Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಪಡೆಯುವ ತೀರ್ಮಾನ ಆಗಿದೆ: ಸಚಿವ ಪರಮೇಶ್ವರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಪಡೆಯುವ ತೀರ್ಮಾನ ಆಗಿದೆ: ಸಚಿವ ಪರಮೇಶ್ವರ್‌

Bengaluru City

ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಪಡೆಯುವ ತೀರ್ಮಾನ ಆಗಿದೆ: ಸಚಿವ ಪರಮೇಶ್ವರ್‌

Public TV
Last updated: October 14, 2024 1:00 pm
Public TV
Share
3 Min Read
g parameshwar
SHARE

-ಕಣ್ಮುಚ್ಚಿಕೊಂಡು ಯಾವುದೇ ಕೇಸ್ ವಾಪಸ್ ಪಡೆಯಲ್ಲ; ವಿಪಕ್ಷಗಳಿಗೆ ತಿರುಗೇಟು

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಪಡೆಯುವ ತೀರ್ಮಾನ ಆಗಿದೆ. ಕಣ್ಮುಚ್ಚಿಕೊಂಡು ಯಾವುದೇ ಕೇಸ್ ವಾಪಸ್ ಪಡೆಯಲ್ಲ. ನಿಯಮಾನುಸಾರ ವಾಪಸ್ ಪಡೆಯುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ (G Parameshwar) ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ (Bengaluru) ಮಾಧ್ಯಗಳೊಂದಿಗೆ ಮಾತನಾಡಿದ ಅವರು, ಸುಳ್ಳು ಕೇಸ್‌ಗಳನ್ನು ಹಾಕಿದ್ರೆ ಪರಿಶೀಲಿಸಿ ವಾಪಸ್ ಪಡೆಯಲು ಸರ್ಕಾರಕ್ಕೆ ಅವಕಾಶ ಇದೆ. ಯಾರೋ ಹೇಳಿದ್ರು ಅಂತ ಕೇಸ್ ವಾಪಸ್ ಪಡೆಯಲ್ಲ. ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಮಾಡುತ್ತೇವೆ. ಇದರಲ್ಲಿ ಕೇವಲ ಅಲ್ಪಸಂಖ್ಯಾತರಷ್ಟೇ ಇಲ್ಲ, ವಿದ್ಯಾರ್ಥಿಗಳು, ರೈತರು ಇದ್ದಾರೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸ್‌ಗಳನ್ನೂ ಪರಿಶೀಲನೆ ಮಾಡುತ್ತೇವೆ. ಕಣ್ಮುಚ್ಚಿಕೊಂಡು ಯಾವುದೇ ಕೇಸ್ ವಾಪಸ್ ಪಡೆಯಲ್ಲ ನಿಯಮಾನುಸಾರ ವಾಪಸ್ ಪದೆಯುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕುಖ್ಯಾತ ದರೋಡೆಕೋರ ಬಿಷ್ಣೋಯ್‌ನನ್ನು ಮುಂಬೈ ಪೊಲೀಸರು ಯಾಕೆ ಕಸ್ಟಡಿಗೆ ಪಡೆಯಲು ಸಾಧ್ಯವಾಗುತ್ತಿಲ್ಲ?

ಹುಬ್ಬಳ್ಳಿ ಗಲಭೆ ಕೇಸ್‌ಗಳು ವಾಪಸ್ ವಿಚಾರವಾಗಿ ಮಾತನಾಡಿ, ಕೇಸ್‌ಗಳನ್ನು ವಾಪಸ್ ಪಡೆಯಲು ಯಾರಾದರೂ ಮನವಿ ಮಾಡ್ತಾರೆ. ಆಗ ನಾವು ಅದರ ಪರಿಶೀಲನೆಗೆ ಸಂಪುಟ ಉಪಸಮಿತಿ ಮಾಡುತ್ತೇವೆ. ಸಂಬಂಧಿಸಿದ ಇಲಾಖೆಗೆ ಮಾಹಿತಿ ಕೇಳುತ್ತೇವೆ. ನಂತರ ಸಂಪುಟ ಉಪಸಮಿತಿ ಅದರ ಬಗ್ಗೆ ತೀರ್ಮಾನ ಮಾಡುತ್ತದೆ. ವಾಪಸ್ ತಗೋಬೇಕಾ ಬೇಡವಾ ಎಂದು ಉಪಸಮಿತಿ ನಿರ್ಧರಿಸುತ್ತೆ. ಹುಬ್ಬಳ್ಳಿ ಕೇಸ್‌ಗಳೂ ಅಷ್ಟೊಂದು ಜನರ ಮೇಲೆ ಹಾಕುವ ಅಗತ್ಯವಿಲ್ಲ ಅಂತ ಸಂಪುಟ ಉಪಸಮಿತಿ ಸದಸ್ಯರು ಅಭಿಪ್ರಾಯ ಪಟ್ಟಿದ್ದಾರೆ. ನಂತರ ಸಂಪುಟ ಸಭೆಯಲ್ಲಿ ಕೇಸ್‌ಗಳನ್ನು ವಾಪಸ್ ಪಡೆಯುವ ನಿರ್ಧಾರ ಆಗಿದೆ. ಇದನ್ನು ಕೋರ್ಟಿಗೆ ಕಳಿಸುತ್ತೇವೆ. ಕೋರ್ಟ್ ಒಪ್ಪಿಕೊಂಡರೆ ಆ ಕೇಸ್‌ಗಳು ವಾಪಸ್ ಆಗುತ್ತವೆ. ಇದನ್ನು ಬಿಜೆಪಿ ರಾಜಕೀಯ ಮಾಡುತ್ತಿದೆ. ಬಿಜೆಪಿ ಇದ್ದಾಗಲೂ ಹಲವು ಕೇಸ್‌ಗಳನ್ನು ವಾಪಸ್ ಪಡೆದಿತ್ತು ಎಂದರು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಕೇಸ್‌ ವಾಪಸ್‌ ಪಡೆಯುವ ಸರ್ಕಾರದ ನಿರ್ಧಾರಕ್ಕೆ ಖಂಡನೆ – ಭುಗಿಲೆದ್ದ ಬಿಜೆಪಿ ಪ್ರತಿಭಟನೆ

ಯುಪಿಯಲ್ಲಿ (Uttat Pradesh) ಅಲ್ಲಿನ ಸಿಎಂ ವಿರುದ್ಧವೇ ಹಲವು ಕೇಸ್‌ಗಳಿದ್ದವು. ಅದನ್ನೆಲ್ಲ ಅವರು ವಾಪಸ್ ಪಡೆದುಕೊಂಡರು. ಈಗ ಹುಬ್ಬಳ್ಳಿ ಕೇಸ್‌ಗಳನ್ನು ವಾಪಸ್ ಪಡೆಯಲು ಕೋರ್ಟ್ ಒಪ್ಪುತ್ತೋ ಇಲ್ವೋ ಗೊತ್ತಿಲ್ಲ. ನಿಯಮಾನುಸಾರ ಕೇಸ್‌ಗಳನ್ನು ವಾಪಸ್ ಪಡೆಯಬಹುದು. ಹುಬ್ಬಳ್ಳಿ ಕೇಸ್‌ನಲ್ಲಿ ಒಟ್ಟು 56 ಕೇಸ್‌ಗಳಿದ್ದು 43 ನ್ನು ವಾಪಸ್ ಪಡೆಯುವ ತೀರ್ಮಾನ ಆಗಿದೆ. ಬಿಜೆಪಿ ಎಲ್ಲವನ್ನೂ ರಾಜಕೀಯ ಮಾಡಲು ಹೋಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: Bengaluru | ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ – ಕಾರಣ ಏನು?

ಸಿದ್ಧಾರ್ಥ ವಿಹಾರ ಟ್ರಸ್ಟ್‌ನಿಂದ 5 ಎಕರೆ ಸಿಎ ನಿವೇಶನ ವಾಪಸ್ ಮಾಡಿದ ವಿಚಾರವಾಗಿ ಮಾತನಾಡಿ, ಇಲ್ಲಿ ತಪ್ಪಾಗಿದೆ ಎಂದು ಅವರು ಭೂಮಿ ವಾಪಸ್ ಮಾಡಿಲ್ಲ. ಕಾನೂನು ಉಲ್ಲಂಘನೆ ಆಗಿರಲಿಲ್ಲ. ಆದರೂ ವಿವಾದ ಸೃಷ್ಟಿಸಲಾಗಿದೆ. ಆಪಾದನೆ ಮಾಡಿದ್ದಕ್ಕೆ ಅವರು ಭೂಮಿ ಬೇಡ ಅಂತ ವಾಪಸ್ ಮಾಡಿದ್ದಾರೆ. ಬಿಜೆಪಿಯವರಿಗೆ ಕಾಮಾಲೆ ಕಣ್ಣು, ಎಲ್ಲವನ್ನೂ ಹಳದಿಯಾಗೇ ಕಾಣ್ಸತ್ತೆ. ಅವರಿಗೆ ಬೇರೆ ಬಣ್ಣ ಕಾಣಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಬೀದರ್ – ಬಿಜೆಪಿ ಮುಖಂಡ, ಉದ್ಯಮಿ ಸಂಜೀವಕುಮಾರ್ ಸುಗೂರೆ ನಾಪತ್ತೆ

ಅ.15 ರಂದು ಕೆ ಸಿ ವೇಣುಗೋಪಾಲ ರಾಜ್ಯಕ್ಕೆ ಆಗಮನ ವಿಚಾರವಾಗಿ ಮಾತನಾಡಿ, ನಾಳೆ ಕೇಂದ್ರದ ಪಿಎಸಿ ಕಮಿಟಿ ರಾಜ್ಯಕ್ಕೆ ಬರುತ್ತಿದೆ. ರಾಜ್ಯಕ್ಕೆ ಬಂದಾಗ ಸರ್ಕಾರ, ಪಕ್ಷದ ಕೆಲಸಗಳನ್ನು ಗಮನಿಸುತ್ತಾರೆ. ಇಲ್ಲಿ ಏನಾಗುತ್ತಿದೆ ಎಂದು ಸಹಜವಾಗಿ ಗಮನಿಸುತ್ತಾರೆ. ನಾನು ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡುವ ಅಜೆಂಡಾ ಇಲ್ಲ ಎಂದರು. ಇದನ್ನೂ ಓದಿ: ಎಸ್‌ಸಿಒ ಶೃಂಗಸಭೆ – ಮಂಗಳವಾರ ಪಾಕ್‌ಗೆ ಪ್ರಯಾಣಿಸಲಿದ್ದಾರೆ ಭಾರತದ ವಿದೇಶಾಂಗ ಸಚಿವ ಜೈಶಂಕರ್‌

TAGGED:bengalurubjpG Parameshwarhubballiಜಿ.ಪರಮೇಶ್ವರ್ಬಿಜೆಪಿಬೆಂಗಳೂರುಹುಬ್ಬಳ್ಳಿ ಗಲಭೆ ಕೇಸ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ಅಪಮಾನ – ಕೇಸ್ ರದ್ದಿಗೆ ರಣವೀರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾ.9ಕ್ಕೆ ಮುಂದೂಡಿಕೆ
Cinema Latest Top Stories
Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood

You Might Also Like

donald trump 2
Latest

4-5 ವಾರಗಳವರೆಗೆ ಮುಂದುವರಿಯುತ್ತೆ – ಅರಬ್‌ ರಾಷ್ಟ್ರಗಳು ನಮ್ಮ ಜೊತೆ ಸೇರಲು ಬಯಸುತ್ತಿವೆ: ಟ್ರಂಪ್‌

Public TV
By Public TV
5 hours ago
MLC Bhojegowda
Chikkamagaluru

ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭೋಜೇಗೌಡ ಸೇಫ್ – ಸ್ವತಃ ವಿಡಿಯೋ ಮಾಡಿ ಕಳಿಸಿರುವ MLC

Public TV
By Public TV
6 hours ago
Sabarimala Temple
Latest

ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡಲ್ಲ: ತಿರುವಾಂಕೂರು ದೇವಸ್ವಂ ಮಂಡಳಿ ನಿರ್ಣಯ

Public TV
By Public TV
7 hours ago
Khamenei Wife
Latest

ಖಮೇನಿ ಹತ್ಯೆಯಾದ ಎರಡು ದಿನಗಳ ಬಳಿಕ ಪತ್ನಿ ಮನ್ಸೌರೆ ಸಾವು

Public TV
By Public TV
7 hours ago
gold price hike
Latest

Iran War| ಹೂಡಿಕೆದಾರರಿಗೆ 8 ಲಕ್ಷ ಕೋಟಿ ಲಾಸ್‌ – 2 ಲಕ್ಷ ದಾಟುತ್ತಾ ಚಿನ್ನದ ದರ?

Public TV
By Public TV
7 hours ago
Narendra Modi Ayatollah Ali Khamenei
Latest

ಇರಾನ್‌ ಸರ್ವೋಚ್ಚ ನಾಯಕ ಖಮೇನಿ ಹತ್ಯೆಯನ್ನು ಭಾರತ ಖಂಡಿಸಿಲ್ಲ ಯಾಕೆ?

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?