ಕೋಟ್ಯಂತರ ರೂ. ವಂಚನೆ ಆರೋಪ – ಸಿದ್ಧಾರ್ಥ್ ಕಾಲೇಜ್ ಮೇಲೆ ಐಟಿ ದಾಳಿ

Public TV
1 Min Read
Siddharth College tmk Parameshwar

ಬೆಂಗಳೂರು: ಡಿಕೆ ಶಿವಕುಮಾರ್ ಬಳಿಕ ಮಾಜಿ ಡಿಸಿಎಂ ಪರಮೇಶ್ವರ್ ಅವರಿಗೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದು, ಪರಮೇಶ್ವರ್ ಒಡೆತನದ ಸಿದ್ಧಾರ್ಥ್ ಶಿಕ್ಷಣ ಸಂಸ್ಥೆಯ ಮೇಲೆ ಐಟಿ ದಾಳಿ ನಡೆದಿದೆ.

ತುಮಕೂರು, ನೆಲಮಂಗಲದಲ್ಲಿರುವ ಸಿದ್ಧಾರ್ಥ್ ಕಾಲೇಜುಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ದಾಳಿ ಯಾಕೆ?
ಸಿದ್ಧಾರ್ಥ್ ಶಿಕ್ಷಣ ಸಂಸ್ಥೆಯಲ್ಲಿ ಮೆಡಿಕಲ್ ಮತ್ತು ಎಂಜಿನಿಯರಿಂಗ್ ಸೀಟ್ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ. ಮೆಡಿಕಲ್, ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಸೀಟ್ ಹೊರತುಪಡಿಸಿ ಮ್ಯಾನೇಜ್‍ಮೆಂಟ್ ಸೀಟ್ ಗಳು ಇರುತ್ತವೆ. ಈ ಸೀಟ್ ಗಳಿಗೆ ಕಾಲೇಜುಗಳು ಲ್ಕ ವಿಧಿಸಬಹುದಾಗಿದ್ದು, ಇದರಲ್ಲಿ ಕೋಟ್ಯಂತರ ರೂ. ಅಕ್ರಮ ನಡೆದಿದೆ. ಅಷ್ಟೇ ಅಲ್ಲದೇ ತೆರಿಗೆಯನ್ನು ಮರೆಮಾಚಲು ಶುಲ್ಕವನ್ನು ನಗದು ರೂಪದಲ್ಲಿ ಪಾವತಿಸಲಾಗಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *