ಧಾರವಾಡ: ಐಟಿ, ಇಡಿ, ಸಿಬಿಐ ಎಲ್ಲಾ ಕೇಂದ್ರದ ವ್ಯಾಪ್ತಿಯಲ್ಲಿವೆ. ಅವರು ಆಡಿದ್ದೇ ಆಟ ಎಂದು ಧಾರವಾಡ (Dharwad) ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ (Santosh Lad) ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ (IT Raid) ಸಿಕ್ಕ 40 ಕೋಟಿ ರೂ. ಹಣ ಕಾಂಗ್ರೆಸ್ಗೆ ಸೇರಿದ್ದು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಪ್ರತಿಕ್ರಿಯಿಸಿದ ಅವರು, ವಿರೋಧ ಪಕ್ಷದವರು ಸಾಮಾನ್ಯವಾಗಿ ಈ ರೀತಿಯ ಆರೋಪ ಮಾಡಿಯೇ ಮಾಡುತ್ತಾರೆ ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ನಂಜುಂಡೇಶ್ವರನ ಸನ್ನಿಧಾನದಲ್ಲಿ ಹೆಚ್ಡಿಕೆ ಕುಟುಂಬದಿಂದ ಬೆಲ್ಲದ ತುಲಾಭಾರ
ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಐಟಿ, ಇಡಿ, ಸಿಬಿಐ ಎಲ್ಲವೂ ಅವರ ಕೈಯಲ್ಲಿದೆ. ಅವರು ಆಡಿದ್ದೇ ಆಟ. ಈಗ ಎಲ್ಲವೂ ತನಿಖೆ ನಡೆಯುತ್ತಿದೆ. ತನಿಖೆ ಮುಗಿಯವವರೆಗೂ ಕಾಯೋಣ ಎಂದರು.
ಅಬಕಾರಿ ಇಲಾಖೆ ಮದ್ಯ ವ್ಯಾಪಾರಿಗಳಿಂದ ಲಂಚ ಪಡೆಯುತ್ತಿದೆ ಎಂದು ಮದ್ಯ ವ್ಯಾಪಾರಿಗಳು ಪತ್ರ ಬರೆದಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಲಾಡ್, ಈ ವಿಚಾರ ಸಿಎಂ ಗಮನಕ್ಕೆ ಹೋಗಿದೆ. ಅವರು ಅದಕ್ಕೆ ಪರಿಹಾರ ಕಂಡು ಹಿಡಿಯುತ್ತಾರೆ ಎಂದರು. ಇದನ್ನೂ ಓದಿ: ಹೈಕಮಾಂಡ್ ನಯಾ ಪೈಸೆ ಕೇಳಿಲ್ಲ- ಬಿಜೆಪಿ ಆರೋಪಕ್ಕೆ ಸಿಎಂ ಕಿಡಿ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]