– ವಿದೇಶಿ ಪ್ರವಾಸಿಗರ ಮೇಲೆ ಹಲ್ಲೆ ನಡೆಸಿ ಕಾಲುವೆಗೆ ತಳ್ಳಿದ ದುರುಳರು
ಕೊಪ್ಪಳ: ವಿದೇಶಿ ಮತ್ತು ದೇಶಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳ ಅಟ್ಟಹಾಸ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಇಸ್ರೇಲ್ ದೇಶದ ಮಹಿಳೆ ಮತ್ತು ಸ್ಥಳೀಯ ಹೋಮ್ ಸ್ಟೇ ಮಾಲೀಕೆ ಮೇಲೆ ಕೆಲ ದುರುಳರು ಸಾಮೂಹಿಕ ಅತ್ಯಾಚಾರ ನಡೆಸಿರುವ ಆರೋಪ ಕೇಳಿಬಂದಿದೆ.
Advertisement
ಈ ಸಂಬಂಧ ನಿನ್ನೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ನಿನ್ನೆ ಮೆಡಿಕಲ್ ಮಾಡಿಸಿದ್ದಾರೆ. ಮೊನ್ನೆ ರಾತ್ರಿ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಸಮೀಪದ ಎಡದಂಡೆ ಕಾಲುವೆ ಬಳಿ ಘಟನೆ ನಡೆದಿದೆ.
Advertisement
ದೇಶ ಮತ್ತು ವಿದೇಶಿ ಪ್ರವಾಸಿಗರ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಮೂವರು ಪುರುಷರು ಮೇಲೆ ಹಲ್ಲೆ ಮಾಡಿ ನಾಲೆಗೆ ದೂಡಿದ್ದರು. ಉಳಿದ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರಲಾಗಿದೆ. ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.
Advertisement
ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಭರವಸೆ ನೀಡಿದ್ದಾರೆ. ಮಹಿಳೆಯರು ಸರ್ಕಾರಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಕೊಪ್ಪಳದ ಕಾಲುವೆಯ ಪ್ರಶಾಂತ ದಡದಲ್ಲಿ ದೇಶಿ ಮತ್ತು ವಿದೇಶಿ ಪ್ರವಾಸಿಗರು ನಕ್ಷತ್ರಗಳನ್ನು ವೀಕ್ಷಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಆರೋಪಿಗಳು ಮಹಿಳೆಯರನ್ನು ಗುರಿಯಾಗಿಸಿಕೊಂಡು ಮೂವರು ಪ್ರಯಾಣಿಕರನ್ನು ಕಾಲುವೆಗೆ ತಳ್ಳಿದರು. ಅಮೆರಿಕ ಮೂಲದ ಡೇನಿಯಲ್ ಮತ್ತು ಮಹಾರಾಷ್ಟ್ರದ ಪ್ರಯಾಣಿಕ ಪಂಕಜ್ ಈಜಿ ದಡ ಸೇರಿದ್ದಾರೆ. ಒಡಿಶಾದ ಬಿಬಾಶ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅವರ ಮೃತದೇಹ ಶನಿವಾರ ಬೆಳಗ್ಗೆ ಪತ್ತೆಯಾಗಿದೆ.