ಚಿಕ್ಕಬಳ್ಳಾಪುರ: ಅಭಿವೃದ್ಧಿ ವಿಚಾರವಾಗಿ ಕನಕಪುರ (Kanakapur) ಬೆಂಗಳೂರಿಗೆ (Bengaluru) ಸೇರಿಸೋದು ಸರಿ ಎಂದು ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಹೇಳಿಕೆ ನೀಡಿದ್ದಾರೆ.
ಕನಕಪುರ ಬೆಂಗಳೂರಿಗೆ ಸೇರಿಸುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿಕೆ ಸಂಬಂಧ ಚಿಕ್ಕಬಳ್ಳಾಪುರದಲ್ಲಿ ಪ್ರತಿಕ್ರಿಯಿಸಿದ ಶಾಸಕ ಪ್ರದೀಪ್ ಈಶ್ವರ್, ಅಭಿವೃದ್ಧಿ ವಿಚಾರವಾಗಿ ಕನಕಪುರ ಬೆಂಗಳೂರಿಗೆ ಸೇರಿಸೋದು ಸರಿ. ಡಿಸಿಎಂ ಡಿಕೆ ಶಿವಕುಮಾರ್ ಹೇಳಿರೋದು ಸರಿ ಇದೆ. ಉದ್ಯಮಿಗಳು ಧೈರ್ಯದಿಂದ ಬಂದು ಕನಕಪುರದಲ್ಲಿ ಬಂಡವಾಳ ಹೂಡುತ್ತಾರೆ. ಇದರಿಂದ ಕನಕಪುರ ಅಭಿವೃದ್ಧಿ ಆಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಡಿಕೆಶಿ ಕಾಡಾನೆ ಥರ ಆಗ್ತಿದ್ದಾರೆ: ಸಿಪಿ ಯೋಗೇಶ್ವರ್ ಟಾಂಗ್
ಕನಕಪುರ ಬೇರೆ ಜಿಲ್ಲೆ ಅಂದಾಗ ಬಂಡವಾಳ ಹೂಡಿಕೆದಾರರು ಹಿಂಜರಿಯುತ್ತಾರೆ. ಬೆಂಗಳೂರು ಅಂದಾಗ ಜನರ ಮೈಂಡ್ ಸೆಟ್ ಬೇರೆ ಇರಲಿದೆ. ವಿಶಾಲವಾದ ದೃಷ್ಟಿಕೋನದಲ್ಲಿ ಡಿಕೆಶಿ ಇದನ್ನು ಹೇಳಿದ್ದಾರೆ. ಆದರೆ ವಿರೋಧ ಪಕ್ಷದವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರನ್ನು ಬೈಯೋದೇ ಅವರ ಕೆಲಸ ಎಂದು ಪ್ರದೀಪ್ ವಿರೋಧ ಪಕ್ಷದವರಿಗೆ ತಿರುಗೇಟು ನೀಡಿದರು. ಇದನ್ನೂ ಓದಿ: ಬರ ನಿರ್ವಹಣೆಗೆ ಸರ್ಕಾರ ಬಿಡಿಗಾಸೂ ಕೊಟ್ಟಿಲ್ಲ: ಸಿದ್ದರಾಮಯ್ಯ ವಿರುದ್ಧ ಕೋಟ ಕಿಡಿಕಿಡಿ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]