Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಪಡೆಯುವ ತೀರ್ಮಾನ ಆಗಿದೆ: ಸಚಿವ ಪರಮೇಶ್ವರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಪಡೆಯುವ ತೀರ್ಮಾನ ಆಗಿದೆ: ಸಚಿವ ಪರಮೇಶ್ವರ್‌

Bengaluru City

ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಪಡೆಯುವ ತೀರ್ಮಾನ ಆಗಿದೆ: ಸಚಿವ ಪರಮೇಶ್ವರ್‌

Public TV
Last updated: October 14, 2024 1:00 pm
Public TV
Share
3 Min Read
g parameshwar
SHARE

-ಕಣ್ಮುಚ್ಚಿಕೊಂಡು ಯಾವುದೇ ಕೇಸ್ ವಾಪಸ್ ಪಡೆಯಲ್ಲ; ವಿಪಕ್ಷಗಳಿಗೆ ತಿರುಗೇಟು

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಪಡೆಯುವ ತೀರ್ಮಾನ ಆಗಿದೆ. ಕಣ್ಮುಚ್ಚಿಕೊಂಡು ಯಾವುದೇ ಕೇಸ್ ವಾಪಸ್ ಪಡೆಯಲ್ಲ. ನಿಯಮಾನುಸಾರ ವಾಪಸ್ ಪಡೆಯುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ (G Parameshwar) ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ (Bengaluru) ಮಾಧ್ಯಗಳೊಂದಿಗೆ ಮಾತನಾಡಿದ ಅವರು, ಸುಳ್ಳು ಕೇಸ್‌ಗಳನ್ನು ಹಾಕಿದ್ರೆ ಪರಿಶೀಲಿಸಿ ವಾಪಸ್ ಪಡೆಯಲು ಸರ್ಕಾರಕ್ಕೆ ಅವಕಾಶ ಇದೆ. ಯಾರೋ ಹೇಳಿದ್ರು ಅಂತ ಕೇಸ್ ವಾಪಸ್ ಪಡೆಯಲ್ಲ. ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಮಾಡುತ್ತೇವೆ. ಇದರಲ್ಲಿ ಕೇವಲ ಅಲ್ಪಸಂಖ್ಯಾತರಷ್ಟೇ ಇಲ್ಲ, ವಿದ್ಯಾರ್ಥಿಗಳು, ರೈತರು ಇದ್ದಾರೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸ್‌ಗಳನ್ನೂ ಪರಿಶೀಲನೆ ಮಾಡುತ್ತೇವೆ. ಕಣ್ಮುಚ್ಚಿಕೊಂಡು ಯಾವುದೇ ಕೇಸ್ ವಾಪಸ್ ಪಡೆಯಲ್ಲ ನಿಯಮಾನುಸಾರ ವಾಪಸ್ ಪದೆಯುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕುಖ್ಯಾತ ದರೋಡೆಕೋರ ಬಿಷ್ಣೋಯ್‌ನನ್ನು ಮುಂಬೈ ಪೊಲೀಸರು ಯಾಕೆ ಕಸ್ಟಡಿಗೆ ಪಡೆಯಲು ಸಾಧ್ಯವಾಗುತ್ತಿಲ್ಲ?

ಹುಬ್ಬಳ್ಳಿ ಗಲಭೆ ಕೇಸ್‌ಗಳು ವಾಪಸ್ ವಿಚಾರವಾಗಿ ಮಾತನಾಡಿ, ಕೇಸ್‌ಗಳನ್ನು ವಾಪಸ್ ಪಡೆಯಲು ಯಾರಾದರೂ ಮನವಿ ಮಾಡ್ತಾರೆ. ಆಗ ನಾವು ಅದರ ಪರಿಶೀಲನೆಗೆ ಸಂಪುಟ ಉಪಸಮಿತಿ ಮಾಡುತ್ತೇವೆ. ಸಂಬಂಧಿಸಿದ ಇಲಾಖೆಗೆ ಮಾಹಿತಿ ಕೇಳುತ್ತೇವೆ. ನಂತರ ಸಂಪುಟ ಉಪಸಮಿತಿ ಅದರ ಬಗ್ಗೆ ತೀರ್ಮಾನ ಮಾಡುತ್ತದೆ. ವಾಪಸ್ ತಗೋಬೇಕಾ ಬೇಡವಾ ಎಂದು ಉಪಸಮಿತಿ ನಿರ್ಧರಿಸುತ್ತೆ. ಹುಬ್ಬಳ್ಳಿ ಕೇಸ್‌ಗಳೂ ಅಷ್ಟೊಂದು ಜನರ ಮೇಲೆ ಹಾಕುವ ಅಗತ್ಯವಿಲ್ಲ ಅಂತ ಸಂಪುಟ ಉಪಸಮಿತಿ ಸದಸ್ಯರು ಅಭಿಪ್ರಾಯ ಪಟ್ಟಿದ್ದಾರೆ. ನಂತರ ಸಂಪುಟ ಸಭೆಯಲ್ಲಿ ಕೇಸ್‌ಗಳನ್ನು ವಾಪಸ್ ಪಡೆಯುವ ನಿರ್ಧಾರ ಆಗಿದೆ. ಇದನ್ನು ಕೋರ್ಟಿಗೆ ಕಳಿಸುತ್ತೇವೆ. ಕೋರ್ಟ್ ಒಪ್ಪಿಕೊಂಡರೆ ಆ ಕೇಸ್‌ಗಳು ವಾಪಸ್ ಆಗುತ್ತವೆ. ಇದನ್ನು ಬಿಜೆಪಿ ರಾಜಕೀಯ ಮಾಡುತ್ತಿದೆ. ಬಿಜೆಪಿ ಇದ್ದಾಗಲೂ ಹಲವು ಕೇಸ್‌ಗಳನ್ನು ವಾಪಸ್ ಪಡೆದಿತ್ತು ಎಂದರು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಕೇಸ್‌ ವಾಪಸ್‌ ಪಡೆಯುವ ಸರ್ಕಾರದ ನಿರ್ಧಾರಕ್ಕೆ ಖಂಡನೆ – ಭುಗಿಲೆದ್ದ ಬಿಜೆಪಿ ಪ್ರತಿಭಟನೆ

ಯುಪಿಯಲ್ಲಿ (Uttat Pradesh) ಅಲ್ಲಿನ ಸಿಎಂ ವಿರುದ್ಧವೇ ಹಲವು ಕೇಸ್‌ಗಳಿದ್ದವು. ಅದನ್ನೆಲ್ಲ ಅವರು ವಾಪಸ್ ಪಡೆದುಕೊಂಡರು. ಈಗ ಹುಬ್ಬಳ್ಳಿ ಕೇಸ್‌ಗಳನ್ನು ವಾಪಸ್ ಪಡೆಯಲು ಕೋರ್ಟ್ ಒಪ್ಪುತ್ತೋ ಇಲ್ವೋ ಗೊತ್ತಿಲ್ಲ. ನಿಯಮಾನುಸಾರ ಕೇಸ್‌ಗಳನ್ನು ವಾಪಸ್ ಪಡೆಯಬಹುದು. ಹುಬ್ಬಳ್ಳಿ ಕೇಸ್‌ನಲ್ಲಿ ಒಟ್ಟು 56 ಕೇಸ್‌ಗಳಿದ್ದು 43 ನ್ನು ವಾಪಸ್ ಪಡೆಯುವ ತೀರ್ಮಾನ ಆಗಿದೆ. ಬಿಜೆಪಿ ಎಲ್ಲವನ್ನೂ ರಾಜಕೀಯ ಮಾಡಲು ಹೋಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: Bengaluru | ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ – ಕಾರಣ ಏನು?

ಸಿದ್ಧಾರ್ಥ ವಿಹಾರ ಟ್ರಸ್ಟ್‌ನಿಂದ 5 ಎಕರೆ ಸಿಎ ನಿವೇಶನ ವಾಪಸ್ ಮಾಡಿದ ವಿಚಾರವಾಗಿ ಮಾತನಾಡಿ, ಇಲ್ಲಿ ತಪ್ಪಾಗಿದೆ ಎಂದು ಅವರು ಭೂಮಿ ವಾಪಸ್ ಮಾಡಿಲ್ಲ. ಕಾನೂನು ಉಲ್ಲಂಘನೆ ಆಗಿರಲಿಲ್ಲ. ಆದರೂ ವಿವಾದ ಸೃಷ್ಟಿಸಲಾಗಿದೆ. ಆಪಾದನೆ ಮಾಡಿದ್ದಕ್ಕೆ ಅವರು ಭೂಮಿ ಬೇಡ ಅಂತ ವಾಪಸ್ ಮಾಡಿದ್ದಾರೆ. ಬಿಜೆಪಿಯವರಿಗೆ ಕಾಮಾಲೆ ಕಣ್ಣು, ಎಲ್ಲವನ್ನೂ ಹಳದಿಯಾಗೇ ಕಾಣ್ಸತ್ತೆ. ಅವರಿಗೆ ಬೇರೆ ಬಣ್ಣ ಕಾಣಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಬೀದರ್ – ಬಿಜೆಪಿ ಮುಖಂಡ, ಉದ್ಯಮಿ ಸಂಜೀವಕುಮಾರ್ ಸುಗೂರೆ ನಾಪತ್ತೆ

ಅ.15 ರಂದು ಕೆ ಸಿ ವೇಣುಗೋಪಾಲ ರಾಜ್ಯಕ್ಕೆ ಆಗಮನ ವಿಚಾರವಾಗಿ ಮಾತನಾಡಿ, ನಾಳೆ ಕೇಂದ್ರದ ಪಿಎಸಿ ಕಮಿಟಿ ರಾಜ್ಯಕ್ಕೆ ಬರುತ್ತಿದೆ. ರಾಜ್ಯಕ್ಕೆ ಬಂದಾಗ ಸರ್ಕಾರ, ಪಕ್ಷದ ಕೆಲಸಗಳನ್ನು ಗಮನಿಸುತ್ತಾರೆ. ಇಲ್ಲಿ ಏನಾಗುತ್ತಿದೆ ಎಂದು ಸಹಜವಾಗಿ ಗಮನಿಸುತ್ತಾರೆ. ನಾನು ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡುವ ಅಜೆಂಡಾ ಇಲ್ಲ ಎಂದರು. ಇದನ್ನೂ ಓದಿ: ಎಸ್‌ಸಿಒ ಶೃಂಗಸಭೆ – ಮಂಗಳವಾರ ಪಾಕ್‌ಗೆ ಪ್ರಯಾಣಿಸಲಿದ್ದಾರೆ ಭಾರತದ ವಿದೇಶಾಂಗ ಸಚಿವ ಜೈಶಂಕರ್‌

TAGGED:bengalurubjpG Parameshwarhubballiಜಿ.ಪರಮೇಶ್ವರ್ಬಿಜೆಪಿಬೆಂಗಳೂರುಹುಬ್ಬಳ್ಳಿ ಗಲಭೆ ಕೇಸ್
Share This Article
Facebook Whatsapp Whatsapp Telegram

Cinema news

ashwini gowda gilli nata
ಗಿಲ್ಲಿ ನಿಜವಾದ ಬಡವ ಅಲ್ಲ, ಬಡವನ ಥರ ಗೆಟಪ್‌ ಹಾಕ್ಕೊಂಡು ಗೆದ್ದಿದ್ದಾರೆ: ಅಶ್ವಿನಿ ಗೌಡ
Cinema Latest Main Post TV Shows
ashwini gowda 1
ನಾನು ವಿನ್ನರ್‌ ಆಗುವ ನಿರೀಕ್ಷೆ ಹೆಚ್ಚಿತ್ತು: 2ನೇ ರನ್ನರ್‌ ಅಪ್‌ ಅಶ್ವಿನಿ ಗೌಡ ರಿಯಾಕ್ಷನ್‌
Cinema Latest Main Post TV Shows
Gilli Nata 5
BBK 12 | ಕಾವ್ಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಗಿಲ್ಲಿ ಕೊಟ್ಟ ಉತ್ತರ ಏನು?
Cinema Latest Main Post TV Shows
gilli nata bigg boss
ಬಿಗ್ ಬಾಸ್ ಸೀಸನ್ 12 ಗೆದ್ದ ಗಿಲ್ಲಿ – ಇಂದು ಮಳವಳ್ಳಿಯಿಂದ ಹುಟ್ಟೂರು ದಡದಪುರಕ್ಕೆ ಅದ್ದೂರಿ ಮೆರವಣಿಗೆ
Cinema Latest Mandya Top Stories TV Shows

You Might Also Like

GBA Elections
Bengaluru City

ಬ್ಯಾಲೆಟ್ ಪೇಪರ್‌ನಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆ – ಚುನಾವಣಾ ಆಯುಕ್ತ ಸಂಗ್ರೇಶ್‌

Public TV
By Public TV
8 minutes ago
RB Timmapur
Bagalkot

ನಾನು ತಪ್ಪು ಮಾಡಿಲ್ಲ, ತೇಜೋವಧೆ ಮಾಡೋ ಕೆಲಸ ನಡೆಯುತ್ತಿದೆ: ಆರ್‌ಬಿ ತಿಮ್ಮಾಪುರ

Public TV
By Public TV
9 minutes ago
Ration Rice Chitradurga Challakere
Chitradurga

ಚಳ್ಳಕೆರೆಯಲ್ಲಿ ಪಡಿತರ ಅಕ್ಕಿ ಖರೀದಿಸಿ ಸಂಗ್ರಹ ಆರೋಪ – ಗೋದಾಮಿನ ಮೇಲೆ ದಾಳಿ

Public TV
By Public TV
16 minutes ago
Prateek Yadav Aparna Yadav
Latest

ಆದಷ್ಟು ಬೇಗ ಈ ಕೆಟ್ಟ ಮನಸ್ಸಿನ, ಸ್ವಾರ್ಥ ಮಹಿಳೆಗೆ ಡಿವೋರ್ಸ್‌ ಕೊಡ್ತೀನಿ – ಪತ್ನಿ ವಿರುದ್ಧವೇ ಸಿಡಿದ ಪ್ರತೀಕ್ ಯಾದವ್!

Public TV
By Public TV
2 hours ago
Sriramulu 1
Bellary

ಪೋಕ್ಸೋ ಕೇಸ್‌ನ ಸಂತ್ರಸ್ತೆಯ ಹೆಸರು, ವಿಳಾಸ ಬಹಿರಂಗ – ಮಾಜಿ ಸಚಿವ ಶ್ರೀರಾಮುಲು ವಿರುದ್ಧ FIR

Public TV
By Public TV
2 hours ago
ICC Jay shah
Latest

ಭಾರತದಲ್ಲಿ ಆಡದಿದ್ದರೆ ವಿಶ್ವಕಪ್‌ ಟೂರ್ನಿಯಿಂದಲೇ ಹೊರದಬ್ಬುತ್ತೇವೆ – ಬಾಂಗ್ಲಾಗೆ ಐಸಿಸಿ ಲಾಸ್ಟ್‌ ವಾರ್ನಿಂಗ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?