Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಎಂಟಿಸಿ ಟು ಪಿಎ ಜರ್ನಿ – ಸಾವಿರ ಲೆಕ್ಕದಲ್ಲಿ ಸಂಬಳ ಪಡೆಯುತ್ತಿದ್ದವ ಕೋಟಿ ಕುಬೇರನಾದ ಕಥೆ ಓದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಎಂಟಿಸಿ ಟು ಪಿಎ ಜರ್ನಿ – ಸಾವಿರ ಲೆಕ್ಕದಲ್ಲಿ ಸಂಬಳ ಪಡೆಯುತ್ತಿದ್ದವ ಕೋಟಿ ಕುಬೇರನಾದ ಕಥೆ ಓದಿ

Bengaluru City

ಬಿಎಂಟಿಸಿ ಟು ಪಿಎ ಜರ್ನಿ – ಸಾವಿರ ಲೆಕ್ಕದಲ್ಲಿ ಸಂಬಳ ಪಡೆಯುತ್ತಿದ್ದವ ಕೋಟಿ ಕುಬೇರನಾದ ಕಥೆ ಓದಿ

Public TV
Last updated: October 7, 2021 4:23 pm
Public TV
Share
3 Min Read
it raid umesh bsy
SHARE

ಬೆಂಗಳೂರು: ಬಿಎಂಟಿಸಿ ನಿರ್ವಾಹಕನಾಗಿ ತಿಂಗಳಿಗೆ ಸಾವಿರದಲ್ಲಿ ಸಂಬಳ ಪಡೆಯುತ್ತಿದ್ದ ಉಮೇಶ್ 10 ವರ್ಷದಲ್ಲಿ ಕೋಟಿ ಕುಳವಾಗಿ ಬೆಳೆದ ಕಥೆಯೇ ರೋಚಕ.

ಐಟಿ ರೇಡ್ ಆಗಿರುವ ಬಿಎಂಟಿಸಿ ಸಿಬ್ಬಂದಿ ಉಮೇಶ್ ಡಿಪೋ ನಂಬರ್ 11ರಲ್ಲಿ ಕಂಡಕ್ಟರ್ ಕಂ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಉಮೇಶ್ ಬಿಎಂಟಿಸಿಯಿಂದ ಪಡೆಯುತ್ತಿದ್ದ ತಿಂಗಳ ಸಂಬಳ 32 ಸಾವಿರ ರೂಪಾಯಿ. ಕೈಗೆ ಸಿಗುತ್ತಿದ್ದಿದ್ದು 28 ಸಾವಿರ ರೂಪಾಯಿ.

2007-08ರಲ್ಲಿ ಬಿಎಂಟಿಸಿ ಉದ್ಯೋಗಿಯಾದ ಉಮೇಶ್, ಟ್ರೈನಿಯಾಗಿ ಕೆಲಸ ಮಾಡುತ್ತಿದ್ದ. ಕೆಲಸಕ್ಕೆ ಸೇರಿದ ಒಂದೇ ವರ್ಷಕ್ಕೆ ಉದ್ಯೋಗ ಬೇಡ ಎನ್ನಿಸಿತ್ತು. ಇದೇ ವೇಳೆ ಬಿ.ಎಸ್.ಯಡಿಯೂರಪ್ಪ ಮೊದಲಬಾರಿಗೆ ಸಿಎಂ ಆಗಿದ್ದರು. ಈ ವೇಳೆ ಉಮೇಶ್ ಎರವಲು ಸೇವೆ ಅರ್ಜಿ ಸಲ್ಲಿಸಿದ್ದ. 2008ರಲ್ಲಿ ಎರವಲು ಸೇವೆಯಡಿ ವಿಧಾನಸೌಧದತ್ತ ಪ್ರಯಾಣ ಬೆಳೆಸಿದ್ದ. ಎರವಲು ಸೇವೆಗೆ ನಿಯೋಜನೆಯಾಗುವ ಮುನ್ನ ಉಮೇಶ್ ತಿಂಗಳಿಗೆ 3,500ರೂ. ಸಂಬಳ ಪಡೆಯುತ್ತಿದ್ದ. ಒಂದೇ ವರ್ಷಕ್ಕೆ ಟ್ರೇನಿಯಿಂದ ಪ್ರೊಬೆಷನರಿಯಾಗಿ ಬಡ್ತಿ ಪಡೆದು ತಿಂಗಳಿಗೆ 18 ಸಾವಿರ ರೂ.ವೇತನ ಪಡೆಯುತ್ತಿದ್ದ. ಇದನ್ನೂ ಓದಿ: ಬಿಎಸ್‍ವೈ ಆಪ್ತನ ಮನೆ ಮೇಲೆ ಐಟಿ ರೇಡ್

ಇದೀಗ ಉಮೇಶ್ ವೇತನ ತಿಂಗಳೀಗೆ 30ರಿಂದ 32 ಸಾವಿರ ರೂ. ಇದೆ. ಎರವಲು ಸೇವೆಗೆ ನಿಯೋಜನೆಯಾದರೆ ಎರಡು ವರ್ಷದ ಬಳಿಕ ಮಾತೃ ಇಲಾಖೆಯಲ್ಲಿ ಕೆಲಸ ಮಾಡಿ, ಡೆಪ್ಟೇಷನ್ ಪಡೆಯಬಹುದು. ಆದರೆ ಉಮೇಶ್ ಮಾತ್ರ 2008ರಿಂದ ಎರವಲು ಸೇವೆಯಲ್ಲಿಯೇ ಮುಂದುವರಿಯುತ್ತಿರುವುದು ವಿಶೇಷ.

ಇಷ್ಟು ಕಡಿಮೆ ವೇತನವಿದ್ದರೂ ಉಮೇಶ್ ಕೋಟ್ಯಧಿಪತಿ ಆಗಿದ್ದಾನೆ. ಸದ್ಯ ರಾಜಾಜಿನಗರದ ಭಾಷ್ಯಂ ಸರ್ಕಲ್ ಬಳಿ 3 ಅಂತಸ್ತಿನ ಮನೆಯಲ್ಲಿ ಬಾಡಿಗೆ ಇದ್ದು, ಸಹಕಾರ ನಗರದಲ್ಲಿ ಕೋಟ್ಯಂತರ ಮೌಲ್ಯದ ಮನೆ ನಿರ್ಮಾಣ ಮಾಡುತ್ತಿದ್ದಾನೆ. ಬಗಲಗುಂಟೆಯಲ್ಲಿ ಸೈಟ್‍ಗಳಿವೆ. ನೆಲಮಂಗಲದಲ್ಲಿ ಜಮೀನು, ಬಿಡಿಎನಲ್ಲಿ ಅನೇಕ ಸೈಟ್‍ಗಳು ಮಂಜೂರಾಗಿವೆ. ಅಲ್ಲದೆ ತನ್ನ ಹಾಗೂ ಕುಟುಂಬಸ್ಥರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಆಸ್ತಿ ಹೊಂದಿದ್ದಾನೆ. ಇತ್ತೀಚೆಗೆ ಎಲೆಕ್ಷನ್‍ನಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಹೋದರನನ್ನೂ ಗೆಲ್ಲಿಸಿಕೊಂಡಿದ್ದಾನೆ.

ಬಿಎಸ್‍ವೈ ಸಂಪರ್ಕ ಹೇಗೆ?
ಮೂಲತಃ ಶಿವಮೊಗ್ಗ ಜಿಲ್ಲೆಯ ಆಯನೂರಿನವನಾದ ಉಮೇಶ್, ಬಿ.ಎಸ್.ಯಡಿಯೂರಪ್ಪನವರ ಕುಟುಂಬದ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ. 2008ರಲ್ಲಿ ಬಿಎಸ್‍ವೈ ಸಿಎಂ ಆಗಿದ್ದಾಗ ಆಪ್ತ ಶಾಖೆಯಲ್ಲಿ ಕೆಲಸ ಕೆಲಸ ಮಾಡಿದ್ದ. ಅಧಿಕಾರ ಕಳೆದುಕೊಂಡರೂ ಬಿಎಸ್‍ವೈ ನಂಟು ಬಿಟ್ಟಿರಲಿಲ್ಲ. ಬಿಎಸ್‍ವೈ ವಿರೋಧ ಪಕ್ಷದ ನಾಯಕರಾಗಿದ್ದಾಗಲೂ ಆಪ್ತ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. 2019ರಲ್ಲಿ ಮತ್ತೆ ಬಿಎಸ್‍ವೈ ಸಿಎಂ ಆದಾಗ ಸಹ ಆಪ್ತ ಸಹಾಯಕನಾಗಿ ಮುಂದುವರಿದಿದ್ದ. ಯಡಿಯೂರಪ್ಪನವರ ಎಲ್ಲ ಖಾಸಗಿ ಕೆಲಸಗಳನ್ನು ನಿರ್ವಹಿಸುತ್ತಿದ್ದ. ಇದೀಗ ಬಿಎಸ್‍ವೈ ರಾಜೀನಾಮೆ ಬಳಿಕ ಹಾಲಿ ಸಿಎಂ ಬಸವರಾಜ್ ಬೊಮ್ಮಾಯಿಯವರ ಕಚೇರಿಯಲ್ಲಿ ಸಹಾಯಕನಾಗಿ ಸೇರ್ಪಡೆಯಾಗಿದ್ದ. ಸಿಎಂ ಆಪ್ತ ಸಹಾಯಕನಾದರೂ ಬಿಎಸ್‍ವೈ ಮನೆಯಲ್ಲೇ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಉಮೇಶ್ ಮೊದಲು ಆಯನೂರು ಮಂಜುನಾಥ್ ಅವರಿಗೆ ಪಿಎ ಆಗಿದ್ದ. ಆಯನೂರು ಎಂಪಿ ಆದ ಮೇಲೆ ಬಿಎಸ್‍ವೈ ಜೊತೆ ಇರಲು ಬಿಟ್ಟರು. ಆಗಿನಿಂದ ಯಡಿಯೂರಪ್ಪನವರ ಕುಟುಂಬದ ಜತೆ ಆಪ್ತತೆ ಬೆಳೆಯಿತು. ಯಡಿಯೂರಪ್ಪನವರು ವಿಧಾನಸಭೆ ವಿಪಕ್ಷ ನಾಯಕರಾದಾಗಿಂದ ಉಮೇಶ್ ಜೊತೆಗಿದ್ದಾನೆ. ಇದನ್ನೂ ಓದಿ: ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ ಮಾಜಿ ಸಿಎಂ ಎಸ್.ಎಂ ಕೃಷ್ಣ

ವರ್ಗಾವಣೆ, ಟೆಂಡರ್ ಡೀಲ್‍ಗಳಲ್ಲಿ ಶಾಮೀಲು
ಇದೀಗ ಶಿವಮೊಗ್ಗ, ಬೆಂಗಳೂರಿನಲ್ಲಿ ನೂರಾರು ಕೋಟಿ ರೂ. ಆಸ್ತಿ ಮಾಡಿರುವ ಆರೋಪ ಕೇಳಿಬಂದಿದೆ. ಉಮೇಶ್ ವಿಜಯನಗರದಲ್ಲಿ ಒಂದು ಭವ್ಯ ಮನೆಯ ನಿರ್ಮಾಣ ಮಾಡುತ್ತಿದ್ದಾನೆ. 60*120 ವಿಸ್ತೀರ್ಣದಲ್ಲಿ ಮನೆ ನಿರ್ಮಾಣ ಮಾಡಲಾಗುತ್ತಿದೆ. ಹಲವು ವರ್ಗಾವಣೆಗಳು, ಟೆಂಡರ್ ಡೀಲ್ ಗಳಲ್ಲಿ ಶಾಮೀಲಾಗಿರುವ ಆರೋಪ ಕೇಳಿ ಬಂದಿದೆ.

ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರಗೆ ಉಮೇಶ್ ಪಿಎ ಆಗಿದ್ದ. ತನ್ನೊಂದಿಗೂ ಅರವಿಂದ್ ಎಂಬುವವನನ್ನು ಪಿಎಯಾಗಿ ಇಟ್ಟುಕೊಂಡಿದ್ದ. ಶಿವಮೊಗ್ಗದ ಡೀಲ್ ಗಳನ್ನು ಅರವಿಂದ್ ನೋಡಿಕೊಳ್ಳುತ್ತಿದ್ದಾನೆ ಎನ್ನಲಾಗಿದೆ. ಅರವಿಂದ್ ಹಾಗೂ ಇನ್ನೂ ಇಬ್ಬರ ಜೊತೆ ಸೇರಿ ಡೀಲ್ ವ್ಯವಹಾರ ಮಾಡುತ್ತಿದ್ದಾನೆ ಎನ್ನುವುದು ಈಗ ಬಂದಿರುವ ಆರೋಪ. ಇದನ್ನೂ ಓದಿ: 2023ರಲ್ಲೂ ಬೊಮ್ಮಾಯಿ ಸಿಎಂ ಆಗಿ ದಸರಾ ಉದ್ಘಾಟಿಸಲಿದ್ದಾರೆ: ಪ್ರತಾಪ್ ಸಿಂಹ

ಆ ಇಬ್ಬರ ಪೈಕಿ ಒಬ್ಬ ಬಿ.ಎಸ್.ಯಡಿಯೂರಪ್ಪನವರಿಗೆ ಗನ್ ಮ್ಯಾನ್ ಆಗಿದ್ದವ. ಮತ್ತೊಬ್ಬ ವಿಧಾನಸೌಧದಲ್ಲಿ ಈಗ ಗುತ್ತಿಗೆ ನೌಕರ. ವರ್ಗಾವಣೆ, ಟೆಂಡರ್ ಡೀಲ್ ಗೆ ಇಳಿದ ಮೇಲೆ ರಹಸ್ಯ ನಡೆ ಅನುಸರಿಸುತ್ತಿದ್ದ. ತನ್ನ ಗುಪ್ತ ವ್ಯವಹಾರಗಳ ಬಗ್ಗೆ ಉಮೇಶ್ ರಹಸ್ಯ ಕಾಪಾಡುತ್ತಿದ್ದ. ಉಮೇಶ್ ಬಿ.ಎಸ್.ಯಡಿಯೂರಪ್ಪನವರಿಗೆ ಪಿಎ ಆಗಿದ್ದಾಗ ಸರ್ಕಾರಿ ಕಾರಲ್ಲೇ ಓಡಾಡುತ್ತಿದ್ದ, ಡೀಲ್ ನಡೆಸುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.

TAGGED:BS Yediyurappait raidPAPublic TVUmeshಉಮೇಶ್ಐಟಿ ರೇಡ್ಪಬ್ಲಿಕ್ ಟಿವಿಪಿಎಬಿ.ಎಸ್.ಯಡಿಯೂರಪ್ಪ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

mukul roy
Latest

ಮಾಜಿ ರೈಲ್ವೆ ಸಚಿವ, ಬಂಗಾಳದ ‘ರಾಜಕೀಯದ ಚಾಣಕ್ಯ’ ಮುಕುಲ್ ರಾಯ್ ನಿಧನ

Public TV
By Public TV
26 minutes ago
mobile ban
Bengaluru City

ರಾಜ್ಯದ 16 ವರ್ಷದೊಳಗಿನ ಮಕ್ಕಳಿಗೆ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ನಿಷೇಧ?

Public TV
By Public TV
36 minutes ago
hassan couple suicide
Crime

ಬದುಕು ಕೊಟ್ಟ ಅಪ್ಪ-ಅಮ್ಮನ ಬಗ್ಗೆ ನಿರ್ಲಕ್ಷ್ಯ; ತುತ್ತು ಊಟಕ್ಕೂ ಪರದಾಡಿ ವೃದ್ಧ ದಂಪತಿ ಆತ್ಮಹತ್ಯೆ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 23-02-2026

Public TV
By Public TV
2 hours ago
Bagalkote 4
Bagalkot

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Public TV
By Public TV
10 hours ago
Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?