ಬೆಂಗಳೂರು: ಸಮೀಕ್ಷೆಯಲ್ಲಿ (Caste Census) ಪಾಲ್ಗೊಳ್ಳದಿದ್ದರೆ ಸಿಎಂ ಕ್ರಮ ಕೈಗೊಳ್ಳುವ ಧಮ್ಕಿ ಹಾಕಿದ್ದಾರೆ. ಮೊದಲು ಗಣತಿದಾರರು, ಶಿಕ್ಷಕರ ಸಮಸ್ಯೆ ಬಗೆಹರಿಸಿ ಎಂದು ಪರಿಷತ್ ಸದಸ್ಯ ಸಿ.ಟಿ ರವಿ (CT Ravi) ಹೇಳಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮೀಕ್ಷೆ ಆಪ್ನಲ್ಲಿ ಸಮಸ್ಯೆ ಇದೆ, ಒಟಿಪಿ ಸಮಸ್ಯೆ ಇದೆ, ಸೀರಿಯಲ್ ಪ್ರಕಾರ ಮನೆಗಳನ್ನು ಕೊಟ್ಟಿಲ್ಲ, ಪ್ರಾಂತ್ಯವಾರು ಶಿಕ್ಷಕರ ನಿಯೋಜನೆ ಆಗಿಲ್ಲ, ಎಲ್ಲೋ ಇರೋರನ್ನು ಇನ್ನೆಲ್ಲೋ ಸಮೀಕ್ಷೆಗೆ ಹಾಕಿದ್ದಾರೆ. ಪೂರ್ವ ತಯಾರಿ ಮಾಡಿಕೊಳ್ಳದೇ ಸಮೀಕ್ಷೆ ನಡೆಯುತ್ತಿದೆ. ಪ್ರಾಯೋಗಿಕ ಸಮೀಕ್ಷೆ ಮಾಡದೇ ನೇರವಾಗಿ ಫೀಲ್ಡ್ನಲ್ಲಿ ಸಮೀಕ್ಷೆಗೆ ಮುಂದಾಗಿದ್ದಾರೆ. 60 ಪ್ರಶ್ನೆಗಳಿಗೆ ಉತ್ತರಿಸಲು ಜನಕ್ಕೆ ತಾಳ್ಮೆ ಇರಲ್ಲ, ಆದರೆ ಅಷ್ಟೂ ಪ್ರಶ್ನೆಗಳಿಗೆ ಉತ್ತರ ಭರ್ತಿ ಮಾಡಬೇಕು. ಇದರಿಂದ ಒಂದೊಂದು ಸಮೀಕ್ಷೆ ಪ್ರತಿ ಭರ್ತಿಗೆ 1.5 ರಿಂದ 2 ಗಂಟೆ ಬೇಕು. ಎಲ್ಲರಿಗೂ ತಾಂತ್ರಿಕ ಜ್ಞಾನ ಇರಲ್ಲ, ಇದನ್ನು ಸರ್ಕಾರ ಗಮನಿಸಬೇಕಿತ್ತು ಎಂದರು. ಇದನ್ನೂ ಓದಿ: ದಾವಣಗೆರೆ | ದೇವಸ್ಥಾನದ ಮುಂದೆ ತಲ್ವಾರ್ ಹಿಡಿದು ಓಡಾಡಿದ ಅನ್ಯಕೋಮಿನ ಯುವಕ – ವೀಡಿಯೋ ವೈರಲ್
ನೆಟ್ವರ್ಕ್ ಸಮಸ್ಯೆ, ಅಪ್ಲೋಡ್ ಸಮಸ್ಯೆ, ಒಟಿಪಿ ವಿಳಂಬ ಸಮಸ್ಯೆ ಇವೆ. ಇವೆಲ್ಲ ಸಮಸ್ಯೆ ಮೊದಲು ಸರಿಪಡಿಸಿ ನಂತರ ಸಮೀಕ್ಷೆ ಮಾಡಿ. ಪೂರ್ವಸಿದ್ಧತೆ ಮಾಡಿಕೊಂಡು ಸಮೀಕ್ಷೆ ಮಾಡಿ. ಸಿಎಂ ಅವರು ಸಮಸ್ಯೆ ಬಗೆಹರಿಸದೇ ಧಮ್ಕಿ ಹಾಕೋದು ಸರಿಯಲ್ಲ. ಧಮ್ಕಿಯಿಂದ ಕೆಲಸ ಆಗಲ್ಲ. ಇವೆಲ್ಲ ಸಮಸ್ಯೆಗಳಿಂದ ಗಣತಿದಾರರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಕೊಡಗಿನಲ್ಲಿ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ – ಸುತ್ತಮುತ್ತಲಿನ ಪ್ರದೇಶದ ಜನಕ್ಕೆ ಕಾಡ್ತಿದೆ ಶ್ವಾಸಕೋಶದ ಸಮಸ್ಯೆ!
ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಮೀಕ್ಷೆಯ ಸಂಕಷ್ಟ ಬಗ್ಗೆ ಸಿಎಂ ಗಮನಕ್ಕೆ ನಾನು ತಂದಿದ್ದೇನೆ. ತೇಜಸ್ವಿ ಅವರು ಯಾವುದನ್ನೂ ಹೇಳಿದ್ದಾರೋ ಅದನ್ನೂ ಸೇರಿಸಿ ಎಲ್ಲ ವಿಚಾರ ಇವತ್ತಿನ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಅವರು ಹೇಳಿರುವ ಅಭಿಪ್ರಾಯದ ಬಗ್ಗೆಯೂ ಚರ್ಚೆ ಮಾಡುತ್ತೇವೆ. ಅವರ ಅಭಿಪ್ರಾಯ ಪಕ್ಷ ಒಪ್ಪಿಕೊಂಡರೆ ಪಕ್ಷದ ಅಭಿಪ್ರಾಯವೂ ಅದೇ ಆಗಲಿದೆ. ಪಕ್ಷ ಅವರ ಅಭಿಪ್ರಾಯ ಒಪ್ಪದಿದ್ದರೆ ಅದು ಅವರ ವೈಯಕ್ತಿಕ ಹೇಳಿಕೆ ಆಗಲಿದೆ. ಆಗ ವೈಯಕ್ತಿಕ ಹೇಳಿಕೆಗಳು ಪಕ್ಷದ್ದಾಗುವುದಿಲ್ಲ. ಇವತ್ತು ಕೋರ್ ಕಮಿಟಿ ಸಭೆಯಲ್ಲಿ ಅದನ್ನೂ ಚರ್ಚೆ ಮಾಡಿ ಮುಂದಿನ ನಿಲುವು ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಸಮೀಕ್ಷೆಗೆ ಸಿದ್ಧತೆ ಸರಿಯಾಗಿ ಮಾಡದೇ ಸರ್ಕಾರದಿಂದ ಗೊಂದಲ: ನಿಖಿಲ್
ಐ ಲವ್ ಮುಹಮ್ಮದ್ ವರ್ಸಸ್ ಐ ಲವ್ ಮಹಾದೇವ ಪೋಸ್ಟರ್ ಜಟಾಪಟಿ ವಿಚಾರವಾಗಿ ಮಾತನಾಡಿ, ಐ ಲವ್ ಮುಹಮ್ಮದ್ ಅಂತ ಅವರು ಮಹಾದೇವ ಅಂತ ಇವರು ಶುರು ಮಾಡಿದ್ದಾರೆ. ಈಗ ಏಕಾಏಕಿ ಮಹಮದ್ ಮೇಲೇನು ಲವ್? ಈ ಲವ್ ಮೊದಲು ಇರಲಿಲ್ವಾ? ಇದರ ಹಿಂದೆ ಏನೋ ಷಡ್ಯಂತ್ರ ಇದೆ. ಕೇಂದ್ರ, ರಾಜ್ಯ ಗುಪ್ತಚರ ದಳ ಇದರ ಬಗ್ಗೆ ನಿಗಾ ಇಡಬೇಕು ಎಂದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್ನಲ್ಲಿ ಸರ್ಕಾರ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡಿದೆ: ನಿಖಿಲ್ ಕುಮಾರಸ್ವಾಮಿ

