ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಹಂತದ ಮತದಾನಕ್ಕೆ ಕೌಂಟ್ಡೌನ್ ಶುರುವಾಗಿದೆ. ಬುಧವಾರ (ಏ.24) ಅಭ್ಯರ್ಥಿಗಳ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಈ ನಡುವೆ ಐಟಿ ಅಧಿಕಾರಿಗಳು ಭರ್ಜರಿ ಕಾರ್ಯಚರಣೆಗೆ (IT Raid) ಮುಂದಾಗಿದ್ದಾರೆ.
ಬೆಂಗಳೂರಿನ ಬಸವನಗುಡಿ ಉದ್ಯಮಿಯೊಬ್ಬರ (Bengaluru Businessmen) ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಸೀಕ್ರೆಟ್ ರೂಮಿನಲ್ಲಿಟ್ಟಿದ್ದ 6.5 ಕೋಟಿ ರೂ. ನಗದು ಹಣ, 22 ಕೆಜಿ ಚಿನ್ನ (Gold Seize) ಹಾಗೂ 40 ಕೆಜಿ ಬೆಳ್ಳಿ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಊರಿನ ಮಕ್ಕಳ ವಿದ್ಯಾಭ್ಯಾಸಕ್ಕೆ ಸ್ವಂತ ಆಸ್ತಿ ದಾನ ಮಾಡಿದ್ದೇನೆ, ಇಂಥಾ ಕೆಲಸ ಕುಮಾರಸ್ವಾಮಿ ಮಾಡಿದ್ದಾರಾ: ಡಿಕೆಶಿ ಪ್ರಶ್ನೆ
- Advertisement 2
- Advertisement 3
ಡಿ.ಕೆ ಸುರೇಶ್ ಆಪ್ತರಿಗೂ ಐಟಿ ಶಾಕ್:
ಇನ್ನೂ ಬೆಂಗಳೂರು ಗ್ರಾಮಾಂತರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಆಪ್ತರಿಗೆ ಐಟಿ ಶಾಕ್ ಕೊಟ್ಟಿದೆ. ಡಿಕೆ ಸುರೇಶ್ ಆಪ್ತರಿಗೆ ಸೇರಿದ 6 ಕಡೆ ಐಟಿ ರೇಡ್ ಮಾಡಿದೆ ಬೆಂಗಳೂರಿನ ಕೋಣನಕುಂಟೆಯ ಶ್ರೀಧರ್, ಅಂಜನಾಪುರ ಮಾಜಿ ಕಾರ್ಪೋರೇಟರ್ ಗಂಗಾಧರ್ ಸೇರಿ ಆರು ಜನರ ನಿವಾಸದ ಮೇಲೆ ಐಟಿ ದಾಳಿ ನಡೆದಿದೆ.
- Advertisement 4
ಗಂಗಾಧರ್ ನಿವಾಸದಲ್ಲಿ 87 ಲಕ್ಷ ರೂಪಾಯಿ ನಗದು ಸಿಕ್ಕಿದೆ. ರೇಡ್ ಬಳಿಕ ಮಾತಾಡಿದ ಗಂಗಾಧರ್, ಕಾಂಗ್ರೆಸ್ ಪರ ಪ್ರಚಾರ ಮಾಡಬಾರದು ಅನ್ನೋ ರೀತಿಲಿ ಐಟಿ ಅಧಿಕಾರಿಗಳು ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಐಟಿ ರೇಡ್ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಸಹ ನಡೆಸಿದ್ದಾರೆ. ಆದ್ರೆ, ಐಟಿ ದಾಳಿಯನ್ನು ಬಿಜೆಪಿ ಸ್ವಾಗತಿಸಿದೆ. ಇದನ್ನೂ ಓದಿ: ನೇಹಾ ಕೊಲೆ ಆರೋಪಿ ಫಯಾಜ್ನನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದ ಸಿಐಡಿ
ಅಲ್ಲದೇ ಬೆಂಗಳೂರು ದಕ್ಷಿಣ ಸೇರಿ ವಿವಿಧೆಡೆ ಕಳೆದ 2 ದಿನದಿಂದ ಐಟಿ ಇಲಾಖೆ ನಡೆಸಿದ್ದ ಶೋಧ ಕಾರ್ಯದಲ್ಲಿ, 1.33 ಕೋಟಿ ನಗದು, 23 ಕೆಜಿ ಚಿನ್ನಾಭರಣ, ಬೇನಾಮಿ ಆಸ್ತಿಪತ್ರದ ದಾಖಲೆಗಳನ್ನು ಜಪ್ತಿ ಮಾಡಿದೆ. ಬಳ್ಳಾರಿಯಲ್ಲಿ ಚಿನ್ನದ ವ್ಯಾಪಾರಿ ಕಮಲೇಶ್ ಜೈನ್ ನಿವಾಸದಲ್ಲಿ ದಾಖಲೆ ಇಲ್ಲದ 23 ಲಕ್ಷ ನಗದು, 450 ಗ್ರಾಂ ಚಿನ್ನ, 13 ಕೆಜಿ ಬೆಳ್ಳಿಯನ್ನು ಪೊಲೀಸರು ಜಪ್ತಿ ಮಾಡಿ, ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ.