Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟಿಸುತ್ತಿರುವುದು ವಿಪರ್ಯಾಸ: ಬಸವರಾಜ ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟಿಸುತ್ತಿರುವುದು ವಿಪರ್ಯಾಸ: ಬಸವರಾಜ ಬೊಮ್ಮಾಯಿ

Latest

ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟಿಸುತ್ತಿರುವುದು ವಿಪರ್ಯಾಸ: ಬಸವರಾಜ ಬೊಮ್ಮಾಯಿ

Public TV
Last updated: June 25, 2024 12:30 pm
Public TV
Share
2 Min Read
basavaraj bommai emergency
SHARE

ನವದೆಹಲಿ: ಕಳೆದ ಐವತ್ತು ವರ್ಷದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಬಹಳಷ್ಟು ಗಟ್ಟಿಯಾಗಿದೆ. ತುರ್ತು ಪರಿಸ್ಥಿತಿ ಹೇರಿ ಸಂವಿಧಾನ ತಿರುಚಿ ಪ್ರಜಾಪ್ರಭುತ್ವ ಕಗ್ಗೊಲೆ ಮಾಡಿದ್ದ ಕಾಂಗ್ರೆಸ್ ಸಂಸತ್ತಿನಲ್ಲಿ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟನೆ ಮಾಡಿರುವುದು ವಿಪರ್ಯಾಸ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

ನವದೆಹಲಿಯಲ್ಲಿ (New Delhi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಐವತ್ತು ವರ್ಷದ ಹಿಂದೆ ಇಡೀ ದೇಶದಲ್ಲಿ ತುರ್ತು ಪರಿಸ್ಥಿತಿ (Emergency) ಹೇರಿದ್ದು, ಇದೊಂದು ಕರಾಳ ದಿನ. ಅಂದಿನ ಪ್ರಧಾನಿ ಇಂದಿರಾಗಾಂಧಿಯವರು (Indira Gandhi) ಪ್ರಧಾನ ಮಂತ್ರಿ ಸ್ಥಾನ ಉಳಿಸಿಕೊಳ್ಳಲು ಬಹಳ ಘೋರವಾಗಿ ನಡೆದುಕೊಂಡರು. ಆಗ ಸರ್ಕಾರದ ವಿರುದ್ಧ ಯಾರೂ ಮಾತನಾಡದಂತೆ ಮಾಡಿದರು. ಮಾನವ ಹಕ್ಕುಗಳು ಹಾಗೂ ರಾಜಕೀಯ ಸ್ವಾತಂತ್ರ್ಯ ಎರಡನ್ನೂ ಮೊಟಕುಗೊಳಿಸಲಾಗಿತ್ತು. ಪತ್ರಿಕಾ ಸ್ವಾತಂತ್ರ್ಯ ಸಂಪೂರ್ಣ ತೆಗೆದು ಹಾಕಲಾಗಿತ್ತು. ಪತ್ರಿಕೆಗಳ ಮೇಲೆ ಸಂಪೂರ್ಣ ನಿಬಂರ್ಧ ಹೇರಲಾಗಿತ್ತು. ಏನಾದರೂ ಸುದ್ದಿ ಪ್ರಕಟಿಸಬೇಕೆಂದರೆ ಸರ್ಕಾರದ ಅನುಮತಿ ಪಡೆದು ಪ್ರಕಟಿಸಬೇಕಿತ್ತು ಎಂದು ಹೇಳಿದರು. ಇದನ್ನೂ ಓದಿ: ತುರ್ತು ಪರಿಸ್ಥಿತಿ ನೆನಪಿಸಿದ ಪ್ರಧಾನಿ ಮೋದಿಗೆ ಖರ್ಗೆ ತಿರುಗೇಟು

emergency

ಕಾಂಗ್ರೆಸ್‌ಗೆ ಸಂವಿಧಾನದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಇಡೀ ಸಂವಿಧಾನವನ್ನು ತಿರುಚಿ ಹಕ್ಕುಗಳನ್ನು ಮೊಟಕುಗೊಳಿಸಿದ್ದಂತಹ ಕಾಂಗ್ರೆಸ್ ಲೋಕಸಭೆಯಲ್ಲಿ ಸಂವಿಧಾನದ ಉಳಿವಿನ ಬಗ್ಗೆ ಮಾತನಾಡಿರುವುದು ಹಾಸ್ಯಾಸ್ಪದ. ಅದೂ ಕೂಡ ಮೊಟಕುಗೊಳಿಸಿರುವ ಸಂವಿಧಾನ, ಸಂಪೂರ್ಣವಾದ ಸಂವಿಧಾನವಿಲ್ಲ. ಅವರು ಐವತ್ತು ವರ್ಷದ ಹಿಂದೆ ಇದೇ ಸಂವಿಧಾನವನ್ನು ನಾವು ತಿರುಚಿದ್ದೆವು. ಪ್ರಜಾಪ್ರಭುತ್ವದ ಕೊಲೆ ಮಾಡಿದ್ದೆವು ಎಂದು ನೆನಪು ಮಾಡಿಕೊಳ್ಳಬೇಕು. ಎಲ್ಲ ಹಕ್ಕುಗಳ ಹರಣ ಮಾಡಿದ್ದೇವೆ ಎಂದು ನೆನಪು ಮಾಡಿಕೊಳ್ಳದಿರುವುದು ಕಾಂಗ್ರೆಸ್ಸಿನ ಭಂಡತನ ಎಂದು ಕುಟುಕಿದರು.

indira gandhi

ಐವತ್ತು ವರ್ಷದಲ್ಲಿ ಪ್ರಜಾಪ್ರಭುತ್ವ ಬಹಳಷ್ಟು ಗಟ್ಟಿಯಾಗಿದೆ. ಅದಕ್ಕೆ ಸುಪ್ರೀಂ ಕೋರ್ಟಿನ ತೀರ್ಪುಗಳು ಹಾಗೂ ಅಂದಿನ ಸಂಸತ್ತಿನಲ್ಲಿ ಇನ್ನು ಮುಂದೆ ಯಾರೂ ತುರ್ತು ಪರಿಸ್ಥಿತಿ ಹೇರಬಾರದು ಎಂದು ತಿದ್ದುಪಡಿ ಮಾಡಿದರು. ಅದರ ಪ್ರಕಾರ ಯಾರೂ ಕೂಡ ಮೂಲ ಸಂವಿಧಾನ ತಿರುಚುವುದು ಹಾಗೂ ಹಕ್ಕುಗಳನ್ನು ಮೊಟಕುಗೊಳಿಸಲು ಸಾಧ್ಯವಿಲ್ಲ ಎನ್ನವುದು ಬಹಳ ಸ್ಪಷ್ಟವಾಗಿದೆ. ಕಾಂಗ್ರೆಸ್ ಪಕ್ಷ ಇದನ್ನು ದೊಡ್ಡ ಬಂಡವಾಳ ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆ. ಜನರಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುತ್ತಿದೆ. ನಮ್ಮದು ಅತ್ಯಂತ ಶ್ರೇಷ್ಠವಾದ ಸಂವಿಧಾನ, ಹಲವಾರು ದೇಶಗಳಲ್ಲಿ ನೋಡಿದಾಗ ಇದು ಅತ್ಯಂತ ಸಂವೇದನಾಶೀಲ ಇರುವ ಸಂವಿಧಾನ ಹಾಗೂ ಜನರ ಹಕ್ಕುಗಳ ರಕ್ಷಣೆ ಮಾಡುವ ಸಂವಿಧಾನ ಇರುವುದರಿಂದ ಕಾಂಗ್ರೆಸ್‌ನವರು ಭ್ರಮೆಯನ್ನು ಸೃಷ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆ ಭ್ರಮೆ ಜನರಲ್ಲಿ ಇಲ್ಲ. ಹೀಗಾಗಿ ಜನರು ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಆಯ್ಕೆ ಮಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ತುರ್ತು ಪರಿಸ್ಥಿತಿಗೆ 50 ವರ್ಷ – ಕರಾಳ ದಿನಗಳನ್ನು ನೆನೆದ ಪ್ರಧಾನಿ

ಸಂವಿಧಾನ ವಿರೋಧಿಗಳೇ ಸಂಸತ್ತಿನಲ್ಲಿ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟನೆ ಮಾಡುತ್ತಿರುವುದು ಅತ್ಯಂತ ವಿಪರ್ಯಾಸದ ಸಂಗತಿ ಎಂದು ಹೇಳಿದರು. ಕಳೆದ ಹತ್ತು ವರ್ಷದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂಬ ಕಾಂಗ್ರೆಸ್ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ದೇಶದಲ್ಲಿ ಯಾವ ಹಕ್ಕು ಹರಣವಾಗಿದೆ. ವ್ಯಕ್ತಿ ಸ್ವಾತಂತ್ರ್ಯ ಹರಣವಾಗಿದೆಯಾ, ಪತ್ರಿಕಾ ಸ್ವಾತಂತ್ರ್ಯವಾಗಿದೆಯಾ, ಪ್ರತಿಭಟನೆ ಮಾಡುತ್ತಿದ್ದಾರೆ ಎಂದರೆ ಪಜಾಪಭುತ್ವ ಇದೆ ಎಂದರ್ಥ. ಇದೊಂದು ನೆಪ ಅವರಿಗೆ ಮತಬ್ಯಾಂಕ್‌ಗಳನ್ನು ಸೃಷ್ಟಿಸಲು. ಆಧಾರ ರಹಿತ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

TAGGED:1975 EmergencyBasavaraj BommaibjpcongressemergencyIndira Gandhiಇಂದಿರಾ ಗಾಂಧಿಕಾಂಗ್ರೆಸ್ತುರ್ತು ಪರಿಸ್ಥಿತಿಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Untitled 1 copy
Districts

ದಂತ ಕಳೆದುಕೊಂಡ ಬಳಿಕ ಮತ್ತೆ ಕ್ಯಾಪ್ಟನ್‌ ಜೊತೆ ಕಾಳಗಕ್ಕೆ ಸಜ್ಜಾದ ಭೀಮಾ

Public TV
By Public TV
28 minutes ago
vlcsnap 2026 05 01 08h09m37s328
Districts

ಅಕಾಲಿಕ ಮಳೆಗೆ ಎಕರೆಗಟ್ಟಲೆ ಬಾಳೆ ಬೆಳೆ ನಾಶ – ರೈತರ ಕಣ್ಣೀರು

Public TV
By Public TV
39 minutes ago
silver worth crores of rupees looted after breaking through wall of MB Jewellers shop in Dasarahalli bengaluru
Bengaluru City

ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂತರ ರೂ.ಮೌಲ್ಯದ ಬೆಳ್ಳಿ ಲೂಟಿ!

Public TV
By Public TV
1 hour ago
Commercial LPG Cylinder 19kg
Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂ. ಏರಿಕೆ

Public TV
By Public TV
2 hours ago
West Bengal Election mamata banerjee late night high drama election commission says strong room not open
Latest

ಕೋಲ್ಕತ್ತಾದಲ್ಲಿ ತಡರಾತ್ರಿ ಮಮತಾ ಹೈಡ್ರಾಮಾ – ಸ್ಟ್ರಾಂಗ್ ರೂಮ್‌ ತೆರೆದಿಲ್ಲ ಎಂದ ಆಯೋಗ

Public TV
By Public TV
2 hours ago
Love
Latest

ನಿನಗಾಗಿ ಕಾಯ್ದಿರಿಸಿದ ಹೃದಯವಿದು ಅಂತ ನೀನ್ಯಾಕೆ ಹೇಳ್ತಿಲ್ಲ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?