ಶಾರುಖ್ ಖಾನ್ (Shah Rukh Khan) ನಟನೆಯ ‘ಪಠಾಣ್’ (Pathan) ಸಿನಿಮಾ ಎಲ್ಲ ಅಡೆತಡೆಗಳನ್ನು ನೂಕಿಕೊಂಡು ಭಾರೀ ಗೆಲುವಿನತ್ತ ಹೆಜ್ಜೆ ಹಾಕಿದೆ. ರಿಲೀಸ್ ಆದ ಮೂರೇ ಮೂರು ದಿನಕ್ಕೆ 150 ಕೋಟಿಗೂ ಅಧಿಕ ಹಣವನ್ನು ಬಾಕ್ಸ್ ಆಫೀಸಿನಿಂದ ಕೊಳ್ಳೆ ಹೊಡೆದಿದೆ. ಈ ಹೊತ್ತಿನಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್ (Kangana Ranaut) ಶಾಕಿಂಗ್ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಪಠಾಣ್ ಸಿನಿಮಾ ಈ ಪ್ರಮಾಣದಲ್ಲಿ ಗೆಲ್ಲಲು ಐ.ಎಸ್.ಐ (ISI) ಕಾರಣವೆಂದು ಮಾತನಾಡಿದ್ದಾರೆ.
ಪಠಾಣ್ ಸಿನಿಮಾ ಬಾಯ್ಕಾಟ್ ಕಾರಣದಿಂದಾಗಿ ಬಾಕ್ಸ್ ಆಫೀಸಿನಲ್ಲಿ ಮಕಾಡೆ ಮಲಗಲಿದೆ ಎಂದು ಹೇಳಲಾಗಿತ್ತು. ಹಿಂದೂಪರ ಸಂಘಟನೆಗಳು ಅಲ್ಲಲ್ಲಿ ಗಲಾಟೆ ಮಾಡಿ, ಚಿತ್ರಕ್ಕೆ ಅಡ್ಡಿ ಪಡಿಸಿದರು. ಕೆಲವು ಕಡೆ ಸಿನಿಮಾ ರಿಲೀಸ್ ಆಗದಂತೆ ನೋಡಿಕೊಂಡರು. ಕೆಲವು ರಾಜ್ಯಗಳು ಸಿನಿಮಾ ರಿಲೀಸ್ ಆಗದಂತೆ ನೋಡಿಕೊಂಡವು. ಆದರೆ, ಪಠಾಣ್ ಚಿತ್ರವನ್ನು ಕಟ್ಟಿಹಾಕುವುದಕ್ಕೆ ಸಾಧ್ಯವಾಗಲೇ ಇಲ್ಲ. ಇದನ್ನೂ ಓದಿ: ನಂದಮೂರಿ ತಾರಕ ರತ್ನಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
ನಿರೀಕ್ಷೆಗೂ ಮೀರಿ ಪಠಾಣ್ ಸಿನಿಮಾ ಗೆದ್ದಿರುವುದಕ್ಕೆ ದಿನಕ್ಕೊಂದು ಕಾರಣವನ್ನು ಕೊಡುತ್ತಿದ್ದಾರೆ ಕಂಗನಾ ರಣಾವತ್. ಐಎಸ್ಐ ಕೈವಾಡ ಸೇರಿದಂತೆ ಅನೇಕ ಆರೋಪಗಳನ್ನು ಅವರು ಮಾಡಿದ್ದಾರೆ. ಆದರೆ, ಶಾರುಖ್ ಮಾತ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಗೆಲುವಿಗೆ ಕಾರಣರಾದ ಎಲ್ಲರಿಗೂ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ. ತಾನೊಂದು ದೇಶಭಕ್ತಿ ಸಾರುವಂತಹ ಚಿತ್ರ ನೀಡಿರುವುದಾಗಿ ಅವರು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k