Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೈತರ ಆಸ್ತಿ ವಕ್ಫ್ ಪಾಲಾಗುತ್ತಿದೆ ಎಂಬುದು ತಪ್ಪು ಕಲ್ಪನೆ: ಹೆಚ್.ಕೆ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರೈತರ ಆಸ್ತಿ ವಕ್ಫ್ ಪಾಲಾಗುತ್ತಿದೆ ಎಂಬುದು ತಪ್ಪು ಕಲ್ಪನೆ: ಹೆಚ್.ಕೆ ಪಾಟೀಲ್

Districts

ರೈತರ ಆಸ್ತಿ ವಕ್ಫ್ ಪಾಲಾಗುತ್ತಿದೆ ಎಂಬುದು ತಪ್ಪು ಕಲ್ಪನೆ: ಹೆಚ್.ಕೆ ಪಾಟೀಲ್

Public TV
Last updated: October 30, 2024 8:26 pm
Public TV
Share
3 Min Read
h k patil 1
SHARE

– ಇದು ಉಪಚುನಾವಣೆಗಾಗಿ ಮಾಡಿರುವ ಗೊಂದಲ ಎಂದ ಸಚಿವ

ಗದಗ: ರೈತರ ಆಸ್ತಿ ವಕ್ಫ್ (Waqf Land) ಪಾಲಾಗುತ್ತಿದೆ ಎಂಬುದು ತಪ್ಪು ಕಲ್ಪನೆ. ಇದಕ್ಕೆ ಗದಗದಲ್ಲಿ ಆತಂಕ, ಟೀಕೆ ಟಿಪ್ಪಣಿಗೆ ಅವಕಾಶವಿಲ್ಲ. 689 ವಕ್ಫ್ ಆಸ್ತಿಗಳಿವೆ. ಯಾವುದೇ ರೈತರಿಗೆ ನೋಟಿಸ್ ಬಂದರೆ ತಕ್ಷಣ ಕ್ರಮ ಕೈಗೊಳ್ಳುತ್ತೇವೆ. ನಮ್ಮ ಸರ್ಕಾರದ ಮೇಲೆ ಸುಳ್ಳು ಆಪಾದನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಇದು ಉಪಚುನಾವಣೆಗಾಗಿ ಮಾಡಿರುವ ಗೊಂದಲ, ಸೃಷ್ಟಿ ಹೊರತು ಬೇರೇನಲ್ಲ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್ (H K Patil) ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಇಂದು (ಬುಧವಾರ) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ರೈತರ ಆಸ್ತಿ ಖಾತಾ ಬದಲಾವಣೆ ವಕ್ಫ್ ಆಗಿರುವ ಬಗ್ಗೆ ನಮ್ಮ ರೈತರಿಗೆ ಆತಂಕದ ಪರಿಸ್ಥಿತಿ ಇಲ್ಲ. ಇದರ ಬಗ್ಗೆ ಜಿಲ್ಲಾಧಿಕಾರಿ, ತಹಶಿಲ್ದಾರ್ ಸುದೀರ್ಘವಾಗಿ ಪರಿಶೀಲನೆ ಮಾಡಿದ್ದಾರೆ. ಜಿಲ್ಲಾಧಿಕಾರಿಗಳು 2019 ರಿಂದ 2023ರ ಅವಧಿಯಲ್ಲಿ ವಕ್ಫ್ ಆಸ್ತಿಗಳಿಗೆ ಸಂಭಂದಿಸಿದಂತೆ ರೈತರಿಗೆ ಯಾವುದೇ ನೋಟಿಸ್ ನೀಡಿಲ್ಲ ಎನ್ನುವ ಮಾಹಿತಿಯನ್ನು ಸರ್ಕಾರಕ್ಕೆ ಕಳುಹಿಸಿಕೊಟ್ಟಿದ್ದಾರೆ ಎಂದರು. ಇದನ್ನೂ ಓದಿ: ಜಯನಗರ ಕ್ಷೇತ್ರಕ್ಕೆ ಅನುದಾನ ನೀಡದ್ದನ್ನ ಮತ್ತೆ ಸಮರ್ಥಿಸಿಕೊಂಡ ಡಿಸಿಎಂ

ನಂತರ ಕಪ್ಪತ್ತಗುಡ್ಡ ವಿಷಯವಾಗಿ ಮಾತನಾಡಿ, ಅಲ್ಲಿ ಗಣಿಗಾರಿಕೆಗೆ ಅವಕಾಶ ಇಲ್ಲ. ಕಪ್ಪತ್ತಗುಡ್ಡ ಸಂರಕ್ಷಣೆ ನಮ್ಮ ಹೊಣೆ. ಕಪ್ಪತ್ತಗುಡ್ಡ ಉಳಿಸಲು ನಮ್ಮ ಸರ್ಕಾರ ಬದ್ಧವಿದೆ. ಕಪ್ಪತ್ತಗುಡ್ಡ ಕಬ್ಬಿಣದ ಅದಿರು, ಬಂಗಾರ ಗಣಿಗಾರಿಕೆ, ಇತರೆ ಅದಿರು ತೆಗೆಯಲು ಬಳಕೆ ಆಗಬಾರದು ಎನ್ನುವ ಬಗ್ಗೆ ಸರ್ವಾನುಮತದ ನಿರ್ಣಯ ಜನತೆ ತೆಗೆದುಕೊಂಡಿದ್ದಾರೆ. ಈಗ ಹೇಗಿದೆ, ಹಾಗೆ ಉಳಿಸಬೇಕು ಎಂಬ ದೃಢವಾದ ಸಂಕಲ್ಪ ನಮ್ಮದು. ಆ ಸಂಕಲ್ಪ ಮುಂದುವರೆಸುವ ಪ್ರಯತ್ನ ಮಾಡುತ್ತೇವೆ. ಅಲ್ಲಿ ಪರಿಸರ ವೃದ್ಧಿ ಆಗಬೇಕು. ಪ್ರವಾಸಿಗರು ಬರಬೇಕು. ನೀವು ಪ್ರಕೃತಿ ಸೌಂದರ್ಯ ಸವಿಯಲು, ಆನಂದಕ್ಕಾಗಿ ಅಲ್ಲಿಗೆ ಹೋಗಬೇಕು ವಿನಃ ಬೇಟೆಯಾಡಲು ಅಲ್ಲ ಎಂಬ ಖಡಕ್ ಸಂದೇಶ ನೀಡಿದರು. ಇದನ್ನೂ ಓದಿ: ಒಳಮೀಸಲಾತಿ ಜಾರಿಗೆ ನಾವು ವಿರುದ್ಧವಾಗಿಲ್ಲ, ಸೋಷಿಯಲ್ ಮೀಡಿಯಾದಲ್ಲಿ ಕಿಡಿಗೇಡಿಗಳ ಮಾತು ಸತ್ಯಕ್ಕೆ ದೂರ: ಪರಮೇಶ್ವರ್

ಪ್ರತಿ ವರ್ಷ ರಾಜ್ಯದಲ್ಲಿ 36 ರಿಂದ 40 ಕೋಟಿ ಜನ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾರೆ. ಈ ಸಂಖ್ಯೆಯನ್ನು 48 ಕೋಟಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ. ಸುಮಾರು 10 ರಿಂದ 12 ಲಕ್ಷ ಜನ ವಿದೇಶಿಗರು ನಮ್ಮ ರಾಜ್ಯಕ್ಕೆ ಬರುತ್ತಾರೆ. ವಿದೇಶಿಗರ ಪ್ರಮಾಣವನ್ನು 20 ಲಕ್ಷಕ್ಕೆ ಏರಿಸುವ ಗುರಿ ಹೊಂದಲಾಗಿದ್ದು, ಈ ಮೂಲಕ ರಾಜ್ಯದ ಪ್ರವಾಸೋದ್ಯಮವನ್ನು ಉನ್ನತೀಕರಿಸುವ ಕೆಲಸ ಸರ್ಕಾರ ಮಾಡಲಿದೆ. ನಮ್ಮ ಗುರಿ ಮುಟ್ಟುವಲ್ಲಿ ಜನರ ಸಹಕಾರ, ಸ್ನೇಹ ಮನೋಭಾವದ ಅವಶ್ಯಕತೆ ಇದೆ. ಅತಿಥಿಗಳಿಗೆ ಗೌರವಿಸುವ ಗುಣವನ್ನು ಸ್ಥಳಿಯರು ಬೆಳೆಸಿಕೊಂಡಾಗ ಪ್ರವಾಸೋದ್ಯಮ ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದರು. ಇದನ್ನೂ ಓದಿ: ಹೊಸ ಬಟ್ಟೆ ಧರಿಸಿ ಜೈಲಿಂದ ಹೊರಬಂದ ದರ್ಶನ್; ಬಳ್ಳಾರಿ ಜೈಲಿನ ಹೊರಗೆ ‘ಅಭಿಮಾನದ ಹೊಳೆ’
ಒಟ್ಟಾರೆಯಾಗಿ ಕರ್ನಾಟಕವನ್ನು ಪ್ರವಾಸಿ ತಾಣವಾಗಿಸಲು ಹೊಸ ನೀತಿ ಜಾರಿಗೆ ತರಲಾಗಿದೆ. ಸಾಂಸ್ಕೃತಿಕ, ಪರಿಸರ, ಶೈಕ್ಷಣಿಕ, ಚಲನಚಿತ್ರ, ಒಳನಾಡಿನ ಜಲ, ವೈದ್ಯಕೀಯ, ಗಣಿಗಾರಿಕೆ, ಗ್ರಾಮೀಣ, ಆಧ್ಯಾತ್ಮಿಕ, ಸ್ವಾಸ್ಥ್ಯ ಪ್ರವಾಸೋದ್ಯಮ ಸೇರಿದಂತೆ ಒಟ್ಟು 25 ವಿಷಯಾಧಾರಿತ ಕ್ಷೇತ್ರಗಳನ್ನು ಯಶಸ್ವಿ ಮಾಡಲು 44 ವಿವಿಧ ರೀತಿಯ ಪ್ರವಾಸೋದ್ಯಮ ನೀತಿಯನ್ನು ರೂಪಿಸಲಾಗಿದೆ. ಇದನ್ನೂ ಓದಿ: Madhya Pradesh| ಹುಲಿಸಂರಕ್ಷಿತ ಪ್ರದೇಶದಲ್ಲಿ 7 ಆನೆಗಳ ನಿಗೂಢ ಸಾವು
1924 ಡಿ.26 ಮತ್ತು 27ರಲ್ಲಿ ಬೆಳಗಾವಿಯಲ್ಲಿ (Belagavi) ನಡೆದ ಎಐಸಿಸಿ ಸಭೆಯಲ್ಲಿ ಮಹಾತ್ಮ ಗಾಂಧಿ ಕಾಂಗ್ರೆಸ್‌ನ (Congress) ಅಧ್ಯಕ್ಷರಾಗಿರುತ್ತಾರೆ. ಅದು 39ನೇ ಅಧಿವೇಶನವಾಗಿತ್ತು. ಮಹಾತ್ಮ ಗಾಂಧಿ ಪಕ್ಷದ ನಾಯಕತ್ವ ವಹಿಸಿದ ಮೇಲೆ ಸ್ವಾತಂತ್ರ‍್ಯ ಸಂಗ್ರಾಮದ ಸ್ವರೂಪ ಬದಲಾವಣೆ ಆಯಿತು. ಈ ಮಹತ್ವದ ಅಧಿವೇಶನ ಮೆಲುಕು ಹಾಕಲು ಶತಮಾನೋತ್ಸವ ನಡೆಸಲು ತಿರ್ಮಾನಿಸಲಾಗಿದೆ. ಅ.2, 2024 ರಿಂದ ಅ.2, 2025ರವರೆಗೆ ಅದ್ಧೂರಿಯಾಗಿ ಆಚರಿಸಲು ತಿರ್ಮಾನಿಸಲಾಗಿದೆ. ಈ ಕಾರ್ಯಕ್ರಮ ಯಶಸ್ವಿಗೆ 30 ಜನರ ಸಮಿತಿ ರಚಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಅಮೇರಿಕಾ ಮಾಜಿ ಅಧ್ಯಕ್ಷ ಬರಾಕ್ ಓಬಾಮಾ ಅವರನ್ನು ಆಹ್ವಾನಿಸಲು ಪತ್ರ ಬರೆಯಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ – A8 ಆರೋಪಿ ರವಿಶಂಕರ್ ಬಿಡುಗಡೆ
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಗುರಣ್ಣ ಬಳಗಾನೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್‌ಸಾಬ್ ಬಬರ್ಚಿ, ಗದಗ-ಬೆಟಗೇರಿ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಬಿ. ಬಿ ಅಸೂಟಿ, ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಶೋಕ್ ಮಂದಾಲಿ, ಕೆಡಿಪಿ ಸಮಿತಿ ಸದಸ್ಯ ಎಸ್ ಎನ್ ಬಳ್ಳಾರಿ, ಬಸವರಾಜ ಕಡೆಮನಿ ಉಪಸ್ಥಿತರಿದ್ದರು. ಇದನ್ನೂ ಓದಿ: ದರ್ಶನ್ ಬಿಡುಗಡೆ ಹಿನ್ನೆಲೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಫ್ಯಾನ್ಸ್

TAGGED:by electioncongressfarmersGadagah k patilWaqf Boardಉಪಚುನಾವಣೆಕಾಂಗ್ರೆಸ್ಗದಗವಕ್ಫ್ ಆಸ್ತಿಹೆಚ್.ಕೆ ಪಾಟೀಲ್
Share This Article
Facebook Whatsapp Whatsapp Telegram

Cinema news

Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood

You Might Also Like

Donald Trump 2
Latest

ಮುಂದುವರಿದ ಟ್ರಂಪ್‌ ಹುಚ್ಚಾಟ – ಎಲ್ಲಾ ದೇಶಗಳ ಮೇಲಿನ ಹೆಚ್ಚುವರಿ ಸುಂಕ 15% ಗೆ ಹೆಚ್ಚಿಸಿದ ಟ್ರಂಪ್‌

Public TV
By Public TV
2 hours ago
Chikkamagaluru Manu
Chikkamagaluru

ಪತ್ನಿಗೆ ಯುವಕನಿಂದ ಮೆಸೇಜ್‌ – ಮನನೊಂದು ನೇಣಿಗೆ ಶರಣಾದ ಪತಿ?

Public TV
By Public TV
2 hours ago
pramod muthalik
Bagalkot

ಪ್ರಮೋದ್ ಮುತಾಲಿಕ್, ಪುನಿತ್ ಕೆರೆಹಳ್ಳಿಗೆ ಬಾಗಲಕೋಟೆ ಪ್ರವೇಶಿಸದಂತೆ ನಿರ್ಬಂಧ

Public TV
By Public TV
3 hours ago
Siddaramaiah 8
Bengaluru City

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ – ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಚಿಂತನೆ!

Public TV
By Public TV
3 hours ago
Father in law sets fire to house of young man who married his daughter in Mandya
Crime

ಮಗಳನ್ನು ಪ್ರೀತಿಸಿ ಮದುವೆಯಾದ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!

Public TV
By Public TV
3 hours ago
siddaramaiah
Bengaluru City

5 ಲಕ್ಷ ಲಂಚ ಪಡೆಯುವಾಗ್ಲೇ ಸಿಕ್ಕಿಬಿದ್ದ ಬಿಜೆಪಿ ಶಾಸಕ – ನಾವ್ಯಾರು ತನಿಖೆಗೆ ಅಡ್ಡಿ ಬರಲ್ಲ ಎಂದ ಸಿಎಂ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?