Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಪಡೆಯುವ ತೀರ್ಮಾನ ಆಗಿದೆ: ಸಚಿವ ಪರಮೇಶ್ವರ್‌

Public TV
Last updated: October 14, 2024 1:00 pm
Public TV
Share
3 Min Read
g parameshwar
SHARE

-ಕಣ್ಮುಚ್ಚಿಕೊಂಡು ಯಾವುದೇ ಕೇಸ್ ವಾಪಸ್ ಪಡೆಯಲ್ಲ; ವಿಪಕ್ಷಗಳಿಗೆ ತಿರುಗೇಟು

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಪಡೆಯುವ ತೀರ್ಮಾನ ಆಗಿದೆ. ಕಣ್ಮುಚ್ಚಿಕೊಂಡು ಯಾವುದೇ ಕೇಸ್ ವಾಪಸ್ ಪಡೆಯಲ್ಲ. ನಿಯಮಾನುಸಾರ ವಾಪಸ್ ಪಡೆಯುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ (G Parameshwar) ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ (Bengaluru) ಮಾಧ್ಯಗಳೊಂದಿಗೆ ಮಾತನಾಡಿದ ಅವರು, ಸುಳ್ಳು ಕೇಸ್‌ಗಳನ್ನು ಹಾಕಿದ್ರೆ ಪರಿಶೀಲಿಸಿ ವಾಪಸ್ ಪಡೆಯಲು ಸರ್ಕಾರಕ್ಕೆ ಅವಕಾಶ ಇದೆ. ಯಾರೋ ಹೇಳಿದ್ರು ಅಂತ ಕೇಸ್ ವಾಪಸ್ ಪಡೆಯಲ್ಲ. ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ 43 ಕೇಸ್ ವಾಪಸ್ ಮಾಡುತ್ತೇವೆ. ಇದರಲ್ಲಿ ಕೇವಲ ಅಲ್ಪಸಂಖ್ಯಾತರಷ್ಟೇ ಇಲ್ಲ, ವಿದ್ಯಾರ್ಥಿಗಳು, ರೈತರು ಇದ್ದಾರೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸ್‌ಗಳನ್ನೂ ಪರಿಶೀಲನೆ ಮಾಡುತ್ತೇವೆ. ಕಣ್ಮುಚ್ಚಿಕೊಂಡು ಯಾವುದೇ ಕೇಸ್ ವಾಪಸ್ ಪಡೆಯಲ್ಲ ನಿಯಮಾನುಸಾರ ವಾಪಸ್ ಪದೆಯುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಕುಖ್ಯಾತ ದರೋಡೆಕೋರ ಬಿಷ್ಣೋಯ್‌ನನ್ನು ಮುಂಬೈ ಪೊಲೀಸರು ಯಾಕೆ ಕಸ್ಟಡಿಗೆ ಪಡೆಯಲು ಸಾಧ್ಯವಾಗುತ್ತಿಲ್ಲ?

ಹುಬ್ಬಳ್ಳಿ ಗಲಭೆ ಕೇಸ್‌ಗಳು ವಾಪಸ್ ವಿಚಾರವಾಗಿ ಮಾತನಾಡಿ, ಕೇಸ್‌ಗಳನ್ನು ವಾಪಸ್ ಪಡೆಯಲು ಯಾರಾದರೂ ಮನವಿ ಮಾಡ್ತಾರೆ. ಆಗ ನಾವು ಅದರ ಪರಿಶೀಲನೆಗೆ ಸಂಪುಟ ಉಪಸಮಿತಿ ಮಾಡುತ್ತೇವೆ. ಸಂಬಂಧಿಸಿದ ಇಲಾಖೆಗೆ ಮಾಹಿತಿ ಕೇಳುತ್ತೇವೆ. ನಂತರ ಸಂಪುಟ ಉಪಸಮಿತಿ ಅದರ ಬಗ್ಗೆ ತೀರ್ಮಾನ ಮಾಡುತ್ತದೆ. ವಾಪಸ್ ತಗೋಬೇಕಾ ಬೇಡವಾ ಎಂದು ಉಪಸಮಿತಿ ನಿರ್ಧರಿಸುತ್ತೆ. ಹುಬ್ಬಳ್ಳಿ ಕೇಸ್‌ಗಳೂ ಅಷ್ಟೊಂದು ಜನರ ಮೇಲೆ ಹಾಕುವ ಅಗತ್ಯವಿಲ್ಲ ಅಂತ ಸಂಪುಟ ಉಪಸಮಿತಿ ಸದಸ್ಯರು ಅಭಿಪ್ರಾಯ ಪಟ್ಟಿದ್ದಾರೆ. ನಂತರ ಸಂಪುಟ ಸಭೆಯಲ್ಲಿ ಕೇಸ್‌ಗಳನ್ನು ವಾಪಸ್ ಪಡೆಯುವ ನಿರ್ಧಾರ ಆಗಿದೆ. ಇದನ್ನು ಕೋರ್ಟಿಗೆ ಕಳಿಸುತ್ತೇವೆ. ಕೋರ್ಟ್ ಒಪ್ಪಿಕೊಂಡರೆ ಆ ಕೇಸ್‌ಗಳು ವಾಪಸ್ ಆಗುತ್ತವೆ. ಇದನ್ನು ಬಿಜೆಪಿ ರಾಜಕೀಯ ಮಾಡುತ್ತಿದೆ. ಬಿಜೆಪಿ ಇದ್ದಾಗಲೂ ಹಲವು ಕೇಸ್‌ಗಳನ್ನು ವಾಪಸ್ ಪಡೆದಿತ್ತು ಎಂದರು. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ ಕೇಸ್‌ ವಾಪಸ್‌ ಪಡೆಯುವ ಸರ್ಕಾರದ ನಿರ್ಧಾರಕ್ಕೆ ಖಂಡನೆ – ಭುಗಿಲೆದ್ದ ಬಿಜೆಪಿ ಪ್ರತಿಭಟನೆ

ಯುಪಿಯಲ್ಲಿ (Uttat Pradesh) ಅಲ್ಲಿನ ಸಿಎಂ ವಿರುದ್ಧವೇ ಹಲವು ಕೇಸ್‌ಗಳಿದ್ದವು. ಅದನ್ನೆಲ್ಲ ಅವರು ವಾಪಸ್ ಪಡೆದುಕೊಂಡರು. ಈಗ ಹುಬ್ಬಳ್ಳಿ ಕೇಸ್‌ಗಳನ್ನು ವಾಪಸ್ ಪಡೆಯಲು ಕೋರ್ಟ್ ಒಪ್ಪುತ್ತೋ ಇಲ್ವೋ ಗೊತ್ತಿಲ್ಲ. ನಿಯಮಾನುಸಾರ ಕೇಸ್‌ಗಳನ್ನು ವಾಪಸ್ ಪಡೆಯಬಹುದು. ಹುಬ್ಬಳ್ಳಿ ಕೇಸ್‌ನಲ್ಲಿ ಒಟ್ಟು 56 ಕೇಸ್‌ಗಳಿದ್ದು 43 ನ್ನು ವಾಪಸ್ ಪಡೆಯುವ ತೀರ್ಮಾನ ಆಗಿದೆ. ಬಿಜೆಪಿ ಎಲ್ಲವನ್ನೂ ರಾಜಕೀಯ ಮಾಡಲು ಹೋಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: Bengaluru | ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ – ಕಾರಣ ಏನು?

ಸಿದ್ಧಾರ್ಥ ವಿಹಾರ ಟ್ರಸ್ಟ್‌ನಿಂದ 5 ಎಕರೆ ಸಿಎ ನಿವೇಶನ ವಾಪಸ್ ಮಾಡಿದ ವಿಚಾರವಾಗಿ ಮಾತನಾಡಿ, ಇಲ್ಲಿ ತಪ್ಪಾಗಿದೆ ಎಂದು ಅವರು ಭೂಮಿ ವಾಪಸ್ ಮಾಡಿಲ್ಲ. ಕಾನೂನು ಉಲ್ಲಂಘನೆ ಆಗಿರಲಿಲ್ಲ. ಆದರೂ ವಿವಾದ ಸೃಷ್ಟಿಸಲಾಗಿದೆ. ಆಪಾದನೆ ಮಾಡಿದ್ದಕ್ಕೆ ಅವರು ಭೂಮಿ ಬೇಡ ಅಂತ ವಾಪಸ್ ಮಾಡಿದ್ದಾರೆ. ಬಿಜೆಪಿಯವರಿಗೆ ಕಾಮಾಲೆ ಕಣ್ಣು, ಎಲ್ಲವನ್ನೂ ಹಳದಿಯಾಗೇ ಕಾಣ್ಸತ್ತೆ. ಅವರಿಗೆ ಬೇರೆ ಬಣ್ಣ ಕಾಣಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ಬೀದರ್ – ಬಿಜೆಪಿ ಮುಖಂಡ, ಉದ್ಯಮಿ ಸಂಜೀವಕುಮಾರ್ ಸುಗೂರೆ ನಾಪತ್ತೆ

ಅ.15 ರಂದು ಕೆ ಸಿ ವೇಣುಗೋಪಾಲ ರಾಜ್ಯಕ್ಕೆ ಆಗಮನ ವಿಚಾರವಾಗಿ ಮಾತನಾಡಿ, ನಾಳೆ ಕೇಂದ್ರದ ಪಿಎಸಿ ಕಮಿಟಿ ರಾಜ್ಯಕ್ಕೆ ಬರುತ್ತಿದೆ. ರಾಜ್ಯಕ್ಕೆ ಬಂದಾಗ ಸರ್ಕಾರ, ಪಕ್ಷದ ಕೆಲಸಗಳನ್ನು ಗಮನಿಸುತ್ತಾರೆ. ಇಲ್ಲಿ ಏನಾಗುತ್ತಿದೆ ಎಂದು ಸಹಜವಾಗಿ ಗಮನಿಸುತ್ತಾರೆ. ನಾನು ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡುವ ಅಜೆಂಡಾ ಇಲ್ಲ ಎಂದರು. ಇದನ್ನೂ ಓದಿ: ಎಸ್‌ಸಿಒ ಶೃಂಗಸಭೆ – ಮಂಗಳವಾರ ಪಾಕ್‌ಗೆ ಪ್ರಯಾಣಿಸಲಿದ್ದಾರೆ ಭಾರತದ ವಿದೇಶಾಂಗ ಸಚಿವ ಜೈಶಂಕರ್‌

TAGGED:bengalurubjpG Parameshwarhubballiಜಿ.ಪರಮೇಶ್ವರ್ಬಿಜೆಪಿಬೆಂಗಳೂರುಹುಬ್ಬಳ್ಳಿ ಗಲಭೆ ಕೇಸ್
Share This Article
Facebook Whatsapp Whatsapp Telegram

You Might Also Like

Himachal Pradesh
Latest

ಹಿಮಾಚಲ ಪ್ರದೇಶ | 24 ಗಂಟೆಯಲ್ಲಿ 5 ಕಡೆ ಮೇಘಸ್ಫೋಟ – ಸಾವಿನ ಸಂಖ್ಯೆ ಐದಕ್ಕೆ ಏರಿಕೆ

Public TV
By Public TV
5 minutes ago
R Ashok 5
Bengaluru City

ಹುಲಿಗಳ ಸಾವು ಪ್ರಕರಣ | ಗಂಧದಗುಡಿಯನ್ನ ಕಸಾಯಿಖಾನೆ ಮಾಡುತ್ತಿದೆ ಕಾಂಗ್ರೆಸ್ ಸರ್ಕಾರ – ಆರ್‌. ಅಶೋಕ್‌

Public TV
By Public TV
19 minutes ago
Shubhanshu Shukla 5
Latest

ಇಲ್ಲಿಂದ ಭೂಮಿಯನ್ನು ನೋಡುವುದೇ ಸೌಭಾಗ್ಯ – ಬಾಹ್ಯಾಕಾಶ ನಿಲ್ದಾಣದಿಂದ ಶುಭಾಂಶು ಮೊದಲ ಸಂದೇಶ!

Public TV
By Public TV
41 minutes ago
Mangaluru Forum Mall White Cat
Dakshina Kannada

ಬೀಡಾಡಿ ಬೆಕ್ಕಿಗೊಂದು ಸುಂದರ ಮನೆ – ಮಂಗಳೂರಿನ ಮಾಲ್‌ಗೆ ಬರೋರ ಕಣ್ಮಣಿಯಾದ ವೈಟ್ ಕ್ಯಾಟ್

Public TV
By Public TV
53 minutes ago
Amulya
Cinema

ಮತ್ತೆ ಬಣ್ಣಕ್ಕೆ ಮರಳುವ ಸುಳಿವು ಕೊಟ್ಟರಾ ನಟಿ ಅಮೂಲ್ಯ ?

Public TV
By Public TV
1 hour ago
Allu Arjun atlee 4
Cinema

ಅಟ್ಲಿ-ಅಲ್ಲು ಸಿನಿಮಾ ವಿಎಫ್‌ಎಕ್ಸ್‌ಗೆ ಬರೋಬ್ಬರಿ 350 ಕೋಟಿ ಖರ್ಚು !

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?