್ಘಾಟನೆಯನ್ನು ಸ್ವತಃ ಚಿತ್ರೋದ್ಯಮವೇ ಸಡಗರದಿಂದ ಮಾಡಬೇಕಿತ್ತು. ವಾಣಿಜ್ಯ ಮಂಡಳಿಯು ಮುಂದೆ ನಿಂತುಕೊಂಡು ಎಲ್ಲರಿಗೂ ಆಹ್ವಾನಿಸಿ, ಮೈಸೂರಿನಲ್ಲಿ ಸೇರುವಂತೆ ಮಾಡಬೇಕಿತ್ತು. ಆದರೆ, ಅದು ಆಗುತ್ತಿಲ್ಲ ಎನ್ನುವುದೇ ಬೇಸರ’ ಎನ್ನುತ್ತಾರೆ ವೀರಕಪುತ್ರ ಶ್ರೀನಿವಾಸ್.

FotoJet 2 49

ಹಾಗಂತ ಅಭಿಮಾನಿಗಳು ಸುಮ್ಮನಿಲ್ಲ ಎನ್ನುವುದನ್ನೂ ಶ್ರೀನಿವಾಸ್ ಹೇಳುತ್ತಾರೆ. ಜನವರಿ 29ರಂದು ನಡೆಯಲಿರುವ ವಿಷ್ಣುವರ್ಧನ್ ಸ್ಮಾರ ಲೋಕಾರ್ಪಣೆಗೆ ಅಭಿಮಾನಿಗಳು ಸರ್ವರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದ್ದಾರೆ. ಸರಕಾರವು ಸ್ಮಾರಕ ಉದ್ಘಾಟನೆಯನ್ನು ಕೇವಲ ಸರಕಾರಿ ಕಾರ್ಯಕ್ರಮದಂತೆ ಹಮ್ಮಿಕೊಂಡಿದ್ದರೆ, ವಿಷ್ಣುಸೇನಾ ಸಮಿತಿಯ ಅಸಂಖ್ಯಾತ ಅಭಿಮಾನಿಗಳು ಜಾತ್ರೆಯ ರೀತಿಯಲ್ಲಿ ಆಚರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನುತ್ತಾರೆ. ಈಗಾಗಲೇ ಸರ್ವ ರೀತಿಯಲ್ಲೂ ಅಭಿಮಾನಿಗಳು ಸ್ಮಾರಕ ಲೋಕಾರ್ಪಣೆಗೆ ರೆಡಿಯಾಗಿದ್ದು, ಬೆಂಗಳೂರು ಮೈಸೂರು ರಸ್ತೆಯಲ್ಲಿ ವಿಷ್ಣುವರ್ಧನ್ ಅವರ ಕಟೌಟ್ ಗಳು ರಾರಾಜಿಸುತ್ತಿವೆ. ರಾಜ್ಯಾದ್ಯಂತ ಗೋಡೆಗಳ ಮೇಲೆ ವಿಷ್ಣುವರ್ಧನ್ ಸ್ಮಾರಕದ  ಪೋಸ್ಟರ್ ಅಂಟಿಸಲಾಗಿದೆ. ಇಷ್ಟೇ ಅಲ್ಲದೇ ಹತ್ತು ಹಲವು ಕಾರ್ಯಕ್ರಮಗಳನ್ನು ಜನವರಿ 29 ರ ಬೆಳಗ್ಗೆಯಿಂದ ವಿಷ್ಣುಸೇನಾ ಸಮಿತಿಯ ಸದಸ್ಯರು ಹಮ್ಮಿಕೊಂಡಿದ್ದಾರೆ. ಇದನ್ನೂ ಓದಿ: ನಂದಮೂರಿ ತಾರಕ ರತ್ನಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

FotoJet 3 40

ವಿಷ್ಣುವರ್ಧನ್ ಅವರ ಸ್ಮಾರಕ ಉದ್ಘಾಟನೆಗೆ ವಾಹನ ಜಾಥಾ, ಕುಂಭಮೇಳ, ದೀಪೋತ್ಸವ, ಜಾನಪದ ಮೇಳ, ಕಟೌಟ್ ಜಾತ್ರೆ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ವೀರಕಪುತ್ರ ಶ್ರೀನಿವಾಸ್ ತಿಳಿಸಿದ್ದಾರೆ. ಜನವರಿ 29ರ ಬೆಳಗ್ಗೆ 6 ಗಂಟೆಗೆ ಬೆಂಗಳೂರಿನ ಅಭಿಮಾನ್ ಸ್ಟುಡಿಯೋ ಬಳಿ ಅಭಿಮಾನಿಗಳು ಒಟ್ಟಾಗಿ ಸೇರಲಿದ್ದು, ಅಲ್ಲಿಂದ 6.30ಕ್ಕೆ ವಾಹನ ಜಾಥಾ ನಡೆಯಲಿದೆ. ಬೆಂಗಳೂರು ಮೈಸೂರು ಮಧ್ಯೆ ಇರುವಂತಹ ಅಭಿಮಾನಿಗಳು ತಮ್ಮ ಊರಿನ ಹತ್ತಿರದ ಹೈವೆಗಳಲ್ಲಿ ಬಂದು ಜೊತೆಯಾಗಲಿದ್ದಾರೆ ಎಂದಿದ್ದಾರೆ.

FotoJet 4 32

ಒಟ್ಟು ನೂರು ಕಟೌಟ್ ಗಳು ಸ್ಮಾರಕದ ಉದ್ಘಾಟನೆಗಾಗಿಯೇ ಸಿದ್ಧಗೊಂಡಿವೆ. ಅವುಗಳು ಬೆಂಗಳೂರಿನಿಂದ ಮೈಸೂರುವರೆಗೂ ಮತ್ತು ಸ್ಮಾರಕದ ಹತ್ತಿರವೂ ತಲೆಯೆತ್ತಿ ನಿಲ್ಲಲಿವೆ. ಈಗಾಗಲೇ ಹಲವು ಕಡೆ ದುಂಡನೆಯ ಕಟೌಟ್ ಗಳನ್ನು ನಿಲ್ಲಿಸಲಾಗಿದೆ. ಜನವರಿ 29ರಂದು ವಾಹನ ಇಲ್ಲದವರಿಗಾಗಿಯೇ ಒಟ್ಟು ಹತ್ತು ಬಸ್ ಗಳನ್ನು ಆಯೋಜನೆ ಮಾಡಲಾಗಿದೆ. ಐದು ಬಸ್ ಗಳಲ್ಲಿ ಕುಂಭ ಹೊರುವ ಮತ್ತು ದೀಪೋತ್ಸವದಲ್ಲಿ ಭಾಗಿ ಆಗುವ ಹೆಣ್ಣುಮಕ್ಕಳಿಗೆ ಮೀಸಲಿಡಲಾಗಿದೆ. ಇನ್ನೂ ಐದು ಬಸ್ ಗಳು ವಾಹನ ಇಲ್ಲದವರಿಗಾಗಿ ಕಾದಿರುತ್ತವೆ.

FotoJet 76

ಎಲ್ಲರೂ ಮೈಸೂರಿನಲ್ಲಿ ಒಟ್ಟಾಗಿ ಅಲ್ಲಿಂದ ಮೂರು ಕೀಲೋ ಮೀಟರ್ ಜಾಥಾ ಹಮ್ಮಿಕೊಂಡು ಸ್ಮಾರಕ ತಲುಪಲಾಗುತ್ತದೆ. ಈ ಜಾಥಾದಲ್ಲಿ ವಿಷ್ಣುವರ್ಧನ್ ಅವರ ಗೀತೆಗಳು, ಜಾನಪದ ನೃತ್ಯ, ಜಾನಪದ ಕಲೆಗಳನ್ನು ಬಿಂಬಿಸುವಂತಹ ಯೋಜನೆ ಸಿದ್ಧವಾಗಿದೆ. ಕುಂಭಮೇಳದೊಂದಿಗೆ ಮಹಿಳೆಯರು ಕೂಡ ಜಾಥಾದಲ್ಲಿ ಹೆಜ್ಜೆ ಹಾಕಲಿದ್ದಾರೆ. ಜನವರಿ 29ರಂದು ಮೈಸೂರಿನಲ್ಲಿ ವಿಷ್ಣು ಜಾತ್ರೆಯೇ ನಡೆಯಲಿದೆ ಎಂದು ವೀರಕಪುತ್ರ ಶ್ರೀನಿವಾಸ್ ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:MemorialmysoreVeerakaputra SrinivasVishnuvardhanಮೈಸೂರುವಾಣಿಜ್ಯ ಮಂಡಳಿವಿಷ್ಣುವರ್ಧನ್ವೀರಕಪುತ್ರ ಶ್ರೀನಿವಾಸ್ಸ್ಮಾರಕ
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

tulsi gabbard
Latest

ಅಮೆರಿಕಕ್ಕೆ ಪಾಕಿಸ್ತಾನದಿಂದ ಪರಮಾಣು ಬೆದರಿಕೆಯಿದೆ: ಗುಪ್ತಚರ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್

Public TV
By Public TV
33 minutes ago
Parappana agrahara 1
Bengaluru City

ಜೈಲಿನಲ್ಲಿ ಮಹಿಳಾ ಖೈದಿಗಳ ಡ್ರಗ್ಸ್ ಟೆಸ್ಟ್ ಪಾಸಿಟಿವ್ ರಿಪೋರ್ಟ್ – ಅಧಿಕಾರಿಗಳೇ ಶಾಕ್

Public TV
By Public TV
1 hour ago
Bagalkote by election CM Siddaramaiah meeting with HY Meti Family
Bagalkot

ಉಪಚುನಾವಣೆ| ಸಿಎಂ ಕಚೇರಿಯಲ್ಲಿ ಸಂಧಾನ ಸಭೆಗೆ ವ್ಯಾಪಕ ಟೀಕೆ

Public TV
By Public TV
1 hour ago
Kalaburagi Dharwad Benches of the High Court
Districts

ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಕೇಸ್ – ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ

Public TV
By Public TV
1 hour ago
HD Devegowda Mallikarjun Kharge
Bengaluru City

ಕಾಂಗ್ರೆಸ್‌ ಜೊತೆ ಬಲವಂತದ ಮದುವೆಯಲ್ಲಿದ್ದೆ, ನಮ್ಮನ್ನು ಬಿಟ್ಟು ಹೋಗಿದ್ದಕ್ಕೆ ವಿಚ್ಛೇದನ ನೀಡಿದ್ದೇನೆ: ಹೆಚ್‌ಡಿಡಿ ತಿರುಗೇಟು

Public TV
By Public TV
2 hours ago
ಸಾಂದರ್ಭಿಕ ಚಿತ್ರ
Bengaluru City

ಯುಗಾದಿಗೆ `ಗೃಹಲಕ್ಷ್ಮಿ’ಯರಿಗೆ ಗುಡ್‌ನ್ಯೂಸ್ – 27ನೇ ಕಂತಿನ ಹಣ ಬಿಡುಗಡೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?