ವಾಷಿಂಗ್ಟನ್: ಒಂದು ಕಡೆ ಇರಾನ್ (Iran) ಸೇನೆಯ ಟಾಪ್ ಕಮಾಂಡರ್, ಮುಖ್ಯಸ್ಥರು, ವಿಜ್ಞಾನಿಗಳನ್ನು ಇಸ್ರೆಲ್ (Isreal) ಹತ್ಯೆ ಮಾಡುತ್ತಿದ್ದಂತೆ ಇನ್ನೊಂದು ಕಡೆ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಸಂಭಾವ್ಯ ಉತ್ತರಾಧಿಕಾರಿಗಳಾಗಿ ಮೂವರು ಹಿರಿಯ ಧರ್ಮಗುರುಗಳ ಹೆಸರನ್ನು ಸೂಚಿಸಿದ್ದಾರೆ.
ಇಸ್ರೇಲ್ ಈಗಾಗಲೇ ಅಯತೊಲ್ಲಾ ಅಲಿ ಖಮೇನಿ ಹತ್ಯೆಯೊಂದಿಗೆ ಯುದ್ಧವನ್ನು ಕೊನೆಗೊಳಿಸುವುದಾಗಿ ಶಪಥ ಮಾಡಿದೆ. ಈ ಶಪಥ ಮಾಡಿದ ಬೆನ್ನಲ್ಲೇ ಖಮೇನಿ ತಾವು ಅಡಗಿರುವ ಬಂಕರ್ನಿಂದಲೇ (Bunker) ಮೂವರ ಹೆಸರನ್ನು ಫೈನಲ್ ಮಾಡಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಇದನ್ನೂ ಓದಿ: 1 ಸಾವಿರ ಕಿ.ಮೀ. ದೂರದಿಂದ ದಾಳಿ – ಕಾರಿನಲ್ಲಿ ಹೋಗುತ್ತಿದ್ದಾಗಲೇ ಇರಾನ್ ಟಾಪ್ ಸೇನಾ ನಾಯಕ ಹತ್ಯೆ
ಇಸ್ರೇಲ್ ಜೊತೆ ನಡೆಯುತ್ತಿರುವ ಸಂಘರ್ಷದಲ್ಲಿ ಒಂದು ವೇಳೆ ಖಮೇನಿ ಸಾವನಪ್ಪಿದ್ದಾರೆ ಮಗ ಮೊಜ್ತಬಾ ಅವರನ್ನು ಆಯ್ಕೆ ಮಾಡಬಹುದು ಎಂಬ ಸುದ್ದಿ ಈ ಹಿಂದೆ ಹರಿದಾಡಿತ್ತು. ಆದರೆ ಈಗ ಮೂವರು ಧರ್ಮಗುರುಗಳ ಪೈಕಿ ಒಬ್ಬರನ್ನು ಆಯ್ಕೆ ಮಾಡುವಂತೆ ತಮ್ಮ ಆಪ್ತ ವಲಯಕ್ಕೆ ಸೂಚಿಸಿದ್ದಾರೆ.
ಸಾಮಾನ್ಯವಾಗಿ ಸರ್ವೋಚ್ಚ ನಾಯಕನ ನೇಮಕ ಪ್ರಕ್ರಿಯೆ ಒಂದು ತಿಂಗಳು ಅಥವಾ ಅದಕ್ಕಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಬಹಳ ಗಂಭೀರವಾಗಿ ಚರ್ಚೆ ನಡೆಸಿದ ಬಳಿಕ ಅಂತಿಮವಾಗಿ ಒಬ್ಬರನ್ನು ಆಯ್ಕೆ ಮಾಡಲಾಗುತ್ತದೆ. ಇದನ್ನೂ ಓದಿ: ಒಂದು ಕಾಲದಲ್ಲಿ ಕುಚಿಕು ದೋಸ್ತಿಗಳಾಗಿದ್ದ ಇರಾನ್-ಇಸ್ರೇಲ್ ಈಗ ಬದ್ಧವೈರಿಗಳಂತೆ ಕಚ್ಚಾಡುತ್ತಿರೋದ್ಯಾಕೆ?
ದೇಶವು ಈಗ ಯುದ್ಧದ ಮಧ್ಯದಲ್ಲಿರುವುದರಿಂದ ಇರಾನ್ನ್ನು ರಾಷ್ಟ್ರವಾಗಿ ಮತ್ತು ತಮ್ಮ ಪರಂಪರೆಯನ್ನು ಉಳಿಸಿಕೊಳ್ಳಲು ಶೀಘ್ರವೇ ಉತ್ತರಾಧಿಕಾರಿಯನ್ನು ನೇಮಿಸುವಂತೆ ಖಮೇನಿ ತಮ್ಮ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.