Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಿಜೆಪಿಯ ಸಿದ್ದೇಶ್ವರ್ ಮನೆ ಮೇಲೆ ಐಟಿ ದಾಳಿ ನಡೆದಿದೆ: ಕೈ ಆರೋಪಕ್ಕೆ ಸಿಟಿ ರವಿ ಸಮರ್ಥನೆ

Public TV
Last updated: August 2, 2017 2:18 pm
Public TV
Share
3 Min Read
INCOME TAX
SHARE

ಬೆಂಗಳೂರು: ಆದಾಯ ತೆರಿಗೆ ಅಧಿಕಾರಿಗಳು ಡಿಕೆಶಿ ಸೇರಿದಂತೆ ಕಾಂಗ್ರೆಸ್ ಮುಖಂಡರ ಮನೆ ಮೇಲೆ ದಾಳಿ ನಡೆಸಿದ್ದಕ್ಕೆ ಕಾಂಗ್ರೆಸ್ ನಾಯಕರು ಇದು ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದರೆ, ಬಿಜೆಪಿ ನಾಯಕರು ಇದು ಸಹಜ ಪ್ರಕ್ರಿಯೆ ಎಂದು ದಾಳಿಯನ್ನು ಸಮರ್ಥಿಸಿದ್ದಾರೆ.

ಕೈ ನಾಯಕರ ಆರೋಪಕ್ಕೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಸಿಟಿ ರವಿ, ಸ್ವಾತಂತ್ರ್ಯ ಬಂದ 70 ವರ್ಷದಲ್ಲಿ 50 ವರ್ಷ ಕಾಂಗ್ರೆಸ್ ಆಡಳಿತ ನಡೆಸಿದೆ. ಹಾಗೆಯೇ ದೇಶದಲ್ಲಿ ಐಟಿ ದಾಳಿಗಳು ಕಾಂಗ್ರೆಸ್ ಆಡಳಿತದ ಹಲವು ಬಾರಿ ಆಗಿದೆ. ಆ ಎಲ್ಲಾ ಐಟಿ ದಾಳಿಗಳು ಇದೇ ರೀತಿ ಅಂತ ಅಂದುಕೊಳ್ಳುವುದಾದರೆ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲದವರು ಮಾತಾಡುವಂತಹ ಮಾತುಗಳು ಇವು. 2012ರಲ್ಲಿ ನಮ್ಮ ಸಂಬಂಧಿಕರನ್ನು ಗುರಿಯಾಗಿಸಿ ಐಟಿ ದಾಳಿ ನಡೆದಿದೆ. ಆ ಸಂದರ್ಭದಲ್ಲಿ ನಾನೇನು ಹೇಳಿಕೆ ನೀಡಲಿಲ್ಲ. ಲೋಕಸಭಾ ಉಪಚುನಾವಣೆ ಮುಂಚೆ ನನ್ನನ್ನೇ ಗುರಿಯಾಗಿಸಿ ಐಟಿ ದಾಳಿ ನಡೆಸಲಾಗಿತ್ತು. ಸಹಜ ಪ್ರಕ್ರಿಯೆ ಅಂತ ಅಂದುಕೊಂಡಿದ್ದೇನೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಗುಜರಾತ್ ಕಾಂಗ್ರೆಸ್ ಶಾಸಕರಿದ್ದ ರೆಸಾರ್ಟ್ ಮೇಲೆ ಐಟಿ ದಾಳಿ – ಸಚಿವ ಡಿಕೆಶಿ ನಿವಾಸಗಳ ಮೇಲೂ ರೇಡ್

ಕೈ ನಾಯಕರ ಆರೋಪ ಸುಳ್ಳು, ಬಿಜೆಪಿ ಮುಖಂಡ ಸಿದ್ದೇಶ್ವರ್ ಅವರ ನಿವಾಸ, ಕಂಪನಿ ಮೇಲೂ ದಾಳಿ ನಡೆದಿತ್ತು. ಆದಾಯ ಇಲಾಖೆಯ ದಾಳಿಯನ್ನು ಕಾಂಗ್ರೆಸ್ ರಾಜಕೀಯ ದಾಳಿ ಎಂದು ಆರೋಪಿಸುವುದು ಸರಿಯಲ್ಲ ಎಂದರು.

ಐಟಿ ದಾಳಿ ಮಾಡುವ ವೇಳೆ ನಾಯಕರ ಮನೆಯಲ್ಲಿ ಏನೂ ಸಿಕ್ಕಿಲ್ಲವೆಂದ್ರೆ ಬರೀಗೈಯಲ್ಲಿ ಹೋಗ್ತಾರೆ. ಸಿಕ್ಕಿದ್ರೆ ತಾನೇ ತೆರಿಗೆ ಕಟ್ಟಬೇಕಾಗಿರೋದು. ಹೀಗಾಗಿ ತೆರಿಗೆ ಬಾಕಿ ಉಳಿಸಿಕೊಂಡಿರುವವರು ಮಾತ್ರ ಭಯಪಡಬೇಕು. ತೆರಿಗೆ ವಂಚಿಸದವರ ಮನೆ ಮೇಲೆ 100 ಸಲ ಐಟಿ ದಾಳಿಯಾದ್ರೂ ಅವರು ತಲೆ ಕೆಡಿಸೋ ಅಗತ್ಯವಿಲ್ಲ ಎಂದು ಉತ್ತರಿಸಿದರು.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಇಷ್ಟು ವರ್ಷ ಯಾರ ಕಣ್ಣಿಗೂ ಬೀಳದ ಈಗಲ್ ಟನ್ ರೆಸಾರ್ಟ್ ಮೇಲೆ ಈಗಲೇ ಯಾಕೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಅನ್ನೋ ಪಬ್ಲಿಕ್ ಟಿವಿ ಪ್ರಶ್ನೆಗೆ ಉತ್ತರಿಸಿದ ಅವರು, ಕೆಲವೊಮ್ಮೆ ಕಾಕತಾಳೀಯವೂ ಇರಬಹುದು, ಸೊಹ್ರಾಬುದ್ದೀನ್ ಎನ್ ಕೌಂಟರ್ ನಲ್ಲಿ ಸಿಬಿಐ ಒಂದು ರಾಜ್ಯದ ಗೃಹ ಸಚಿವ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ ಕೇಸ್ ಹಾಕಿರೋದು ಅದು ರಾಜಕೀಯ ಪ್ರೇರಿತವಾಗಿದ್ದು, ಐಟಿ ಅಲ್ಲ. ಅದಕ್ಕೆ ನಾಚಿಕೆಯಿಂದ ತಲೆ ತಗ್ಗಿಸದೇ ಇರೋ ಜನ ಆಡಳಿತ ವ್ಯವಸ್ಥೆಲ್ಲಿರೋ ಒಂದು ಐಟಿ ದಾಳಿ ರಾಜಕೀಯ ಪ್ರೇರಿತ ಅನ್ನೋದು ನಾಚಿಕೆಗೇಡಿನ ಸಂಗತಿ ಅಂತ ಹೇಳಿದ್ದಾರೆ.

ಇದನ್ನೂ ಓದಿ: ದಾಳಿ ನಡೆದಿರುವುದು ಸಚಿವ ಡಿಕೆಶಿ ಮೇಲೆ ಮಾತ್ರ, ಗುಜರಾತ್ ಶಾಸಕರಿಗೂ ಇದಕ್ಕೂ ಸಂಬಂಧವಿಲ್ಲ: ಐಟಿ

ಕಾಂಗ್ರೆಸ್‍ನ ಪರಿಷತ್ ಸದಸ್ಯರಾದ ರಿಜ್ವಾನ್ ಅರ್ಷದ್, ಇದು ನಿಶ್ಚಿತವಾಗಿಯೂ ಇದೊಂದು ರಾಜಕೀಯ ಪ್ರೇರಿತ ದಾಳಿಯಾಗಿದೆ. ಸಿಟಿ ರವಿ ಕೇಸರಿ, ಕನ್ನಡಕ ತೆಗೆದು ಮಾತನಾಡಿದಾಗ ಅವರಿಗೆ ಗೊತ್ತಾಗುತ್ತದೆ. ಇಡೀ ದೇಶದಲ್ಲಿ ಅವರ ಸರ್ಕಾರ ಬಂದ ಬಳಿಕ ವಿರೋಧ ಪಕ್ಷದ ನಾಯಕರ ಮೇಲೆ ಐಟಿ ದಾಳಿಗಳು ಆಗಿದೆ. ಇತ್ತೀಚೆಗೆ ದೇಶದಲ್ಲಿ ನಡೆದಂತಹ ದಾಳಿಗಳಲ್ಲಿ ಎಷ್ಟು ಬಿಜೆಪಿ ಹಾಗೂ ಬೇರೆ ಪಕ್ಷದ ಮುಖಂಡರ ಮನೆ ಮೇಲೆ ದಾಳಿ ನಡೆದಿದೆ ಎಂಬುವುದನ್ನು ನೋಡಿ. ಈಗಲೇ ಈಗಲ್ ಟನ್ ರೆಸಾರ್ಟ್ ಮೇಲೆ ದಾಳಿ ನಡೆಸಿ ಅದರಲ್ಲೂ ಶಾಸಕರು ಉಳಿದಿದ್ದ ರೂಮ್ ನ್ನು ಪರಿಶೀಲನೆ ನಡೆಸಬೇಕು ಅಂದ್ರೆ ಏನು ಅರ್ಥ ಅಂತ ಅವರು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಟಿ ರವಿ, ಚುನಾವಣಾ ಸಮಯದಲ್ಲಿ ಅಭ್ಯರ್ಥಿಗಳ ಮನೆ ಮೇಲೆ ದಾಳಿ ನಡೆಯುತ್ತದೆ. ಯಾಕಂದ್ರೆ ಐಟಿ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ಇರುತ್ತೆ. ಎಲ್ಲವನ್ನೂ ರಾಜಕೀಯ ದೃಷ್ಟಿಯಿಂದ ನೋಡುವ ಮನೋಭಾವನೆಯೇ ಕೈ ನಾಯಕರದ್ದು. ಇವರಿಗೆ ದೇಶ ಕಟ್ಟುವ ಮನೋಭಾವನೆ ಅಲ್ಲ ಬದಲಾಗಿ ರಾಜಕೀಯ ದೃಷ್ಟಿಯಿಂದ ಎಲ್ಲವನ್ನೂ ಆಲೋಚನೆ ಮಾಡುವ ದೃಷ್ಟಿ ಇದೆ ಎನ್ನುವುದು ಇದರಿಂದ ಗೊತ್ತಾಗುತ್ತೆ ಅಂತ ಹೇಳಿದ್ರು.

ಇದನ್ನೂ ಓದಿ: ಕೈ ನಾಯಕರ ಮನೆ ಮೇಲೆ ಐಟಿ ದಾಳಿ: ಎಷ್ಟು ಕೋಟಿ ಹಣ ಸಿಕ್ಕಿದೆ ಗೊತ್ತಾ?

it raid

it raid 1

it raid 2

it raid 3

it raid 7

it raid 6

it raid 5

 

TAGGED:bengaluruCT RaviDK Shivakumarincome tax department raidpublictvrizwan arshadಐಟಿ ದಾಲಿಡಿಕೆ ಶಿವಕುಮಾರ್ಪಬ್ಲಿಕ್ ಟಿವಿಬೆಂಗಳೂರುರಿಜ್ವಾನ್ ಅರ್ಷದ್ಸಿಟಿ ರವಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Complaint against Ramola of Bharjari Bachelors
ಭರ್ಜರಿ ಬ್ಯಾಚುಲರ‍್ಸ್ ರಮೋಲಾ ವಿರುದ್ಧ ದೂರು
Cinema Latest TV Shows
tamannaah bhatia 3
ರಾಗಿಣಿ ಎಂಎಂಎಸ್-3ಗೆ ಮಿಲ್ಕಿ ಬ್ಯೂಟಿ ನಾಯಕಿ..!?
Bollywood Cinema Latest Top Stories
Sunita Ahuja Govinda
ಬಾಲಿವುಡ್‌ ನಟ ಗೋವಿಂದ ಸಂಸಾರದಲ್ಲಿ ಬಿರುಕು; ಪತ್ನಿಯಿಂದ ವಿಚ್ಛೇದನಕ್ಕೆ ಅರ್ಜಿ
Bollywood Cinema Latest Main Post
Chiranjeevis 70th Birthday Ram Charan
ಮೆಗಾಸ್ಟಾರ್‌ಗೆ 70ರ ಸಂಭ್ರಮ: ರಾಮ್‌ ಚರಣ್ ಸೆಲಬ್ರೇಷನ್
Cinema Latest South cinema Top Stories
Vijays Rally in Madurai Thousands Gather for TVK Conference
ತಮಿಳುನಾಡಲ್ಲಿ ವಿಜಯ್ ದಳಪತಿ ರಣಕಹಳೆ
Cinema South cinema

You Might Also Like

Sujatha Bhat Banashankari Police Protection
Bengaluru City

ನಂಗೆ ಆರೋಗ್ಯ ಸರಿಯಿಲ್ಲ, ಬೆದರಿಕೆಯಿದೆ – ರಕ್ಷಣೆ ಕೊಡಿ ಅಂತಾ ಪೊಲೀಸರಿಗೆ ಸುಜಾತ ಭಟ್ ಮನವಿ

Public TV
By Public TV
10 minutes ago
011
Dakshina Kannada

ನೀರಿನಲ್ಲಿ ಮುಳುಗಿದ ಹೆಣಗಳಿಂದ ಚಿನ್ನ ಕದಿಯುತ್ತಿದ್ದ ʻಚಿನ್ನಯ್ಯʼ – ಮುಸುಕುಧಾರಿಯ ಅಸಲಿಯತ್ತು ಬಯಲು

Public TV
By Public TV
26 minutes ago
Dharmasthala 5
Bengaluru City

ಎಲ್ಲಿಂದಲೋ ಬುರುಡೆ ತಂದು ಬುರುಡೆ ಬಿಟ್ಟಿದ್ದ ಚೆನ್ನಯ್ಯ!

Public TV
By Public TV
46 minutes ago
Girish Mattannavar Chakravarthi Sulibele
Bengaluru City

ಧರ್ಮಸ್ಥಳ ಪರ ಧ್ವನಿ ಎತ್ತಿದವ್ರನ್ನ ಹೇಗೆ ಮಟ್ಟಹಾಕಬೇಕೆಂದು ಮಟ್ಟಣ್ಣನವರ್ ಪ್ಲ್ಯಾನ್ ಮಾಡ್ತಿದ್ರು: ಸೂಲಿಬೆಲೆ

Public TV
By Public TV
48 minutes ago
Dharmasthala Mass Burails Mask Man Chinnaiah
Dakshina Kannada

ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೇ ಇದ್ದಾರೆ: ಮಾಸ್ಕ್ ಮ್ಯಾನ್ ಸ್ಫೋಟಕ ಹೇಳಿಕೆ

Public TV
By Public TV
1 hour ago
Chakravarti Sulibele 1
Bengaluru City

ಸೌಜನ್ಯ ತಾಯಿ ಷಡ್ಯಂತ್ರಕ್ಕೆ ಬಲಿಯಾಗಿರುವ ಸಾಧ್ಯತೆಯಿದೆ, ಅವರನ್ನು ವಿಚಾರಣೆ ಒಳಪಡಿಸಬೇಕು: ಸೂಲಿಬೆಲೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?