ಬೆಂಗಳೂರು: ರಾಜ್ಯ ಚುನಾವಣೆಯ ಪ್ರಚಾರದಲ್ಲಿರೋ ಕಾಂಗ್ರೆಸ್ ನಾಯಕರಿಗೆ ಐಟಿ ಶಾಕ್ ನೀಡಿದೆ. ಕಂಟ್ರಾಕ್ಟರ್ ಪೇಮೆಂಟ್ ಗೋಲ್ಮಾಲ್ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಮಹತ್ವದ ಸುಳಿವೊಂದು ಸಿಕ್ಕಿದೆ ಅಂತ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭಿಸಿದೆ.
ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಐಟಿ ಅಧಿಕಾರಿ ಬಾಲಕೃಷ್ಣನ್ ಪತ್ರ ಬರೆದಿದ್ದು, ಮೂರು ತಿಂಗಳ ಅವಧಿಯಲ್ಲಿ ವಿವಿಧ ಇಲಾಖೆಗಳ ಕಂಟ್ರಾಕ್ಟರ್ಗಳ ಟೆಂಡರ್ ಮೊತ್ತದ ಬಗ್ಗೆ ದಾಖಲೆ ನೀಡುವಂತೆ ಹೇಳಿದ್ದಾರೆ ಎನ್ನಲಾಗಿದೆ.
ಚುನಾವಣೆಗಾಗಿ ಕಂಟ್ರಾಕ್ಟರ್ಗಳಿಗೆ ಬಿಗ್ ಪೇಮೆಂಟ್ ನೀಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಇಲಾಖೆ ಜನವರಿಯಿಂದ ಮಾರ್ಚ್ವರೆಗೆ ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮೊತ್ತದ ಪೇಮೆಂಟ್ ಬಗ್ಗೆ ಸಂಪೂರ್ಣ ವಿವರ ನೀಡಿ. ವಿದ್ಯುತ್ ಇಲಾಖೆ, ಜಲಸಂಪನ್ಮೂಲ, ಪಶುಪಾಲನಾ, ಮೀನುಗಾರಿಕೆ, ಲೋಕೋಪಯೋಗಿ ಇಲಾಖೆಯ ಟೆಂಡರ್ ಮಾಹಿತಿ ಬೇಗ ನೀಡಿ. 1 ವರ್ಷದಿಂದ ಪದೇಪದೇ ಟೆಂಡರ್ ಪಡೆದ ಕಂಟ್ರಾಕ್ಟರ್ಗಳ ಸಂಪೂರ್ಣ ವಿವರ ಕೊಡಿ ಅಂತ ಐಟಿ ಅಧಿಕಾರಿ ಬಾಲಕೃಷ್ಣನ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.